Homeಮುಖಪುಟಪ್ರತ್ಯೇಕ ರಾಜ್ಯ ಹೋರಾಟದಿಂದ ಸಿಎಂ ಗಾದಿಯವರೆಗೆ; 'ಜಾರ್ಖಂಡ್ ಹುಲಿ' ಚಂಪೈ ಸೊರೇನ್

ಪ್ರತ್ಯೇಕ ರಾಜ್ಯ ಹೋರಾಟದಿಂದ ಸಿಎಂ ಗಾದಿಯವರೆಗೆ; ‘ಜಾರ್ಖಂಡ್ ಹುಲಿ’ ಚಂಪೈ ಸೊರೇನ್

- Advertisement -
- Advertisement -

ಅಕ್ರಮ ಭೂ ವರ್ಗಾವಣೆಯ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಯಕ ಬಂಧಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ ನಂತರ, ಪಕ್ಷವು ಸಾರಿಗೆ ಸಚಿವರಾಗಿದ್ದ ಚಂಪೈ ಸೊರೇನ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದೆ. ಜಾರ್ಖಂಡ್ ಪ್ರತ್ಯೇಕ ರಾಜ್ಯದ ಹೋರಾಟದಿಂದ ರಾಜಕೀಯ ಜೀವನ ಪ್ರವೇಶಿಸಿದ ಚಂಪೈ ಸೊರೇನ್ ಅವರಿಗೆ, ತಮ್ಮ ಸರ್ಕಾರದ ಬಹುಮತ ಸಾಬೀತುಪಡಿಸಲು 10 ದಿನಗಳ ಕಾಲಾವಕಾಶವಿದೆ.

67 ವರ್ಷದ ಚಂಪೈ ಸೊರೇನ್ ಅವರು 1990ರ ದಶಕದಲ್ಲಿ ಜಾರ್ಖಂಡ್ ರಾಜ್ಯವನ್ನು ರಚಿಸುವ ಹೋರಾಟಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು “ಜಾರ್ಖಂಡ್ ಹುಲಿ” ಎಂದು ಕರೆಯುತ್ತಾರೆ. ಇದೀಗ ಜಾರ್ಖಂಡ್ ರಾಜ್ಯದ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

90ರ ದಶಕದ ಆರಂಭದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮುಖ್ಯಸ್ಥ ಮತ್ತು ಹೇಮಂತ್ ಸೊರೇನ್ ಅವರ ತಂದೆ ಶಿಬು ಸೊರೇನ್ ಅವರೊಂದಿಗೆ ಚಂಪೈ ಕೆಲಸ ಮಾಡಲು ಪ್ರಾರಂಭಿಸಿದರು. 1991ರಲ್ಲಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಿ, ಸಾರೈಕೆಲಾ ಸ್ಥಾನವನ್ನು ಗೆಲ್ಲುವ ಮೂಲಕ ರಾಜಕೀಯ ಜೀವನವು ಪ್ರಾರಂಭವಾಯಿತು.

ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಉತ್ತೀರ್ಣರಾದ ಚಂಪೈ ಸೊರೇನ್ ಚಿಕ್ಕ ವಯಸ್ಸಿನಲ್ಲಿ ವಿವಾಹವಾದರು. ಅವರು ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ. ರಾಜಕೀಯಕ್ಕೆ ಸೇರುವ ಮೊದಲು, ಅವರು ತಮ್ಮ ತಂದೆ ಸಿಮಲ್ ಸೊರೇನ್ ಅವರೊಂದಿಗೆ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.

ಅವರು ಸೆಪ್ಟೆಂಬರ್ 2010 ಮತ್ತು ಜನವರಿ 2013 ರ ನಡುವೆ ಅರ್ಜುನ್ ಮುಂಡಾ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಹೇಮಂತ್ ಸೊರೇನ್ 2019ರಲ್ಲಿ ಅಧಿಕಾರಕ್ಕೆ ಬಂದ ನಂತರ, ಚಂಪೈ ಸೊರೇನ್ ಅವರು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಜತೆಗೆ ಸಾರಿಗೆ ಸಚಿವರಾದರು.

