Homeಕರ್ನಾಟಕಮತ್ತೆ ಮತ್ತೆ ದುರಂತಗಳಿಗೆ ಸಾಕ್ಷಿಯಾಗುತ್ತಿದೆ ಚಾಮರಾಜನಗರ ಜಿಲ್ಲೆ

ಮತ್ತೆ ಮತ್ತೆ ದುರಂತಗಳಿಗೆ ಸಾಕ್ಷಿಯಾಗುತ್ತಿದೆ ಚಾಮರಾಜನಗರ ಜಿಲ್ಲೆ

- Advertisement -
- Advertisement -

ಚಾಮರಾಜನಗರ ಜಿಲ್ಲೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಒಳಗಾಗುವುದು ಒಂದು ಕಡೆಯಾದರೆ, ಮತ್ತೆ ಮತ್ತೆ ಯಾವುದಾದರೊಂದು ದುರಂತಕ್ಕೆ ಈಡಾಗುತ್ತಿರುವುದು ಮತ್ತೊಂದು ರೀತಿಯ ಸಮಸ್ಯೆಯಾಗಿ ಪರಿಣಮಿಸಿದೆ.

2018ನೇ ಇಸವಿ ಡಿಸೆಂಬರ್‌  14ರಂದು ಚಾಮರಾಜನಗರ ಜಿಲ್ಲೆಯಷ್ಟೇ ಅಲ್ಲ, ಇಡೀ ರಾಜ್ಯವೇ ಬೆಚ್ಚಿ ಬಿದ್ದಿತ್ತು. ಹನೂರು ತಾಲ್ಲೂಕಿನ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಪ್ರಸಾದದಲ್ಲಿ ವಿಷ ಬೆರೆಸಿದ್ದರಿಂದ 17 ಜನರು ಕೊನೆಯುಸಿರೆಳೆದಿದ್ದರು. 129 ಜನ ಸಂತ್ರಸ್ತರಾದರು.

ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಬೃಹನ್ಮಠದ ಕಿರಿಯ ಇಮ್ಮಡಿ ಮಹದೇವಸ್ವಾಮೀಜಿ ಕೃತ್ಯದಲ್ಲಿ ಭಾಗಿಯಾಗಿದ್ದರು. ದೇವಾಲಯದ ಟ್ರಸ್ಟಿಗಳ ನಡುವಿನ ದ್ವೇಷವು ಭಕ್ತರಿಗೆ ವಿಷ ಹಾಕುವ ಮಟ್ಟಕ್ಕೆ ಹೋಗಿತ್ತು. ವಿಷ ಹಾಕಿದ್ದ ಈಗ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಈ ಕರಾಳ ನೋವು ಮಾಸುವ ಮುನ್ನವೇ ಕೋವಿಡ್ ಸಂದರ್ಭದಲ್ಲಿ ಮತ್ತೊಂದು ದುರಂತಕ್ಕೆ ಚಾಮರಾಜನಗರ ಸಾಕ್ಷಿಯಾಯಿತು. ಆಕ್ಸಿಜನ್ ಸಿಗದೆ ಜನರು ಮೃತಪಟ್ಟರು. “ಒಟ್ಟು 37 ಮೃತರ ಕುಟುಂಬಸ್ಥರ ಪೈಕಿ ಕೇವಲ 24 ಮಂದಿಯ ಕುಟುಂಬಸ್ಥರಿಗೆ ಅಲ್ಪಸ್ವಲ್ಪ ಪರಿಹಾರ ದೊರೆತಿದೆ. ಇನ್ನು 13 ಸಂತ್ರಸ್ಥ ಕುಟುಂಬಸ್ಥರಿಗೆ ಪರಿಹಾರದ ಒಂದು ನಯಾಪೈಸೆಯೂ ನೀಡಿರುವುದಿಲ್ಲ” ಎಂಬ ಆರೋಪಗಳು ಬರುತ್ತಿವೆ.

ಕ್ವಾರಿ ಗುಡ್ಡ ಕುಸಿತ ದುರಂತ

ಗಾಯದ ಮೇಲೆ ಉಪ್ಪು ಸವರಿದಂತೆ ಮತ್ತೊಂದು ದುರಂತ ಚಾಮರಾಜನಗರ ಜಿಲ್ಲೆಯಲ್ಲಿ ಮಾ.4ರಂದು ಘಟಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯ ಗುಡ್ಡ ಕುಸಿತದಲ್ಲಿ ಕಾರ್ಮಿಕರು ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ.

