Homeಕರ್ನಾಟಕಸುಪ್ರೀಂ ಮೆಟ್ಟಿಲೇರಿದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಹೈಕೋರ್ಟ್ ಆದೇಶ ತಡೆಗೆ ಮನವಿ

ಸುಪ್ರೀಂ ಮೆಟ್ಟಿಲೇರಿದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಹೈಕೋರ್ಟ್ ಆದೇಶ ತಡೆಗೆ ಮನವಿ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವವರಿಗೆ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಆದೇಶಿಸಿದ್ದು, ಇದನ್ನು ಪ್ರಶ್ನಿಸಿ ವಕ್ಫ್‌‌ ಮಂಡಳಿ ಸುಪ್ರೀಂಕೋರ್ಟ್ ಕದತಟ್ಟಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಹಾಗೂ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್‌ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಎದುರು ವಕ್ಫ್‌‌ ಮಂಡಳಿ, ‘ಈ ವಿಚಾರವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಮನವಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸುವುದಾಗಿ ಪೀಠವು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಅರ್ಜಿಗಳನ್ನು ಸರ್ಕಾರ ಪರಿಗಣಿಸಬಹುದು ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಈದ್ಗಾ ಮೈದಾನದಲ್ಲಿ ಆರು ದಶಕಗಳಿಂದ ಮುಸ್ಲಿಮರು ಪ್ರಾರ್ಥನೆ ಮಾಡುತ್ತಿದ್ದಾರೆ. ಒಂದು ವೇಳೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದರೆ ಧಾರ್ಮಿಕ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ” ಎಂದು ವಕ್ಫ್‌‌ ಪರ ವಕೀಲರು ವಾದಿಸಿದ್ದಾರೆ.

“ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸದಿದ್ದರೆ ಅನಗತ್ಯ ಉದ್ವಿಗ್ನತೆ ಸೃಷ್ಟಿಯಾಗಲಿದೆ” ಎಂದೂ ಎಚ್ಚರಿಸಿದ್ದಾರೆ.

ಸರ್ಕಾರಿ ಸಂಸ್ಥೆಗಳಾದ ವಕ್ಪ್‌ ಮತ್ತು ಬಿಬಿಎಂಪಿ ನಡುವೆ ವಿವಾದ ಉಂಟಾಗಿದ್ದು, ‘ಮೈದಾನದ ಮಾಲೀಕತ್ವ ಕಂದಾಯ ಇಲಾಖೆಗೆ ಸೇರಿದೆ’ ಎಂದು ಬಿಬಿಎಂಪಿ ಪ್ರತಿಪಾದಿಸಿದೆ. ಇದನ್ನು ಪ್ರಶ್ನಿಸಿ ವಕ್ಫ್‌ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಮತ್ತು ಬೆಂಗಳೂರು ಜಿಲ್ಲೆ ವಕ್ಫ್‌ ಸಲಹಾ ಸಮಿತಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆ.25ರಂದು ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿತ್ತು.

“ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ರಂಜಾನ್‌ ಮತ್ತು ಬಕ್ರೀದ್ ಸಮಯದಲ್ಲಿ ಮೈದಾನದಲ್ಲಿ ಪಾರ್ಥನೆ ಸಲ್ಲಿಸಬಹುದು. ಈ ಎರಡು ದಿನಗಳನ್ನು ಹೊರತು ಪಡಿಸಿ ಬೇರಾವುದೇ ದಿನ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಆಟದ ಮೈದಾನವಾಗಿ ಬಳಸಬೇಕು. ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು” ಎಂದು ಏಕಸದಸ್ಯ ಪೀಠ ಹೇಳಿತ್ತು.

“ಬಿಬಿಎಂಪಿ ಮತ್ತು ಸರ್ಕಾರ ಮೈದಾನದಲ್ಲಿ ಗಣರಾಜೋತ್ಸವ ಮತ್ತು ಸ್ವಾತಂತ್ರ್ಯ ದಿನಾಚಣೆ ಆಚರಣೆಗೆ ಅನುಮತಿ ನೀಡಬಹುದು ಮತ್ತು ಮೈದಾನವನ್ನು ಆಟದ ಬಳಕೆಗೆ ಮಾತ್ರವೇ ಸೀಮಿತಗೊಳಿಸಬೇಕು” ಎಂದು ಸೂಚಿಸಲಾಗಿತ್ತು.

ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಲಿಸಿದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಮತ್ತು ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಆಗಸ್ಟ್‌ 26ರಂದು ವಿಚಾರಣೆ ನಡೆಸಿತ್ತು.

“ಏಕಸದಸ್ಯ ನ್ಯಾಯಪೀಠ ನೀಡಿರುವ ನಿರ್ದೇಶನಗಳಲ್ಲಿ ಯಾವುದೇ ಬದಾಲಾವಣೆ ಇರುವುದಿಲ್ಲ. ಆದಾಗ್ಯೂ, ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಅನುಮತಿ ಕೋರಿ ಬೆಂಗಳೂರು ಜಿಲ್ಲಾಧಿಕಾರಿ ಸ್ವೀಕರಿಸಿರುವ ಮನವಿ ಪತ್ರಗಳನ್ನು ಇದೇ 31ರಿಂದ ಸೀಮಿತ ಅವಧಿಗೆ ಪರಿಗಣಿಸಿ ಸರ್ಕಾರ ಸೂಕ್ತ ಆದೇಶ ಹೊರಡಿಸಬಹುದು” ಎಂದು ವಿಭಾಗೀಯ ನ್ಯಾಯಪೀಠ ಪ್ರತಿಕ್ರಿಯೆ ನೀಡಿತ್ತು.

ಇದನ್ನೂ ಓದಿರಿ: ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ: ದಲಿತರ ಆಗ್ರಹ

ಹಿಂದೂ- ಮುಸ್ಲಿಂ ಕೋಮು ದಳ್ಳುರಿ ಎಬ್ಬಿಸಲು ಕೆಲವು ಮತೀಯ ಸಂಘಟನೆಗಳು ಬಯಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈದ್ಗಾ ಮೈದಾನದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡಬೇಕು ಎಂದು ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯನ್ನು ಕೋರಿದ್ದವು.

ಈದ್ಗಾ ಮೈದಾನದ ವಿವಾದವು 1955ರಷ್ಟು ಹಿಂದಿನದು. ಸುಪ್ರೀಂ ಕೋರ್ಟ್ 1965ರಲ್ಲಿ ವಕ್ಫ್ ಪರವಾಗಿ ತೀರ್ಪು ನೀಡಿತ್ತು. ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್ 1965ರ ಗೆಜೆಟ್ ಅನ್ನು ಪ್ರಸ್ತುತಪಡಿಸಿ ಈ ಮೈದಾನವು ವಕ್ಫ್ ಆಸ್ತಿ ಎಂದು ತಿಳಿಸಿತು. 1974ರ ಸಿಟಿ ಸರ್ವೆ ದಾಖಲೆಗಳು ಈ ಜಾಗವನ್ನು ಆಟದ ಮೈದಾನವೆಂದು ಸೂಚಿಸಿರುವುದಾಗಿ ಹೇಳಲಾಗುತ್ತಿದೆ. ಹೀಗಾಗಿ ವಿವಾದ ಏರ್ಪಟ್ಟಿದೆ. ಇದರ ನಡುವೆ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...