Homeಕರ್ನಾಟಕಮತ್ತೆ ಮತ್ತೆ ದುರಂತಗಳಿಗೆ ಸಾಕ್ಷಿಯಾಗುತ್ತಿದೆ ಚಾಮರಾಜನಗರ ಜಿಲ್ಲೆ

ಮತ್ತೆ ಮತ್ತೆ ದುರಂತಗಳಿಗೆ ಸಾಕ್ಷಿಯಾಗುತ್ತಿದೆ ಚಾಮರಾಜನಗರ ಜಿಲ್ಲೆ

- Advertisement -
- Advertisement -

ಚಾಮರಾಜನಗರ ಜಿಲ್ಲೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಒಳಗಾಗುವುದು ಒಂದು ಕಡೆಯಾದರೆ, ಮತ್ತೆ ಮತ್ತೆ ಯಾವುದಾದರೊಂದು ದುರಂತಕ್ಕೆ ಈಡಾಗುತ್ತಿರುವುದು ಮತ್ತೊಂದು ರೀತಿಯ ಸಮಸ್ಯೆಯಾಗಿ ಪರಿಣಮಿಸಿದೆ.

2018ನೇ ಇಸವಿ ಡಿಸೆಂಬರ್‌  14ರಂದು ಚಾಮರಾಜನಗರ ಜಿಲ್ಲೆಯಷ್ಟೇ ಅಲ್ಲ, ಇಡೀ ರಾಜ್ಯವೇ ಬೆಚ್ಚಿ ಬಿದ್ದಿತ್ತು. ಹನೂರು ತಾಲ್ಲೂಕಿನ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಪ್ರಸಾದದಲ್ಲಿ ವಿಷ ಬೆರೆಸಿದ್ದರಿಂದ 17 ಜನರು ಕೊನೆಯುಸಿರೆಳೆದಿದ್ದರು. 129 ಜನ ಸಂತ್ರಸ್ತರಾದರು.

ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಬೃಹನ್ಮಠದ ಕಿರಿಯ ಇಮ್ಮಡಿ ಮಹದೇವಸ್ವಾಮೀಜಿ ಕೃತ್ಯದಲ್ಲಿ ಭಾಗಿಯಾಗಿದ್ದರು. ದೇವಾಲಯದ ಟ್ರಸ್ಟಿಗಳ ನಡುವಿನ ದ್ವೇಷವು ಭಕ್ತರಿಗೆ ವಿಷ ಹಾಕುವ ಮಟ್ಟಕ್ಕೆ ಹೋಗಿತ್ತು. ವಿಷ ಹಾಕಿದ್ದ ಈಗ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಈ ಕರಾಳ ನೋವು ಮಾಸುವ ಮುನ್ನವೇ ಕೋವಿಡ್ ಸಂದರ್ಭದಲ್ಲಿ ಮತ್ತೊಂದು ದುರಂತಕ್ಕೆ ಚಾಮರಾಜನಗರ ಸಾಕ್ಷಿಯಾಯಿತು. ಆಕ್ಸಿಜನ್ ಸಿಗದೆ ಜನರು ಮೃತಪಟ್ಟರು. “ಒಟ್ಟು 37 ಮೃತರ ಕುಟುಂಬಸ್ಥರ ಪೈಕಿ ಕೇವಲ 24 ಮಂದಿಯ ಕುಟುಂಬಸ್ಥರಿಗೆ ಅಲ್ಪಸ್ವಲ್ಪ ಪರಿಹಾರ ದೊರೆತಿದೆ. ಇನ್ನು 13 ಸಂತ್ರಸ್ಥ ಕುಟುಂಬಸ್ಥರಿಗೆ ಪರಿಹಾರದ ಒಂದು ನಯಾಪೈಸೆಯೂ ನೀಡಿರುವುದಿಲ್ಲ” ಎಂಬ ಆರೋಪಗಳು ಬರುತ್ತಿವೆ.

ಕ್ವಾರಿ ಗುಡ್ಡ ಕುಸಿತ ದುರಂತ

ಗಾಯದ ಮೇಲೆ ಉಪ್ಪು ಸವರಿದಂತೆ ಮತ್ತೊಂದು ದುರಂತ ಚಾಮರಾಜನಗರ ಜಿಲ್ಲೆಯಲ್ಲಿ ಮಾ.4ರಂದು ಘಟಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯ ಗುಡ್ಡ ಕುಸಿತದಲ್ಲಿ ಕಾರ್ಮಿಕರು ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ.

