Homeಮುಖಪುಟಪ್ರತ್ಯೇಕ ರಾಜ್ಯ ಹೋರಾಟದಿಂದ ಸಿಎಂ ಗಾದಿಯವರೆಗೆ; 'ಜಾರ್ಖಂಡ್ ಹುಲಿ' ಚಂಪೈ ಸೊರೇನ್

ಪ್ರತ್ಯೇಕ ರಾಜ್ಯ ಹೋರಾಟದಿಂದ ಸಿಎಂ ಗಾದಿಯವರೆಗೆ; ‘ಜಾರ್ಖಂಡ್ ಹುಲಿ’ ಚಂಪೈ ಸೊರೇನ್

- Advertisement -
- Advertisement -

ಅಕ್ರಮ ಭೂ ವರ್ಗಾವಣೆಯ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಯಕ ಬಂಧಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ ನಂತರ, ಪಕ್ಷವು ಸಾರಿಗೆ ಸಚಿವರಾಗಿದ್ದ ಚಂಪೈ ಸೊರೇನ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದೆ. ಜಾರ್ಖಂಡ್ ಪ್ರತ್ಯೇಕ ರಾಜ್ಯದ ಹೋರಾಟದಿಂದ ರಾಜಕೀಯ ಜೀವನ ಪ್ರವೇಶಿಸಿದ ಚಂಪೈ ಸೊರೇನ್ ಅವರಿಗೆ, ತಮ್ಮ ಸರ್ಕಾರದ ಬಹುಮತ ಸಾಬೀತುಪಡಿಸಲು 10 ದಿನಗಳ ಕಾಲಾವಕಾಶವಿದೆ.

67 ವರ್ಷದ ಚಂಪೈ ಸೊರೇನ್ ಅವರು 1990ರ ದಶಕದಲ್ಲಿ ಜಾರ್ಖಂಡ್ ರಾಜ್ಯವನ್ನು ರಚಿಸುವ ಹೋರಾಟಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು “ಜಾರ್ಖಂಡ್ ಹುಲಿ” ಎಂದು ಕರೆಯುತ್ತಾರೆ. ಇದೀಗ ಜಾರ್ಖಂಡ್ ರಾಜ್ಯದ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

90ರ ದಶಕದ ಆರಂಭದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮುಖ್ಯಸ್ಥ ಮತ್ತು ಹೇಮಂತ್ ಸೊರೇನ್ ಅವರ ತಂದೆ ಶಿಬು ಸೊರೇನ್ ಅವರೊಂದಿಗೆ ಚಂಪೈ ಕೆಲಸ ಮಾಡಲು ಪ್ರಾರಂಭಿಸಿದರು. 1991ರಲ್ಲಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಿ, ಸಾರೈಕೆಲಾ ಸ್ಥಾನವನ್ನು ಗೆಲ್ಲುವ ಮೂಲಕ ರಾಜಕೀಯ ಜೀವನವು ಪ್ರಾರಂಭವಾಯಿತು.

ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಉತ್ತೀರ್ಣರಾದ ಚಂಪೈ ಸೊರೇನ್ ಚಿಕ್ಕ ವಯಸ್ಸಿನಲ್ಲಿ ವಿವಾಹವಾದರು. ಅವರು ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ. ರಾಜಕೀಯಕ್ಕೆ ಸೇರುವ ಮೊದಲು, ಅವರು ತಮ್ಮ ತಂದೆ ಸಿಮಲ್ ಸೊರೇನ್ ಅವರೊಂದಿಗೆ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.

ಅವರು ಸೆಪ್ಟೆಂಬರ್ 2010 ಮತ್ತು ಜನವರಿ 2013 ರ ನಡುವೆ ಅರ್ಜುನ್ ಮುಂಡಾ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಹೇಮಂತ್ ಸೊರೇನ್ 2019ರಲ್ಲಿ ಅಧಿಕಾರಕ್ಕೆ ಬಂದ ನಂತರ, ಚಂಪೈ ಸೊರೇನ್ ಅವರು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಜತೆಗೆ ಸಾರಿಗೆ ಸಚಿವರಾದರು.

