Homeಕರ್ನಾಟಕಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

ಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

- Advertisement -
- Advertisement -

ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬಹಿಷ್ಕಾರದಂತಹ ಕೆಟ್ಟ ಪದ್ದತಿ ಚಾಲ್ತಿಯಲ್ಲಿದೆ. ಹೌದು, ಅಂತಹದ್ದೇ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಅಂತರ್ಜಾತಿ ಮದುವೆಯಾದ ದಂಪತಿಗೆ ಊರಿನಿಂದ ಬಹಿಷ್ಕಾರ ಹಾಕಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.

ದೂರಿನ ಪ್ರಕಾರ, ಕೊಳ್ಳೇಗಾಲ ಸಮೀಪದ ಕುಣಗಳ್ಳಿ ಗ್ರಾಮದ ಉಪ್ಪಾರ ಸಮುದಾಯದ ಗೋವಿಂದ ಶೆಟ್ಟಿ ಅವರು, 2018ರ ಸೆಪ್ಟೆಂಬರ್ 18ರಂದು ಮಂಡ್ಯ ಜಿಲ್ಲೆಯ ಹೂವಿನಕೊಪ್ಪಲು ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ತನ್ನ ಗೆಳತಿ ಶ್ವೇತಾಳನ್ನು ವಿವಾಹವಾಗಿದ್ದರು. ಅವರಿಗೆ ಈಗ ಇಬ್ಬರು ಮಕ್ಕಳಿದ್ದಾರೆ.

ಈ ಅಂತರ್ಜಾತಿ ವಿವಾಹದ ವಿಷಯ ತಿಳಿದ ಗ್ರಾಮದ ಮುಖಂಡರು ಸಭೆ ಕರೆದು, ಗೋವಿಂದ ಶೆಟ್ಟಿ ಊರಿನ ಕುಲ ಕೆಡಿಸಿದ್ದಾನೆ ಎಂದು ಹೇಳಿ ಅವರ ತಲೆ ಬೋಳಿಸಿ, ಆತನ ಕುಟುಂಬಕ್ಕೆ 1.25 ಲಕ್ಷ ರೂಪಾಯಿ ದಂಡ ವಿಧಿಸಿ, ಗ್ರಾಮದಿಂದ ಬಹಿಷ್ಕರಿಸಿದ್ದರು.

ಇದನ್ನೂ ಓದಿ: ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ದಂಪತಿಗಳು ಮಳವಳ್ಳಿಯಲ್ಲಿ ಇದ್ದು ಜೀವನೋಪಾಯ ನಡೆಸುತ್ತಿದ್ದರು. ಆದರೆ, ಗೋವಿಂದ ಶೆಟ್ಟಿ ಅವರು, ತನ್ನ ಹೆಂಡತಿ ಒಕ್ಕಲಿಗರ ಜಾತಿ ಎಂದು ಸುಳ್ಳು ಹೇಳುತ್ತ ಆಗಾಗ ಊರಿಗೆ ಹೋಗಿ ತನ್ನ ತಂದೆತಾಯಿಗೆ ಭೇಟಿಯಾಗುತ್ತಿದ್ದರು. ಆದರೆ, ಫೆಬ್ರುವರಿಯಲ್ಲಿ ಗೋವಿಂದ ಶೆಟ್ಟಿ ಅವರ ತಾಯಿಯು ಅನಾರೋಗ್ಯಕ್ಕೆ ತುತ್ತಾಗಿರುವುದರಿಂದ ಹೆಂಡತಿಯನ್ನೂ ಕುಣಗಲ್ಲಿಗೆ ಕರೆದುಕೊಂಡು ಬಂದಿದ್ದರು.

