Homeಕರ್ನಾಟಕಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ - ಸಿಟಿ ರವಿ

ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

- Advertisement -
- Advertisement -

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದರೆ ಅದಕ್ಕೆ ಸರ್ಕಾರವೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಮವಾರ ಹೇಳಿದ್ದಾರೆ. ಚಿಕಿತ್ಸೆ ವೈಫಲ್ಯದಿಂದ ಮೃತಪಟ್ಟಿದ್ದರೆ ಅದು ಉದ್ದೇಶಪೂರ್ವಕ ಅಲ್ಲ. ಉದ್ದೇಶಪೂರ್ವಕವಾಗಿ ಮಾಡಿದ್ದರೆ, ಅದಕ್ಕೆ ಕಾರಣರಾದವರೇ ಹೊಣೆ ಹೊರಬೇಕು ಎಂದು ಅವರು ಹೇಳಿದ್ದಾರೆ.

ಆಮ್ಲಜನಕ ಕೊರತೆಯ ಪರಿಣಾಮ 12 ಕೊರೊನಾ ರೋಗಿಗಳ ಸಹಿತ 24 ಜನರು ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಮ್ಲಜನಕ ಪೂರೈಕೆಯ ಕೊರತೆಯಿಂದಾಗಿ 12 ರೋಗಿಗಳು ಸಾವನ್ನಪ್ಪಿದ್ದು, ಇತರ ರೋಗಿಗಳು ವಿವಿಧ ಬೇರೆ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಪ್ರತಿಪಾದಿಸಿದೆ. ‘ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ, ಕೊರೊನಾ ಸೋಂಕಿತರಲ್ಲದ ರೋಗಿಗಳು ಕೂಡಾ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, “ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಆದ್ಯತೆ ಮೇಲೆ ಮಾಡಬೇಕು. ಇದು ಹೆಲ್ತ್ ಎಮರ್ಜೆನ್ಸಿ, ಕೊರೊನಾ ನಿರ್ವಹಣೆಗೇ ಆಧ್ಯತೆ ಕೊಡಬೇಕು. ಚಾಮರಾಜನಗರ ದುರಂತ ಘೋರ ಅನ್ಯಾಯ. ದುರಂತಕ್ಕೆ ಯಾರೇ ಹೊಣೆಯಾದರೂ ಅವರ ಮೇಲೆ ಕ್ರಮ ಆಗಲೇಬೇಕು. ಬೇರೆ ರಾಜ್ಯಗಳಲ್ಲಿ ನಡೆಯುತ್ತಿದ್ದದ್ದು ನಮ್ಮ ರಾಜ್ಯದಲ್ಲಿ ನಡೆದಿದೆ. ಇದು ದುರ್ದೈವದ ಸಂಗತಿಯಾಗಿದ್ದು, ಕಠಿಣ ಕ್ರಮ ಆದಾಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದಿಲ್ಲ” ಎಂದು ಹೇಳಿದ್ದಾರೆ.

“ಘಟನೆ ಕುರಿತು ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಬೇರೆ ಜಿಲ್ಲೆಗಳ ಆಕ್ಸಿಜನ್ ಕೊರತೆ ಬಗ್ಗೆ ಗಮನಕ್ಕೆ ತಂದಿದ್ದೇನೆ. ಜನರು ಜೀವ ಕೈಯಲ್ಲಿ ಹಿಡಿಯಬೇಕಾದ ಸ್ಥಿತಿ ಇದೆ. ಬೇರೆ ರಾಜ್ಯಗಳ ದುರ್ಘಟನೆಗಳು ನಮಗೆ ಪಾಠ ಆಗಬೇಕಿತ್ತು. ಇದು ಕ್ಷಮೆಗೆ ಅರ್ಹವಿಲ್ಲದ ಘಟನೆ. ಸಚಿವರು ತಪ್ಪಿತಸ್ಥರಾಗಿದ್ದರೆ ಸಚಿವರೇ ಹೊಣೆ ಹೊತ್ತುಕೊಳ್ಳಬೇಕು. ಅಧಿಕಾರಿಗಳು ತಪ್ಪಿತಸ್ಥರಾಗಿದ್ದರೆ ಅವರೇ ಹೊಣೆ. ಸರ್ಕಾರದ ಗಮನಕ್ಕೂ ಬಂದು ನಿರ್ಲಕ್ಷ್ಯ ವಹಿಸಿದರೆ ಸರ್ಕಾರವೇ ಹೊಣೆ’’ ಎಂದು ಸಿ.ಟಿ. ರವಿ ತಿಳಿಸಿದ್ದಾರೆ.

