Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಈ ಜಾಗ ತನ್ನದೆಂದು ಪ್ರತಿಕ್ರಿಯೆ ನೀಡಿದ್ದ ವಕ್ಫ್‌ ಮಂಡಳಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿತ್ತು. ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದು, ವಿವಾದಕ್ಕೆ ತೆರೆ ಎಳೆದಿದೆ.

- Advertisement -
- Advertisement -

ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದ್ದಾರೆ.

ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್‌ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಏನಿದು ವಿವಾದ?

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದ್ದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದಿದ್ದವು.

ಇದನ್ನೂ ಓದಿರಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಬಿಎಂಪಿ, “ಇದು ಬಿಬಿಎಂಪಿ ಆಸ್ತಿಯಾಗಿದ್ದು, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರು ಉಸ್ತುವಾರಿ ವಹಿಸಿಕೊಂಡಿದ್ದಾರೆ. ಆಟದ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಈ ಸ್ಥಳವನ್ನು ನೀಡಬಹುದು ಎಂದು ನ್ಯಾಯಾಲಯದ ಆದೇಶವಿದೆ” ಎಂದಿತ್ತು.

“ನ್ಯಾಯಾಲಯದ ಆದೇಶದ ಪ್ರಕಾರ ಪಶ್ಚಿಮ ವಲಯ ಜಂಟಿ ಆಯುಕ್ತರ ಅನುಮತಿಯೊಂದಿಗೆ ಮುಸ್ಲಿಮರು ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ ಪ್ರಾರ್ಥನೆಗಾಗಿ ಇಲ್ಲಿ ಸೇರುತ್ತಾರೆ” ಎಂದು ತಿಳಿಸಿತ್ತು.

“ಪ್ರತಿ ವರ್ಷ ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ, ಈ ಸ್ಥಳವು ಧಾರ್ಮಿಕ ಚಟುವಟಿಕೆಯ ಕೇಂದ್ರವಾಗುತ್ತದೆ. ಬಕ್ರೀದ್ ಸಮಯದಲ್ಲಿ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಮತ್ತು ಇತರ ಜಿಲ್ಲೆಗಳ ರೈತರು ಕುರಿ ಮತ್ತು ಮೇಕೆಗಳನ್ನು ಇಲ್ಲಿಗೆ ತಂದು ಮಾರುತ್ತಾರೆ. ಈ ಎರಡು ಸಂದರ್ಭಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಅವಕಾಶ ನೀಡುವ ಬಗ್ಗೆ ಜಂಟಿ ಆಯುಕ್ತರು ನಿರ್ಧಾರ ತೆಗೆದುಕೊಳ್ಳಬಹುದು” ಎಂದು ಪಾಲಿಕೆ ಹೇಳಿತ್ತು.

“ಈ ಜಾಗವನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಸಲು ಸಿದ್ಧರಿರುವ ಯಾರಾದರೂ ಬಿಬಿಎಂಪಿಗೆ ಪ್ರಸ್ತಾವನೆಯನ್ನು ಕಳುಹಿಸಬಹುದು. ಅರ್ಜಿಯನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಪಾಲಿಕೆ ತಿಳಿಸಿತ್ತು.

ಈ ಮೂಲಕ ಈ ಜಾಗ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಸೇರಿದ್ದೋ ಅಥವಾ ಬಿಬಿಎಂಪಿಗೆ ಸೇರಿದ್ದೋ ಎಂಬ ಪ್ರಶ್ನೆ ಎದ್ದಿತ್ತು.

“ಚಾಮರಾಜಪೇಟೆ ಈದ್ಗಾ ಮೈದಾನ ತಮ್ಮದೆಂದು ಹೇಳಿಕೆ ನೀಡಿರುವ ಬಿಬಿಎಂಪಿ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು” ಎಂದು ಕೇಂದ್ರ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) ಆಗ್ರಹಿಸಿತ್ತು.

