Homeಅಂಕಣಗಳುಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

ಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

- Advertisement -
- Advertisement -

ಇಂದಿಗೆ ಸುಮಾರು 103 ವರ್ಷಗಳ ಹಿಂದೆ ಬ್ರಿಟಿಷ್ ಸರಕಾರ ಚಂಪಾರಣ ಕೃಷಿ ಕಾಯಿದೆ ತಂದಿತು. ಅದರ ಮೂಲ ಉದ್ದೇಶಗಳು ಎರಡು- ವಿವಾದಿತ ತೀನ್ ಕಥಿಯಾ ಉಳುಮೆ ಪದ್ಧತಿ ರದ್ದು ಮಾಡುವುದು ಹಾಗೂ ತಮಗೆ ಬೇಕಾದ ಬೆಳೆ ಬೆಳೆದುಕೊಳ್ಳಲು ರೈತರಿಗೆ ಸ್ವತಂತ್ರ ನೀಡುವುದು. ಇದು ಯಾಕ್ ಬಂತಪಾ ಅಂದ್ರ ಅದರ ಹಿಂದ ಎಂಟು ತಿಂಗಳ ರೈತರ ಹೋರಾಟ ಇತ್ತು. ಅದರ ಹಿಂದ ಸುಮಾರು ಒಂದು ಶತಮಾನದ ಶೋಷಣೆ ಇತ್ತು.

ಈಸ್ಟ್ ಇಂಡಿಯಾ ಕಂಪನಿ 1790ರೊಳಗ ಜಮೀನ್ದಾರಿ ಪದ್ಧತಿ ಜಾರಿಗೆ ತಂದಿತ್ತು. ಅದರ ಪ್ರಕಾರ ಊರಾಗಿನ ಎಲ್ಲಾ ಜಮೀನಿನ ಸುಂಕ ಒಂದೇ ಕುಟುಂಬದವರು ಕೊಡಬೇಕಾಗಿತ್ತು. ಈ ಸುಂಕ ಸುಲಿಗೆದಾರರು, ಇತರ ರೈತರಿಂದ ತೆರಿಗೆ ಸಂಗ್ರಹ ಮಾಡಿ, ಅದರಲ್ಲಿ ಸ್ವಲ್ಪ ಕಮಿಷನ್ ಮುರಕೊಂಡು ಬ್ರಿಟಿಷರಿಗೆ ಕೊಡಬೇಕಾಗಿತ್ತು.

ಆ ತೆರಿಗೆ ಕಟ್ಟುವ ಮುನೀಂ-ಮುನ್ಷಿಗಳು ಸಣ್ಣ ಸಣ್ಣ ರೈತರ ಜೊತೆ ಏನು ವ್ಯವಹಾರ ಮಾಡೋದು ಬಿಡು ಅಂತ ಹೇಳಿ ಜಾರಡಿನ ಮತೆಸೊನ, ಈ. ಪಬಾನೆ, ಸಸೂನ, ವಾಡಿಯಾ, ಸ್ವೈರನಂತಾ ದೊಡ್ಡ ದೊಡ್ಡ ಕೆಮಿಕಲ್ ಕಂಪನಿ ಜೊತೆಗೆ ಒಪ್ಪಂದ ಮಾಡಿಕೊಂಡರು. ಆ ಕಂಪನಿಗಳು ರೈತರ ಜೊತೆ ಒಪ್ಪಂದ ಮಾಡಿಕೊಂಡರು. ಅದಕ್ಕ ಅನುಕೂಲ ಆಗಲಿ ಅಂತ ಬಿಹಾರ, ಒರಿಸ್ಸಾ ಹಾಗೂ ಬಂಗಾಳ ರಾಜ್ಯಗಳ ಸರಕಾರಗಳು ತೀನ್ ಕಥಿಯ ನಿಯಮಗಳಿಗೆ ಒಪ್ಪಿಗೆ ನೀಡಿದವು. ತೀನ್ ಕಥಿಯ ಅಂದ್ರ ಪ್ರತಿ 10 ಎಕರೆ ಜಮೀನಿನ ಒಳಗ ಮೂರು ಎಕರೆ ಇಂಡಿಗೋ ನೀಲಿ ಬೆಳಿ ಬೆಳಿಯಬೇಕು. ಇದು ಕಡ್ಡಾಯ. ಇದಕ್ಕೆ ತಪ್ಪಿದರೆ ಜಮೀನುದಾರ, ಗುಮಾಸ್ತ ಹಾಗೂ ಕಂಪನೀ ಸರಕಾರ ಅವರಿಗೆ ಶಿಕ್ಷೆ ಕೊಡಬಹುದಾಗಿತ್ತು. ನೀಲಿ ಗಿಡದಿಂದ ನೀಲಿ ಬಣ್ಣ ತಯಾರು ಆಗುತ್ತಿತ್ತು.

