Homeಅಂಕಣಗಳುಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

ಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

- Advertisement -
- Advertisement -

ಇಂದಿಗೆ ಸುಮಾರು 103 ವರ್ಷಗಳ ಹಿಂದೆ ಬ್ರಿಟಿಷ್ ಸರಕಾರ ಚಂಪಾರಣ ಕೃಷಿ ಕಾಯಿದೆ ತಂದಿತು. ಅದರ ಮೂಲ ಉದ್ದೇಶಗಳು ಎರಡು- ವಿವಾದಿತ ತೀನ್ ಕಥಿಯಾ ಉಳುಮೆ ಪದ್ಧತಿ ರದ್ದು ಮಾಡುವುದು ಹಾಗೂ ತಮಗೆ ಬೇಕಾದ ಬೆಳೆ ಬೆಳೆದುಕೊಳ್ಳಲು ರೈತರಿಗೆ ಸ್ವತಂತ್ರ ನೀಡುವುದು. ಇದು ಯಾಕ್ ಬಂತಪಾ ಅಂದ್ರ ಅದರ ಹಿಂದ ಎಂಟು ತಿಂಗಳ ರೈತರ ಹೋರಾಟ ಇತ್ತು. ಅದರ ಹಿಂದ ಸುಮಾರು ಒಂದು ಶತಮಾನದ ಶೋಷಣೆ ಇತ್ತು.

ಈಸ್ಟ್ ಇಂಡಿಯಾ ಕಂಪನಿ 1790ರೊಳಗ ಜಮೀನ್ದಾರಿ ಪದ್ಧತಿ ಜಾರಿಗೆ ತಂದಿತ್ತು. ಅದರ ಪ್ರಕಾರ ಊರಾಗಿನ ಎಲ್ಲಾ ಜಮೀನಿನ ಸುಂಕ ಒಂದೇ ಕುಟುಂಬದವರು ಕೊಡಬೇಕಾಗಿತ್ತು. ಈ ಸುಂಕ ಸುಲಿಗೆದಾರರು, ಇತರ ರೈತರಿಂದ ತೆರಿಗೆ ಸಂಗ್ರಹ ಮಾಡಿ, ಅದರಲ್ಲಿ ಸ್ವಲ್ಪ ಕಮಿಷನ್ ಮುರಕೊಂಡು ಬ್ರಿಟಿಷರಿಗೆ ಕೊಡಬೇಕಾಗಿತ್ತು.

ಆ ತೆರಿಗೆ ಕಟ್ಟುವ ಮುನೀಂ-ಮುನ್ಷಿಗಳು ಸಣ್ಣ ಸಣ್ಣ ರೈತರ ಜೊತೆ ಏನು ವ್ಯವಹಾರ ಮಾಡೋದು ಬಿಡು ಅಂತ ಹೇಳಿ ಜಾರಡಿನ ಮತೆಸೊನ, ಈ. ಪಬಾನೆ, ಸಸೂನ, ವಾಡಿಯಾ, ಸ್ವೈರನಂತಾ ದೊಡ್ಡ ದೊಡ್ಡ ಕೆಮಿಕಲ್ ಕಂಪನಿ ಜೊತೆಗೆ ಒಪ್ಪಂದ ಮಾಡಿಕೊಂಡರು. ಆ ಕಂಪನಿಗಳು ರೈತರ ಜೊತೆ ಒಪ್ಪಂದ ಮಾಡಿಕೊಂಡರು. ಅದಕ್ಕ ಅನುಕೂಲ ಆಗಲಿ ಅಂತ ಬಿಹಾರ, ಒರಿಸ್ಸಾ ಹಾಗೂ ಬಂಗಾಳ ರಾಜ್ಯಗಳ ಸರಕಾರಗಳು ತೀನ್ ಕಥಿಯ ನಿಯಮಗಳಿಗೆ ಒಪ್ಪಿಗೆ ನೀಡಿದವು. ತೀನ್ ಕಥಿಯ ಅಂದ್ರ ಪ್ರತಿ 10 ಎಕರೆ ಜಮೀನಿನ ಒಳಗ ಮೂರು ಎಕರೆ ಇಂಡಿಗೋ ನೀಲಿ ಬೆಳಿ ಬೆಳಿಯಬೇಕು. ಇದು ಕಡ್ಡಾಯ. ಇದಕ್ಕೆ ತಪ್ಪಿದರೆ ಜಮೀನುದಾರ, ಗುಮಾಸ್ತ ಹಾಗೂ ಕಂಪನೀ ಸರಕಾರ ಅವರಿಗೆ ಶಿಕ್ಷೆ ಕೊಡಬಹುದಾಗಿತ್ತು. ನೀಲಿ ಗಿಡದಿಂದ ನೀಲಿ ಬಣ್ಣ ತಯಾರು ಆಗುತ್ತಿತ್ತು.

