Homeಅಂಕಣಗಳುಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

ಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

- Advertisement -
- Advertisement -

ಇಂದಿಗೆ ಸುಮಾರು 103 ವರ್ಷಗಳ ಹಿಂದೆ ಬ್ರಿಟಿಷ್ ಸರಕಾರ ಚಂಪಾರಣ ಕೃಷಿ ಕಾಯಿದೆ ತಂದಿತು. ಅದರ ಮೂಲ ಉದ್ದೇಶಗಳು ಎರಡು- ವಿವಾದಿತ ತೀನ್ ಕಥಿಯಾ ಉಳುಮೆ ಪದ್ಧತಿ ರದ್ದು ಮಾಡುವುದು ಹಾಗೂ ತಮಗೆ ಬೇಕಾದ ಬೆಳೆ ಬೆಳೆದುಕೊಳ್ಳಲು ರೈತರಿಗೆ ಸ್ವತಂತ್ರ ನೀಡುವುದು. ಇದು ಯಾಕ್ ಬಂತಪಾ ಅಂದ್ರ ಅದರ ಹಿಂದ ಎಂಟು ತಿಂಗಳ ರೈತರ ಹೋರಾಟ ಇತ್ತು. ಅದರ ಹಿಂದ ಸುಮಾರು ಒಂದು ಶತಮಾನದ ಶೋಷಣೆ ಇತ್ತು.

ಈಸ್ಟ್ ಇಂಡಿಯಾ ಕಂಪನಿ 1790ರೊಳಗ ಜಮೀನ್ದಾರಿ ಪದ್ಧತಿ ಜಾರಿಗೆ ತಂದಿತ್ತು. ಅದರ ಪ್ರಕಾರ ಊರಾಗಿನ ಎಲ್ಲಾ ಜಮೀನಿನ ಸುಂಕ ಒಂದೇ ಕುಟುಂಬದವರು ಕೊಡಬೇಕಾಗಿತ್ತು. ಈ ಸುಂಕ ಸುಲಿಗೆದಾರರು, ಇತರ ರೈತರಿಂದ ತೆರಿಗೆ ಸಂಗ್ರಹ ಮಾಡಿ, ಅದರಲ್ಲಿ ಸ್ವಲ್ಪ ಕಮಿಷನ್ ಮುರಕೊಂಡು ಬ್ರಿಟಿಷರಿಗೆ ಕೊಡಬೇಕಾಗಿತ್ತು.

ಆ ತೆರಿಗೆ ಕಟ್ಟುವ ಮುನೀಂ-ಮುನ್ಷಿಗಳು ಸಣ್ಣ ಸಣ್ಣ ರೈತರ ಜೊತೆ ಏನು ವ್ಯವಹಾರ ಮಾಡೋದು ಬಿಡು ಅಂತ ಹೇಳಿ ಜಾರಡಿನ ಮತೆಸೊನ, ಈ. ಪಬಾನೆ, ಸಸೂನ, ವಾಡಿಯಾ, ಸ್ವೈರನಂತಾ ದೊಡ್ಡ ದೊಡ್ಡ ಕೆಮಿಕಲ್ ಕಂಪನಿ ಜೊತೆಗೆ ಒಪ್ಪಂದ ಮಾಡಿಕೊಂಡರು. ಆ ಕಂಪನಿಗಳು ರೈತರ ಜೊತೆ ಒಪ್ಪಂದ ಮಾಡಿಕೊಂಡರು. ಅದಕ್ಕ ಅನುಕೂಲ ಆಗಲಿ ಅಂತ ಬಿಹಾರ, ಒರಿಸ್ಸಾ ಹಾಗೂ ಬಂಗಾಳ ರಾಜ್ಯಗಳ ಸರಕಾರಗಳು ತೀನ್ ಕಥಿಯ ನಿಯಮಗಳಿಗೆ ಒಪ್ಪಿಗೆ ನೀಡಿದವು. ತೀನ್ ಕಥಿಯ ಅಂದ್ರ ಪ್ರತಿ 10 ಎಕರೆ ಜಮೀನಿನ ಒಳಗ ಮೂರು ಎಕರೆ ಇಂಡಿಗೋ ನೀಲಿ ಬೆಳಿ ಬೆಳಿಯಬೇಕು. ಇದು ಕಡ್ಡಾಯ. ಇದಕ್ಕೆ ತಪ್ಪಿದರೆ ಜಮೀನುದಾರ, ಗುಮಾಸ್ತ ಹಾಗೂ ಕಂಪನೀ ಸರಕಾರ ಅವರಿಗೆ ಶಿಕ್ಷೆ ಕೊಡಬಹುದಾಗಿತ್ತು. ನೀಲಿ ಗಿಡದಿಂದ ನೀಲಿ ಬಣ್ಣ ತಯಾರು ಆಗುತ್ತಿತ್ತು.

