Homeಅಂಕಣಗಳುಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

ಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

- Advertisement -
- Advertisement -

ಇಂದಿಗೆ ಸುಮಾರು 103 ವರ್ಷಗಳ ಹಿಂದೆ ಬ್ರಿಟಿಷ್ ಸರಕಾರ ಚಂಪಾರಣ ಕೃಷಿ ಕಾಯಿದೆ ತಂದಿತು. ಅದರ ಮೂಲ ಉದ್ದೇಶಗಳು ಎರಡು- ವಿವಾದಿತ ತೀನ್ ಕಥಿಯಾ ಉಳುಮೆ ಪದ್ಧತಿ ರದ್ದು ಮಾಡುವುದು ಹಾಗೂ ತಮಗೆ ಬೇಕಾದ ಬೆಳೆ ಬೆಳೆದುಕೊಳ್ಳಲು ರೈತರಿಗೆ ಸ್ವತಂತ್ರ ನೀಡುವುದು. ಇದು ಯಾಕ್ ಬಂತಪಾ ಅಂದ್ರ ಅದರ ಹಿಂದ ಎಂಟು ತಿಂಗಳ ರೈತರ ಹೋರಾಟ ಇತ್ತು. ಅದರ ಹಿಂದ ಸುಮಾರು ಒಂದು ಶತಮಾನದ ಶೋಷಣೆ ಇತ್ತು.

ಈಸ್ಟ್ ಇಂಡಿಯಾ ಕಂಪನಿ 1790ರೊಳಗ ಜಮೀನ್ದಾರಿ ಪದ್ಧತಿ ಜಾರಿಗೆ ತಂದಿತ್ತು. ಅದರ ಪ್ರಕಾರ ಊರಾಗಿನ ಎಲ್ಲಾ ಜಮೀನಿನ ಸುಂಕ ಒಂದೇ ಕುಟುಂಬದವರು ಕೊಡಬೇಕಾಗಿತ್ತು. ಈ ಸುಂಕ ಸುಲಿಗೆದಾರರು, ಇತರ ರೈತರಿಂದ ತೆರಿಗೆ ಸಂಗ್ರಹ ಮಾಡಿ, ಅದರಲ್ಲಿ ಸ್ವಲ್ಪ ಕಮಿಷನ್ ಮುರಕೊಂಡು ಬ್ರಿಟಿಷರಿಗೆ ಕೊಡಬೇಕಾಗಿತ್ತು.

ಆ ತೆರಿಗೆ ಕಟ್ಟುವ ಮುನೀಂ-ಮುನ್ಷಿಗಳು ಸಣ್ಣ ಸಣ್ಣ ರೈತರ ಜೊತೆ ಏನು ವ್ಯವಹಾರ ಮಾಡೋದು ಬಿಡು ಅಂತ ಹೇಳಿ ಜಾರಡಿನ ಮತೆಸೊನ, ಈ. ಪಬಾನೆ, ಸಸೂನ, ವಾಡಿಯಾ, ಸ್ವೈರನಂತಾ ದೊಡ್ಡ ದೊಡ್ಡ ಕೆಮಿಕಲ್ ಕಂಪನಿ ಜೊತೆಗೆ ಒಪ್ಪಂದ ಮಾಡಿಕೊಂಡರು. ಆ ಕಂಪನಿಗಳು ರೈತರ ಜೊತೆ ಒಪ್ಪಂದ ಮಾಡಿಕೊಂಡರು. ಅದಕ್ಕ ಅನುಕೂಲ ಆಗಲಿ ಅಂತ ಬಿಹಾರ, ಒರಿಸ್ಸಾ ಹಾಗೂ ಬಂಗಾಳ ರಾಜ್ಯಗಳ ಸರಕಾರಗಳು ತೀನ್ ಕಥಿಯ ನಿಯಮಗಳಿಗೆ ಒಪ್ಪಿಗೆ ನೀಡಿದವು. ತೀನ್ ಕಥಿಯ ಅಂದ್ರ ಪ್ರತಿ 10 ಎಕರೆ ಜಮೀನಿನ ಒಳಗ ಮೂರು ಎಕರೆ ಇಂಡಿಗೋ ನೀಲಿ ಬೆಳಿ ಬೆಳಿಯಬೇಕು. ಇದು ಕಡ್ಡಾಯ. ಇದಕ್ಕೆ ತಪ್ಪಿದರೆ ಜಮೀನುದಾರ, ಗುಮಾಸ್ತ ಹಾಗೂ ಕಂಪನೀ ಸರಕಾರ ಅವರಿಗೆ ಶಿಕ್ಷೆ ಕೊಡಬಹುದಾಗಿತ್ತು. ನೀಲಿ ಗಿಡದಿಂದ ನೀಲಿ ಬಣ್ಣ ತಯಾರು ಆಗುತ್ತಿತ್ತು.