ಈ ವಿಚಾರ ಗ್ರಾಮದ ಮುಖಂಡರಿಗೆ ಕೆರಳಿಸಿದೆ, ಹಾಗಾಗಿ ಮತ್ತೆ ಅವರ ತಂದೆಯನ್ನು ಕರೆಸಿ ನಿನ್ನ ಮಗ ಹೆಂಡತಿಯನ್ನು ಮತ್ತೆ ಊರೊಳಗೆ ಕರೆದುಕೊಂಡು ಬಂದು ಕುಲ ಕೆಡಸಿದ್ದಾನೆ ಹಾಗಾಗಿ 3 ಲಕ್ಷ ರೂ. ದಂಡ ವಿಧಿಸಿ, ಮಾರ್ಚ್ 1ರೊಳಗೆ ಪಾವತಿಸಬೇಕು. ಒಂದು ವೇಳೆ ಅಷ್ಟರಲ್ಲಿ ಕೊಡದೇ ಹೋದಲ್ಲಿ 6 ಲಕ್ಷ ರೂ.ಗೆ ಹೆಚ್ಚಿಸಬೇಕಾಗುತ್ತದೆ ಎಂದಿದ್ದಾರೆ. ಅದರ ಜೊತೆಗೆ ಗ್ರಾಮಸ್ಥರೊಂದಿಗೆ ಮಾತನಾಡದಂತೆ ನಿಷೇಧ ಹೇರಿದ್ದು, ಅವರಿಗೆ ಗ್ರಾಮದ ಅಂಗಡಿಗಳಲ್ಲಿ ಯಾವುದೇ ಅಗತ್ಯ ವಸ್ತುಗಳನ್ನು ನೀಡದಂತೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಗೋವಿಂದ ಶೆಟ್ಟಿ ಅವರು ಮಾರ್ಚ್ 1ರಂದು ಡಿವೈಎಸ್‌ಪಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ಆದರೆ ಅವರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರಲಿಲ್ಲ. ಆಗ ಅವರು ಸಿಪಿಎಂ ಮುಖಂಡರಾದ ಕೃಷ್ಣೆಗೌಡರನ್ನು ಭೇಟಿಯಾಗಿ ತಮಗಾದ ಅನ್ಯಾಯದ ಬಗ್ಗೆ ವಿವರಿಸಿದ್ದಾರೆ. ಆನಂತರದಲ್ಲಿ ದಲಿತ ಹಕ್ಕುಗಳ ಸಮಿತಿ ಹಾಗೂ ಸಿಪಿಎಂ ಪಕ್ಷ ಮಧ್ಯಪ್ರವೇಶ ಮಾಡಿ, ಪ್ರಕರಣದ ಬಗ್ಗೆ ಎಸ್‌ಪಿ ಅವರ ಗಮಮಕ್ಕೆ ತಂದಿದ್ದಾರೆ.

ಆನಂತರ ಡಿವೈಎಸ್‌ಪಿ ಕ್ರಮಕ್ಕೆ ಮುಂದಾಗಿ, ಮಾ.3ರಂದು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಸಧ್ಯ ಸಮಾಜದ ಮುಖಂಡರಾದ ವೆಂಕಟಶೆಟ್ಟಿ, ಮಹದೇವ, ಮೋಂಡ ಶೆಟ್ಟಿ ಕನ್ನಪ್ಪ, ನಂಜಶೆಟ್ಟಿ, ಮಹದೇವ ಶೆಟ್ಟಿ, ಸಿದ್ದೇಶ್ ಸೇರಿ 15ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಪೊಲೀಸರು ಆರೋಪಿಗಳನ್ನು ಪ್ರಶ್ನಿಸಿದಾಗ, ತಾವು ಯಾವುದೇ ರೀತಿಯ ಬಹಿಷ್ಕಾರ ಹಾಕಿಲ್ಲ ಗೋವಿಂದರಾಜುವನ್ನು ಅವರ ತಂದೆಯೇ ಮನೆಗೆ ಸೇರಿಸುತ್ತಿಲ್ಲ. ಹಾಗಾಗಿ ತಂದೆಯ ಮೇಲೆ ದೂರು ನೀಡುವ ಬದಲು ತಮ್ಮ ಮೇಲೆ ದೂರು ನೀಡಿದ್ದಾರೆ ಎಂದು ಉಪ್ಪಾರ ಸಮುದಾಯದ ಯಜಮಾನರು ಪ್ರತ್ಯಾರೋಪ ಮಾಡಿದ್ದಾರೆ. ಆದರೆ, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.