ಬಿಬಿಎಂಪಿ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದ ಸಿಎಂಎ ಪ್ರಧಾನ ಕಾರ್ಯದರ್ಶಿ ಡಾ.ಜಹೀರುದ್ದೀನ್ ಅಹ್ಮದ್, “ಈ ಭೂಮಿ ವಕ್ಫ್‌ಗೆ ಸೇರಿದೆ. ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಅಂದಿನ ಬೆಂಗಳೂರು ಸಿಟಿ ಕಾರ್ಪೊರೇಶನ್ ಪ್ರತಿಪಾದನೆಯನ್ನು ವಜಾಗೊಳಿಸಿತ್ತು. ಈ ಕುರಿತು ವಕ್ಫ್ ಗೆಜೆಟ್ ಅಧಿಸೂಚನೆಯನ್ನು ಜೂನ್ 7, 1965ರಂದು ಹೊರಡಿಸಿದೆ” ಎಂದು ತಿಳಿಸಿದ್ದರು.

“ಪಾಲಿಕೆಯು ಈದ್ಗಾ ಮೈದಾನದ ನೈಋತ್ಯ ಮೂಲೆಯಲ್ಲಿ ಅನಧಿಕೃತವಾಗಿ ವಾರ್ಡ್ ಕಚೇರಿಯನ್ನು ನಿರ್ಮಿಸಿತ್ತು. ಆದರೆ 1971ರ ಆಗಸ್ಟ್ 28ರಂದು ಅಂದಿನ ಮೇಯರ್ ಎಂ.ಬಿ.ಲಿಂಗಯ್ಯ ಮತ್ತು ಸಿಎಂಎ ಪ್ರತಿನಿಧಿಗಳ ನಡುವೆ ಸಭೆ ನಡೆಯಿತು. 30 ವರ್ಷಗಳ ಕಾಲ ಜಾಗವನ್ನು ಗುತ್ತಿಗೆ ನೀಡಲು ಒಪ್ಪಿಗೆ ನೀಡಲಾಯಿತು” ಎಂದಿದ್ದರು ಅಹ್ಮದ್.

“1994ರ ಮಾರ್ಚ್ 3ರಂದು ಪಾಲಿಕೆಗೆ ಪತ್ರ ಬರೆದು ವಾರ್ಡ್ ಕಚೇರಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಈದ್ಗಾ ಮೈದಾನ ಆಟದ ಮೈದಾನವಾಗಿದ್ದು, ಅದು ತಮಗೆ ಸೇರಿದೆ ಎಂದು ಬಿಬಿಎಂಪಿ ಹೇಳಿರುವುದು ಅಚ್ಚರಿಯ ಸಂಗತಿಯಾಗಿದೆ. ಬಿಬಿಎಂಪಿ ತನ್ನ ಹೇಳಿಕೆಯನ್ನು ವಾಪಸ್ ಪಡೆಯಬೇಕು” ಎಂದು ಅವರು ಆಗ್ರಹಿಸಿದ್ದರು.

’ನ್ಯಾಯಪಥ’ದೊಂದಿಗೆ ಮಾತನಾಡಿದ್ದ ವಕ್ಫ್ ಮಂಡಳಿ ಕಾರ್ಯ ನಿರ್ವಾಹಕ ಅಧಿಕಾರಿ ಪರ್ವೀಜ಼್ ಖಾನ್ ಕೂಡ ಇದೇ ಪ್ರತಿಪಾದನೆಯನ್ನು ಮಾಡಿದ್ದರು. “ಸುಪ್ರೀಂ ಕೋರ್ಟ್ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಅದು ಸಾರ್ವಜನಿಕವಾಗಿಯೂ ಲಭ್ಯವಿದೆ. ಈಗ ಬಿಬಿಎಂಪಿಯವರು ತಮ್ಮದೆಂದು ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ. ಎಲ್ಲ ದಾಖಲೆಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಕಾನೂನು ಪ್ರಕ್ರಿಯೆ ನಡೆಯಬೇಕು ಎಂದು ಬಿಬಿಎಂಪಿ ತಿಳಿಸಿದೆ” ಎಂದಿದ್ದರು.

ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

“ನ್ಯಾಯಾಲಯದ ಆದೇಶವೇ ಅಂತಿಮ. ಹೀಗಾಗಿ ಯಾರು ಏನೇ ಹೇಳಿದರೂ ನಾವು ಅತಿಯಾದ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ. ಎರಡು ಸರ್ಕಾರಿ ಸಂಸ್ಥೆಗಳ ನಡುವೆ ಈ ಗೊಂದಲ ಏರ್ಪಟ್ಟಿದೆ. ನಾವು ಕಾನೂನಿನ ಚೌಕಟ್ಟಿನಲ್ಲಿ ಸಾಗುತ್ತೇವೆ” ಎಂದು ತಿಳಿಸಿದ್ದರು.

“ಇಷ್ಟು ವರ್ಷ ಕಳೆದರೂ ವಕ್ಫ್ ಮಂಡಳಿ ಈ ಮೈದಾನಕ್ಕೆ ತಂತಿ ಬೇಲಿಯನ್ನು ಹಾಕಿಲ್ಲ. ಎಲ್ಲರೂ ಜೊತೆಯಲ್ಲಿ ಇರಬೇಕೆಂಬುದು ನಮ್ಮ ಆಶಯ. ಇತ್ತೀಚೆಗೆ ಈ ವಿವಾದ ಬಂದಿದೆ. ಹೀಗಾಗಿ ವಿವಾದ ಸೃಷ್ಟಿಸಲು ಯತ್ನಿಸುವವರಿಗೆ ಪ್ರತಿಕ್ರಿಯೆ ನೀಡಲು ನಾವು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಬಿಬಿಎಂಪಿ ಪಶ್ಚಿಮ ವಿಭಾಗದ ಆಯುಕ್ತರಾದ ಶ್ರೀನಿವಾಸ್ ’ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿ, “ಸುಪ್ರೀಂ ಕೋರ್ಟ್ ಆದೇಶವಿರುವ ದಾಖಲೆಗಳನ್ನು ವಕ್ಫ್ ಬೋರ್ಡ್ ಕಳುಹಿಸಿಕೊಟ್ಟಿದೆ. ಇದು ಬಿಬಿಎಂಪಿಗೆ ಸೇರಿದೆ ಎಂಬ ದಾಖಲೆಗಳೂ ಇವೆ. ಅವುಗಳನ್ನು ಮುಖ್ಯ ಕಚೇರಿಯ ಕಾನೂನು ವಿಭಾಗಕ್ಕೆ ಸಲ್ಲಿಸಿದ್ದೇವೆ. ಈಗ ಇರುವ ಪ್ರಸ್ತುತ ದಾಖಲೆಗಳ ಪ್ರಕಾರ ಈ ಆಟದ ಮೈದಾನ ಬಿಬಿಎಂಪಿಗೆ ಸೇರಿದೆ. ಈ ಸಮಸ್ಯೆ ಇತ್ಯರ್ಥವಾಗಲು ಇನ್ನೂ ಹತ್ತು ದಿನ ಬೇಕಾಗಬಹುದು. ಈ ಸ್ಥಳವು ಯಾರಿಗೆ ಸೇರಿದ್ದೆಂದು ತಿಳಿಯಲು ಹಳೆಯ ದಾಖಲೆಗಳನ್ನು ಕಳುಹಿಸಿಕೊಡುವಂತೆ ಕಂದಾಯ ಇಲಾಖೆಗೂ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದರು.

ಕೊನೆಗೂ ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದಿದ್ದು, ವಿವಾದಕ್ಕೆ ತೆರೆ ಎಳೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...