Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಈ ಜಾಗ ತನ್ನದೆಂದು ಪ್ರತಿಕ್ರಿಯೆ ನೀಡಿದ್ದ ವಕ್ಫ್‌ ಮಂಡಳಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿತ್ತು. ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದು, ವಿವಾದಕ್ಕೆ ತೆರೆ ಎಳೆದಿದೆ.

- Advertisement -
- Advertisement -

ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದ್ದಾರೆ.

ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್‌ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಏನಿದು ವಿವಾದ?

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದ್ದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದಿದ್ದವು.

ಇದನ್ನೂ ಓದಿರಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಬಿಎಂಪಿ, “ಇದು ಬಿಬಿಎಂಪಿ ಆಸ್ತಿಯಾಗಿದ್ದು, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರು ಉಸ್ತುವಾರಿ ವಹಿಸಿಕೊಂಡಿದ್ದಾರೆ. ಆಟದ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಈ ಸ್ಥಳವನ್ನು ನೀಡಬಹುದು ಎಂದು ನ್ಯಾಯಾಲಯದ ಆದೇಶವಿದೆ” ಎಂದಿತ್ತು.

“ನ್ಯಾಯಾಲಯದ ಆದೇಶದ ಪ್ರಕಾರ ಪಶ್ಚಿಮ ವಲಯ ಜಂಟಿ ಆಯುಕ್ತರ ಅನುಮತಿಯೊಂದಿಗೆ ಮುಸ್ಲಿಮರು ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ ಪ್ರಾರ್ಥನೆಗಾಗಿ ಇಲ್ಲಿ ಸೇರುತ್ತಾರೆ” ಎಂದು ತಿಳಿಸಿತ್ತು.

“ಪ್ರತಿ ವರ್ಷ ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ, ಈ ಸ್ಥಳವು ಧಾರ್ಮಿಕ ಚಟುವಟಿಕೆಯ ಕೇಂದ್ರವಾಗುತ್ತದೆ. ಬಕ್ರೀದ್ ಸಮಯದಲ್ಲಿ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಮತ್ತು ಇತರ ಜಿಲ್ಲೆಗಳ ರೈತರು ಕುರಿ ಮತ್ತು ಮೇಕೆಗಳನ್ನು ಇಲ್ಲಿಗೆ ತಂದು ಮಾರುತ್ತಾರೆ. ಈ ಎರಡು ಸಂದರ್ಭಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಅವಕಾಶ ನೀಡುವ ಬಗ್ಗೆ ಜಂಟಿ ಆಯುಕ್ತರು ನಿರ್ಧಾರ ತೆಗೆದುಕೊಳ್ಳಬಹುದು” ಎಂದು ಪಾಲಿಕೆ ಹೇಳಿತ್ತು.

“ಈ ಜಾಗವನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಸಲು ಸಿದ್ಧರಿರುವ ಯಾರಾದರೂ ಬಿಬಿಎಂಪಿಗೆ ಪ್ರಸ್ತಾವನೆಯನ್ನು ಕಳುಹಿಸಬಹುದು. ಅರ್ಜಿಯನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಪಾಲಿಕೆ ತಿಳಿಸಿತ್ತು.

ಈ ಮೂಲಕ ಈ ಜಾಗ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಸೇರಿದ್ದೋ ಅಥವಾ ಬಿಬಿಎಂಪಿಗೆ ಸೇರಿದ್ದೋ ಎಂಬ ಪ್ರಶ್ನೆ ಎದ್ದಿತ್ತು.

“ಚಾಮರಾಜಪೇಟೆ ಈದ್ಗಾ ಮೈದಾನ ತಮ್ಮದೆಂದು ಹೇಳಿಕೆ ನೀಡಿರುವ ಬಿಬಿಎಂಪಿ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು” ಎಂದು ಕೇಂದ್ರ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) ಆಗ್ರಹಿಸಿತ್ತು.

