Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಈ ಜಾಗ ತನ್ನದೆಂದು ಪ್ರತಿಕ್ರಿಯೆ ನೀಡಿದ್ದ ವಕ್ಫ್‌ ಮಂಡಳಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿತ್ತು. ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದು, ವಿವಾದಕ್ಕೆ ತೆರೆ ಎಳೆದಿದೆ.

- Advertisement -
- Advertisement -

ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದ್ದಾರೆ.

ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್‌ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಏನಿದು ವಿವಾದ?

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದ್ದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದಿದ್ದವು.

ಇದನ್ನೂ ಓದಿರಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಬಿಎಂಪಿ, “ಇದು ಬಿಬಿಎಂಪಿ ಆಸ್ತಿಯಾಗಿದ್ದು, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರು ಉಸ್ತುವಾರಿ ವಹಿಸಿಕೊಂಡಿದ್ದಾರೆ. ಆಟದ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಈ ಸ್ಥಳವನ್ನು ನೀಡಬಹುದು ಎಂದು ನ್ಯಾಯಾಲಯದ ಆದೇಶವಿದೆ” ಎಂದಿತ್ತು.

“ನ್ಯಾಯಾಲಯದ ಆದೇಶದ ಪ್ರಕಾರ ಪಶ್ಚಿಮ ವಲಯ ಜಂಟಿ ಆಯುಕ್ತರ ಅನುಮತಿಯೊಂದಿಗೆ ಮುಸ್ಲಿಮರು ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ ಪ್ರಾರ್ಥನೆಗಾಗಿ ಇಲ್ಲಿ ಸೇರುತ್ತಾರೆ” ಎಂದು ತಿಳಿಸಿತ್ತು.

“ಪ್ರತಿ ವರ್ಷ ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ, ಈ ಸ್ಥಳವು ಧಾರ್ಮಿಕ ಚಟುವಟಿಕೆಯ ಕೇಂದ್ರವಾಗುತ್ತದೆ. ಬಕ್ರೀದ್ ಸಮಯದಲ್ಲಿ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಮತ್ತು ಇತರ ಜಿಲ್ಲೆಗಳ ರೈತರು ಕುರಿ ಮತ್ತು ಮೇಕೆಗಳನ್ನು ಇಲ್ಲಿಗೆ ತಂದು ಮಾರುತ್ತಾರೆ. ಈ ಎರಡು ಸಂದರ್ಭಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಅವಕಾಶ ನೀಡುವ ಬಗ್ಗೆ ಜಂಟಿ ಆಯುಕ್ತರು ನಿರ್ಧಾರ ತೆಗೆದುಕೊಳ್ಳಬಹುದು” ಎಂದು ಪಾಲಿಕೆ ಹೇಳಿತ್ತು.

“ಈ ಜಾಗವನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಸಲು ಸಿದ್ಧರಿರುವ ಯಾರಾದರೂ ಬಿಬಿಎಂಪಿಗೆ ಪ್ರಸ್ತಾವನೆಯನ್ನು ಕಳುಹಿಸಬಹುದು. ಅರ್ಜಿಯನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಪಾಲಿಕೆ ತಿಳಿಸಿತ್ತು.

ಈ ಮೂಲಕ ಈ ಜಾಗ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಸೇರಿದ್ದೋ ಅಥವಾ ಬಿಬಿಎಂಪಿಗೆ ಸೇರಿದ್ದೋ ಎಂಬ ಪ್ರಶ್ನೆ ಎದ್ದಿತ್ತು.

“ಚಾಮರಾಜಪೇಟೆ ಈದ್ಗಾ ಮೈದಾನ ತಮ್ಮದೆಂದು ಹೇಳಿಕೆ ನೀಡಿರುವ ಬಿಬಿಎಂಪಿ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು” ಎಂದು ಕೇಂದ್ರ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) ಆಗ್ರಹಿಸಿತ್ತು.