ಅಷ್ಟರಾಗ ಜರ್ಮನಿ ವಿಜ್ಞಾನಿಗಳು 1901ಕ್ಕ ಒಂದು ಕೃತಕ ನೀಲಿ ಬಣ್ಣ ಕಂಡುಹಿಡಿದರು. ಆಗ ಇಂಡಿಗೋದ ಬೇಡಿಕೆ ಕಮ್ಮಿ ಆತು. ಬ್ರಿಟಿಷರ ಬೆಂಬಲಿತ ಕೆಮಿಕಲ್ ಕಂಪನಿಗಳು ರೈತರಿಗೆ ಕೊಡೋ ಹಣ ಕಮ್ಮಿ ಮಾಡಿದರು. 1910-1915ರ ನಡುವಿನ ಮೊದಲನೇ ಮಹಾಯುದ್ಧದ ಕಾಲಕ್ಕ ಮತ್ತೊಮ್ಮೆ ಇಂಡಿಗೋಗೆ ಬೆಲೆ ಬಂತು. ಅದರ ದುರಾಸೆಗೆ ಕಂಪನಿಗಳು ರೈತರಿಗೆ ಹೆಚ್ಚು ನೀಲಿ ಬೆಳಿಯಲಿಕ್ಕೆ ಒತ್ತಾಯ ಮಾಡಿದವು. ಒಲ್ಲೆ ಅಂದವರಿಗೆ ಹಿಂಸೆ ಕೊಟ್ಟರು. ಅವರ ಜಮೀನು ಕಸಗೊಂಡರು, ಜೈಲಿಗೆ ಹಾಕಿದರು.

ಮೋಹನ್ ದಾಸ್ ಗಾಂಧಿ ಅವರು ದಕ್ಷಿಣ ಆಫ್ರಿಕಾ ಬಿಟ್ಟು ಭಾರತಕ್ಕ 1915ಕ್ಕ ಬಂದಿದ್ದರು. ಅವರನ್ನ ಕಾಂಗ್ರೆಸ್ ಸಮಾವೇಶದೊಳಗ ಭೇಟಿ ಮಾಡಿದ ಚಂಪಾರಣದ ರಾಜ್‌ಕುಮಾರ್ ಶುಕ್ಲ ಹಾಗೂ ಸಂತ ರಾವುತ ಅನ್ನುವ ಇಬ್ಬರು ಕಾರ್ಯಕರ್ತರು ನಮ್ಮೂರಿಗೆ ಬನ್ನಿ, ಅಲ್ಲಿ ರೈತರು ಸಂಕಷ್ಟದೊಳಗ ಅದಾರು, ಅವರಿಗೆ ಒಂದು ಹೋರಾಟ ರೂಪಿಸಿಕೊಡರಿ ಅಂತ ಕೇಳಿದರು. ಒಂದು ವರ್ಷದ ನಂತರ ಗಾಂಧೀಜಿ ಅಲ್ಲಿಗೆ ಹೋದರು. ಅಲ್ಲಿ ಅಸಹಕಾರ ಚಳವಳಿ ನಡೆಸಿ, ಜೈಲಿಗೆ ಹೋದರು. ಸುಮಾರು ಎಂಟು ತಿಂಗಳ ಕಾಲ ಅಲ್ಲಿ ಕೆಲಸ ಮಾಡಿದ್ದಕ್ಕ ಬ್ರಿಟಿಷರ ಮನಸ್ಸು ಕರಗಿತು. ಅವರು ಚಂಪಾರಣ ಕೃಷಿ ಕಾಯಿದೆ ರೂಪಿಸಿದರು. ತೀನ್ ಕಥಿಯಾ ನಿಯಮ ರದ್ದಾಗಿ ರೈತರು ತಮಗೆ ತಿಳಿದ ಬೆಲೆ ಬೆಳಿಯಲಿಕ್ಕೆ ಅವಕಾಶ ಮಾಡಿಕೊಟ್ಟರು.