ಮಣ್ಣು, ಬಂಡೆಗಳ ಅಡಿ ಸಿಲುಕಿರುವ ಮೂವರು ಕಾರ್ಮಿಕರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದ್ದು, ಅವರು ಜೀವಂತ ಬದುಕಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಹೊರಕ್ಕೆ ತೆಗೆಯಲಾದ ಮೃತ ದೇಹವನ್ನು ಉತ್ತರಪ್ರದೇಶದ ಗೋರಖ್‌ ಪುರದ ಅಜೀಂ ಉಲ್ಲಾ ಅಲಿಯಾಸ್‌ ಬಬ್ಲೂ (24) ಎಂದು ಗುರುತಿಸಲಾಗಿದೆ. ಕಲ್ಲು ಬಂಡೆಗಳ ಅಡಿಯಲ್ಲಿ ಸಿಲುಕಿರುವ ಇನ್ನಿಬ್ಬರು ಮಿರಾಜ್ (28) ಹಾಗೂ ಸರ್ಫ್ರಾಜ್ (18) ಕೂಡ ಉತ್ತರ ಪ್ರದೇಶದ ಗೋರಖ್‌ಪುರದವರೇ ಆಗಿದ್ದಾರೆಂದು ಹೇಳಲಾಗುತ್ತಿದೆ.

ಅಜೀಂ ಉಲ್ಲಾ ಹಾಗೂ ಮಿರಾಜ್‌ ಅವರು ಹಿಟಾಚಿ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದರು. ಸರ್ಫ್ರಾಜ್‌ ಸಹಾಯಕರಾಗಿದ್ದರು. ಕಲ್ಲು ಬಂಡೆಗಳ ಅಡಿಯಲ್ಲಿ ಮುಚ್ಚಿ ಹೋಗಿದ್ದ ಹಿಟಾಚಿಯಲ್ಲಿ ಸಿಲುಕಿದ್ದ ಅಜೀಂ ಉಲ್ಲಾ ಅವರ ಶವವನ್ನು ರಾಷ್ಟ್ರೀಯ ವಿಪತ್ತು ಕಾರ್ಯಪಡೆ ಹಾಗೂ ರಾಜ್ಯ ವಿಪತ್ತು ಕಾರ್ಯ ಪಡೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶನಿವಾರ ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ ಹೊರತೆಗೆದ್ದಾರೆ.

ಅಲ್ಲಿಗೆ ಸಮೀಪದಲ್ಲೇ ಬಂಡೆಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಮತ್ತೊಂದು ಹಿಟಾಚಿ ಕಡೆಯಿಂದ ದುರ್ವಾಸನೆ ಬರುತ್ತಿರುವುದರಿಂದ, ಉಳಿದಿಬ್ಬರ ಮೃತದೇಹವಿರಬಹುದೆಂಬ ಶಂಕೆಯಿಂದ ಅಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ನ ತಲಾ 20 ಮಂದಿ, ಅಗ್ನಿ ಶಾಮಕ ದಳದ 50 ಸಿಬ್ಬಂದಿ ಶನಿವಾರ ಬೆಳಿಗ್ಗೆ 6.30ಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಫ್ರಾನ್ಸಿಸ್‌ (ಮಾರ್ಟಳ್ಳಿ, ಕೊಳ್ಳೇಗಾಲ), ಆಶ್ರೀಫ್‌ (ಗೋರಖ್‌ಪುರ್‌, ಉತ್ತರ ಪ್ರದೇಶ), ಬಬ್ಲು (ಗೋರಖ್‌ಪುರ್‌‌, ಉತ್ತರ ಪ್ರದೇಶ), ಮೀರಜ್‌ ಖಾನ್‌ (ಉತ್ತರ ಪ್ರದೇಶ), ನೂರುದ್ದೀನ್‌ (ಕ್ಯಾಲಿಕಟ್‌, ಕೇರಳ) ಎಂಬವರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಭೇಟಿ ನೀಡಿದ್ದರು. “ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ಪತ್ತೆ ಹಚ್ಚುವುದಕ್ಕಾಗಿ ಎಲ್ಲ ಗಣಿ ಚಟುವಟಿಕೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗುವುದು. ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಖುದ್ದಾಗಿ ಗಣಿಗಳಿಗೆ ಭೇಟಿ ನೀಡಿ, ಎಲ್ಲವೂ ನಿಯಮ ಪ್ರಕಾರ ನಡೆಯುತ್ತಿದ್ದರೆ, ಗಣಿಗಾರಿಕೆಗೆ ಅವಕಾಶ ನೀಡಲಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದರೆ ಹೆಸರು ಹೇಳಲಿಚ್ಛಿಸದ ಮೂಲಗಳ ಪ್ರಕಾರ, “ಚಾಮರಾಜನಗರ ಜಿಲ್ಲೆಯಲ್ಲಿ ಇಂತಹ ದುರಂತಗಳು ಆಗಾಗ್ಗೆ ಸಂಭವಿಸುತ್ತಿವೆ. ಆದರೆ ಬೆಳಕಿಗೆ ಬರುತ್ತಿಲ್ಲ. ಅಕ್ರಮ ಕಲ್ಲುಗಣಿಗಾರಿಕೆ ಮಿತಿಮೀರಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದೆ ಇರುವುದರಿಂದ ಗಣಿಗಾರಿಕೆಗೆ ಕಡಿವಾಣ ಇಲ್ಲವಾಗಿದೆ”.


ಇದನ್ನೂ ಓದಿರಿ: ‘ಕೋವಿಡ್‌ ಆಕ್ಸಿಜನ್ ದುರಂತ: ಚಾ.ನಗರ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...