ಅಷ್ಟರಾಗ ಜರ್ಮನಿ ವಿಜ್ಞಾನಿಗಳು 1901ಕ್ಕ ಒಂದು ಕೃತಕ ನೀಲಿ ಬಣ್ಣ ಕಂಡುಹಿಡಿದರು. ಆಗ ಇಂಡಿಗೋದ ಬೇಡಿಕೆ ಕಮ್ಮಿ ಆತು. ಬ್ರಿಟಿಷರ ಬೆಂಬಲಿತ ಕೆಮಿಕಲ್ ಕಂಪನಿಗಳು ರೈತರಿಗೆ ಕೊಡೋ ಹಣ ಕಮ್ಮಿ ಮಾಡಿದರು. 1910-1915ರ ನಡುವಿನ ಮೊದಲನೇ ಮಹಾಯುದ್ಧದ ಕಾಲಕ್ಕ ಮತ್ತೊಮ್ಮೆ ಇಂಡಿಗೋಗೆ ಬೆಲೆ ಬಂತು. ಅದರ ದುರಾಸೆಗೆ ಕಂಪನಿಗಳು ರೈತರಿಗೆ ಹೆಚ್ಚು ನೀಲಿ ಬೆಳಿಯಲಿಕ್ಕೆ ಒತ್ತಾಯ ಮಾಡಿದವು. ಒಲ್ಲೆ ಅಂದವರಿಗೆ ಹಿಂಸೆ ಕೊಟ್ಟರು. ಅವರ ಜಮೀನು ಕಸಗೊಂಡರು, ಜೈಲಿಗೆ ಹಾಕಿದರು.

ಮೋಹನ್ ದಾಸ್ ಗಾಂಧಿ ಅವರು ದಕ್ಷಿಣ ಆಫ್ರಿಕಾ ಬಿಟ್ಟು ಭಾರತಕ್ಕ 1915ಕ್ಕ ಬಂದಿದ್ದರು. ಅವರನ್ನ ಕಾಂಗ್ರೆಸ್ ಸಮಾವೇಶದೊಳಗ ಭೇಟಿ ಮಾಡಿದ ಚಂಪಾರಣದ ರಾಜ್‌ಕುಮಾರ್ ಶುಕ್ಲ ಹಾಗೂ ಸಂತ ರಾವುತ ಅನ್ನುವ ಇಬ್ಬರು ಕಾರ್ಯಕರ್ತರು ನಮ್ಮೂರಿಗೆ ಬನ್ನಿ, ಅಲ್ಲಿ ರೈತರು ಸಂಕಷ್ಟದೊಳಗ ಅದಾರು, ಅವರಿಗೆ ಒಂದು ಹೋರಾಟ ರೂಪಿಸಿಕೊಡರಿ ಅಂತ ಕೇಳಿದರು. ಒಂದು ವರ್ಷದ ನಂತರ ಗಾಂಧೀಜಿ ಅಲ್ಲಿಗೆ ಹೋದರು. ಅಲ್ಲಿ ಅಸಹಕಾರ ಚಳವಳಿ ನಡೆಸಿ, ಜೈಲಿಗೆ ಹೋದರು. ಸುಮಾರು ಎಂಟು ತಿಂಗಳ ಕಾಲ ಅಲ್ಲಿ ಕೆಲಸ ಮಾಡಿದ್ದಕ್ಕ ಬ್ರಿಟಿಷರ ಮನಸ್ಸು ಕರಗಿತು. ಅವರು ಚಂಪಾರಣ ಕೃಷಿ ಕಾಯಿದೆ ರೂಪಿಸಿದರು. ತೀನ್ ಕಥಿಯಾ ನಿಯಮ ರದ್ದಾಗಿ ರೈತರು ತಮಗೆ ತಿಳಿದ ಬೆಲೆ ಬೆಳಿಯಲಿಕ್ಕೆ ಅವಕಾಶ ಮಾಡಿಕೊಟ್ಟರು.