ಅವರು ಜಾರ್ಖಂಡ್‌ನ ಕೊಲ್ಹಾನ್ ಪ್ರದೇಶದ ಆರನೇ ಮುಖ್ಯಮಂತ್ರಿ, ರಾಝ್ಯದ 12ನೇ ಮುಖ್ಯಮಂತ್ರಿಯಾಗಿದ್ದಾರೆ. ಇದು ಪೂರ್ವ ಸಿಂಗ್‌ಭೂಮ್, ಪಶ್ಚಿಮ ಸಿಂಗ್‌ಭೂಮ್ ಮತ್ತು ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಗಳನ್ನು ಒಳಗೊಂಡಿದೆ. ಹಿಂದೆ ಜಾರ್ಖಂಡ್ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಅವರು ಪ್ರಮುಖ ಬುಡಕಟ್ಟು ನಾಯಕ ಮತ್ತು ರಾಜಕಾರಣಿ.

“ಜಾರ್ಖಂಡ್‌ನ ಹುಲಿ” ಎಂದು ಕರೆಯಲ್ಪಡುವ ಚಂಪೈ ಸೊರೆನ್ 1990 ರ ದಶಕದಲ್ಲಿ ಪ್ರತ್ಯೇಕ ಜಾರ್ಖಂಡ್ ರಾಜ್ಯ ರಚನೆಯ ಹೋರಾಟದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದರು. ಕೃಷಿಕ ಕುಟುಂಬದಲ್ಲಿ ಜನಿಸಿದ ಚಂಪೈ ಸೊರೆನ್ ತಮ್ಮ ಆರಂಭಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಪಡೆದರು ಮತ್ತು 10 ನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದಾರೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ದೊಂದಿಗೆ ತನ್ನನ್ನು ತಾನು ಹೊಂದಿಕೊಂಡು ಪ್ರತ್ಯೇಕ ಜಾರ್ಖಂಡ್ ಬೇಡಿಕೆಯ ಸಮಯದಲ್ಲಿ ಅವರ ರಾಜಕೀಯ ಜೀವನ ಪ್ರಾರಂಭವಾಯಿತು. ಅವರು ಜೆಎಂಎಂ ಅಧ್ಯಕ್ಷ ಶಿಬು ಸೊರೇನ್ ಅವರ ನಿಷ್ಠಾವಂತರು ಎಂದು ಹೇಳಲಾಗುತ್ತದೆ.

81 ಸದಸ್ಯರ ಜಾರ್ಖಂಡ್ ಅಸೆಂಬ್ಲಿಯಲ್ಲಿ, ಜೆಎಂಎಂ ನೇತೃತ್ವದ ಮೈತ್ರಿಕೂಟವು 47 ಶಾಸಕರನ್ನು ಹೊಂದಿದ್ದು, ಜೆಎಂಎಂನಿಂದ 29, ಕಾಂಗ್ರೆಸ್‌ನಿಂದ 17 ಮತ್ತು ಆರ್‌ಜೆಡಿಯ ಒಬ್ಬರು ಶಾಸಕರಿದ್ದಾರೆ. ಬಿಜೆಪಿ 26 ಸದಸ್ಯರನ್ನು ಹೊಂದಿದ್ದರೆ, ಎಜೆಎಸ್‌ಯು ಪಕ್ಷವು ಮೂರು ಸದಸ್ಯರನ್ನು ಹೊಂದಿದೆ. ಹೆಚ್ಚುವರಿಯಾಗಿ, ಎನ್‌ಸಿಪಿ ಮತ್ತು ಸಿಪಿಐ (ಎಂಎಲ್) ತಲಾ ಒಬ್ಬ ಶಾಸಕರನ್ನು ಮತ್ತು ಇಬ್ಬರು ಸ್ವತಂತ್ರರನ್ನು ಹೊಂದಿದೆ.

ಇದನ್ನೂ ಓದಿ; ಮನಿ ಲಾಂಡರಿಂಗ್ ಪ್ರಕರಣ: 5 ದಿನ ಇಡಿ ವಶಕ್ಕೆ ಮಾಜಿ ಸಿಎಂ ಹೇಮಂತ್ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...