Homeಕರ್ನಾಟಕಚಾಮರಾಜನಗರ | ಖಾಸಗಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಊರು ತೊರೆದ ಜನ!

ಚಾಮರಾಜನಗರ | ಖಾಸಗಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಊರು ತೊರೆದ ಜನ!

- Advertisement -
- Advertisement -

ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳ ತಾಳಲಾರದೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಪುರ, ದೇಶವಳ್ಳಿ ಸೇರಿದಂತೆ ಹಲವೆಡೆಗಳಲ್ಲಿ ಜನರು ಮನೆಗಳನ್ನೇ ತೊರೆದಿದ್ದಾರೆ ಎಂದು ವರದಿಯಾಗಿದೆ.

ಪಡೆದಿರುವ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿಸಿಲ್ಲ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳ ಏಜೆಂಟರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಹಲವು ಕುಟುಂಬಗಳು ಮನೆಗೆ ಬೀಗ ಹಾಕಿ, ಊರು ಬಿಟ್ಟು ಹೋಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೆಲ ಮಕ್ಕಳು ತಮ್ಮ ಶಿಕ್ಷಣವನ್ನೂ ಅರ್ಧದಲ್ಲಿ ನಿಲ್ಲಿಸಿ ತಮ್ಮ ಫೋಷಕರೊಂದಿಗೆ ಬೇರೆ ಜಿಲ್ಲೆ, ರಾಜ್ಯಗಳಿಗೆ ತೋಟದ ಕೆಲಸಕ್ಕೆ ಹೋಗಿದ್ದಾರೆ. ಮೋಹನ್ ಎಂಬ ವಿದ್ಯಾರ್ಥಿಯೊಬ್ಬ ತಂದೆ ಮಾಡಿದ ಸಾಲ ತೀರಿಸುವ ಸಲುವಾಗಿ ತನ್ನ ಕಿಡ್ನಿ ಮಾರಲು ಅನುವು ಮಾಡಿಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾನೆ. ಫೈನಾನ್ಸ್ ಏಜೆಂಟ್ ಈತನ ಮನೆಗೆ ಬಂದು ಅಶ್ಲೀಲ ಪದ ಬಳಸಿ ತಾಯಿಗೆ ನಿಂದಿಸಿದ್ದ. ಇದರಿಂದ ಬೇಸತ್ತು ಕಿಡ್ನಿ ಮಾರಲು ಮುಂದಾಗಿದ್ದಾನೆ ಎಂದು ವರದಿ ವಿವರಿಸಿದೆ.

ಏಜೆಂಟರು ರಾತ್ರಿ ವೇಳೆ ಸಾಲ ಪಡೆದವರ ಮನೆಗಳಿಗೆ ಭೇಟಿ ನೀಡಿ, ಅವರ ಮಕ್ಕಳ ಸಮ್ಮುಖದಲ್ಲಿಯೇ ಕಿರುಕುಳ ನೀಡುತ್ತಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಮೈಕ್ರೋಫೈನಾನ್ಸ್ ಕಂಪನಿಗಳು 24% ಬಡ್ಡಿಗೆ ಸಾಲ ವಿತರಿಸಿವೆ ಎಂದು ಹೆಗ್ಗವಾಡಿಪುರದ ಜನರು ಆರೋಪಿಸಿದ್ದಾರೆ. ಕೆಲವು ಫೈನಾನ್ಸ್ ಕಂಪನಿಗಳನ್ನು ಟ್ರಸ್ಟ್‌ಗಳು ನಡೆಸುತ್ತಿವೆ. ನೆರೆಯ ತಮಿಳುನಾಡಿನ ಕಂಪನಿಗಳು ಕೂಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಕಂಪನಿಗಳು ವ್ಯಕ್ತಿಗಳಿಗೆ ಮಾತ್ರವಲ್ಲದೆ ಮಹಿಳಾ ಸ್ವಸಹಾಯ ಗುಂಪುಗಳಿಗೂ ಹಣವನ್ನು ಸಾಲ ನೀಡುತ್ತವೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾಗಿ ವರದಿ ಹೇಳಿದೆ.

ಫೈನಾನ್ಸ್ ಕಂಪನಿ ಕಿರುಕುಳ ತಾಳಲಾರದೆ ಪೋಷಕರು ಅತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕೆಲ ಮಕ್ಕಳು ಮಾಹಿತಿ ಬಿಚ್ಚಿಟ್ಟಿದ್ದಾರೆ.

“ಜನರು ಯಾವುದೇ ಕಾರಣಕ್ಕೂ ಮನೆ ಬಿಟ್ಟು ಹೋಗಬಾರದು. ಸಹಾಯಕ್ಕಾಗಿ ತಮ್ಮನ್ನು, ಸಹಾಯಕ ಆಯುಕ್ತರನ್ನು, ತಹಶೀಲ್ದಾರ್ ಮತ್ತು ಸ್ಥಳೀಯ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಗ್ರಾಮಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಜನರಿಗೆ ಅರಿವು ಮೂಡಿಸಲು ವಿಶೇಷ ಪಂಚಾಯತ್ ಸಭೆಗಳನ್ನು ನಡೆಸಲು ಜಿಲ್ಲಾಡಳಿತ ಯೋಜಿಸಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಕೃಪೆ : newindianexpress.com

ಇದನ್ನೂ ಓದಿ : ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...