ಮಣ್ಣು, ಬಂಡೆಗಳ ಅಡಿ ಸಿಲುಕಿರುವ ಮೂವರು ಕಾರ್ಮಿಕರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದ್ದು, ಅವರು ಜೀವಂತ ಬದುಕಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಹೊರಕ್ಕೆ ತೆಗೆಯಲಾದ ಮೃತ ದೇಹವನ್ನು ಉತ್ತರಪ್ರದೇಶದ ಗೋರಖ್‌ ಪುರದ ಅಜೀಂ ಉಲ್ಲಾ ಅಲಿಯಾಸ್‌ ಬಬ್ಲೂ (24) ಎಂದು ಗುರುತಿಸಲಾಗಿದೆ. ಕಲ್ಲು ಬಂಡೆಗಳ ಅಡಿಯಲ್ಲಿ ಸಿಲುಕಿರುವ ಇನ್ನಿಬ್ಬರು ಮಿರಾಜ್ (28) ಹಾಗೂ ಸರ್ಫ್ರಾಜ್ (18) ಕೂಡ ಉತ್ತರ ಪ್ರದೇಶದ ಗೋರಖ್‌ಪುರದವರೇ ಆಗಿದ್ದಾರೆಂದು ಹೇಳಲಾಗುತ್ತಿದೆ.

ಅಜೀಂ ಉಲ್ಲಾ ಹಾಗೂ ಮಿರಾಜ್‌ ಅವರು ಹಿಟಾಚಿ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದರು. ಸರ್ಫ್ರಾಜ್‌ ಸಹಾಯಕರಾಗಿದ್ದರು. ಕಲ್ಲು ಬಂಡೆಗಳ ಅಡಿಯಲ್ಲಿ ಮುಚ್ಚಿ ಹೋಗಿದ್ದ ಹಿಟಾಚಿಯಲ್ಲಿ ಸಿಲುಕಿದ್ದ ಅಜೀಂ ಉಲ್ಲಾ ಅವರ ಶವವನ್ನು ರಾಷ್ಟ್ರೀಯ ವಿಪತ್ತು ಕಾರ್ಯಪಡೆ ಹಾಗೂ ರಾಜ್ಯ ವಿಪತ್ತು ಕಾರ್ಯ ಪಡೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶನಿವಾರ ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ ಹೊರತೆಗೆದ್ದಾರೆ.

ಅಲ್ಲಿಗೆ ಸಮೀಪದಲ್ಲೇ ಬಂಡೆಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಮತ್ತೊಂದು ಹಿಟಾಚಿ ಕಡೆಯಿಂದ ದುರ್ವಾಸನೆ ಬರುತ್ತಿರುವುದರಿಂದ, ಉಳಿದಿಬ್ಬರ ಮೃತದೇಹವಿರಬಹುದೆಂಬ ಶಂಕೆಯಿಂದ ಅಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ನ ತಲಾ 20 ಮಂದಿ, ಅಗ್ನಿ ಶಾಮಕ ದಳದ 50 ಸಿಬ್ಬಂದಿ ಶನಿವಾರ ಬೆಳಿಗ್ಗೆ 6.30ಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಫ್ರಾನ್ಸಿಸ್‌ (ಮಾರ್ಟಳ್ಳಿ, ಕೊಳ್ಳೇಗಾಲ), ಆಶ್ರೀಫ್‌ (ಗೋರಖ್‌ಪುರ್‌, ಉತ್ತರ ಪ್ರದೇಶ), ಬಬ್ಲು (ಗೋರಖ್‌ಪುರ್‌‌, ಉತ್ತರ ಪ್ರದೇಶ), ಮೀರಜ್‌ ಖಾನ್‌ (ಉತ್ತರ ಪ್ರದೇಶ), ನೂರುದ್ದೀನ್‌ (ಕ್ಯಾಲಿಕಟ್‌, ಕೇರಳ) ಎಂಬವರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಭೇಟಿ ನೀಡಿದ್ದರು. “ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ಪತ್ತೆ ಹಚ್ಚುವುದಕ್ಕಾಗಿ ಎಲ್ಲ ಗಣಿ ಚಟುವಟಿಕೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗುವುದು. ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಖುದ್ದಾಗಿ ಗಣಿಗಳಿಗೆ ಭೇಟಿ ನೀಡಿ, ಎಲ್ಲವೂ ನಿಯಮ ಪ್ರಕಾರ ನಡೆಯುತ್ತಿದ್ದರೆ, ಗಣಿಗಾರಿಕೆಗೆ ಅವಕಾಶ ನೀಡಲಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದರೆ ಹೆಸರು ಹೇಳಲಿಚ್ಛಿಸದ ಮೂಲಗಳ ಪ್ರಕಾರ, “ಚಾಮರಾಜನಗರ ಜಿಲ್ಲೆಯಲ್ಲಿ ಇಂತಹ ದುರಂತಗಳು ಆಗಾಗ್ಗೆ ಸಂಭವಿಸುತ್ತಿವೆ. ಆದರೆ ಬೆಳಕಿಗೆ ಬರುತ್ತಿಲ್ಲ. ಅಕ್ರಮ ಕಲ್ಲುಗಣಿಗಾರಿಕೆ ಮಿತಿಮೀರಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದೆ ಇರುವುದರಿಂದ ಗಣಿಗಾರಿಕೆಗೆ ಕಡಿವಾಣ ಇಲ್ಲವಾಗಿದೆ”.


ಇದನ್ನೂ ಓದಿರಿ: ‘ಕೋವಿಡ್‌ ಆಕ್ಸಿಜನ್ ದುರಂತ: ಚಾ.ನಗರ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...