ಸಧ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಆ ದಂಪತಿಗೆ 1.25ಲಕ್ಷ ರೂ. ಹಣ ನೀಡಲಾಗಿದೆ. ಇನ್ನೂ ಗ್ರಾಮದಲ್ಲಿ ಅವರ ಸುರಕ್ಷತೆಗಾಗಿ ಪೊಲೀಸರು ಕ್ರಮವಹಿಸಿದ್ದು, ದಂಪತಿ ಗ್ರಾಮದಲ್ಲಿ ನೆಲೆಯೂರಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಸಿಪಿಎಂ ಮುಖಂಡರಾದ ಕೃಷ್ಣೆಗೌಡರು ಮಾತನಾಡಿದ್ದು, ”ಕೊಳ್ಳೆಗಾಲ ಭಾಗದ ಗ್ರಾಮಗಳಲ್ಲಿ ಊರಿನ ಮುಖಂಡರ ಪಾರುಪತ್ಯ ಹೆಚ್ಚಾಗಿ ನಡೆಯುತ್ತದೆ. ಊರಿನ ಹಿಡಿತವನ್ನು ತಮ್ಮ ಕೈಯಲ್ಲಿ ಇಟ್ಟುಕೊಳ್ಳುವ ಮನಸ್ಥಿಯಲ್ಲಿ ಆ ಮುಖಂಡರು ಪಾಳೇಗಾರರಂತೆ ವರ್ತಿಸುತ್ತಾರೆ. ಈ ರೀತಿಯಲ್ಲಿ ಯಾರಾದರೂ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾದರೆ, ಅವರಿಗೆ ದಂಡ ವಿಧಿಸುವುದು, ಬಹಿಷ್ಕಾರ ಹಾಕುವುದನ್ನು ಮಾಡುತ್ತಾರೆ” ಎಂದು ತಿಳಿಸಿದರು.

”ಈ ಭಾಗದಲ್ಲಿ ಇದು ಒಂದೇ ಪ್ರಕರಣ ಅಲ್ಲ, ಇಂತಹ ಬಹಳಷ್ಟು ಪ್ರಕರಣಗಳಿವೆ. ಇದೇ ಕುಣಿಗಲ್ಲ ಗ್ರಾಮದ 10-12 ಹುಡುಗರು ಬೇರೆ ಜಾತಿಯ ಹುಡುಗಿಯರನ್ನು ಮದುವೆಯಾಗಿದ್ದಾರೆ. ಅವರೆಲ್ಲಾ ಈ ಪಾಳೆಗಾರಿಕೆ ಮನಸ್ಥಿತಿಯವರ ದಂಡ ಮತ್ತು ಶಿಕ್ಷೆಗೆ ಹೆದರಿ, ಊರಿಗೂ ಬರದೇ ಬೇರೆ ಬೇರೆ ಕಡೆಗಳಲ್ಲಿ ಬದುಕು ನಡೆಸುತ್ತಿದ್ದಾರಂತೆ. ಇದು ಪೊಲೀಸರಿಗೂ ಗೊತ್ತಿದೆ, ಅವರ ವಿರುದ್ಧ ದೂರು ನೀಡಲು ಯಾರೂ ಮುಂದೆ ಬರುವುದಿಲ್ಲ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

”ಕೊಳ್ಳೆಗಾಲ ತಾಲೂಕಿನಲ್ಲಿ ಯಾರೆಲ್ಲ ಈ ಪಾಳೆಗಾರಿಕೆ ನಡೆಸುತ್ತಿದ್ದಾರೋ ಅಂತವರ ವಿರುದ್ಧ ಸಿಪಿಎಂ ಪಕ್ಷದ ವತಿಯಿಂದ ಇನ್ನೆರಡು ದಿನಗಳಲ್ಲಿ ಹೋರಾಟ ನಡೆಸುತ್ತೇವೆ. ಅವರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ನಾವು ಒತ್ತಾಯ ಮಾಡುತ್ತೇವೆ ಎಂದು ಸಿಪಿಎಂ ಮುಖಂಡರಾದ ಕೃಷ್ಣೆಗೌಡರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...