ಈ ಹೋರಾಟದ ನಂತರ ಶುಕ್ಲ ಹಾಗೂ ರಾವುತ ಅವರು ಗಾಂಧಿಗೆ ಬಾಪು ಹಾಗೂ ಮಹಾತ್ಮ ಅಂತ ಕರೆದರು. ‘ಗಾಂಧಿ ಚಂಪಾರಣ—ತಿವನ್ನು ಬದಲು ಮಾಡಲಿಲ್ಲ. ಚಂಪಾರಣ ಗಾಂಧಿಯನ್ನು ಬದಲು ಮಾಡಿತು. ಸತ್ಯ ಹಾಗೂ ಅಹಿಂಸೆಯ ದಾರಿ ಅವರಿಗೆ ಕಾಯಂ ಆಗುವಂತೆ ಮಾಡಿತು’ ಅಂತ ಇತಿಹಾಸಕಾರ ಡೇವಿಡ್ ಅರ್ನಾಲ್ಡ್ ಹೇಳಿದರು.

ಇಷ್ಟು ಹೊತ್ತು ಕೇಳಿದ ಕತಿ ಒಂಥರಾ ಒಪ್ಪಂದ ಕೃಷಿಯ ಕತಿ ಕೇಳಿದ ಹಂಗ ಆತಲ್ಲಾ. ಈಗ ನೋಡ್ರಿ, ಕೇಂದ್ರ ಸರಕಾರದವರು ಮೂರು ಕೃಷಿ ಕಾನೂನು ಪಾಸು ಮಾಡಿದಾರು. ರಾಜ್ಯದವರು ಅವರಿಗೆ ಮುಂದ ಹೋಗಿ ಐದು ಕಾಯಿದೆ ಪಾಸು ಮಾಡಿದಾರು. ಇವು ರೈತರಿಗೆ ಅನುಕೂಲ. ಅವರ ಸ್ವಾತಂತ್ರ್ಯ ಹೆಚ್ಚಿಸಿ ಅವರ ಆದಾಯ ದುಪ್ಪಟ್ಟು ಮಾಡುವ ಕಾಯಿದೆ ಅಂತ ಹೇಳಿದಾರು. ಆದರ ಅವು ಆಳುವ ಪಕ್ಷದ ಗೆಳೆಯರ ಆದಾಯ ದುಪ್ಪಟ್ಟುಗಿಂತಲೂ ಹೆಚ್ಚು ಮಾಡಿದಾವು. ಅವರ ಸ್ವಾತಂತ್ರ್ಯವನ್ನು ಅತಿಯಾಗಿ ಜಾಸ್ತಿ ಮಾಡಿ ಅವರ ಮ್ಯಾಲೆ ಯಾವ ನಿಯಂತ್ರಣ ಇರಲಾರದ ಹಂಗ ಮಾಡಿಬಿಟ್ಟಾವು.