ಅವರು ಜಾರ್ಖಂಡ್‌ನ ಕೊಲ್ಹಾನ್ ಪ್ರದೇಶದ ಆರನೇ ಮುಖ್ಯಮಂತ್ರಿ, ರಾಝ್ಯದ 12ನೇ ಮುಖ್ಯಮಂತ್ರಿಯಾಗಿದ್ದಾರೆ. ಇದು ಪೂರ್ವ ಸಿಂಗ್‌ಭೂಮ್, ಪಶ್ಚಿಮ ಸಿಂಗ್‌ಭೂಮ್ ಮತ್ತು ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಗಳನ್ನು ಒಳಗೊಂಡಿದೆ. ಹಿಂದೆ ಜಾರ್ಖಂಡ್ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಅವರು ಪ್ರಮುಖ ಬುಡಕಟ್ಟು ನಾಯಕ ಮತ್ತು ರಾಜಕಾರಣಿ.

“ಜಾರ್ಖಂಡ್‌ನ ಹುಲಿ” ಎಂದು ಕರೆಯಲ್ಪಡುವ ಚಂಪೈ ಸೊರೆನ್ 1990 ರ ದಶಕದಲ್ಲಿ ಪ್ರತ್ಯೇಕ ಜಾರ್ಖಂಡ್ ರಾಜ್ಯ ರಚನೆಯ ಹೋರಾಟದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದರು. ಕೃಷಿಕ ಕುಟುಂಬದಲ್ಲಿ ಜನಿಸಿದ ಚಂಪೈ ಸೊರೆನ್ ತಮ್ಮ ಆರಂಭಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಪಡೆದರು ಮತ್ತು 10 ನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದಾರೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ದೊಂದಿಗೆ ತನ್ನನ್ನು ತಾನು ಹೊಂದಿಕೊಂಡು ಪ್ರತ್ಯೇಕ ಜಾರ್ಖಂಡ್ ಬೇಡಿಕೆಯ ಸಮಯದಲ್ಲಿ ಅವರ ರಾಜಕೀಯ ಜೀವನ ಪ್ರಾರಂಭವಾಯಿತು. ಅವರು ಜೆಎಂಎಂ ಅಧ್ಯಕ್ಷ ಶಿಬು ಸೊರೇನ್ ಅವರ ನಿಷ್ಠಾವಂತರು ಎಂದು ಹೇಳಲಾಗುತ್ತದೆ.

81 ಸದಸ್ಯರ ಜಾರ್ಖಂಡ್ ಅಸೆಂಬ್ಲಿಯಲ್ಲಿ, ಜೆಎಂಎಂ ನೇತೃತ್ವದ ಮೈತ್ರಿಕೂಟವು 47 ಶಾಸಕರನ್ನು ಹೊಂದಿದ್ದು, ಜೆಎಂಎಂನಿಂದ 29, ಕಾಂಗ್ರೆಸ್‌ನಿಂದ 17 ಮತ್ತು ಆರ್‌ಜೆಡಿಯ ಒಬ್ಬರು ಶಾಸಕರಿದ್ದಾರೆ. ಬಿಜೆಪಿ 26 ಸದಸ್ಯರನ್ನು ಹೊಂದಿದ್ದರೆ, ಎಜೆಎಸ್‌ಯು ಪಕ್ಷವು ಮೂರು ಸದಸ್ಯರನ್ನು ಹೊಂದಿದೆ. ಹೆಚ್ಚುವರಿಯಾಗಿ, ಎನ್‌ಸಿಪಿ ಮತ್ತು ಸಿಪಿಐ (ಎಂಎಲ್) ತಲಾ ಒಬ್ಬ ಶಾಸಕರನ್ನು ಮತ್ತು ಇಬ್ಬರು ಸ್ವತಂತ್ರರನ್ನು ಹೊಂದಿದೆ.

ಇದನ್ನೂ ಓದಿ; ಮನಿ ಲಾಂಡರಿಂಗ್ ಪ್ರಕರಣ: 5 ದಿನ ಇಡಿ ವಶಕ್ಕೆ ಮಾಜಿ ಸಿಎಂ ಹೇಮಂತ್ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...