Homeಕರ್ನಾಟಕಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ - ಸಿಟಿ ರವಿ

ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

- Advertisement -
- Advertisement -

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದರೆ ಅದಕ್ಕೆ ಸರ್ಕಾರವೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಮವಾರ ಹೇಳಿದ್ದಾರೆ. ಚಿಕಿತ್ಸೆ ವೈಫಲ್ಯದಿಂದ ಮೃತಪಟ್ಟಿದ್ದರೆ ಅದು ಉದ್ದೇಶಪೂರ್ವಕ ಅಲ್ಲ. ಉದ್ದೇಶಪೂರ್ವಕವಾಗಿ ಮಾಡಿದ್ದರೆ, ಅದಕ್ಕೆ ಕಾರಣರಾದವರೇ ಹೊಣೆ ಹೊರಬೇಕು ಎಂದು ಅವರು ಹೇಳಿದ್ದಾರೆ.

ಆಮ್ಲಜನಕ ಕೊರತೆಯ ಪರಿಣಾಮ 12 ಕೊರೊನಾ ರೋಗಿಗಳ ಸಹಿತ 24 ಜನರು ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಮ್ಲಜನಕ ಪೂರೈಕೆಯ ಕೊರತೆಯಿಂದಾಗಿ 12 ರೋಗಿಗಳು ಸಾವನ್ನಪ್ಪಿದ್ದು, ಇತರ ರೋಗಿಗಳು ವಿವಿಧ ಬೇರೆ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಪ್ರತಿಪಾದಿಸಿದೆ. ‘ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ, ಕೊರೊನಾ ಸೋಂಕಿತರಲ್ಲದ ರೋಗಿಗಳು ಕೂಡಾ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, “ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಆದ್ಯತೆ ಮೇಲೆ ಮಾಡಬೇಕು. ಇದು ಹೆಲ್ತ್ ಎಮರ್ಜೆನ್ಸಿ, ಕೊರೊನಾ ನಿರ್ವಹಣೆಗೇ ಆಧ್ಯತೆ ಕೊಡಬೇಕು. ಚಾಮರಾಜನಗರ ದುರಂತ ಘೋರ ಅನ್ಯಾಯ. ದುರಂತಕ್ಕೆ ಯಾರೇ ಹೊಣೆಯಾದರೂ ಅವರ ಮೇಲೆ ಕ್ರಮ ಆಗಲೇಬೇಕು. ಬೇರೆ ರಾಜ್ಯಗಳಲ್ಲಿ ನಡೆಯುತ್ತಿದ್ದದ್ದು ನಮ್ಮ ರಾಜ್ಯದಲ್ಲಿ ನಡೆದಿದೆ. ಇದು ದುರ್ದೈವದ ಸಂಗತಿಯಾಗಿದ್ದು, ಕಠಿಣ ಕ್ರಮ ಆದಾಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದಿಲ್ಲ” ಎಂದು ಹೇಳಿದ್ದಾರೆ.

“ಘಟನೆ ಕುರಿತು ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಬೇರೆ ಜಿಲ್ಲೆಗಳ ಆಕ್ಸಿಜನ್ ಕೊರತೆ ಬಗ್ಗೆ ಗಮನಕ್ಕೆ ತಂದಿದ್ದೇನೆ. ಜನರು ಜೀವ ಕೈಯಲ್ಲಿ ಹಿಡಿಯಬೇಕಾದ ಸ್ಥಿತಿ ಇದೆ. ಬೇರೆ ರಾಜ್ಯಗಳ ದುರ್ಘಟನೆಗಳು ನಮಗೆ ಪಾಠ ಆಗಬೇಕಿತ್ತು. ಇದು ಕ್ಷಮೆಗೆ ಅರ್ಹವಿಲ್ಲದ ಘಟನೆ. ಸಚಿವರು ತಪ್ಪಿತಸ್ಥರಾಗಿದ್ದರೆ ಸಚಿವರೇ ಹೊಣೆ ಹೊತ್ತುಕೊಳ್ಳಬೇಕು. ಅಧಿಕಾರಿಗಳು ತಪ್ಪಿತಸ್ಥರಾಗಿದ್ದರೆ ಅವರೇ ಹೊಣೆ. ಸರ್ಕಾರದ ಗಮನಕ್ಕೂ ಬಂದು ನಿರ್ಲಕ್ಷ್ಯ ವಹಿಸಿದರೆ ಸರ್ಕಾರವೇ ಹೊಣೆ’’ ಎಂದು ಸಿ.ಟಿ. ರವಿ ತಿಳಿಸಿದ್ದಾರೆ.