ಅಷ್ಟರಾಗ ಜರ್ಮನಿ ವಿಜ್ಞಾನಿಗಳು 1901ಕ್ಕ ಒಂದು ಕೃತಕ ನೀಲಿ ಬಣ್ಣ ಕಂಡುಹಿಡಿದರು. ಆಗ ಇಂಡಿಗೋದ ಬೇಡಿಕೆ ಕಮ್ಮಿ ಆತು. ಬ್ರಿಟಿಷರ ಬೆಂಬಲಿತ ಕೆಮಿಕಲ್ ಕಂಪನಿಗಳು ರೈತರಿಗೆ ಕೊಡೋ ಹಣ ಕಮ್ಮಿ ಮಾಡಿದರು. 1910-1915ರ ನಡುವಿನ ಮೊದಲನೇ ಮಹಾಯುದ್ಧದ ಕಾಲಕ್ಕ ಮತ್ತೊಮ್ಮೆ ಇಂಡಿಗೋಗೆ ಬೆಲೆ ಬಂತು. ಅದರ ದುರಾಸೆಗೆ ಕಂಪನಿಗಳು ರೈತರಿಗೆ ಹೆಚ್ಚು ನೀಲಿ ಬೆಳಿಯಲಿಕ್ಕೆ ಒತ್ತಾಯ ಮಾಡಿದವು. ಒಲ್ಲೆ ಅಂದವರಿಗೆ ಹಿಂಸೆ ಕೊಟ್ಟರು. ಅವರ ಜಮೀನು ಕಸಗೊಂಡರು, ಜೈಲಿಗೆ ಹಾಕಿದರು.

ಮೋಹನ್ ದಾಸ್ ಗಾಂಧಿ ಅವರು ದಕ್ಷಿಣ ಆಫ್ರಿಕಾ ಬಿಟ್ಟು ಭಾರತಕ್ಕ 1915ಕ್ಕ ಬಂದಿದ್ದರು. ಅವರನ್ನ ಕಾಂಗ್ರೆಸ್ ಸಮಾವೇಶದೊಳಗ ಭೇಟಿ ಮಾಡಿದ ಚಂಪಾರಣದ ರಾಜ್‌ಕುಮಾರ್ ಶುಕ್ಲ ಹಾಗೂ ಸಂತ ರಾವುತ ಅನ್ನುವ ಇಬ್ಬರು ಕಾರ್ಯಕರ್ತರು ನಮ್ಮೂರಿಗೆ ಬನ್ನಿ, ಅಲ್ಲಿ ರೈತರು ಸಂಕಷ್ಟದೊಳಗ ಅದಾರು, ಅವರಿಗೆ ಒಂದು ಹೋರಾಟ ರೂಪಿಸಿಕೊಡರಿ ಅಂತ ಕೇಳಿದರು. ಒಂದು ವರ್ಷದ ನಂತರ ಗಾಂಧೀಜಿ ಅಲ್ಲಿಗೆ ಹೋದರು. ಅಲ್ಲಿ ಅಸಹಕಾರ ಚಳವಳಿ ನಡೆಸಿ, ಜೈಲಿಗೆ ಹೋದರು. ಸುಮಾರು ಎಂಟು ತಿಂಗಳ ಕಾಲ ಅಲ್ಲಿ ಕೆಲಸ ಮಾಡಿದ್ದಕ್ಕ ಬ್ರಿಟಿಷರ ಮನಸ್ಸು ಕರಗಿತು. ಅವರು ಚಂಪಾರಣ ಕೃಷಿ ಕಾಯಿದೆ ರೂಪಿಸಿದರು. ತೀನ್ ಕಥಿಯಾ ನಿಯಮ ರದ್ದಾಗಿ ರೈತರು ತಮಗೆ ತಿಳಿದ ಬೆಲೆ ಬೆಳಿಯಲಿಕ್ಕೆ ಅವಕಾಶ ಮಾಡಿಕೊಟ್ಟರು.

