Homeಮುಖಪುಟಪ್ರತ್ಯೇಕ ರಾಜ್ಯ ಹೋರಾಟದಿಂದ ಸಿಎಂ ಗಾದಿಯವರೆಗೆ; 'ಜಾರ್ಖಂಡ್ ಹುಲಿ' ಚಂಪೈ ಸೊರೇನ್

ಪ್ರತ್ಯೇಕ ರಾಜ್ಯ ಹೋರಾಟದಿಂದ ಸಿಎಂ ಗಾದಿಯವರೆಗೆ; ‘ಜಾರ್ಖಂಡ್ ಹುಲಿ’ ಚಂಪೈ ಸೊರೇನ್

- Advertisement -
- Advertisement -

ಅಕ್ರಮ ಭೂ ವರ್ಗಾವಣೆಯ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಯಕ ಬಂಧಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ ನಂತರ, ಪಕ್ಷವು ಸಾರಿಗೆ ಸಚಿವರಾಗಿದ್ದ ಚಂಪೈ ಸೊರೇನ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದೆ. ಜಾರ್ಖಂಡ್ ಪ್ರತ್ಯೇಕ ರಾಜ್ಯದ ಹೋರಾಟದಿಂದ ರಾಜಕೀಯ ಜೀವನ ಪ್ರವೇಶಿಸಿದ ಚಂಪೈ ಸೊರೇನ್ ಅವರಿಗೆ, ತಮ್ಮ ಸರ್ಕಾರದ ಬಹುಮತ ಸಾಬೀತುಪಡಿಸಲು 10 ದಿನಗಳ ಕಾಲಾವಕಾಶವಿದೆ.

67 ವರ್ಷದ ಚಂಪೈ ಸೊರೇನ್ ಅವರು 1990ರ ದಶಕದಲ್ಲಿ ಜಾರ್ಖಂಡ್ ರಾಜ್ಯವನ್ನು ರಚಿಸುವ ಹೋರಾಟಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು “ಜಾರ್ಖಂಡ್ ಹುಲಿ” ಎಂದು ಕರೆಯುತ್ತಾರೆ. ಇದೀಗ ಜಾರ್ಖಂಡ್ ರಾಜ್ಯದ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

90ರ ದಶಕದ ಆರಂಭದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮುಖ್ಯಸ್ಥ ಮತ್ತು ಹೇಮಂತ್ ಸೊರೇನ್ ಅವರ ತಂದೆ ಶಿಬು ಸೊರೇನ್ ಅವರೊಂದಿಗೆ ಚಂಪೈ ಕೆಲಸ ಮಾಡಲು ಪ್ರಾರಂಭಿಸಿದರು. 1991ರಲ್ಲಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಿ, ಸಾರೈಕೆಲಾ ಸ್ಥಾನವನ್ನು ಗೆಲ್ಲುವ ಮೂಲಕ ರಾಜಕೀಯ ಜೀವನವು ಪ್ರಾರಂಭವಾಯಿತು.

ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಉತ್ತೀರ್ಣರಾದ ಚಂಪೈ ಸೊರೇನ್ ಚಿಕ್ಕ ವಯಸ್ಸಿನಲ್ಲಿ ವಿವಾಹವಾದರು. ಅವರು ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ. ರಾಜಕೀಯಕ್ಕೆ ಸೇರುವ ಮೊದಲು, ಅವರು ತಮ್ಮ ತಂದೆ ಸಿಮಲ್ ಸೊರೇನ್ ಅವರೊಂದಿಗೆ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.

ಅವರು ಸೆಪ್ಟೆಂಬರ್ 2010 ಮತ್ತು ಜನವರಿ 2013 ರ ನಡುವೆ ಅರ್ಜುನ್ ಮುಂಡಾ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಹೇಮಂತ್ ಸೊರೇನ್ 2019ರಲ್ಲಿ ಅಧಿಕಾರಕ್ಕೆ ಬಂದ ನಂತರ, ಚಂಪೈ ಸೊರೇನ್ ಅವರು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಜತೆಗೆ ಸಾರಿಗೆ ಸಚಿವರಾದರು.