ಅಷ್ಟರಾಗ ಜರ್ಮನಿ ವಿಜ್ಞಾನಿಗಳು 1901ಕ್ಕ ಒಂದು ಕೃತಕ ನೀಲಿ ಬಣ್ಣ ಕಂಡುಹಿಡಿದರು. ಆಗ ಇಂಡಿಗೋದ ಬೇಡಿಕೆ ಕಮ್ಮಿ ಆತು. ಬ್ರಿಟಿಷರ ಬೆಂಬಲಿತ ಕೆಮಿಕಲ್ ಕಂಪನಿಗಳು ರೈತರಿಗೆ ಕೊಡೋ ಹಣ ಕಮ್ಮಿ ಮಾಡಿದರು. 1910-1915ರ ನಡುವಿನ ಮೊದಲನೇ ಮಹಾಯುದ್ಧದ ಕಾಲಕ್ಕ ಮತ್ತೊಮ್ಮೆ ಇಂಡಿಗೋಗೆ ಬೆಲೆ ಬಂತು. ಅದರ ದುರಾಸೆಗೆ ಕಂಪನಿಗಳು ರೈತರಿಗೆ ಹೆಚ್ಚು ನೀಲಿ ಬೆಳಿಯಲಿಕ್ಕೆ ಒತ್ತಾಯ ಮಾಡಿದವು. ಒಲ್ಲೆ ಅಂದವರಿಗೆ ಹಿಂಸೆ ಕೊಟ್ಟರು. ಅವರ ಜಮೀನು ಕಸಗೊಂಡರು, ಜೈಲಿಗೆ ಹಾಕಿದರು.

ಮೋಹನ್ ದಾಸ್ ಗಾಂಧಿ ಅವರು ದಕ್ಷಿಣ ಆಫ್ರಿಕಾ ಬಿಟ್ಟು ಭಾರತಕ್ಕ 1915ಕ್ಕ ಬಂದಿದ್ದರು. ಅವರನ್ನ ಕಾಂಗ್ರೆಸ್ ಸಮಾವೇಶದೊಳಗ ಭೇಟಿ ಮಾಡಿದ ಚಂಪಾರಣದ ರಾಜ್‌ಕುಮಾರ್ ಶುಕ್ಲ ಹಾಗೂ ಸಂತ ರಾವುತ ಅನ್ನುವ ಇಬ್ಬರು ಕಾರ್ಯಕರ್ತರು ನಮ್ಮೂರಿಗೆ ಬನ್ನಿ, ಅಲ್ಲಿ ರೈತರು ಸಂಕಷ್ಟದೊಳಗ ಅದಾರು, ಅವರಿಗೆ ಒಂದು ಹೋರಾಟ ರೂಪಿಸಿಕೊಡರಿ ಅಂತ ಕೇಳಿದರು. ಒಂದು ವರ್ಷದ ನಂತರ ಗಾಂಧೀಜಿ ಅಲ್ಲಿಗೆ ಹೋದರು. ಅಲ್ಲಿ ಅಸಹಕಾರ ಚಳವಳಿ ನಡೆಸಿ, ಜೈಲಿಗೆ ಹೋದರು. ಸುಮಾರು ಎಂಟು ತಿಂಗಳ ಕಾಲ ಅಲ್ಲಿ ಕೆಲಸ ಮಾಡಿದ್ದಕ್ಕ ಬ್ರಿಟಿಷರ ಮನಸ್ಸು ಕರಗಿತು. ಅವರು ಚಂಪಾರಣ ಕೃಷಿ ಕಾಯಿದೆ ರೂಪಿಸಿದರು. ತೀನ್ ಕಥಿಯಾ ನಿಯಮ ರದ್ದಾಗಿ ರೈತರು ತಮಗೆ ತಿಳಿದ ಬೆಲೆ ಬೆಳಿಯಲಿಕ್ಕೆ ಅವಕಾಶ ಮಾಡಿಕೊಟ್ಟರು.