ಬಿಬಿಎಂಪಿ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದ ಸಿಎಂಎ ಪ್ರಧಾನ ಕಾರ್ಯದರ್ಶಿ ಡಾ.ಜಹೀರುದ್ದೀನ್ ಅಹ್ಮದ್, “ಈ ಭೂಮಿ ವಕ್ಫ್‌ಗೆ ಸೇರಿದೆ. ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಅಂದಿನ ಬೆಂಗಳೂರು ಸಿಟಿ ಕಾರ್ಪೊರೇಶನ್ ಪ್ರತಿಪಾದನೆಯನ್ನು ವಜಾಗೊಳಿಸಿತ್ತು. ಈ ಕುರಿತು ವಕ್ಫ್ ಗೆಜೆಟ್ ಅಧಿಸೂಚನೆಯನ್ನು ಜೂನ್ 7, 1965ರಂದು ಹೊರಡಿಸಿದೆ” ಎಂದು ತಿಳಿಸಿದ್ದರು.

“ಪಾಲಿಕೆಯು ಈದ್ಗಾ ಮೈದಾನದ ನೈಋತ್ಯ ಮೂಲೆಯಲ್ಲಿ ಅನಧಿಕೃತವಾಗಿ ವಾರ್ಡ್ ಕಚೇರಿಯನ್ನು ನಿರ್ಮಿಸಿತ್ತು. ಆದರೆ 1971ರ ಆಗಸ್ಟ್ 28ರಂದು ಅಂದಿನ ಮೇಯರ್ ಎಂ.ಬಿ.ಲಿಂಗಯ್ಯ ಮತ್ತು ಸಿಎಂಎ ಪ್ರತಿನಿಧಿಗಳ ನಡುವೆ ಸಭೆ ನಡೆಯಿತು. 30 ವರ್ಷಗಳ ಕಾಲ ಜಾಗವನ್ನು ಗುತ್ತಿಗೆ ನೀಡಲು ಒಪ್ಪಿಗೆ ನೀಡಲಾಯಿತು” ಎಂದಿದ್ದರು ಅಹ್ಮದ್.

“1994ರ ಮಾರ್ಚ್ 3ರಂದು ಪಾಲಿಕೆಗೆ ಪತ್ರ ಬರೆದು ವಾರ್ಡ್ ಕಚೇರಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಈದ್ಗಾ ಮೈದಾನ ಆಟದ ಮೈದಾನವಾಗಿದ್ದು, ಅದು ತಮಗೆ ಸೇರಿದೆ ಎಂದು ಬಿಬಿಎಂಪಿ ಹೇಳಿರುವುದು ಅಚ್ಚರಿಯ ಸಂಗತಿಯಾಗಿದೆ. ಬಿಬಿಎಂಪಿ ತನ್ನ ಹೇಳಿಕೆಯನ್ನು ವಾಪಸ್ ಪಡೆಯಬೇಕು” ಎಂದು ಅವರು ಆಗ್ರಹಿಸಿದ್ದರು.

’ನ್ಯಾಯಪಥ’ದೊಂದಿಗೆ ಮಾತನಾಡಿದ್ದ ವಕ್ಫ್ ಮಂಡಳಿ ಕಾರ್ಯ ನಿರ್ವಾಹಕ ಅಧಿಕಾರಿ ಪರ್ವೀಜ಼್ ಖಾನ್ ಕೂಡ ಇದೇ ಪ್ರತಿಪಾದನೆಯನ್ನು ಮಾಡಿದ್ದರು. “ಸುಪ್ರೀಂ ಕೋರ್ಟ್ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಅದು ಸಾರ್ವಜನಿಕವಾಗಿಯೂ ಲಭ್ಯವಿದೆ. ಈಗ ಬಿಬಿಎಂಪಿಯವರು ತಮ್ಮದೆಂದು ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ. ಎಲ್ಲ ದಾಖಲೆಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಕಾನೂನು ಪ್ರಕ್ರಿಯೆ ನಡೆಯಬೇಕು ಎಂದು ಬಿಬಿಎಂಪಿ ತಿಳಿಸಿದೆ” ಎಂದಿದ್ದರು.

ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

“ನ್ಯಾಯಾಲಯದ ಆದೇಶವೇ ಅಂತಿಮ. ಹೀಗಾಗಿ ಯಾರು ಏನೇ ಹೇಳಿದರೂ ನಾವು ಅತಿಯಾದ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ. ಎರಡು ಸರ್ಕಾರಿ ಸಂಸ್ಥೆಗಳ ನಡುವೆ ಈ ಗೊಂದಲ ಏರ್ಪಟ್ಟಿದೆ. ನಾವು ಕಾನೂನಿನ ಚೌಕಟ್ಟಿನಲ್ಲಿ ಸಾಗುತ್ತೇವೆ” ಎಂದು ತಿಳಿಸಿದ್ದರು.

“ಇಷ್ಟು ವರ್ಷ ಕಳೆದರೂ ವಕ್ಫ್ ಮಂಡಳಿ ಈ ಮೈದಾನಕ್ಕೆ ತಂತಿ ಬೇಲಿಯನ್ನು ಹಾಕಿಲ್ಲ. ಎಲ್ಲರೂ ಜೊತೆಯಲ್ಲಿ ಇರಬೇಕೆಂಬುದು ನಮ್ಮ ಆಶಯ. ಇತ್ತೀಚೆಗೆ ಈ ವಿವಾದ ಬಂದಿದೆ. ಹೀಗಾಗಿ ವಿವಾದ ಸೃಷ್ಟಿಸಲು ಯತ್ನಿಸುವವರಿಗೆ ಪ್ರತಿಕ್ರಿಯೆ ನೀಡಲು ನಾವು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಬಿಬಿಎಂಪಿ ಪಶ್ಚಿಮ ವಿಭಾಗದ ಆಯುಕ್ತರಾದ ಶ್ರೀನಿವಾಸ್ ’ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿ, “ಸುಪ್ರೀಂ ಕೋರ್ಟ್ ಆದೇಶವಿರುವ ದಾಖಲೆಗಳನ್ನು ವಕ್ಫ್ ಬೋರ್ಡ್ ಕಳುಹಿಸಿಕೊಟ್ಟಿದೆ. ಇದು ಬಿಬಿಎಂಪಿಗೆ ಸೇರಿದೆ ಎಂಬ ದಾಖಲೆಗಳೂ ಇವೆ. ಅವುಗಳನ್ನು ಮುಖ್ಯ ಕಚೇರಿಯ ಕಾನೂನು ವಿಭಾಗಕ್ಕೆ ಸಲ್ಲಿಸಿದ್ದೇವೆ. ಈಗ ಇರುವ ಪ್ರಸ್ತುತ ದಾಖಲೆಗಳ ಪ್ರಕಾರ ಈ ಆಟದ ಮೈದಾನ ಬಿಬಿಎಂಪಿಗೆ ಸೇರಿದೆ. ಈ ಸಮಸ್ಯೆ ಇತ್ಯರ್ಥವಾಗಲು ಇನ್ನೂ ಹತ್ತು ದಿನ ಬೇಕಾಗಬಹುದು. ಈ ಸ್ಥಳವು ಯಾರಿಗೆ ಸೇರಿದ್ದೆಂದು ತಿಳಿಯಲು ಹಳೆಯ ದಾಖಲೆಗಳನ್ನು ಕಳುಹಿಸಿಕೊಡುವಂತೆ ಕಂದಾಯ ಇಲಾಖೆಗೂ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದರು.

ಕೊನೆಗೂ ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದಿದ್ದು, ವಿವಾದಕ್ಕೆ ತೆರೆ ಎಳೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...