ಕೇಂದ್ರದವರು ಮಾಡಿದ ಕಾನೂನುಗಳು ಇಡೀ ದೇಶಕ್ಕೆ ದುಷ್ಪರಿಣಾಮ ಬೀರಿದರೂ ಸಹಿತ ಅವು ಕೇವಲ ಪಂಜಾಬಿನ ಸಮಸ್ಯೆ ಅಂತ ಕೆಲವರು ಅದನ್ನ ದುರ್ಲಕ್ಷ್ಯ ಮಾಡಿದಾರ. ಕರ್ನಾಟಕದ ಘನ ಸರಕಾರ ‘ಒಂದು ಜಿಲ್ಲೆಗೆ ಒಂದು ಪ್ರಮುಖ ಬೆಳೆ’ ಅಂತ ಹೇಳಿ ಒಂದು ಪಟ್ಟಿ ಹೊರಡಿಸಿಬಿಟ್ಟೆತಿ. ಕೇಂದ್ರದ ಒಪ್ಪಂದ ಕೃಷಿ ಕಾನೂನಿನಾಗ ಕಂಪನಿಗಳು ರೈತರಿಗೆ ಮೂಲ ಒಪ್ಪಂದದ ಪ್ರಕಾರ ಹಣ ಕೊಡದೆ ಹೋದರೆ ರೈತರು ಕೋರ್ಟಿಗೆ ಹೋಗಲಿಕ್ಕೆ ಬರೋದಿಲ್ಲ ಅಂತ ಒಂದು ಮಾತು ಐತಿ. ಅವರು ಉಪವಿಭಾಗ ಅಧಿಕಾರಿಯ ಮಂಡಳಿಗೆ ಆರ್ಜಿ ಸಲ್ಲಿಸಬೇಕು. ಅವರು ಆದೇಶ ನೀಡಬಹುದು, ಅಥವಾ ಪರ್ಯಾಯ ನ್ಯಾಯ ನಿರ್ಣಯದ ಮೂಲಕ ಅವರಿಗೆ ನಷ್ಟ ತುಂಬಿ ಕೊಡಬೇಕು ಅಂತ ಅದರಾಗ ಶಿಫಾರಸು ಐತಿ. ಭಾರತದ ಯಾವ ಉಪವಿಭಾಗ ಅಧಿಕಾರಿ, ಬಹು ರಾಷ್ಟ್ರೀಯ ಕಂಪನಿ ಅಥವಾ ಮದ್ದಾನಿ ಕಂಪನಿಗಳ ವಿರುದ್ಧ ಆದೇಶ ಪಾಸು ಮಾಡುವ ಧೈರ್ಯ ತೋರಸ್ತಾನ ಅನ್ನುವ ಪ್ರಶ್ನೆಗೆ ಅಲ್ಲಿ ಉತ್ತರ ಇಲ್ಲ.

ಇನ್ನೂ ರಾಜ್ಯ ಕೃಷಿ ಸಚಿವ ಬಸನಗೌಡ ಚನ್ನಬಸನಗೌಡ ಪಾಟೀಲ್ ಅವರು ಒನ್ ಜಿಲ್ಲಾ ಒನ್ ಕ್ರಾಪ್ ಅನ್ನೋದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ, ಅದರಿಂದ ರೈತರಿಗೆ ಒಳ್ಳೆ ಮಾರುಕಟ್ಟೆ ಸಿಗತದ ಅಂತ ಘೋಷಣೆ ಮಾಡಿದಾರು. ಅವರ ಪ್ರಕಾರ ಖರೀದಿ ಮಾಡುವನಿಗೆ ಅನುಕೂಲ ಮಾಡಿಕೊಟ್ಟರ ರೈತರಿಗೆ ಒಳ್ಳೆ ಬೆಲೆ ಕೊಟ್ಟ ಹಂಗ.

ಇದು ಲೆಕ್ಕಾಚಾರ ಏನಾದರೂ ತಪ್ಪಿದರ ಅನ್ನುವ ಪ್ರಶ್ನೆಗಳಿಗೆ ಅವರಲ್ಲಿ ಉತ್ತರ ಇಲ್ಲ. ಇದರಿಂದ ರೈತರಿಗೆ ತಮ್ಮ ಮನಸ್ಸಿನ ಬೆಳೆ ಬೆಳೆಯುವ ಸ್ವಾತಂತ್ರ್ಯ ತಪ್ಪಿ ಹೋಗತದ ಅನ್ನುವ ಸಂದೇಹಕ್ಕ ಅವರು ಪರಿಹಾರ ಸೂಚಿಸಿಲ್ಲ.

ಒಂದು ಜಿಲ್ಲೆಯ ಎಲ್ಲಾ ರೈತರು ಒಂದೇ ಬೆಳೆ ಬೆಳೆದರ ಕೀಟ ಬಾಧೆ ಕಾಡಬಹುದು ಅಂತ ಕೆಲವರು ತಜ್ಞರು ಹೇಳತಾರ. ಆದರ ಸರಕಾರ ಅದಕ್ಕ ಇನ್ನೂ ಉತ್ತರ ಕೊಡಲಿಕ್ಕೆ ಹತ್ತಿಲ್ಲ. ಮುಂದೆ ಒಂದು ದಿವಸ ಮದ್ದಾನೀ ಕಂಪನಿಗಳ ಕೀಟ ನಾಶಕ ಉಪಯೋಗಿಸಿರಿ ಅಂತ ಹೇಳಬಹುದು.