“ಹಿಂದೆ ರಾಜಕೀಯ ತುರ್ತು ಪರಿಸ್ಥಿತಿ‌ ಘೋಷಣೆ ಮಾಡಿದ್ದ ರೀತಿಯಲ್ಲಿ, ಪ್ರಸ್ತುತ ಹೆಲ್ತ್ ಎಮರ್ಜೆನ್ಸಿ ಎಂದು ಸರ್ಕಾರ ಘೋಷಿಸಬೇಕು. ಈ ಮೂಲಕ ಉಳಿದೆಲ್ಲ ಇಲಾಖೆ ಕೆಲಸ ಸ್ಥಗಿತ ಮಾಡಿ, ಆರೋಗ್ಯದ ಸಮಸ್ಯೆಗೆ ಮಾತ್ರ ಒತ್ತು ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನೆಲಮಂಗಲದ 10 ಸಾವಿರ ಬೆಡ್‌ನ ಕೊರೊನಾ ಆಸ್ಪತ್ರೆಯ ಬಗ್ಗೆ ಮಾತನಾಡಿದ ಅವರು, “10 ಸಾವಿರ ಬೆಡ್‌ನ ಆಸ್ಪತ್ರೆ ನಿರ್ಮಿಸಿದ್ದು ಹೌದು. ಅದು ಉಪಯೋಗವಾಗದಿದ್ದಾಗ ಅದನ್ನು ಡಿಸ್‌ಮೆಂಟಲ್ ಮಾಡಿದ್ದೆವು. ಈಗ ಪೂರ್ವಯೋಜಿತವಾಗಿ ಹಂತಹಂತವಾಗಿ ಕೇಸು ಹೆಚ್ಚಾಗಿಲ್ಲ, ಒಂದೇ ಸಲಕ್ಕೆ ಪ್ರಕರಣಗಳು ಹೆಚ್ಚಾದವು. ಹೀಗಾಗಿ‌ ನಿಭಾಯಿಸುವಲ್ಲಿ ಸ್ವಲ್ಪ ಕಷ್ಟ ಆಗಿದೆ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ರಾಜೀನಾಮೆ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಎಂ ರಾಜೀನಾಮೆಯಿಂದ ಸಮಸ್ಯೆ ಬಗೆಹರಿಯುತ್ತಾ? ಎಂದು ಪ್ರಶ್ನಿಸಿದ್ದಾರೆ. “ಸಮಸ್ಯೆ ಬಗೆಹರಿಯುತ್ತೆ ಎಂದರೆ ಅಧಿಕಾರ ದೊಡ್ಡದಲ್ಲ. ಬೇರೆ ರಾಜ್ಯಗಳಲ್ಲಿ ಯಾರೂ ಸಿಎಂನ ರಾಜೀನಾಮೆ ಕೇಳಿಲ್ಲ. ಆದರೆ ಇಲ್ಲಿ ಕೇಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಆರೋಗ್ಯ ಸಚಿವ ಸುಧಾಕರ್‌ ಮೇಲೆ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದು, “ಸುಧಾಕರ್ ಕೇವಲ‌ ಚಿಕ್ಕಬಳ್ಳಾಪುರಕ್ಕೆ ಮಾತ್ರ ಸಚಿವರಲ್ಲ, ಇಡೀ ರಾಜ್ಯದ ಆರೋಗ್ಯ ಮಂತ್ರಿ. ಅವರು ತಮ್ಮ ಜಿಲ್ಲೆಗೆ ಹಾಸಿಗೆಗಳನ್ನು ರಿಸರ್ವ್ ಮಾಡಿದ್ದು ಸರಿಯಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಿಕೊಳ್ಳಬೇಕು. ಹೀಗೆ ಮಾಡಿದರೆ ಅವರು ಸಂಕುಚಿತ ಮನೋಭಾವದರು ಎನಿಸಿಕೊಳ್ಳುತ್ತಾರೆಯೆ ವಿನಃ, ವಿಶಾಲ ಮನೋಭಾವದ ವ್ಯಕ್ತಿ ಎನಿಸಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...