Homeಕರ್ನಾಟಕಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

ಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

- Advertisement -
- Advertisement -

ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬಹಿಷ್ಕಾರದಂತಹ ಕೆಟ್ಟ ಪದ್ದತಿ ಚಾಲ್ತಿಯಲ್ಲಿದೆ. ಹೌದು, ಅಂತಹದ್ದೇ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಅಂತರ್ಜಾತಿ ಮದುವೆಯಾದ ದಂಪತಿಗೆ ಊರಿನಿಂದ ಬಹಿಷ್ಕಾರ ಹಾಕಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.

ದೂರಿನ ಪ್ರಕಾರ, ಕೊಳ್ಳೇಗಾಲ ಸಮೀಪದ ಕುಣಗಳ್ಳಿ ಗ್ರಾಮದ ಉಪ್ಪಾರ ಸಮುದಾಯದ ಗೋವಿಂದ ಶೆಟ್ಟಿ ಅವರು, 2018ರ ಸೆಪ್ಟೆಂಬರ್ 18ರಂದು ಮಂಡ್ಯ ಜಿಲ್ಲೆಯ ಹೂವಿನಕೊಪ್ಪಲು ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ತನ್ನ ಗೆಳತಿ ಶ್ವೇತಾಳನ್ನು ವಿವಾಹವಾಗಿದ್ದರು. ಅವರಿಗೆ ಈಗ ಇಬ್ಬರು ಮಕ್ಕಳಿದ್ದಾರೆ.

ಈ ಅಂತರ್ಜಾತಿ ವಿವಾಹದ ವಿಷಯ ತಿಳಿದ ಗ್ರಾಮದ ಮುಖಂಡರು ಸಭೆ ಕರೆದು, ಗೋವಿಂದ ಶೆಟ್ಟಿ ಊರಿನ ಕುಲ ಕೆಡಿಸಿದ್ದಾನೆ ಎಂದು ಹೇಳಿ ಅವರ ತಲೆ ಬೋಳಿಸಿ, ಆತನ ಕುಟುಂಬಕ್ಕೆ 1.25 ಲಕ್ಷ ರೂಪಾಯಿ ದಂಡ ವಿಧಿಸಿ, ಗ್ರಾಮದಿಂದ ಬಹಿಷ್ಕರಿಸಿದ್ದರು.

ಇದನ್ನೂ ಓದಿ: ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ದಂಪತಿಗಳು ಮಳವಳ್ಳಿಯಲ್ಲಿ ಇದ್ದು ಜೀವನೋಪಾಯ ನಡೆಸುತ್ತಿದ್ದರು. ಆದರೆ, ಗೋವಿಂದ ಶೆಟ್ಟಿ ಅವರು, ತನ್ನ ಹೆಂಡತಿ ಒಕ್ಕಲಿಗರ ಜಾತಿ ಎಂದು ಸುಳ್ಳು ಹೇಳುತ್ತ ಆಗಾಗ ಊರಿಗೆ ಹೋಗಿ ತನ್ನ ತಂದೆತಾಯಿಗೆ ಭೇಟಿಯಾಗುತ್ತಿದ್ದರು. ಆದರೆ, ಫೆಬ್ರುವರಿಯಲ್ಲಿ ಗೋವಿಂದ ಶೆಟ್ಟಿ ಅವರ ತಾಯಿಯು ಅನಾರೋಗ್ಯಕ್ಕೆ ತುತ್ತಾಗಿರುವುದರಿಂದ ಹೆಂಡತಿಯನ್ನೂ ಕುಣಗಲ್ಲಿಗೆ ಕರೆದುಕೊಂಡು ಬಂದಿದ್ದರು.