ಈ ಹೋರಾಟದ ನಂತರ ಶುಕ್ಲ ಹಾಗೂ ರಾವುತ ಅವರು ಗಾಂಧಿಗೆ ಬಾಪು ಹಾಗೂ ಮಹಾತ್ಮ ಅಂತ ಕರೆದರು. ‘ಗಾಂಧಿ ಚಂಪಾರಣ—ತಿವನ್ನು ಬದಲು ಮಾಡಲಿಲ್ಲ. ಚಂಪಾರಣ ಗಾಂಧಿಯನ್ನು ಬದಲು ಮಾಡಿತು. ಸತ್ಯ ಹಾಗೂ ಅಹಿಂಸೆಯ ದಾರಿ ಅವರಿಗೆ ಕಾಯಂ ಆಗುವಂತೆ ಮಾಡಿತು’ ಅಂತ ಇತಿಹಾಸಕಾರ ಡೇವಿಡ್ ಅರ್ನಾಲ್ಡ್ ಹೇಳಿದರು.

ಇಷ್ಟು ಹೊತ್ತು ಕೇಳಿದ ಕತಿ ಒಂಥರಾ ಒಪ್ಪಂದ ಕೃಷಿಯ ಕತಿ ಕೇಳಿದ ಹಂಗ ಆತಲ್ಲಾ. ಈಗ ನೋಡ್ರಿ, ಕೇಂದ್ರ ಸರಕಾರದವರು ಮೂರು ಕೃಷಿ ಕಾನೂನು ಪಾಸು ಮಾಡಿದಾರು. ರಾಜ್ಯದವರು ಅವರಿಗೆ ಮುಂದ ಹೋಗಿ ಐದು ಕಾಯಿದೆ ಪಾಸು ಮಾಡಿದಾರು. ಇವು ರೈತರಿಗೆ ಅನುಕೂಲ. ಅವರ ಸ್ವಾತಂತ್ರ್ಯ ಹೆಚ್ಚಿಸಿ ಅವರ ಆದಾಯ ದುಪ್ಪಟ್ಟು ಮಾಡುವ ಕಾಯಿದೆ ಅಂತ ಹೇಳಿದಾರು. ಆದರ ಅವು ಆಳುವ ಪಕ್ಷದ ಗೆಳೆಯರ ಆದಾಯ ದುಪ್ಪಟ್ಟುಗಿಂತಲೂ ಹೆಚ್ಚು ಮಾಡಿದಾವು. ಅವರ ಸ್ವಾತಂತ್ರ್ಯವನ್ನು ಅತಿಯಾಗಿ ಜಾಸ್ತಿ ಮಾಡಿ ಅವರ ಮ್ಯಾಲೆ ಯಾವ ನಿಯಂತ್ರಣ ಇರಲಾರದ ಹಂಗ ಮಾಡಿಬಿಟ್ಟಾವು.