ಈ ಹೋರಾಟದ ನಂತರ ಶುಕ್ಲ ಹಾಗೂ ರಾವುತ ಅವರು ಗಾಂಧಿಗೆ ಬಾಪು ಹಾಗೂ ಮಹಾತ್ಮ ಅಂತ ಕರೆದರು. ‘ಗಾಂಧಿ ಚಂಪಾರಣ—ತಿವನ್ನು ಬದಲು ಮಾಡಲಿಲ್ಲ. ಚಂಪಾರಣ ಗಾಂಧಿಯನ್ನು ಬದಲು ಮಾಡಿತು. ಸತ್ಯ ಹಾಗೂ ಅಹಿಂಸೆಯ ದಾರಿ ಅವರಿಗೆ ಕಾಯಂ ಆಗುವಂತೆ ಮಾಡಿತು’ ಅಂತ ಇತಿಹಾಸಕಾರ ಡೇವಿಡ್ ಅರ್ನಾಲ್ಡ್ ಹೇಳಿದರು.

ಇಷ್ಟು ಹೊತ್ತು ಕೇಳಿದ ಕತಿ ಒಂಥರಾ ಒಪ್ಪಂದ ಕೃಷಿಯ ಕತಿ ಕೇಳಿದ ಹಂಗ ಆತಲ್ಲಾ. ಈಗ ನೋಡ್ರಿ, ಕೇಂದ್ರ ಸರಕಾರದವರು ಮೂರು ಕೃಷಿ ಕಾನೂನು ಪಾಸು ಮಾಡಿದಾರು. ರಾಜ್ಯದವರು ಅವರಿಗೆ ಮುಂದ ಹೋಗಿ ಐದು ಕಾಯಿದೆ ಪಾಸು ಮಾಡಿದಾರು. ಇವು ರೈತರಿಗೆ ಅನುಕೂಲ. ಅವರ ಸ್ವಾತಂತ್ರ್ಯ ಹೆಚ್ಚಿಸಿ ಅವರ ಆದಾಯ ದುಪ್ಪಟ್ಟು ಮಾಡುವ ಕಾಯಿದೆ ಅಂತ ಹೇಳಿದಾರು. ಆದರ ಅವು ಆಳುವ ಪಕ್ಷದ ಗೆಳೆಯರ ಆದಾಯ ದುಪ್ಪಟ್ಟುಗಿಂತಲೂ ಹೆಚ್ಚು ಮಾಡಿದಾವು. ಅವರ ಸ್ವಾತಂತ್ರ್ಯವನ್ನು ಅತಿಯಾಗಿ ಜಾಸ್ತಿ ಮಾಡಿ ಅವರ ಮ್ಯಾಲೆ ಯಾವ ನಿಯಂತ್ರಣ ಇರಲಾರದ ಹಂಗ ಮಾಡಿಬಿಟ್ಟಾವು.

