Homeಕರ್ನಾಟಕಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ - ಸಿಟಿ ರವಿ

ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

- Advertisement -
- Advertisement -

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದರೆ ಅದಕ್ಕೆ ಸರ್ಕಾರವೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಮವಾರ ಹೇಳಿದ್ದಾರೆ. ಚಿಕಿತ್ಸೆ ವೈಫಲ್ಯದಿಂದ ಮೃತಪಟ್ಟಿದ್ದರೆ ಅದು ಉದ್ದೇಶಪೂರ್ವಕ ಅಲ್ಲ. ಉದ್ದೇಶಪೂರ್ವಕವಾಗಿ ಮಾಡಿದ್ದರೆ, ಅದಕ್ಕೆ ಕಾರಣರಾದವರೇ ಹೊಣೆ ಹೊರಬೇಕು ಎಂದು ಅವರು ಹೇಳಿದ್ದಾರೆ.

ಆಮ್ಲಜನಕ ಕೊರತೆಯ ಪರಿಣಾಮ 12 ಕೊರೊನಾ ರೋಗಿಗಳ ಸಹಿತ 24 ಜನರು ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಮ್ಲಜನಕ ಪೂರೈಕೆಯ ಕೊರತೆಯಿಂದಾಗಿ 12 ರೋಗಿಗಳು ಸಾವನ್ನಪ್ಪಿದ್ದು, ಇತರ ರೋಗಿಗಳು ವಿವಿಧ ಬೇರೆ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಪ್ರತಿಪಾದಿಸಿದೆ. ‘ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ, ಕೊರೊನಾ ಸೋಂಕಿತರಲ್ಲದ ರೋಗಿಗಳು ಕೂಡಾ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, “ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಆದ್ಯತೆ ಮೇಲೆ ಮಾಡಬೇಕು. ಇದು ಹೆಲ್ತ್ ಎಮರ್ಜೆನ್ಸಿ, ಕೊರೊನಾ ನಿರ್ವಹಣೆಗೇ ಆಧ್ಯತೆ ಕೊಡಬೇಕು. ಚಾಮರಾಜನಗರ ದುರಂತ ಘೋರ ಅನ್ಯಾಯ. ದುರಂತಕ್ಕೆ ಯಾರೇ ಹೊಣೆಯಾದರೂ ಅವರ ಮೇಲೆ ಕ್ರಮ ಆಗಲೇಬೇಕು. ಬೇರೆ ರಾಜ್ಯಗಳಲ್ಲಿ ನಡೆಯುತ್ತಿದ್ದದ್ದು ನಮ್ಮ ರಾಜ್ಯದಲ್ಲಿ ನಡೆದಿದೆ. ಇದು ದುರ್ದೈವದ ಸಂಗತಿಯಾಗಿದ್ದು, ಕಠಿಣ ಕ್ರಮ ಆದಾಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದಿಲ್ಲ” ಎಂದು ಹೇಳಿದ್ದಾರೆ.

“ಘಟನೆ ಕುರಿತು ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಬೇರೆ ಜಿಲ್ಲೆಗಳ ಆಕ್ಸಿಜನ್ ಕೊರತೆ ಬಗ್ಗೆ ಗಮನಕ್ಕೆ ತಂದಿದ್ದೇನೆ. ಜನರು ಜೀವ ಕೈಯಲ್ಲಿ ಹಿಡಿಯಬೇಕಾದ ಸ್ಥಿತಿ ಇದೆ. ಬೇರೆ ರಾಜ್ಯಗಳ ದುರ್ಘಟನೆಗಳು ನಮಗೆ ಪಾಠ ಆಗಬೇಕಿತ್ತು. ಇದು ಕ್ಷಮೆಗೆ ಅರ್ಹವಿಲ್ಲದ ಘಟನೆ. ಸಚಿವರು ತಪ್ಪಿತಸ್ಥರಾಗಿದ್ದರೆ ಸಚಿವರೇ ಹೊಣೆ ಹೊತ್ತುಕೊಳ್ಳಬೇಕು. ಅಧಿಕಾರಿಗಳು ತಪ್ಪಿತಸ್ಥರಾಗಿದ್ದರೆ ಅವರೇ ಹೊಣೆ. ಸರ್ಕಾರದ ಗಮನಕ್ಕೂ ಬಂದು ನಿರ್ಲಕ್ಷ್ಯ ವಹಿಸಿದರೆ ಸರ್ಕಾರವೇ ಹೊಣೆ’’ ಎಂದು ಸಿ.ಟಿ. ರವಿ ತಿಳಿಸಿದ್ದಾರೆ.

