Homeಮುಖಪುಟಪ್ರತ್ಯೇಕ ರಾಜ್ಯ ಹೋರಾಟದಿಂದ ಸಿಎಂ ಗಾದಿಯವರೆಗೆ; 'ಜಾರ್ಖಂಡ್ ಹುಲಿ' ಚಂಪೈ ಸೊರೇನ್

ಪ್ರತ್ಯೇಕ ರಾಜ್ಯ ಹೋರಾಟದಿಂದ ಸಿಎಂ ಗಾದಿಯವರೆಗೆ; ‘ಜಾರ್ಖಂಡ್ ಹುಲಿ’ ಚಂಪೈ ಸೊರೇನ್

- Advertisement -
- Advertisement -

ಅಕ್ರಮ ಭೂ ವರ್ಗಾವಣೆಯ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಯಕ ಬಂಧಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ ನಂತರ, ಪಕ್ಷವು ಸಾರಿಗೆ ಸಚಿವರಾಗಿದ್ದ ಚಂಪೈ ಸೊರೇನ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದೆ. ಜಾರ್ಖಂಡ್ ಪ್ರತ್ಯೇಕ ರಾಜ್ಯದ ಹೋರಾಟದಿಂದ ರಾಜಕೀಯ ಜೀವನ ಪ್ರವೇಶಿಸಿದ ಚಂಪೈ ಸೊರೇನ್ ಅವರಿಗೆ, ತಮ್ಮ ಸರ್ಕಾರದ ಬಹುಮತ ಸಾಬೀತುಪಡಿಸಲು 10 ದಿನಗಳ ಕಾಲಾವಕಾಶವಿದೆ.

67 ವರ್ಷದ ಚಂಪೈ ಸೊರೇನ್ ಅವರು 1990ರ ದಶಕದಲ್ಲಿ ಜಾರ್ಖಂಡ್ ರಾಜ್ಯವನ್ನು ರಚಿಸುವ ಹೋರಾಟಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು “ಜಾರ್ಖಂಡ್ ಹುಲಿ” ಎಂದು ಕರೆಯುತ್ತಾರೆ. ಇದೀಗ ಜಾರ್ಖಂಡ್ ರಾಜ್ಯದ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

90ರ ದಶಕದ ಆರಂಭದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮುಖ್ಯಸ್ಥ ಮತ್ತು ಹೇಮಂತ್ ಸೊರೇನ್ ಅವರ ತಂದೆ ಶಿಬು ಸೊರೇನ್ ಅವರೊಂದಿಗೆ ಚಂಪೈ ಕೆಲಸ ಮಾಡಲು ಪ್ರಾರಂಭಿಸಿದರು. 1991ರಲ್ಲಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಿ, ಸಾರೈಕೆಲಾ ಸ್ಥಾನವನ್ನು ಗೆಲ್ಲುವ ಮೂಲಕ ರಾಜಕೀಯ ಜೀವನವು ಪ್ರಾರಂಭವಾಯಿತು.

ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಉತ್ತೀರ್ಣರಾದ ಚಂಪೈ ಸೊರೇನ್ ಚಿಕ್ಕ ವಯಸ್ಸಿನಲ್ಲಿ ವಿವಾಹವಾದರು. ಅವರು ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ. ರಾಜಕೀಯಕ್ಕೆ ಸೇರುವ ಮೊದಲು, ಅವರು ತಮ್ಮ ತಂದೆ ಸಿಮಲ್ ಸೊರೇನ್ ಅವರೊಂದಿಗೆ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.

ಅವರು ಸೆಪ್ಟೆಂಬರ್ 2010 ಮತ್ತು ಜನವರಿ 2013 ರ ನಡುವೆ ಅರ್ಜುನ್ ಮುಂಡಾ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಹೇಮಂತ್ ಸೊರೇನ್ 2019ರಲ್ಲಿ ಅಧಿಕಾರಕ್ಕೆ ಬಂದ ನಂತರ, ಚಂಪೈ ಸೊರೇನ್ ಅವರು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಜತೆಗೆ ಸಾರಿಗೆ ಸಚಿವರಾದರು.