ಈ ಹೋರಾಟದ ನಂತರ ಶುಕ್ಲ ಹಾಗೂ ರಾವುತ ಅವರು ಗಾಂಧಿಗೆ ಬಾಪು ಹಾಗೂ ಮಹಾತ್ಮ ಅಂತ ಕರೆದರು. ‘ಗಾಂಧಿ ಚಂಪಾರಣ—ತಿವನ್ನು ಬದಲು ಮಾಡಲಿಲ್ಲ. ಚಂಪಾರಣ ಗಾಂಧಿಯನ್ನು ಬದಲು ಮಾಡಿತು. ಸತ್ಯ ಹಾಗೂ ಅಹಿಂಸೆಯ ದಾರಿ ಅವರಿಗೆ ಕಾಯಂ ಆಗುವಂತೆ ಮಾಡಿತು’ ಅಂತ ಇತಿಹಾಸಕಾರ ಡೇವಿಡ್ ಅರ್ನಾಲ್ಡ್ ಹೇಳಿದರು.

ಇಷ್ಟು ಹೊತ್ತು ಕೇಳಿದ ಕತಿ ಒಂಥರಾ ಒಪ್ಪಂದ ಕೃಷಿಯ ಕತಿ ಕೇಳಿದ ಹಂಗ ಆತಲ್ಲಾ. ಈಗ ನೋಡ್ರಿ, ಕೇಂದ್ರ ಸರಕಾರದವರು ಮೂರು ಕೃಷಿ ಕಾನೂನು ಪಾಸು ಮಾಡಿದಾರು. ರಾಜ್ಯದವರು ಅವರಿಗೆ ಮುಂದ ಹೋಗಿ ಐದು ಕಾಯಿದೆ ಪಾಸು ಮಾಡಿದಾರು. ಇವು ರೈತರಿಗೆ ಅನುಕೂಲ. ಅವರ ಸ್ವಾತಂತ್ರ್ಯ ಹೆಚ್ಚಿಸಿ ಅವರ ಆದಾಯ ದುಪ್ಪಟ್ಟು ಮಾಡುವ ಕಾಯಿದೆ ಅಂತ ಹೇಳಿದಾರು. ಆದರ ಅವು ಆಳುವ ಪಕ್ಷದ ಗೆಳೆಯರ ಆದಾಯ ದುಪ್ಪಟ್ಟುಗಿಂತಲೂ ಹೆಚ್ಚು ಮಾಡಿದಾವು. ಅವರ ಸ್ವಾತಂತ್ರ್ಯವನ್ನು ಅತಿಯಾಗಿ ಜಾಸ್ತಿ ಮಾಡಿ ಅವರ ಮ್ಯಾಲೆ ಯಾವ ನಿಯಂತ್ರಣ ಇರಲಾರದ ಹಂಗ ಮಾಡಿಬಿಟ್ಟಾವು.