ಬಿಬಿಎಂಪಿ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದ ಸಿಎಂಎ ಪ್ರಧಾನ ಕಾರ್ಯದರ್ಶಿ ಡಾ.ಜಹೀರುದ್ದೀನ್ ಅಹ್ಮದ್, “ಈ ಭೂಮಿ ವಕ್ಫ್‌ಗೆ ಸೇರಿದೆ. ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಅಂದಿನ ಬೆಂಗಳೂರು ಸಿಟಿ ಕಾರ್ಪೊರೇಶನ್ ಪ್ರತಿಪಾದನೆಯನ್ನು ವಜಾಗೊಳಿಸಿತ್ತು. ಈ ಕುರಿತು ವಕ್ಫ್ ಗೆಜೆಟ್ ಅಧಿಸೂಚನೆಯನ್ನು ಜೂನ್ 7, 1965ರಂದು ಹೊರಡಿಸಿದೆ” ಎಂದು ತಿಳಿಸಿದ್ದರು.

“ಪಾಲಿಕೆಯು ಈದ್ಗಾ ಮೈದಾನದ ನೈಋತ್ಯ ಮೂಲೆಯಲ್ಲಿ ಅನಧಿಕೃತವಾಗಿ ವಾರ್ಡ್ ಕಚೇರಿಯನ್ನು ನಿರ್ಮಿಸಿತ್ತು. ಆದರೆ 1971ರ ಆಗಸ್ಟ್ 28ರಂದು ಅಂದಿನ ಮೇಯರ್ ಎಂ.ಬಿ.ಲಿಂಗಯ್ಯ ಮತ್ತು ಸಿಎಂಎ ಪ್ರತಿನಿಧಿಗಳ ನಡುವೆ ಸಭೆ ನಡೆಯಿತು. 30 ವರ್ಷಗಳ ಕಾಲ ಜಾಗವನ್ನು ಗುತ್ತಿಗೆ ನೀಡಲು ಒಪ್ಪಿಗೆ ನೀಡಲಾಯಿತು” ಎಂದಿದ್ದರು ಅಹ್ಮದ್.

“1994ರ ಮಾರ್ಚ್ 3ರಂದು ಪಾಲಿಕೆಗೆ ಪತ್ರ ಬರೆದು ವಾರ್ಡ್ ಕಚೇರಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಈದ್ಗಾ ಮೈದಾನ ಆಟದ ಮೈದಾನವಾಗಿದ್ದು, ಅದು ತಮಗೆ ಸೇರಿದೆ ಎಂದು ಬಿಬಿಎಂಪಿ ಹೇಳಿರುವುದು ಅಚ್ಚರಿಯ ಸಂಗತಿಯಾಗಿದೆ. ಬಿಬಿಎಂಪಿ ತನ್ನ ಹೇಳಿಕೆಯನ್ನು ವಾಪಸ್ ಪಡೆಯಬೇಕು” ಎಂದು ಅವರು ಆಗ್ರಹಿಸಿದ್ದರು.

’ನ್ಯಾಯಪಥ’ದೊಂದಿಗೆ ಮಾತನಾಡಿದ್ದ ವಕ್ಫ್ ಮಂಡಳಿ ಕಾರ್ಯ ನಿರ್ವಾಹಕ ಅಧಿಕಾರಿ ಪರ್ವೀಜ಼್ ಖಾನ್ ಕೂಡ ಇದೇ ಪ್ರತಿಪಾದನೆಯನ್ನು ಮಾಡಿದ್ದರು. “ಸುಪ್ರೀಂ ಕೋರ್ಟ್ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಅದು ಸಾರ್ವಜನಿಕವಾಗಿಯೂ ಲಭ್ಯವಿದೆ. ಈಗ ಬಿಬಿಎಂಪಿಯವರು ತಮ್ಮದೆಂದು ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ. ಎಲ್ಲ ದಾಖಲೆಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಕಾನೂನು ಪ್ರಕ್ರಿಯೆ ನಡೆಯಬೇಕು ಎಂದು ಬಿಬಿಎಂಪಿ ತಿಳಿಸಿದೆ” ಎಂದಿದ್ದರು.

ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

“ನ್ಯಾಯಾಲಯದ ಆದೇಶವೇ ಅಂತಿಮ. ಹೀಗಾಗಿ ಯಾರು ಏನೇ ಹೇಳಿದರೂ ನಾವು ಅತಿಯಾದ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ. ಎರಡು ಸರ್ಕಾರಿ ಸಂಸ್ಥೆಗಳ ನಡುವೆ ಈ ಗೊಂದಲ ಏರ್ಪಟ್ಟಿದೆ. ನಾವು ಕಾನೂನಿನ ಚೌಕಟ್ಟಿನಲ್ಲಿ ಸಾಗುತ್ತೇವೆ” ಎಂದು ತಿಳಿಸಿದ್ದರು.

“ಇಷ್ಟು ವರ್ಷ ಕಳೆದರೂ ವಕ್ಫ್ ಮಂಡಳಿ ಈ ಮೈದಾನಕ್ಕೆ ತಂತಿ ಬೇಲಿಯನ್ನು ಹಾಕಿಲ್ಲ. ಎಲ್ಲರೂ ಜೊತೆಯಲ್ಲಿ ಇರಬೇಕೆಂಬುದು ನಮ್ಮ ಆಶಯ. ಇತ್ತೀಚೆಗೆ ಈ ವಿವಾದ ಬಂದಿದೆ. ಹೀಗಾಗಿ ವಿವಾದ ಸೃಷ್ಟಿಸಲು ಯತ್ನಿಸುವವರಿಗೆ ಪ್ರತಿಕ್ರಿಯೆ ನೀಡಲು ನಾವು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಬಿಬಿಎಂಪಿ ಪಶ್ಚಿಮ ವಿಭಾಗದ ಆಯುಕ್ತರಾದ ಶ್ರೀನಿವಾಸ್ ’ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿ, “ಸುಪ್ರೀಂ ಕೋರ್ಟ್ ಆದೇಶವಿರುವ ದಾಖಲೆಗಳನ್ನು ವಕ್ಫ್ ಬೋರ್ಡ್ ಕಳುಹಿಸಿಕೊಟ್ಟಿದೆ. ಇದು ಬಿಬಿಎಂಪಿಗೆ ಸೇರಿದೆ ಎಂಬ ದಾಖಲೆಗಳೂ ಇವೆ. ಅವುಗಳನ್ನು ಮುಖ್ಯ ಕಚೇರಿಯ ಕಾನೂನು ವಿಭಾಗಕ್ಕೆ ಸಲ್ಲಿಸಿದ್ದೇವೆ. ಈಗ ಇರುವ ಪ್ರಸ್ತುತ ದಾಖಲೆಗಳ ಪ್ರಕಾರ ಈ ಆಟದ ಮೈದಾನ ಬಿಬಿಎಂಪಿಗೆ ಸೇರಿದೆ. ಈ ಸಮಸ್ಯೆ ಇತ್ಯರ್ಥವಾಗಲು ಇನ್ನೂ ಹತ್ತು ದಿನ ಬೇಕಾಗಬಹುದು. ಈ ಸ್ಥಳವು ಯಾರಿಗೆ ಸೇರಿದ್ದೆಂದು ತಿಳಿಯಲು ಹಳೆಯ ದಾಖಲೆಗಳನ್ನು ಕಳುಹಿಸಿಕೊಡುವಂತೆ ಕಂದಾಯ ಇಲಾಖೆಗೂ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದರು.

ಕೊನೆಗೂ ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದಿದ್ದು, ವಿವಾದಕ್ಕೆ ತೆರೆ ಎಳೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...