ಈ ವಿಚಾರ ಗ್ರಾಮದ ಮುಖಂಡರಿಗೆ ಕೆರಳಿಸಿದೆ, ಹಾಗಾಗಿ ಮತ್ತೆ ಅವರ ತಂದೆಯನ್ನು ಕರೆಸಿ ನಿನ್ನ ಮಗ ಹೆಂಡತಿಯನ್ನು ಮತ್ತೆ ಊರೊಳಗೆ ಕರೆದುಕೊಂಡು ಬಂದು ಕುಲ ಕೆಡಸಿದ್ದಾನೆ ಹಾಗಾಗಿ 3 ಲಕ್ಷ ರೂ. ದಂಡ ವಿಧಿಸಿ, ಮಾರ್ಚ್ 1ರೊಳಗೆ ಪಾವತಿಸಬೇಕು. ಒಂದು ವೇಳೆ ಅಷ್ಟರಲ್ಲಿ ಕೊಡದೇ ಹೋದಲ್ಲಿ 6 ಲಕ್ಷ ರೂ.ಗೆ ಹೆಚ್ಚಿಸಬೇಕಾಗುತ್ತದೆ ಎಂದಿದ್ದಾರೆ. ಅದರ ಜೊತೆಗೆ ಗ್ರಾಮಸ್ಥರೊಂದಿಗೆ ಮಾತನಾಡದಂತೆ ನಿಷೇಧ ಹೇರಿದ್ದು, ಅವರಿಗೆ ಗ್ರಾಮದ ಅಂಗಡಿಗಳಲ್ಲಿ ಯಾವುದೇ ಅಗತ್ಯ ವಸ್ತುಗಳನ್ನು ನೀಡದಂತೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಗೋವಿಂದ ಶೆಟ್ಟಿ ಅವರು ಮಾರ್ಚ್ 1ರಂದು ಡಿವೈಎಸ್‌ಪಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ಆದರೆ ಅವರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರಲಿಲ್ಲ. ಆಗ ಅವರು ಸಿಪಿಎಂ ಮುಖಂಡರಾದ ಕೃಷ್ಣೆಗೌಡರನ್ನು ಭೇಟಿಯಾಗಿ ತಮಗಾದ ಅನ್ಯಾಯದ ಬಗ್ಗೆ ವಿವರಿಸಿದ್ದಾರೆ. ಆನಂತರದಲ್ಲಿ ದಲಿತ ಹಕ್ಕುಗಳ ಸಮಿತಿ ಹಾಗೂ ಸಿಪಿಎಂ ಪಕ್ಷ ಮಧ್ಯಪ್ರವೇಶ ಮಾಡಿ, ಪ್ರಕರಣದ ಬಗ್ಗೆ ಎಸ್‌ಪಿ ಅವರ ಗಮಮಕ್ಕೆ ತಂದಿದ್ದಾರೆ.

ಆನಂತರ ಡಿವೈಎಸ್‌ಪಿ ಕ್ರಮಕ್ಕೆ ಮುಂದಾಗಿ, ಮಾ.3ರಂದು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಸಧ್ಯ ಸಮಾಜದ ಮುಖಂಡರಾದ ವೆಂಕಟಶೆಟ್ಟಿ, ಮಹದೇವ, ಮೋಂಡ ಶೆಟ್ಟಿ ಕನ್ನಪ್ಪ, ನಂಜಶೆಟ್ಟಿ, ಮಹದೇವ ಶೆಟ್ಟಿ, ಸಿದ್ದೇಶ್ ಸೇರಿ 15ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಪೊಲೀಸರು ಆರೋಪಿಗಳನ್ನು ಪ್ರಶ್ನಿಸಿದಾಗ, ತಾವು ಯಾವುದೇ ರೀತಿಯ ಬಹಿಷ್ಕಾರ ಹಾಕಿಲ್ಲ ಗೋವಿಂದರಾಜುವನ್ನು ಅವರ ತಂದೆಯೇ ಮನೆಗೆ ಸೇರಿಸುತ್ತಿಲ್ಲ. ಹಾಗಾಗಿ ತಂದೆಯ ಮೇಲೆ ದೂರು ನೀಡುವ ಬದಲು ತಮ್ಮ ಮೇಲೆ ದೂರು ನೀಡಿದ್ದಾರೆ ಎಂದು ಉಪ್ಪಾರ ಸಮುದಾಯದ ಯಜಮಾನರು ಪ್ರತ್ಯಾರೋಪ ಮಾಡಿದ್ದಾರೆ. ಆದರೆ, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.