ಕೇಂದ್ರದವರು ಮಾಡಿದ ಕಾನೂನುಗಳು ಇಡೀ ದೇಶಕ್ಕೆ ದುಷ್ಪರಿಣಾಮ ಬೀರಿದರೂ ಸಹಿತ ಅವು ಕೇವಲ ಪಂಜಾಬಿನ ಸಮಸ್ಯೆ ಅಂತ ಕೆಲವರು ಅದನ್ನ ದುರ್ಲಕ್ಷ್ಯ ಮಾಡಿದಾರ. ಕರ್ನಾಟಕದ ಘನ ಸರಕಾರ ‘ಒಂದು ಜಿಲ್ಲೆಗೆ ಒಂದು ಪ್ರಮುಖ ಬೆಳೆ’ ಅಂತ ಹೇಳಿ ಒಂದು ಪಟ್ಟಿ ಹೊರಡಿಸಿಬಿಟ್ಟೆತಿ. ಕೇಂದ್ರದ ಒಪ್ಪಂದ ಕೃಷಿ ಕಾನೂನಿನಾಗ ಕಂಪನಿಗಳು ರೈತರಿಗೆ ಮೂಲ ಒಪ್ಪಂದದ ಪ್ರಕಾರ ಹಣ ಕೊಡದೆ ಹೋದರೆ ರೈತರು ಕೋರ್ಟಿಗೆ ಹೋಗಲಿಕ್ಕೆ ಬರೋದಿಲ್ಲ ಅಂತ ಒಂದು ಮಾತು ಐತಿ. ಅವರು ಉಪವಿಭಾಗ ಅಧಿಕಾರಿಯ ಮಂಡಳಿಗೆ ಆರ್ಜಿ ಸಲ್ಲಿಸಬೇಕು. ಅವರು ಆದೇಶ ನೀಡಬಹುದು, ಅಥವಾ ಪರ್ಯಾಯ ನ್ಯಾಯ ನಿರ್ಣಯದ ಮೂಲಕ ಅವರಿಗೆ ನಷ್ಟ ತುಂಬಿ ಕೊಡಬೇಕು ಅಂತ ಅದರಾಗ ಶಿಫಾರಸು ಐತಿ. ಭಾರತದ ಯಾವ ಉಪವಿಭಾಗ ಅಧಿಕಾರಿ, ಬಹು ರಾಷ್ಟ್ರೀಯ ಕಂಪನಿ ಅಥವಾ ಮದ್ದಾನಿ ಕಂಪನಿಗಳ ವಿರುದ್ಧ ಆದೇಶ ಪಾಸು ಮಾಡುವ ಧೈರ್ಯ ತೋರಸ್ತಾನ ಅನ್ನುವ ಪ್ರಶ್ನೆಗೆ ಅಲ್ಲಿ ಉತ್ತರ ಇಲ್ಲ.

ಇನ್ನೂ ರಾಜ್ಯ ಕೃಷಿ ಸಚಿವ ಬಸನಗೌಡ ಚನ್ನಬಸನಗೌಡ ಪಾಟೀಲ್ ಅವರು ಒನ್ ಜಿಲ್ಲಾ ಒನ್ ಕ್ರಾಪ್ ಅನ್ನೋದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ, ಅದರಿಂದ ರೈತರಿಗೆ ಒಳ್ಳೆ ಮಾರುಕಟ್ಟೆ ಸಿಗತದ ಅಂತ ಘೋಷಣೆ ಮಾಡಿದಾರು. ಅವರ ಪ್ರಕಾರ ಖರೀದಿ ಮಾಡುವನಿಗೆ ಅನುಕೂಲ ಮಾಡಿಕೊಟ್ಟರ ರೈತರಿಗೆ ಒಳ್ಳೆ ಬೆಲೆ ಕೊಟ್ಟ ಹಂಗ.

ಇದು ಲೆಕ್ಕಾಚಾರ ಏನಾದರೂ ತಪ್ಪಿದರ ಅನ್ನುವ ಪ್ರಶ್ನೆಗಳಿಗೆ ಅವರಲ್ಲಿ ಉತ್ತರ ಇಲ್ಲ. ಇದರಿಂದ ರೈತರಿಗೆ ತಮ್ಮ ಮನಸ್ಸಿನ ಬೆಳೆ ಬೆಳೆಯುವ ಸ್ವಾತಂತ್ರ್ಯ ತಪ್ಪಿ ಹೋಗತದ ಅನ್ನುವ ಸಂದೇಹಕ್ಕ ಅವರು ಪರಿಹಾರ ಸೂಚಿಸಿಲ್ಲ.

ಒಂದು ಜಿಲ್ಲೆಯ ಎಲ್ಲಾ ರೈತರು ಒಂದೇ ಬೆಳೆ ಬೆಳೆದರ ಕೀಟ ಬಾಧೆ ಕಾಡಬಹುದು ಅಂತ ಕೆಲವರು ತಜ್ಞರು ಹೇಳತಾರ. ಆದರ ಸರಕಾರ ಅದಕ್ಕ ಇನ್ನೂ ಉತ್ತರ ಕೊಡಲಿಕ್ಕೆ ಹತ್ತಿಲ್ಲ. ಮುಂದೆ ಒಂದು ದಿವಸ ಮದ್ದಾನೀ ಕಂಪನಿಗಳ ಕೀಟ ನಾಶಕ ಉಪಯೋಗಿಸಿರಿ ಅಂತ ಹೇಳಬಹುದು.

