Homeಕರ್ನಾಟಕಚಾಮರಾಜನಗರ: ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ: ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

- Advertisement -
- Advertisement -

ಏಪ್ರಿಲ್ 26 ಶುಕ್ರವಾರದಂದು ಮತದಾನದ ವೇಳೆ ಘರ್ಷಣೆ ಉಂಟಾದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾದ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ “ಚಾಮರಾಜನಗರ ಲೋಕಸಭಾ ಕ್ಷೇತ್ರದ, ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಡಿಗನತ್ತ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 146ರಲ್ಲಿ ನಡೆದ ಮತದಾನವನ್ನು ಅನೂರ್ಜಿತಗೊಳಿಸಿ ಮರು ಮತದಾನ ನಡೆಸಲು ಭಾರತ ಚುನಾವಣಾ ಆಯೋಗ ಆದೇಶಿಸಿದೆ” ಎಂದು ತಿಳಿಸಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಮತ್ತು ಆಯೋಗ ನಿಯೋಜಿತ ಸಾಮಾನ್ಯ ವೀಕ್ಷಕರು ಸಲ್ಲಿಸಿದ ವರದಿಗಳ ಆಧಾರದ ಮೇಲೆ ಮತ್ತು ಎಲ್ಲಾ ಸಂಬಂಧಿತ ಸಂದರ್ಭಗಳನ್ನು ಪರಿಗಣಿಸಿದ ನಂತರ ಭಾರತ ಚುನಾವಣಾ ಆಯೋಗ ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 58 (2) ಮತ್ತು 58ಎ (2) ಪ್ರಕಾರ 29 ಏಪ್ರಿಲ್ 2024ರಂದು ಸೋಮವಾರ ಮರು ಮತದಾನ ನಡೆಸಲು ನಿರ್ಧಿರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಸೋಮವಾರ ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ. ಈ ಮತಗಟ್ಟೆ ವ್ಯಾಪ್ತಿಯಲ್ಲಿ 528 ಮತದಾರರಿದ್ದಾರೆ. ಆದರೆ, ಶುಕ್ರವಾರ ಕೇವಲ ಒಂಬತ್ತು ಮಂದಿಯಷ್ಟೇ ಮತದಾನ ಮಾಡಿದ್ದರು.

ಮತದಾನ ಬಹಿಷ್ಕಾರದ ವಿಚಾರದಲ್ಲಿ ಇಂಡಿಗನತ್ತ, ಮೆಂದಾರೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಉಂಟಾದ ಘರ್ಷಣೆ ಸಂದರ್ಭದಲ್ಲಿ, ಉದ್ರಿಕ್ತರು ಇಂಡಿಗನತ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾಗಿದ್ದ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಮತಗಟ್ಟೆಗೆ ನುಗ್ಗಿ ಇವಿಎಂಗೆ ಬೆಂಕಿ ಹಚ್ಚಲೂ ಯತ್ನಿಸಿದ್ದರು. ಇನ್ನಿತರ ಪರಿಕರಗಳನ್ನು ಕೆಳಕ್ಕೆ ಎಸೆದು ಹಾನಿ ಮಾಡಿದ್ದರು ಎಂದು ತಿಳಿದು ಬಂದಿದೆ.

ಶುಕ್ರವಾರ ಮತದಾನದ ದಿನ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 41 ಗ್ರಾಮಸ್ಥರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಪ್ರಸ್ತುತ ಗ್ರಾಮದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ಬೆಂಗಳೂರು ದಕ್ಷಿಣ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ‘ನಕಲಿ ಮತದಾನ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...