Homeಕರ್ನಾಟಕಸುಪ್ರೀಂ ಮೆಟ್ಟಿಲೇರಿದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಹೈಕೋರ್ಟ್ ಆದೇಶ ತಡೆಗೆ ಮನವಿ

ಸುಪ್ರೀಂ ಮೆಟ್ಟಿಲೇರಿದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಹೈಕೋರ್ಟ್ ಆದೇಶ ತಡೆಗೆ ಮನವಿ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವವರಿಗೆ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಆದೇಶಿಸಿದ್ದು, ಇದನ್ನು ಪ್ರಶ್ನಿಸಿ ವಕ್ಫ್‌‌ ಮಂಡಳಿ ಸುಪ್ರೀಂಕೋರ್ಟ್ ಕದತಟ್ಟಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಹಾಗೂ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್‌ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಎದುರು ವಕ್ಫ್‌‌ ಮಂಡಳಿ, ‘ಈ ವಿಚಾರವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಮನವಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸುವುದಾಗಿ ಪೀಠವು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಅರ್ಜಿಗಳನ್ನು ಸರ್ಕಾರ ಪರಿಗಣಿಸಬಹುದು ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಈದ್ಗಾ ಮೈದಾನದಲ್ಲಿ ಆರು ದಶಕಗಳಿಂದ ಮುಸ್ಲಿಮರು ಪ್ರಾರ್ಥನೆ ಮಾಡುತ್ತಿದ್ದಾರೆ. ಒಂದು ವೇಳೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದರೆ ಧಾರ್ಮಿಕ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ” ಎಂದು ವಕ್ಫ್‌‌ ಪರ ವಕೀಲರು ವಾದಿಸಿದ್ದಾರೆ.

“ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸದಿದ್ದರೆ ಅನಗತ್ಯ ಉದ್ವಿಗ್ನತೆ ಸೃಷ್ಟಿಯಾಗಲಿದೆ” ಎಂದೂ ಎಚ್ಚರಿಸಿದ್ದಾರೆ.

ಸರ್ಕಾರಿ ಸಂಸ್ಥೆಗಳಾದ ವಕ್ಪ್‌ ಮತ್ತು ಬಿಬಿಎಂಪಿ ನಡುವೆ ವಿವಾದ ಉಂಟಾಗಿದ್ದು, ‘ಮೈದಾನದ ಮಾಲೀಕತ್ವ ಕಂದಾಯ ಇಲಾಖೆಗೆ ಸೇರಿದೆ’ ಎಂದು ಬಿಬಿಎಂಪಿ ಪ್ರತಿಪಾದಿಸಿದೆ. ಇದನ್ನು ಪ್ರಶ್ನಿಸಿ ವಕ್ಫ್‌ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಮತ್ತು ಬೆಂಗಳೂರು ಜಿಲ್ಲೆ ವಕ್ಫ್‌ ಸಲಹಾ ಸಮಿತಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆ.25ರಂದು ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿತ್ತು.

“ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ರಂಜಾನ್‌ ಮತ್ತು ಬಕ್ರೀದ್ ಸಮಯದಲ್ಲಿ ಮೈದಾನದಲ್ಲಿ ಪಾರ್ಥನೆ ಸಲ್ಲಿಸಬಹುದು. ಈ ಎರಡು ದಿನಗಳನ್ನು ಹೊರತು ಪಡಿಸಿ ಬೇರಾವುದೇ ದಿನ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಆಟದ ಮೈದಾನವಾಗಿ ಬಳಸಬೇಕು. ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು” ಎಂದು ಏಕಸದಸ್ಯ ಪೀಠ ಹೇಳಿತ್ತು.

“ಬಿಬಿಎಂಪಿ ಮತ್ತು ಸರ್ಕಾರ ಮೈದಾನದಲ್ಲಿ ಗಣರಾಜೋತ್ಸವ ಮತ್ತು ಸ್ವಾತಂತ್ರ್ಯ ದಿನಾಚಣೆ ಆಚರಣೆಗೆ ಅನುಮತಿ ನೀಡಬಹುದು ಮತ್ತು ಮೈದಾನವನ್ನು ಆಟದ ಬಳಕೆಗೆ ಮಾತ್ರವೇ ಸೀಮಿತಗೊಳಿಸಬೇಕು” ಎಂದು ಸೂಚಿಸಲಾಗಿತ್ತು.

ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಲಿಸಿದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಮತ್ತು ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಆಗಸ್ಟ್‌ 26ರಂದು ವಿಚಾರಣೆ ನಡೆಸಿತ್ತು.

“ಏಕಸದಸ್ಯ ನ್ಯಾಯಪೀಠ ನೀಡಿರುವ ನಿರ್ದೇಶನಗಳಲ್ಲಿ ಯಾವುದೇ ಬದಾಲಾವಣೆ ಇರುವುದಿಲ್ಲ. ಆದಾಗ್ಯೂ, ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಅನುಮತಿ ಕೋರಿ ಬೆಂಗಳೂರು ಜಿಲ್ಲಾಧಿಕಾರಿ ಸ್ವೀಕರಿಸಿರುವ ಮನವಿ ಪತ್ರಗಳನ್ನು ಇದೇ 31ರಿಂದ ಸೀಮಿತ ಅವಧಿಗೆ ಪರಿಗಣಿಸಿ ಸರ್ಕಾರ ಸೂಕ್ತ ಆದೇಶ ಹೊರಡಿಸಬಹುದು” ಎಂದು ವಿಭಾಗೀಯ ನ್ಯಾಯಪೀಠ ಪ್ರತಿಕ್ರಿಯೆ ನೀಡಿತ್ತು.

ಇದನ್ನೂ ಓದಿರಿ: ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ: ದಲಿತರ ಆಗ್ರಹ

ಹಿಂದೂ- ಮುಸ್ಲಿಂ ಕೋಮು ದಳ್ಳುರಿ ಎಬ್ಬಿಸಲು ಕೆಲವು ಮತೀಯ ಸಂಘಟನೆಗಳು ಬಯಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈದ್ಗಾ ಮೈದಾನದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡಬೇಕು ಎಂದು ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯನ್ನು ಕೋರಿದ್ದವು.

ಈದ್ಗಾ ಮೈದಾನದ ವಿವಾದವು 1955ರಷ್ಟು ಹಿಂದಿನದು. ಸುಪ್ರೀಂ ಕೋರ್ಟ್ 1965ರಲ್ಲಿ ವಕ್ಫ್ ಪರವಾಗಿ ತೀರ್ಪು ನೀಡಿತ್ತು. ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್ 1965ರ ಗೆಜೆಟ್ ಅನ್ನು ಪ್ರಸ್ತುತಪಡಿಸಿ ಈ ಮೈದಾನವು ವಕ್ಫ್ ಆಸ್ತಿ ಎಂದು ತಿಳಿಸಿತು. 1974ರ ಸಿಟಿ ಸರ್ವೆ ದಾಖಲೆಗಳು ಈ ಜಾಗವನ್ನು ಆಟದ ಮೈದಾನವೆಂದು ಸೂಚಿಸಿರುವುದಾಗಿ ಹೇಳಲಾಗುತ್ತಿದೆ. ಹೀಗಾಗಿ ವಿವಾದ ಏರ್ಪಟ್ಟಿದೆ. ಇದರ ನಡುವೆ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...