ಎಲ್ಲರೂ ಒಂದೇ ಬೆಳೆ ಬೆಳೆದರೆ ಪೂರೈಕೆ ಹಾಗೂ ಬೇಡಿಕೆಯ ತಕ್ಕಡಿ ಉಲ್ಟಾ ಆಗಿ ರೈತರಿಗೆ ಅನ್ಯಾಯ ಆಗಬಹುದು ಅನ್ನುವುದಕ್ಕೆ ಅವರಲ್ಲಿ ಉತ್ತರ ಇಲ್ಲ. ಸರ್ಕಾರದ ನಿಯಮದ ಪ್ರಕಾರ ಬೆಳೆ ಆಯ್ಕೆ ಮಾಡದೆ ಇತರ ಬೆಳೆ ಬೆಳೆದರೆ ಅವರಿಗೆ ಸರಕಾರದಿಂದ ಸಿಗೋ ಅನುಕೂಲಗಳು ಸಿಗೋದಿಲ್ಲ, ಸಾಲ ಸಿಗದೇ ಇರಬಹುದು, ಬೆಳೆ ವಿಮೆ ಸಿಗದೇ ಇರಬಹುದು ಅಂತ ಕೆಲವು ಏಜೆಂಟರು ಪಿಸುಗುಟ್ಟಲಿಕ್ಕೆ ಹತ್ತಿಬಿಟ್ಟಾರು.

ಚಂಪಾರಣ ಅಂದ್ರ ಸಂಪಿಗೆ ಬನ ಅಂತ. ಆ ಬನಕ್ಕೆ ಬೆಂಕಿ ಬಿದ್ದಾಗ ಅದನ್ನು ಆರಿಸಲು ಗಾಂಧಿ ಬಂದರು. ರೈತರು ಒಗ್ಗಟ್ಟು ತೋರಿಸಿ ಹೋರಾಟ ಮಾಡಿದರು. ಸೂರ್ಯ ಮುಳುಗದ ಸಾಮ್ರಾಜ್ಯದ ಈಸ್ಟ್ ಇಂಡಿಯಾ ಕಂಪನಿ ಮಂದಿಯ ಕಲ್ಲಿನ ಹೃದಯ ಕರಗಿಹೋತು. ರೈತರ ಬವಣೆ ತಪ್ಪಿಸಲು ಅವರು ಕಾನೂನು ಮಾಡಿದರು. ಈಗ ಗಾಂಧಿ ಇಲ್ಲ. ಸಂಪಿಗೆ ಬನದ ನೊಂದವರ ಹಾಡು ಕೇಳಿ ಕರಗುವ ಹೃದಯ ಇಂದಿನ ಆಳುವವರಿಗೆ ಇಲ್ಲ. ತಮ್ಮ ಗೆಳೆಯರಾಗಿರುವ ವೆಸ್ಟ್ ಇಂಡಿಯಾ ಕಂಪನಿಗಳಿಗೆ ಲುಕ್ಸಾನ ಆಗತದ ಅಂತ ಗೊತ್ತಾದರ ಸರಕಾರಗಳು ಯಾವ ಕಾನೂನನ್ನು ಕೂಡ ಬದಲು ಮಾಡೋ ಹಂಗ ಕಾಣೋದಿಲ್ಲಾ. ಈಗ ಸಂಪಿಗೆ ಬನದ ಹಾಡು ಹೇಳೋರು ಯಾರು? ಹೇಳಿದರೂ ಕೇಳೋರು ಯಾರು?


ಇದನ್ನೂ ಓದಿ: ರೈತ ವಿರೋಧಿ ಕಾಯಿದೆಗಳು: ಪ್ರಧಾನಿ ಮೋದಿ v/s ಮುಖ್ಯಮಂತ್ರಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...