ಎಲ್ಲರೂ ಒಂದೇ ಬೆಳೆ ಬೆಳೆದರೆ ಪೂರೈಕೆ ಹಾಗೂ ಬೇಡಿಕೆಯ ತಕ್ಕಡಿ ಉಲ್ಟಾ ಆಗಿ ರೈತರಿಗೆ ಅನ್ಯಾಯ ಆಗಬಹುದು ಅನ್ನುವುದಕ್ಕೆ ಅವರಲ್ಲಿ ಉತ್ತರ ಇಲ್ಲ. ಸರ್ಕಾರದ ನಿಯಮದ ಪ್ರಕಾರ ಬೆಳೆ ಆಯ್ಕೆ ಮಾಡದೆ ಇತರ ಬೆಳೆ ಬೆಳೆದರೆ ಅವರಿಗೆ ಸರಕಾರದಿಂದ ಸಿಗೋ ಅನುಕೂಲಗಳು ಸಿಗೋದಿಲ್ಲ, ಸಾಲ ಸಿಗದೇ ಇರಬಹುದು, ಬೆಳೆ ವಿಮೆ ಸಿಗದೇ ಇರಬಹುದು ಅಂತ ಕೆಲವು ಏಜೆಂಟರು ಪಿಸುಗುಟ್ಟಲಿಕ್ಕೆ ಹತ್ತಿಬಿಟ್ಟಾರು.

ಚಂಪಾರಣ ಅಂದ್ರ ಸಂಪಿಗೆ ಬನ ಅಂತ. ಆ ಬನಕ್ಕೆ ಬೆಂಕಿ ಬಿದ್ದಾಗ ಅದನ್ನು ಆರಿಸಲು ಗಾಂಧಿ ಬಂದರು. ರೈತರು ಒಗ್ಗಟ್ಟು ತೋರಿಸಿ ಹೋರಾಟ ಮಾಡಿದರು. ಸೂರ್ಯ ಮುಳುಗದ ಸಾಮ್ರಾಜ್ಯದ ಈಸ್ಟ್ ಇಂಡಿಯಾ ಕಂಪನಿ ಮಂದಿಯ ಕಲ್ಲಿನ ಹೃದಯ ಕರಗಿಹೋತು. ರೈತರ ಬವಣೆ ತಪ್ಪಿಸಲು ಅವರು ಕಾನೂನು ಮಾಡಿದರು. ಈಗ ಗಾಂಧಿ ಇಲ್ಲ. ಸಂಪಿಗೆ ಬನದ ನೊಂದವರ ಹಾಡು ಕೇಳಿ ಕರಗುವ ಹೃದಯ ಇಂದಿನ ಆಳುವವರಿಗೆ ಇಲ್ಲ. ತಮ್ಮ ಗೆಳೆಯರಾಗಿರುವ ವೆಸ್ಟ್ ಇಂಡಿಯಾ ಕಂಪನಿಗಳಿಗೆ ಲುಕ್ಸಾನ ಆಗತದ ಅಂತ ಗೊತ್ತಾದರ ಸರಕಾರಗಳು ಯಾವ ಕಾನೂನನ್ನು ಕೂಡ ಬದಲು ಮಾಡೋ ಹಂಗ ಕಾಣೋದಿಲ್ಲಾ. ಈಗ ಸಂಪಿಗೆ ಬನದ ಹಾಡು ಹೇಳೋರು ಯಾರು? ಹೇಳಿದರೂ ಕೇಳೋರು ಯಾರು?


ಇದನ್ನೂ ಓದಿ: ರೈತ ವಿರೋಧಿ ಕಾಯಿದೆಗಳು: ಪ್ರಧಾನಿ ಮೋದಿ v/s ಮುಖ್ಯಮಂತ್ರಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...