Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ

ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವು ತಮ್ಮ ಮಾಲೀಕತ್ವದಲ್ಲಿ ಇಲ್ಲ ಎಂದು ಬಿಬಿಎಂಪಿ ಹೇಳಿದ ನಂತರವೂ ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ. ಇದೀಗ ಈದ್ಗಾ ಮೈದಾನವನ್ನು ಕಂದಾಯ ಭೂಮಿ ಎಂದು ಸರ್ಕಾರ ಹೇಳಿದೆ. ಆದರೆ ಇದರ ವಿರದ್ಧ ರಾಜ್ಯ ವಕ್ಫ್‌ ಮಂಡಳಿ ಸುಪ್ರೀಂಕೋರ್ಟ್‌ಗೆ ತೆರಳುವುದಾಗಿ ಹೇಳಿದೆ.

ಇಷ್ಟೆ ಅಲ್ಲದೆ, ಬಿಜೆಪಿ ಪರ ಒಲವಿರುವ ಬಲಪಂಥೀಯ ಸಂಘಟನೆಗಳು ಅಲ್ಲಿ ಗಣೇಶ ಹಬ್ಬವನ್ನು ಮಾಡುವುದಾಗಿ ಹೇಳಿಕೆ ನೀಡಿ ಮತ್ತೆ ವಿವಾದವೆಬ್ಬಿಸಿದ್ದಾರೆ. ಈ ಹಿನ್ನಲೆಯಲ್ಲಿ “ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವುದಿಲ್ಲ” ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ರಾಜ್ಯ ವಕ್ಪ್‌ ಮಂಡಳಿಯು ಸರ್ಕಾರದ ಆದೇಶ ಮತ್ತು ಗಣೇಶೋತ್ಸವವ ಆಯೋಜಿಸಲು ನಿರ್ಧರಿಸಿರುವುದನ್ನು ವಿರೋಧಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗುವುದಾಗಿ ಹೇಳಿದೆ.

ಇದನ್ನೂ ಓದಿ: ಕೋಮುವಾದಿಗಳು ಎಬ್ಬಿಸಿದ ವಿವಾದದ ಸುಳಿಯಲ್ಲಿ ಈದ್ಗಾ ಮೈದಾನದ ಬಯಲು

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ವಕ್ಫ್‌ ಮಂಡಳಿಯ ಅಧ್ಯಕ್ಷ ಶಾಫಿ ಸಅದಿ, “ಬಿಬಿಎಂಪಿ ಆಡಳಿತವೇ ಈ ಮೈದಾನ ಬಿಬಿಎಂಪಿಯ ಆಟದ ಮೈದಾನ ಅಲ್ಲ ಎಂದು ಒಪ್ಪಿಕೊಂಡಿರುವುದು ನಮ್ಮ ಕಾನೂನು ತಂಡದ ದೊಡ್ಡ ಗೆಲುವು. ಇದೀಗ ಅದು ಕಂದಾಯ ಇಲಾಖೆಯ ಮೈದಾನ ಎಂದು ಹೇಳಿದೆ. ಆದರೆ ಇದು ಸುಪ್ರಿಂಕೋರ್ಟ್‌ನ ಆದೇಶದ ಉಲ್ಲಂಘನೆಯಾಗಿದ್ದು, ಕಂದಾಯ ಇಲಾಖೆ ಇನ್ನೊಂದು ಮುಜುಗರಕ್ಕೆ ನಿಲ್ಲುವುದಿಲ್ಲ. ಏನೇ ಇದ್ದರೂ ನಮ್ಮ ಕಾನೂನಾತ್ಮಕ ಹೋರಾಟ ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಈ ಹಿಂದೆ ವಿವಾದವೆದ್ದಿದ್ದಾಗ , ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಜೂನ್ 22ರ ಬುಧವಾರ ಹೇಳಿದ್ದರು. ಈ ಮೂಲಕ ವಿವಾದಕ್ಕೆ ತೆರೆ ಎಳೆದಿತ್ತು.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಅಂದು ಮಾಧ್ಯಮಗಳಿಗೆ ಸ್ಪಷ್ಟನೆ ಬಿಬಿಎಂಪಿ ಆಯುಕ್ತ ತುಷಾರ್‌, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್‌ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಜೂನ್‌ನಲ್ಲಿ ತಿಳಿಸಿದ್ದರು.

ಏನಿದು ವಿವಾದ?

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಬಿಜೆಪಿ ಬೆಂಬಲಿತ ಹಾಗೂ ಅವರ ಪರವಾಗಿ ಇರುವ ಬಲಪಂಥೀಯ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದ್ದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದಿದ್ದವು.

ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಬಿಎಂಪಿ, ಇದು ಬಿಬಿಎಂಪಿ ಆಸ್ತಿಯಾಗಿದೆ ಎಂದು ಹೇಳಿತ್ತು. ಇದರ ನಂತರ ಪತ್ರಗಳನ್ನು ಗಮನಿಸಿದ್ದ ಬಿಬಿಎಂಪಿ ಅದು ಬಿಬಿಎಂಪಿ ಆಸ್ತಿ ಅಲ್ಲ ಎಂದು ಹೇಳಿ ವಿವಾದವನ್ನು ತಣ್ಣಗಾಗಿಸಿತ್ತು. ಆದರೆ ಬಿಜೆಪಿ ಮತ್ತು ಅವರ ಪರವಾಗಿರುವ ಬಲಪಂಥೀಯ ಸಂಘಟನೆಗಳು ಮತ್ತೆ ವಿವಾದ ಸೃಷ್ಟಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...