“ಹಿಂದೆ ರಾಜಕೀಯ ತುರ್ತು ಪರಿಸ್ಥಿತಿ‌ ಘೋಷಣೆ ಮಾಡಿದ್ದ ರೀತಿಯಲ್ಲಿ, ಪ್ರಸ್ತುತ ಹೆಲ್ತ್ ಎಮರ್ಜೆನ್ಸಿ ಎಂದು ಸರ್ಕಾರ ಘೋಷಿಸಬೇಕು. ಈ ಮೂಲಕ ಉಳಿದೆಲ್ಲ ಇಲಾಖೆ ಕೆಲಸ ಸ್ಥಗಿತ ಮಾಡಿ, ಆರೋಗ್ಯದ ಸಮಸ್ಯೆಗೆ ಮಾತ್ರ ಒತ್ತು ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನೆಲಮಂಗಲದ 10 ಸಾವಿರ ಬೆಡ್‌ನ ಕೊರೊನಾ ಆಸ್ಪತ್ರೆಯ ಬಗ್ಗೆ ಮಾತನಾಡಿದ ಅವರು, “10 ಸಾವಿರ ಬೆಡ್‌ನ ಆಸ್ಪತ್ರೆ ನಿರ್ಮಿಸಿದ್ದು ಹೌದು. ಅದು ಉಪಯೋಗವಾಗದಿದ್ದಾಗ ಅದನ್ನು ಡಿಸ್‌ಮೆಂಟಲ್ ಮಾಡಿದ್ದೆವು. ಈಗ ಪೂರ್ವಯೋಜಿತವಾಗಿ ಹಂತಹಂತವಾಗಿ ಕೇಸು ಹೆಚ್ಚಾಗಿಲ್ಲ, ಒಂದೇ ಸಲಕ್ಕೆ ಪ್ರಕರಣಗಳು ಹೆಚ್ಚಾದವು. ಹೀಗಾಗಿ‌ ನಿಭಾಯಿಸುವಲ್ಲಿ ಸ್ವಲ್ಪ ಕಷ್ಟ ಆಗಿದೆ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ರಾಜೀನಾಮೆ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಎಂ ರಾಜೀನಾಮೆಯಿಂದ ಸಮಸ್ಯೆ ಬಗೆಹರಿಯುತ್ತಾ? ಎಂದು ಪ್ರಶ್ನಿಸಿದ್ದಾರೆ. “ಸಮಸ್ಯೆ ಬಗೆಹರಿಯುತ್ತೆ ಎಂದರೆ ಅಧಿಕಾರ ದೊಡ್ಡದಲ್ಲ. ಬೇರೆ ರಾಜ್ಯಗಳಲ್ಲಿ ಯಾರೂ ಸಿಎಂನ ರಾಜೀನಾಮೆ ಕೇಳಿಲ್ಲ. ಆದರೆ ಇಲ್ಲಿ ಕೇಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಆರೋಗ್ಯ ಸಚಿವ ಸುಧಾಕರ್‌ ಮೇಲೆ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದು, “ಸುಧಾಕರ್ ಕೇವಲ‌ ಚಿಕ್ಕಬಳ್ಳಾಪುರಕ್ಕೆ ಮಾತ್ರ ಸಚಿವರಲ್ಲ, ಇಡೀ ರಾಜ್ಯದ ಆರೋಗ್ಯ ಮಂತ್ರಿ. ಅವರು ತಮ್ಮ ಜಿಲ್ಲೆಗೆ ಹಾಸಿಗೆಗಳನ್ನು ರಿಸರ್ವ್ ಮಾಡಿದ್ದು ಸರಿಯಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಿಕೊಳ್ಳಬೇಕು. ಹೀಗೆ ಮಾಡಿದರೆ ಅವರು ಸಂಕುಚಿತ ಮನೋಭಾವದರು ಎನಿಸಿಕೊಳ್ಳುತ್ತಾರೆಯೆ ವಿನಃ, ವಿಶಾಲ ಮನೋಭಾವದ ವ್ಯಕ್ತಿ ಎನಿಸಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...