Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ

ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವು ತಮ್ಮ ಮಾಲೀಕತ್ವದಲ್ಲಿ ಇಲ್ಲ ಎಂದು ಬಿಬಿಎಂಪಿ ಹೇಳಿದ ನಂತರವೂ ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ. ಇದೀಗ ಈದ್ಗಾ ಮೈದಾನವನ್ನು ಕಂದಾಯ ಭೂಮಿ ಎಂದು ಸರ್ಕಾರ ಹೇಳಿದೆ. ಆದರೆ ಇದರ ವಿರದ್ಧ ರಾಜ್ಯ ವಕ್ಫ್‌ ಮಂಡಳಿ ಸುಪ್ರೀಂಕೋರ್ಟ್‌ಗೆ ತೆರಳುವುದಾಗಿ ಹೇಳಿದೆ.

ಇಷ್ಟೆ ಅಲ್ಲದೆ, ಬಿಜೆಪಿ ಪರ ಒಲವಿರುವ ಬಲಪಂಥೀಯ ಸಂಘಟನೆಗಳು ಅಲ್ಲಿ ಗಣೇಶ ಹಬ್ಬವನ್ನು ಮಾಡುವುದಾಗಿ ಹೇಳಿಕೆ ನೀಡಿ ಮತ್ತೆ ವಿವಾದವೆಬ್ಬಿಸಿದ್ದಾರೆ. ಈ ಹಿನ್ನಲೆಯಲ್ಲಿ “ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವುದಿಲ್ಲ” ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ರಾಜ್ಯ ವಕ್ಪ್‌ ಮಂಡಳಿಯು ಸರ್ಕಾರದ ಆದೇಶ ಮತ್ತು ಗಣೇಶೋತ್ಸವವ ಆಯೋಜಿಸಲು ನಿರ್ಧರಿಸಿರುವುದನ್ನು ವಿರೋಧಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗುವುದಾಗಿ ಹೇಳಿದೆ.

ಇದನ್ನೂ ಓದಿ: ಕೋಮುವಾದಿಗಳು ಎಬ್ಬಿಸಿದ ವಿವಾದದ ಸುಳಿಯಲ್ಲಿ ಈದ್ಗಾ ಮೈದಾನದ ಬಯಲು

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ವಕ್ಫ್‌ ಮಂಡಳಿಯ ಅಧ್ಯಕ್ಷ ಶಾಫಿ ಸಅದಿ, “ಬಿಬಿಎಂಪಿ ಆಡಳಿತವೇ ಈ ಮೈದಾನ ಬಿಬಿಎಂಪಿಯ ಆಟದ ಮೈದಾನ ಅಲ್ಲ ಎಂದು ಒಪ್ಪಿಕೊಂಡಿರುವುದು ನಮ್ಮ ಕಾನೂನು ತಂಡದ ದೊಡ್ಡ ಗೆಲುವು. ಇದೀಗ ಅದು ಕಂದಾಯ ಇಲಾಖೆಯ ಮೈದಾನ ಎಂದು ಹೇಳಿದೆ. ಆದರೆ ಇದು ಸುಪ್ರಿಂಕೋರ್ಟ್‌ನ ಆದೇಶದ ಉಲ್ಲಂಘನೆಯಾಗಿದ್ದು, ಕಂದಾಯ ಇಲಾಖೆ ಇನ್ನೊಂದು ಮುಜುಗರಕ್ಕೆ ನಿಲ್ಲುವುದಿಲ್ಲ. ಏನೇ ಇದ್ದರೂ ನಮ್ಮ ಕಾನೂನಾತ್ಮಕ ಹೋರಾಟ ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಈ ಹಿಂದೆ ವಿವಾದವೆದ್ದಿದ್ದಾಗ , ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಜೂನ್ 22ರ ಬುಧವಾರ ಹೇಳಿದ್ದರು. ಈ ಮೂಲಕ ವಿವಾದಕ್ಕೆ ತೆರೆ ಎಳೆದಿತ್ತು.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಅಂದು ಮಾಧ್ಯಮಗಳಿಗೆ ಸ್ಪಷ್ಟನೆ ಬಿಬಿಎಂಪಿ ಆಯುಕ್ತ ತುಷಾರ್‌, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್‌ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಜೂನ್‌ನಲ್ಲಿ ತಿಳಿಸಿದ್ದರು.

ಏನಿದು ವಿವಾದ?

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಬಿಜೆಪಿ ಬೆಂಬಲಿತ ಹಾಗೂ ಅವರ ಪರವಾಗಿ ಇರುವ ಬಲಪಂಥೀಯ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದ್ದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದಿದ್ದವು.

ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಬಿಎಂಪಿ, ಇದು ಬಿಬಿಎಂಪಿ ಆಸ್ತಿಯಾಗಿದೆ ಎಂದು ಹೇಳಿತ್ತು. ಇದರ ನಂತರ ಪತ್ರಗಳನ್ನು ಗಮನಿಸಿದ್ದ ಬಿಬಿಎಂಪಿ ಅದು ಬಿಬಿಎಂಪಿ ಆಸ್ತಿ ಅಲ್ಲ ಎಂದು ಹೇಳಿ ವಿವಾದವನ್ನು ತಣ್ಣಗಾಗಿಸಿತ್ತು. ಆದರೆ ಬಿಜೆಪಿ ಮತ್ತು ಅವರ ಪರವಾಗಿರುವ ಬಲಪಂಥೀಯ ಸಂಘಟನೆಗಳು ಮತ್ತೆ ವಿವಾದ ಸೃಷ್ಟಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...