ಕೇಂದ್ರದವರು ಮಾಡಿದ ಕಾನೂನುಗಳು ಇಡೀ ದೇಶಕ್ಕೆ ದುಷ್ಪರಿಣಾಮ ಬೀರಿದರೂ ಸಹಿತ ಅವು ಕೇವಲ ಪಂಜಾಬಿನ ಸಮಸ್ಯೆ ಅಂತ ಕೆಲವರು ಅದನ್ನ ದುರ್ಲಕ್ಷ್ಯ ಮಾಡಿದಾರ. ಕರ್ನಾಟಕದ ಘನ ಸರಕಾರ ‘ಒಂದು ಜಿಲ್ಲೆಗೆ ಒಂದು ಪ್ರಮುಖ ಬೆಳೆ’ ಅಂತ ಹೇಳಿ ಒಂದು ಪಟ್ಟಿ ಹೊರಡಿಸಿಬಿಟ್ಟೆತಿ. ಕೇಂದ್ರದ ಒಪ್ಪಂದ ಕೃಷಿ ಕಾನೂನಿನಾಗ ಕಂಪನಿಗಳು ರೈತರಿಗೆ ಮೂಲ ಒಪ್ಪಂದದ ಪ್ರಕಾರ ಹಣ ಕೊಡದೆ ಹೋದರೆ ರೈತರು ಕೋರ್ಟಿಗೆ ಹೋಗಲಿಕ್ಕೆ ಬರೋದಿಲ್ಲ ಅಂತ ಒಂದು ಮಾತು ಐತಿ. ಅವರು ಉಪವಿಭಾಗ ಅಧಿಕಾರಿಯ ಮಂಡಳಿಗೆ ಆರ್ಜಿ ಸಲ್ಲಿಸಬೇಕು. ಅವರು ಆದೇಶ ನೀಡಬಹುದು, ಅಥವಾ ಪರ್ಯಾಯ ನ್ಯಾಯ ನಿರ್ಣಯದ ಮೂಲಕ ಅವರಿಗೆ ನಷ್ಟ ತುಂಬಿ ಕೊಡಬೇಕು ಅಂತ ಅದರಾಗ ಶಿಫಾರಸು ಐತಿ. ಭಾರತದ ಯಾವ ಉಪವಿಭಾಗ ಅಧಿಕಾರಿ, ಬಹು ರಾಷ್ಟ್ರೀಯ ಕಂಪನಿ ಅಥವಾ ಮದ್ದಾನಿ ಕಂಪನಿಗಳ ವಿರುದ್ಧ ಆದೇಶ ಪಾಸು ಮಾಡುವ ಧೈರ್ಯ ತೋರಸ್ತಾನ ಅನ್ನುವ ಪ್ರಶ್ನೆಗೆ ಅಲ್ಲಿ ಉತ್ತರ ಇಲ್ಲ.

ಇನ್ನೂ ರಾಜ್ಯ ಕೃಷಿ ಸಚಿವ ಬಸನಗೌಡ ಚನ್ನಬಸನಗೌಡ ಪಾಟೀಲ್ ಅವರು ಒನ್ ಜಿಲ್ಲಾ ಒನ್ ಕ್ರಾಪ್ ಅನ್ನೋದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ, ಅದರಿಂದ ರೈತರಿಗೆ ಒಳ್ಳೆ ಮಾರುಕಟ್ಟೆ ಸಿಗತದ ಅಂತ ಘೋಷಣೆ ಮಾಡಿದಾರು. ಅವರ ಪ್ರಕಾರ ಖರೀದಿ ಮಾಡುವನಿಗೆ ಅನುಕೂಲ ಮಾಡಿಕೊಟ್ಟರ ರೈತರಿಗೆ ಒಳ್ಳೆ ಬೆಲೆ ಕೊಟ್ಟ ಹಂಗ.

ಇದು ಲೆಕ್ಕಾಚಾರ ಏನಾದರೂ ತಪ್ಪಿದರ ಅನ್ನುವ ಪ್ರಶ್ನೆಗಳಿಗೆ ಅವರಲ್ಲಿ ಉತ್ತರ ಇಲ್ಲ. ಇದರಿಂದ ರೈತರಿಗೆ ತಮ್ಮ ಮನಸ್ಸಿನ ಬೆಳೆ ಬೆಳೆಯುವ ಸ್ವಾತಂತ್ರ್ಯ ತಪ್ಪಿ ಹೋಗತದ ಅನ್ನುವ ಸಂದೇಹಕ್ಕ ಅವರು ಪರಿಹಾರ ಸೂಚಿಸಿಲ್ಲ.

ಒಂದು ಜಿಲ್ಲೆಯ ಎಲ್ಲಾ ರೈತರು ಒಂದೇ ಬೆಳೆ ಬೆಳೆದರ ಕೀಟ ಬಾಧೆ ಕಾಡಬಹುದು ಅಂತ ಕೆಲವರು ತಜ್ಞರು ಹೇಳತಾರ. ಆದರ ಸರಕಾರ ಅದಕ್ಕ ಇನ್ನೂ ಉತ್ತರ ಕೊಡಲಿಕ್ಕೆ ಹತ್ತಿಲ್ಲ. ಮುಂದೆ ಒಂದು ದಿವಸ ಮದ್ದಾನೀ ಕಂಪನಿಗಳ ಕೀಟ ನಾಶಕ ಉಪಯೋಗಿಸಿರಿ ಅಂತ ಹೇಳಬಹುದು.

