Homeಕರ್ನಾಟಕಚಾಮರಾಜನಗರ | ಖಾಸಗಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಊರು ತೊರೆದ ಜನ!

ಚಾಮರಾಜನಗರ | ಖಾಸಗಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಊರು ತೊರೆದ ಜನ!

- Advertisement -
- Advertisement -

ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳ ತಾಳಲಾರದೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಪುರ, ದೇಶವಳ್ಳಿ ಸೇರಿದಂತೆ ಹಲವೆಡೆಗಳಲ್ಲಿ ಜನರು ಮನೆಗಳನ್ನೇ ತೊರೆದಿದ್ದಾರೆ ಎಂದು ವರದಿಯಾಗಿದೆ.

ಪಡೆದಿರುವ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿಸಿಲ್ಲ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳ ಏಜೆಂಟರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಹಲವು ಕುಟುಂಬಗಳು ಮನೆಗೆ ಬೀಗ ಹಾಕಿ, ಊರು ಬಿಟ್ಟು ಹೋಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೆಲ ಮಕ್ಕಳು ತಮ್ಮ ಶಿಕ್ಷಣವನ್ನೂ ಅರ್ಧದಲ್ಲಿ ನಿಲ್ಲಿಸಿ ತಮ್ಮ ಫೋಷಕರೊಂದಿಗೆ ಬೇರೆ ಜಿಲ್ಲೆ, ರಾಜ್ಯಗಳಿಗೆ ತೋಟದ ಕೆಲಸಕ್ಕೆ ಹೋಗಿದ್ದಾರೆ. ಮೋಹನ್ ಎಂಬ ವಿದ್ಯಾರ್ಥಿಯೊಬ್ಬ ತಂದೆ ಮಾಡಿದ ಸಾಲ ತೀರಿಸುವ ಸಲುವಾಗಿ ತನ್ನ ಕಿಡ್ನಿ ಮಾರಲು ಅನುವು ಮಾಡಿಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾನೆ. ಫೈನಾನ್ಸ್ ಏಜೆಂಟ್ ಈತನ ಮನೆಗೆ ಬಂದು ಅಶ್ಲೀಲ ಪದ ಬಳಸಿ ತಾಯಿಗೆ ನಿಂದಿಸಿದ್ದ. ಇದರಿಂದ ಬೇಸತ್ತು ಕಿಡ್ನಿ ಮಾರಲು ಮುಂದಾಗಿದ್ದಾನೆ ಎಂದು ವರದಿ ವಿವರಿಸಿದೆ.

ಏಜೆಂಟರು ರಾತ್ರಿ ವೇಳೆ ಸಾಲ ಪಡೆದವರ ಮನೆಗಳಿಗೆ ಭೇಟಿ ನೀಡಿ, ಅವರ ಮಕ್ಕಳ ಸಮ್ಮುಖದಲ್ಲಿಯೇ ಕಿರುಕುಳ ನೀಡುತ್ತಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಮೈಕ್ರೋಫೈನಾನ್ಸ್ ಕಂಪನಿಗಳು 24% ಬಡ್ಡಿಗೆ ಸಾಲ ವಿತರಿಸಿವೆ ಎಂದು ಹೆಗ್ಗವಾಡಿಪುರದ ಜನರು ಆರೋಪಿಸಿದ್ದಾರೆ. ಕೆಲವು ಫೈನಾನ್ಸ್ ಕಂಪನಿಗಳನ್ನು ಟ್ರಸ್ಟ್‌ಗಳು ನಡೆಸುತ್ತಿವೆ. ನೆರೆಯ ತಮಿಳುನಾಡಿನ ಕಂಪನಿಗಳು ಕೂಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಕಂಪನಿಗಳು ವ್ಯಕ್ತಿಗಳಿಗೆ ಮಾತ್ರವಲ್ಲದೆ ಮಹಿಳಾ ಸ್ವಸಹಾಯ ಗುಂಪುಗಳಿಗೂ ಹಣವನ್ನು ಸಾಲ ನೀಡುತ್ತವೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾಗಿ ವರದಿ ಹೇಳಿದೆ.

ಫೈನಾನ್ಸ್ ಕಂಪನಿ ಕಿರುಕುಳ ತಾಳಲಾರದೆ ಪೋಷಕರು ಅತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕೆಲ ಮಕ್ಕಳು ಮಾಹಿತಿ ಬಿಚ್ಚಿಟ್ಟಿದ್ದಾರೆ.

“ಜನರು ಯಾವುದೇ ಕಾರಣಕ್ಕೂ ಮನೆ ಬಿಟ್ಟು ಹೋಗಬಾರದು. ಸಹಾಯಕ್ಕಾಗಿ ತಮ್ಮನ್ನು, ಸಹಾಯಕ ಆಯುಕ್ತರನ್ನು, ತಹಶೀಲ್ದಾರ್ ಮತ್ತು ಸ್ಥಳೀಯ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಗ್ರಾಮಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಜನರಿಗೆ ಅರಿವು ಮೂಡಿಸಲು ವಿಶೇಷ ಪಂಚಾಯತ್ ಸಭೆಗಳನ್ನು ನಡೆಸಲು ಜಿಲ್ಲಾಡಳಿತ ಯೋಜಿಸಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಕೃಪೆ : newindianexpress.com

ಇದನ್ನೂ ಓದಿ : ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...