ಕೇಂದ್ರದವರು ಮಾಡಿದ ಕಾನೂನುಗಳು ಇಡೀ ದೇಶಕ್ಕೆ ದುಷ್ಪರಿಣಾಮ ಬೀರಿದರೂ ಸಹಿತ ಅವು ಕೇವಲ ಪಂಜಾಬಿನ ಸಮಸ್ಯೆ ಅಂತ ಕೆಲವರು ಅದನ್ನ ದುರ್ಲಕ್ಷ್ಯ ಮಾಡಿದಾರ. ಕರ್ನಾಟಕದ ಘನ ಸರಕಾರ ‘ಒಂದು ಜಿಲ್ಲೆಗೆ ಒಂದು ಪ್ರಮುಖ ಬೆಳೆ’ ಅಂತ ಹೇಳಿ ಒಂದು ಪಟ್ಟಿ ಹೊರಡಿಸಿಬಿಟ್ಟೆತಿ. ಕೇಂದ್ರದ ಒಪ್ಪಂದ ಕೃಷಿ ಕಾನೂನಿನಾಗ ಕಂಪನಿಗಳು ರೈತರಿಗೆ ಮೂಲ ಒಪ್ಪಂದದ ಪ್ರಕಾರ ಹಣ ಕೊಡದೆ ಹೋದರೆ ರೈತರು ಕೋರ್ಟಿಗೆ ಹೋಗಲಿಕ್ಕೆ ಬರೋದಿಲ್ಲ ಅಂತ ಒಂದು ಮಾತು ಐತಿ. ಅವರು ಉಪವಿಭಾಗ ಅಧಿಕಾರಿಯ ಮಂಡಳಿಗೆ ಆರ್ಜಿ ಸಲ್ಲಿಸಬೇಕು. ಅವರು ಆದೇಶ ನೀಡಬಹುದು, ಅಥವಾ ಪರ್ಯಾಯ ನ್ಯಾಯ ನಿರ್ಣಯದ ಮೂಲಕ ಅವರಿಗೆ ನಷ್ಟ ತುಂಬಿ ಕೊಡಬೇಕು ಅಂತ ಅದರಾಗ ಶಿಫಾರಸು ಐತಿ. ಭಾರತದ ಯಾವ ಉಪವಿಭಾಗ ಅಧಿಕಾರಿ, ಬಹು ರಾಷ್ಟ್ರೀಯ ಕಂಪನಿ ಅಥವಾ ಮದ್ದಾನಿ ಕಂಪನಿಗಳ ವಿರುದ್ಧ ಆದೇಶ ಪಾಸು ಮಾಡುವ ಧೈರ್ಯ ತೋರಸ್ತಾನ ಅನ್ನುವ ಪ್ರಶ್ನೆಗೆ ಅಲ್ಲಿ ಉತ್ತರ ಇಲ್ಲ.

ಇನ್ನೂ ರಾಜ್ಯ ಕೃಷಿ ಸಚಿವ ಬಸನಗೌಡ ಚನ್ನಬಸನಗೌಡ ಪಾಟೀಲ್ ಅವರು ಒನ್ ಜಿಲ್ಲಾ ಒನ್ ಕ್ರಾಪ್ ಅನ್ನೋದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ, ಅದರಿಂದ ರೈತರಿಗೆ ಒಳ್ಳೆ ಮಾರುಕಟ್ಟೆ ಸಿಗತದ ಅಂತ ಘೋಷಣೆ ಮಾಡಿದಾರು. ಅವರ ಪ್ರಕಾರ ಖರೀದಿ ಮಾಡುವನಿಗೆ ಅನುಕೂಲ ಮಾಡಿಕೊಟ್ಟರ ರೈತರಿಗೆ ಒಳ್ಳೆ ಬೆಲೆ ಕೊಟ್ಟ ಹಂಗ.

ಇದು ಲೆಕ್ಕಾಚಾರ ಏನಾದರೂ ತಪ್ಪಿದರ ಅನ್ನುವ ಪ್ರಶ್ನೆಗಳಿಗೆ ಅವರಲ್ಲಿ ಉತ್ತರ ಇಲ್ಲ. ಇದರಿಂದ ರೈತರಿಗೆ ತಮ್ಮ ಮನಸ್ಸಿನ ಬೆಳೆ ಬೆಳೆಯುವ ಸ್ವಾತಂತ್ರ್ಯ ತಪ್ಪಿ ಹೋಗತದ ಅನ್ನುವ ಸಂದೇಹಕ್ಕ ಅವರು ಪರಿಹಾರ ಸೂಚಿಸಿಲ್ಲ.

ಒಂದು ಜಿಲ್ಲೆಯ ಎಲ್ಲಾ ರೈತರು ಒಂದೇ ಬೆಳೆ ಬೆಳೆದರ ಕೀಟ ಬಾಧೆ ಕಾಡಬಹುದು ಅಂತ ಕೆಲವರು ತಜ್ಞರು ಹೇಳತಾರ. ಆದರ ಸರಕಾರ ಅದಕ್ಕ ಇನ್ನೂ ಉತ್ತರ ಕೊಡಲಿಕ್ಕೆ ಹತ್ತಿಲ್ಲ. ಮುಂದೆ ಒಂದು ದಿವಸ ಮದ್ದಾನೀ ಕಂಪನಿಗಳ ಕೀಟ ನಾಶಕ ಉಪಯೋಗಿಸಿರಿ ಅಂತ ಹೇಳಬಹುದು.

