Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ

ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವು ತಮ್ಮ ಮಾಲೀಕತ್ವದಲ್ಲಿ ಇಲ್ಲ ಎಂದು ಬಿಬಿಎಂಪಿ ಹೇಳಿದ ನಂತರವೂ ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ. ಇದೀಗ ಈದ್ಗಾ ಮೈದಾನವನ್ನು ಕಂದಾಯ ಭೂಮಿ ಎಂದು ಸರ್ಕಾರ ಹೇಳಿದೆ. ಆದರೆ ಇದರ ವಿರದ್ಧ ರಾಜ್ಯ ವಕ್ಫ್‌ ಮಂಡಳಿ ಸುಪ್ರೀಂಕೋರ್ಟ್‌ಗೆ ತೆರಳುವುದಾಗಿ ಹೇಳಿದೆ.

ಇಷ್ಟೆ ಅಲ್ಲದೆ, ಬಿಜೆಪಿ ಪರ ಒಲವಿರುವ ಬಲಪಂಥೀಯ ಸಂಘಟನೆಗಳು ಅಲ್ಲಿ ಗಣೇಶ ಹಬ್ಬವನ್ನು ಮಾಡುವುದಾಗಿ ಹೇಳಿಕೆ ನೀಡಿ ಮತ್ತೆ ವಿವಾದವೆಬ್ಬಿಸಿದ್ದಾರೆ. ಈ ಹಿನ್ನಲೆಯಲ್ಲಿ “ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವುದಿಲ್ಲ” ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ರಾಜ್ಯ ವಕ್ಪ್‌ ಮಂಡಳಿಯು ಸರ್ಕಾರದ ಆದೇಶ ಮತ್ತು ಗಣೇಶೋತ್ಸವವ ಆಯೋಜಿಸಲು ನಿರ್ಧರಿಸಿರುವುದನ್ನು ವಿರೋಧಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗುವುದಾಗಿ ಹೇಳಿದೆ.

ಇದನ್ನೂ ಓದಿ: ಕೋಮುವಾದಿಗಳು ಎಬ್ಬಿಸಿದ ವಿವಾದದ ಸುಳಿಯಲ್ಲಿ ಈದ್ಗಾ ಮೈದಾನದ ಬಯಲು

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ವಕ್ಫ್‌ ಮಂಡಳಿಯ ಅಧ್ಯಕ್ಷ ಶಾಫಿ ಸಅದಿ, “ಬಿಬಿಎಂಪಿ ಆಡಳಿತವೇ ಈ ಮೈದಾನ ಬಿಬಿಎಂಪಿಯ ಆಟದ ಮೈದಾನ ಅಲ್ಲ ಎಂದು ಒಪ್ಪಿಕೊಂಡಿರುವುದು ನಮ್ಮ ಕಾನೂನು ತಂಡದ ದೊಡ್ಡ ಗೆಲುವು. ಇದೀಗ ಅದು ಕಂದಾಯ ಇಲಾಖೆಯ ಮೈದಾನ ಎಂದು ಹೇಳಿದೆ. ಆದರೆ ಇದು ಸುಪ್ರಿಂಕೋರ್ಟ್‌ನ ಆದೇಶದ ಉಲ್ಲಂಘನೆಯಾಗಿದ್ದು, ಕಂದಾಯ ಇಲಾಖೆ ಇನ್ನೊಂದು ಮುಜುಗರಕ್ಕೆ ನಿಲ್ಲುವುದಿಲ್ಲ. ಏನೇ ಇದ್ದರೂ ನಮ್ಮ ಕಾನೂನಾತ್ಮಕ ಹೋರಾಟ ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಈ ಹಿಂದೆ ವಿವಾದವೆದ್ದಿದ್ದಾಗ , ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಜೂನ್ 22ರ ಬುಧವಾರ ಹೇಳಿದ್ದರು. ಈ ಮೂಲಕ ವಿವಾದಕ್ಕೆ ತೆರೆ ಎಳೆದಿತ್ತು.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಅಂದು ಮಾಧ್ಯಮಗಳಿಗೆ ಸ್ಪಷ್ಟನೆ ಬಿಬಿಎಂಪಿ ಆಯುಕ್ತ ತುಷಾರ್‌, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್‌ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಜೂನ್‌ನಲ್ಲಿ ತಿಳಿಸಿದ್ದರು.

ಏನಿದು ವಿವಾದ?

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಬಿಜೆಪಿ ಬೆಂಬಲಿತ ಹಾಗೂ ಅವರ ಪರವಾಗಿ ಇರುವ ಬಲಪಂಥೀಯ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದ್ದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದಿದ್ದವು.

ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಬಿಎಂಪಿ, ಇದು ಬಿಬಿಎಂಪಿ ಆಸ್ತಿಯಾಗಿದೆ ಎಂದು ಹೇಳಿತ್ತು. ಇದರ ನಂತರ ಪತ್ರಗಳನ್ನು ಗಮನಿಸಿದ್ದ ಬಿಬಿಎಂಪಿ ಅದು ಬಿಬಿಎಂಪಿ ಆಸ್ತಿ ಅಲ್ಲ ಎಂದು ಹೇಳಿ ವಿವಾದವನ್ನು ತಣ್ಣಗಾಗಿಸಿತ್ತು. ಆದರೆ ಬಿಜೆಪಿ ಮತ್ತು ಅವರ ಪರವಾಗಿರುವ ಬಲಪಂಥೀಯ ಸಂಘಟನೆಗಳು ಮತ್ತೆ ವಿವಾದ ಸೃಷ್ಟಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...