ಸಧ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಆ ದಂಪತಿಗೆ 1.25ಲಕ್ಷ ರೂ. ಹಣ ನೀಡಲಾಗಿದೆ. ಇನ್ನೂ ಗ್ರಾಮದಲ್ಲಿ ಅವರ ಸುರಕ್ಷತೆಗಾಗಿ ಪೊಲೀಸರು ಕ್ರಮವಹಿಸಿದ್ದು, ದಂಪತಿ ಗ್ರಾಮದಲ್ಲಿ ನೆಲೆಯೂರಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಸಿಪಿಎಂ ಮುಖಂಡರಾದ ಕೃಷ್ಣೆಗೌಡರು ಮಾತನಾಡಿದ್ದು, ”ಕೊಳ್ಳೆಗಾಲ ಭಾಗದ ಗ್ರಾಮಗಳಲ್ಲಿ ಊರಿನ ಮುಖಂಡರ ಪಾರುಪತ್ಯ ಹೆಚ್ಚಾಗಿ ನಡೆಯುತ್ತದೆ. ಊರಿನ ಹಿಡಿತವನ್ನು ತಮ್ಮ ಕೈಯಲ್ಲಿ ಇಟ್ಟುಕೊಳ್ಳುವ ಮನಸ್ಥಿಯಲ್ಲಿ ಆ ಮುಖಂಡರು ಪಾಳೇಗಾರರಂತೆ ವರ್ತಿಸುತ್ತಾರೆ. ಈ ರೀತಿಯಲ್ಲಿ ಯಾರಾದರೂ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾದರೆ, ಅವರಿಗೆ ದಂಡ ವಿಧಿಸುವುದು, ಬಹಿಷ್ಕಾರ ಹಾಕುವುದನ್ನು ಮಾಡುತ್ತಾರೆ” ಎಂದು ತಿಳಿಸಿದರು.

”ಈ ಭಾಗದಲ್ಲಿ ಇದು ಒಂದೇ ಪ್ರಕರಣ ಅಲ್ಲ, ಇಂತಹ ಬಹಳಷ್ಟು ಪ್ರಕರಣಗಳಿವೆ. ಇದೇ ಕುಣಿಗಲ್ಲ ಗ್ರಾಮದ 10-12 ಹುಡುಗರು ಬೇರೆ ಜಾತಿಯ ಹುಡುಗಿಯರನ್ನು ಮದುವೆಯಾಗಿದ್ದಾರೆ. ಅವರೆಲ್ಲಾ ಈ ಪಾಳೆಗಾರಿಕೆ ಮನಸ್ಥಿತಿಯವರ ದಂಡ ಮತ್ತು ಶಿಕ್ಷೆಗೆ ಹೆದರಿ, ಊರಿಗೂ ಬರದೇ ಬೇರೆ ಬೇರೆ ಕಡೆಗಳಲ್ಲಿ ಬದುಕು ನಡೆಸುತ್ತಿದ್ದಾರಂತೆ. ಇದು ಪೊಲೀಸರಿಗೂ ಗೊತ್ತಿದೆ, ಅವರ ವಿರುದ್ಧ ದೂರು ನೀಡಲು ಯಾರೂ ಮುಂದೆ ಬರುವುದಿಲ್ಲ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

”ಕೊಳ್ಳೆಗಾಲ ತಾಲೂಕಿನಲ್ಲಿ ಯಾರೆಲ್ಲ ಈ ಪಾಳೆಗಾರಿಕೆ ನಡೆಸುತ್ತಿದ್ದಾರೋ ಅಂತವರ ವಿರುದ್ಧ ಸಿಪಿಎಂ ಪಕ್ಷದ ವತಿಯಿಂದ ಇನ್ನೆರಡು ದಿನಗಳಲ್ಲಿ ಹೋರಾಟ ನಡೆಸುತ್ತೇವೆ. ಅವರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ನಾವು ಒತ್ತಾಯ ಮಾಡುತ್ತೇವೆ ಎಂದು ಸಿಪಿಎಂ ಮುಖಂಡರಾದ ಕೃಷ್ಣೆಗೌಡರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....