ಎಲ್ಲರೂ ಒಂದೇ ಬೆಳೆ ಬೆಳೆದರೆ ಪೂರೈಕೆ ಹಾಗೂ ಬೇಡಿಕೆಯ ತಕ್ಕಡಿ ಉಲ್ಟಾ ಆಗಿ ರೈತರಿಗೆ ಅನ್ಯಾಯ ಆಗಬಹುದು ಅನ್ನುವುದಕ್ಕೆ ಅವರಲ್ಲಿ ಉತ್ತರ ಇಲ್ಲ. ಸರ್ಕಾರದ ನಿಯಮದ ಪ್ರಕಾರ ಬೆಳೆ ಆಯ್ಕೆ ಮಾಡದೆ ಇತರ ಬೆಳೆ ಬೆಳೆದರೆ ಅವರಿಗೆ ಸರಕಾರದಿಂದ ಸಿಗೋ ಅನುಕೂಲಗಳು ಸಿಗೋದಿಲ್ಲ, ಸಾಲ ಸಿಗದೇ ಇರಬಹುದು, ಬೆಳೆ ವಿಮೆ ಸಿಗದೇ ಇರಬಹುದು ಅಂತ ಕೆಲವು ಏಜೆಂಟರು ಪಿಸುಗುಟ್ಟಲಿಕ್ಕೆ ಹತ್ತಿಬಿಟ್ಟಾರು.

ಚಂಪಾರಣ ಅಂದ್ರ ಸಂಪಿಗೆ ಬನ ಅಂತ. ಆ ಬನಕ್ಕೆ ಬೆಂಕಿ ಬಿದ್ದಾಗ ಅದನ್ನು ಆರಿಸಲು ಗಾಂಧಿ ಬಂದರು. ರೈತರು ಒಗ್ಗಟ್ಟು ತೋರಿಸಿ ಹೋರಾಟ ಮಾಡಿದರು. ಸೂರ್ಯ ಮುಳುಗದ ಸಾಮ್ರಾಜ್ಯದ ಈಸ್ಟ್ ಇಂಡಿಯಾ ಕಂಪನಿ ಮಂದಿಯ ಕಲ್ಲಿನ ಹೃದಯ ಕರಗಿಹೋತು. ರೈತರ ಬವಣೆ ತಪ್ಪಿಸಲು ಅವರು ಕಾನೂನು ಮಾಡಿದರು. ಈಗ ಗಾಂಧಿ ಇಲ್ಲ. ಸಂಪಿಗೆ ಬನದ ನೊಂದವರ ಹಾಡು ಕೇಳಿ ಕರಗುವ ಹೃದಯ ಇಂದಿನ ಆಳುವವರಿಗೆ ಇಲ್ಲ. ತಮ್ಮ ಗೆಳೆಯರಾಗಿರುವ ವೆಸ್ಟ್ ಇಂಡಿಯಾ ಕಂಪನಿಗಳಿಗೆ ಲುಕ್ಸಾನ ಆಗತದ ಅಂತ ಗೊತ್ತಾದರ ಸರಕಾರಗಳು ಯಾವ ಕಾನೂನನ್ನು ಕೂಡ ಬದಲು ಮಾಡೋ ಹಂಗ ಕಾಣೋದಿಲ್ಲಾ. ಈಗ ಸಂಪಿಗೆ ಬನದ ಹಾಡು ಹೇಳೋರು ಯಾರು? ಹೇಳಿದರೂ ಕೇಳೋರು ಯಾರು?


ಇದನ್ನೂ ಓದಿ: ರೈತ ವಿರೋಧಿ ಕಾಯಿದೆಗಳು: ಪ್ರಧಾನಿ ಮೋದಿ v/s ಮುಖ್ಯಮಂತ್ರಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...