ಅವರು ಜಾರ್ಖಂಡ್‌ನ ಕೊಲ್ಹಾನ್ ಪ್ರದೇಶದ ಆರನೇ ಮುಖ್ಯಮಂತ್ರಿ, ರಾಝ್ಯದ 12ನೇ ಮುಖ್ಯಮಂತ್ರಿಯಾಗಿದ್ದಾರೆ. ಇದು ಪೂರ್ವ ಸಿಂಗ್‌ಭೂಮ್, ಪಶ್ಚಿಮ ಸಿಂಗ್‌ಭೂಮ್ ಮತ್ತು ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಗಳನ್ನು ಒಳಗೊಂಡಿದೆ. ಹಿಂದೆ ಜಾರ್ಖಂಡ್ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಅವರು ಪ್ರಮುಖ ಬುಡಕಟ್ಟು ನಾಯಕ ಮತ್ತು ರಾಜಕಾರಣಿ.

“ಜಾರ್ಖಂಡ್‌ನ ಹುಲಿ” ಎಂದು ಕರೆಯಲ್ಪಡುವ ಚಂಪೈ ಸೊರೆನ್ 1990 ರ ದಶಕದಲ್ಲಿ ಪ್ರತ್ಯೇಕ ಜಾರ್ಖಂಡ್ ರಾಜ್ಯ ರಚನೆಯ ಹೋರಾಟದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದರು. ಕೃಷಿಕ ಕುಟುಂಬದಲ್ಲಿ ಜನಿಸಿದ ಚಂಪೈ ಸೊರೆನ್ ತಮ್ಮ ಆರಂಭಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಪಡೆದರು ಮತ್ತು 10 ನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದಾರೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ದೊಂದಿಗೆ ತನ್ನನ್ನು ತಾನು ಹೊಂದಿಕೊಂಡು ಪ್ರತ್ಯೇಕ ಜಾರ್ಖಂಡ್ ಬೇಡಿಕೆಯ ಸಮಯದಲ್ಲಿ ಅವರ ರಾಜಕೀಯ ಜೀವನ ಪ್ರಾರಂಭವಾಯಿತು. ಅವರು ಜೆಎಂಎಂ ಅಧ್ಯಕ್ಷ ಶಿಬು ಸೊರೇನ್ ಅವರ ನಿಷ್ಠಾವಂತರು ಎಂದು ಹೇಳಲಾಗುತ್ತದೆ.

81 ಸದಸ್ಯರ ಜಾರ್ಖಂಡ್ ಅಸೆಂಬ್ಲಿಯಲ್ಲಿ, ಜೆಎಂಎಂ ನೇತೃತ್ವದ ಮೈತ್ರಿಕೂಟವು 47 ಶಾಸಕರನ್ನು ಹೊಂದಿದ್ದು, ಜೆಎಂಎಂನಿಂದ 29, ಕಾಂಗ್ರೆಸ್‌ನಿಂದ 17 ಮತ್ತು ಆರ್‌ಜೆಡಿಯ ಒಬ್ಬರು ಶಾಸಕರಿದ್ದಾರೆ. ಬಿಜೆಪಿ 26 ಸದಸ್ಯರನ್ನು ಹೊಂದಿದ್ದರೆ, ಎಜೆಎಸ್‌ಯು ಪಕ್ಷವು ಮೂರು ಸದಸ್ಯರನ್ನು ಹೊಂದಿದೆ. ಹೆಚ್ಚುವರಿಯಾಗಿ, ಎನ್‌ಸಿಪಿ ಮತ್ತು ಸಿಪಿಐ (ಎಂಎಲ್) ತಲಾ ಒಬ್ಬ ಶಾಸಕರನ್ನು ಮತ್ತು ಇಬ್ಬರು ಸ್ವತಂತ್ರರನ್ನು ಹೊಂದಿದೆ.

ಇದನ್ನೂ ಓದಿ; ಮನಿ ಲಾಂಡರಿಂಗ್ ಪ್ರಕರಣ: 5 ದಿನ ಇಡಿ ವಶಕ್ಕೆ ಮಾಜಿ ಸಿಎಂ ಹೇಮಂತ್ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...