ಎಲ್ಲರೂ ಒಂದೇ ಬೆಳೆ ಬೆಳೆದರೆ ಪೂರೈಕೆ ಹಾಗೂ ಬೇಡಿಕೆಯ ತಕ್ಕಡಿ ಉಲ್ಟಾ ಆಗಿ ರೈತರಿಗೆ ಅನ್ಯಾಯ ಆಗಬಹುದು ಅನ್ನುವುದಕ್ಕೆ ಅವರಲ್ಲಿ ಉತ್ತರ ಇಲ್ಲ. ಸರ್ಕಾರದ ನಿಯಮದ ಪ್ರಕಾರ ಬೆಳೆ ಆಯ್ಕೆ ಮಾಡದೆ ಇತರ ಬೆಳೆ ಬೆಳೆದರೆ ಅವರಿಗೆ ಸರಕಾರದಿಂದ ಸಿಗೋ ಅನುಕೂಲಗಳು ಸಿಗೋದಿಲ್ಲ, ಸಾಲ ಸಿಗದೇ ಇರಬಹುದು, ಬೆಳೆ ವಿಮೆ ಸಿಗದೇ ಇರಬಹುದು ಅಂತ ಕೆಲವು ಏಜೆಂಟರು ಪಿಸುಗುಟ್ಟಲಿಕ್ಕೆ ಹತ್ತಿಬಿಟ್ಟಾರು.

ಚಂಪಾರಣ ಅಂದ್ರ ಸಂಪಿಗೆ ಬನ ಅಂತ. ಆ ಬನಕ್ಕೆ ಬೆಂಕಿ ಬಿದ್ದಾಗ ಅದನ್ನು ಆರಿಸಲು ಗಾಂಧಿ ಬಂದರು. ರೈತರು ಒಗ್ಗಟ್ಟು ತೋರಿಸಿ ಹೋರಾಟ ಮಾಡಿದರು. ಸೂರ್ಯ ಮುಳುಗದ ಸಾಮ್ರಾಜ್ಯದ ಈಸ್ಟ್ ಇಂಡಿಯಾ ಕಂಪನಿ ಮಂದಿಯ ಕಲ್ಲಿನ ಹೃದಯ ಕರಗಿಹೋತು. ರೈತರ ಬವಣೆ ತಪ್ಪಿಸಲು ಅವರು ಕಾನೂನು ಮಾಡಿದರು. ಈಗ ಗಾಂಧಿ ಇಲ್ಲ. ಸಂಪಿಗೆ ಬನದ ನೊಂದವರ ಹಾಡು ಕೇಳಿ ಕರಗುವ ಹೃದಯ ಇಂದಿನ ಆಳುವವರಿಗೆ ಇಲ್ಲ. ತಮ್ಮ ಗೆಳೆಯರಾಗಿರುವ ವೆಸ್ಟ್ ಇಂಡಿಯಾ ಕಂಪನಿಗಳಿಗೆ ಲುಕ್ಸಾನ ಆಗತದ ಅಂತ ಗೊತ್ತಾದರ ಸರಕಾರಗಳು ಯಾವ ಕಾನೂನನ್ನು ಕೂಡ ಬದಲು ಮಾಡೋ ಹಂಗ ಕಾಣೋದಿಲ್ಲಾ. ಈಗ ಸಂಪಿಗೆ ಬನದ ಹಾಡು ಹೇಳೋರು ಯಾರು? ಹೇಳಿದರೂ ಕೇಳೋರು ಯಾರು?


ಇದನ್ನೂ ಓದಿ: ರೈತ ವಿರೋಧಿ ಕಾಯಿದೆಗಳು: ಪ್ರಧಾನಿ ಮೋದಿ v/s ಮುಖ್ಯಮಂತ್ರಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...