ಅವರು ಜಾರ್ಖಂಡ್‌ನ ಕೊಲ್ಹಾನ್ ಪ್ರದೇಶದ ಆರನೇ ಮುಖ್ಯಮಂತ್ರಿ, ರಾಝ್ಯದ 12ನೇ ಮುಖ್ಯಮಂತ್ರಿಯಾಗಿದ್ದಾರೆ. ಇದು ಪೂರ್ವ ಸಿಂಗ್‌ಭೂಮ್, ಪಶ್ಚಿಮ ಸಿಂಗ್‌ಭೂಮ್ ಮತ್ತು ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಗಳನ್ನು ಒಳಗೊಂಡಿದೆ. ಹಿಂದೆ ಜಾರ್ಖಂಡ್ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಅವರು ಪ್ರಮುಖ ಬುಡಕಟ್ಟು ನಾಯಕ ಮತ್ತು ರಾಜಕಾರಣಿ.

“ಜಾರ್ಖಂಡ್‌ನ ಹುಲಿ” ಎಂದು ಕರೆಯಲ್ಪಡುವ ಚಂಪೈ ಸೊರೆನ್ 1990 ರ ದಶಕದಲ್ಲಿ ಪ್ರತ್ಯೇಕ ಜಾರ್ಖಂಡ್ ರಾಜ್ಯ ರಚನೆಯ ಹೋರಾಟದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದರು. ಕೃಷಿಕ ಕುಟುಂಬದಲ್ಲಿ ಜನಿಸಿದ ಚಂಪೈ ಸೊರೆನ್ ತಮ್ಮ ಆರಂಭಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಪಡೆದರು ಮತ್ತು 10 ನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದಾರೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ದೊಂದಿಗೆ ತನ್ನನ್ನು ತಾನು ಹೊಂದಿಕೊಂಡು ಪ್ರತ್ಯೇಕ ಜಾರ್ಖಂಡ್ ಬೇಡಿಕೆಯ ಸಮಯದಲ್ಲಿ ಅವರ ರಾಜಕೀಯ ಜೀವನ ಪ್ರಾರಂಭವಾಯಿತು. ಅವರು ಜೆಎಂಎಂ ಅಧ್ಯಕ್ಷ ಶಿಬು ಸೊರೇನ್ ಅವರ ನಿಷ್ಠಾವಂತರು ಎಂದು ಹೇಳಲಾಗುತ್ತದೆ.

81 ಸದಸ್ಯರ ಜಾರ್ಖಂಡ್ ಅಸೆಂಬ್ಲಿಯಲ್ಲಿ, ಜೆಎಂಎಂ ನೇತೃತ್ವದ ಮೈತ್ರಿಕೂಟವು 47 ಶಾಸಕರನ್ನು ಹೊಂದಿದ್ದು, ಜೆಎಂಎಂನಿಂದ 29, ಕಾಂಗ್ರೆಸ್‌ನಿಂದ 17 ಮತ್ತು ಆರ್‌ಜೆಡಿಯ ಒಬ್ಬರು ಶಾಸಕರಿದ್ದಾರೆ. ಬಿಜೆಪಿ 26 ಸದಸ್ಯರನ್ನು ಹೊಂದಿದ್ದರೆ, ಎಜೆಎಸ್‌ಯು ಪಕ್ಷವು ಮೂರು ಸದಸ್ಯರನ್ನು ಹೊಂದಿದೆ. ಹೆಚ್ಚುವರಿಯಾಗಿ, ಎನ್‌ಸಿಪಿ ಮತ್ತು ಸಿಪಿಐ (ಎಂಎಲ್) ತಲಾ ಒಬ್ಬ ಶಾಸಕರನ್ನು ಮತ್ತು ಇಬ್ಬರು ಸ್ವತಂತ್ರರನ್ನು ಹೊಂದಿದೆ.

ಇದನ್ನೂ ಓದಿ; ಮನಿ ಲಾಂಡರಿಂಗ್ ಪ್ರಕರಣ: 5 ದಿನ ಇಡಿ ವಶಕ್ಕೆ ಮಾಜಿ ಸಿಎಂ ಹೇಮಂತ್ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...