“ಹಿಂದೆ ರಾಜಕೀಯ ತುರ್ತು ಪರಿಸ್ಥಿತಿ‌ ಘೋಷಣೆ ಮಾಡಿದ್ದ ರೀತಿಯಲ್ಲಿ, ಪ್ರಸ್ತುತ ಹೆಲ್ತ್ ಎಮರ್ಜೆನ್ಸಿ ಎಂದು ಸರ್ಕಾರ ಘೋಷಿಸಬೇಕು. ಈ ಮೂಲಕ ಉಳಿದೆಲ್ಲ ಇಲಾಖೆ ಕೆಲಸ ಸ್ಥಗಿತ ಮಾಡಿ, ಆರೋಗ್ಯದ ಸಮಸ್ಯೆಗೆ ಮಾತ್ರ ಒತ್ತು ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನೆಲಮಂಗಲದ 10 ಸಾವಿರ ಬೆಡ್‌ನ ಕೊರೊನಾ ಆಸ್ಪತ್ರೆಯ ಬಗ್ಗೆ ಮಾತನಾಡಿದ ಅವರು, “10 ಸಾವಿರ ಬೆಡ್‌ನ ಆಸ್ಪತ್ರೆ ನಿರ್ಮಿಸಿದ್ದು ಹೌದು. ಅದು ಉಪಯೋಗವಾಗದಿದ್ದಾಗ ಅದನ್ನು ಡಿಸ್‌ಮೆಂಟಲ್ ಮಾಡಿದ್ದೆವು. ಈಗ ಪೂರ್ವಯೋಜಿತವಾಗಿ ಹಂತಹಂತವಾಗಿ ಕೇಸು ಹೆಚ್ಚಾಗಿಲ್ಲ, ಒಂದೇ ಸಲಕ್ಕೆ ಪ್ರಕರಣಗಳು ಹೆಚ್ಚಾದವು. ಹೀಗಾಗಿ‌ ನಿಭಾಯಿಸುವಲ್ಲಿ ಸ್ವಲ್ಪ ಕಷ್ಟ ಆಗಿದೆ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ರಾಜೀನಾಮೆ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಎಂ ರಾಜೀನಾಮೆಯಿಂದ ಸಮಸ್ಯೆ ಬಗೆಹರಿಯುತ್ತಾ? ಎಂದು ಪ್ರಶ್ನಿಸಿದ್ದಾರೆ. “ಸಮಸ್ಯೆ ಬಗೆಹರಿಯುತ್ತೆ ಎಂದರೆ ಅಧಿಕಾರ ದೊಡ್ಡದಲ್ಲ. ಬೇರೆ ರಾಜ್ಯಗಳಲ್ಲಿ ಯಾರೂ ಸಿಎಂನ ರಾಜೀನಾಮೆ ಕೇಳಿಲ್ಲ. ಆದರೆ ಇಲ್ಲಿ ಕೇಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಆರೋಗ್ಯ ಸಚಿವ ಸುಧಾಕರ್‌ ಮೇಲೆ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದು, “ಸುಧಾಕರ್ ಕೇವಲ‌ ಚಿಕ್ಕಬಳ್ಳಾಪುರಕ್ಕೆ ಮಾತ್ರ ಸಚಿವರಲ್ಲ, ಇಡೀ ರಾಜ್ಯದ ಆರೋಗ್ಯ ಮಂತ್ರಿ. ಅವರು ತಮ್ಮ ಜಿಲ್ಲೆಗೆ ಹಾಸಿಗೆಗಳನ್ನು ರಿಸರ್ವ್ ಮಾಡಿದ್ದು ಸರಿಯಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಿಕೊಳ್ಳಬೇಕು. ಹೀಗೆ ಮಾಡಿದರೆ ಅವರು ಸಂಕುಚಿತ ಮನೋಭಾವದರು ಎನಿಸಿಕೊಳ್ಳುತ್ತಾರೆಯೆ ವಿನಃ, ವಿಶಾಲ ಮನೋಭಾವದ ವ್ಯಕ್ತಿ ಎನಿಸಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...