Homeಅಂಕಣಗಳುಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

ಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

- Advertisement -
- Advertisement -

ಇಂದಿಗೆ ಸುಮಾರು 103 ವರ್ಷಗಳ ಹಿಂದೆ ಬ್ರಿಟಿಷ್ ಸರಕಾರ ಚಂಪಾರಣ ಕೃಷಿ ಕಾಯಿದೆ ತಂದಿತು. ಅದರ ಮೂಲ ಉದ್ದೇಶಗಳು ಎರಡು- ವಿವಾದಿತ ತೀನ್ ಕಥಿಯಾ ಉಳುಮೆ ಪದ್ಧತಿ ರದ್ದು ಮಾಡುವುದು ಹಾಗೂ ತಮಗೆ ಬೇಕಾದ ಬೆಳೆ ಬೆಳೆದುಕೊಳ್ಳಲು ರೈತರಿಗೆ ಸ್ವತಂತ್ರ ನೀಡುವುದು. ಇದು ಯಾಕ್ ಬಂತಪಾ ಅಂದ್ರ ಅದರ ಹಿಂದ ಎಂಟು ತಿಂಗಳ ರೈತರ ಹೋರಾಟ ಇತ್ತು. ಅದರ ಹಿಂದ ಸುಮಾರು ಒಂದು ಶತಮಾನದ ಶೋಷಣೆ ಇತ್ತು.

ಈಸ್ಟ್ ಇಂಡಿಯಾ ಕಂಪನಿ 1790ರೊಳಗ ಜಮೀನ್ದಾರಿ ಪದ್ಧತಿ ಜಾರಿಗೆ ತಂದಿತ್ತು. ಅದರ ಪ್ರಕಾರ ಊರಾಗಿನ ಎಲ್ಲಾ ಜಮೀನಿನ ಸುಂಕ ಒಂದೇ ಕುಟುಂಬದವರು ಕೊಡಬೇಕಾಗಿತ್ತು. ಈ ಸುಂಕ ಸುಲಿಗೆದಾರರು, ಇತರ ರೈತರಿಂದ ತೆರಿಗೆ ಸಂಗ್ರಹ ಮಾಡಿ, ಅದರಲ್ಲಿ ಸ್ವಲ್ಪ ಕಮಿಷನ್ ಮುರಕೊಂಡು ಬ್ರಿಟಿಷರಿಗೆ ಕೊಡಬೇಕಾಗಿತ್ತು.

ಆ ತೆರಿಗೆ ಕಟ್ಟುವ ಮುನೀಂ-ಮುನ್ಷಿಗಳು ಸಣ್ಣ ಸಣ್ಣ ರೈತರ ಜೊತೆ ಏನು ವ್ಯವಹಾರ ಮಾಡೋದು ಬಿಡು ಅಂತ ಹೇಳಿ ಜಾರಡಿನ ಮತೆಸೊನ, ಈ. ಪಬಾನೆ, ಸಸೂನ, ವಾಡಿಯಾ, ಸ್ವೈರನಂತಾ ದೊಡ್ಡ ದೊಡ್ಡ ಕೆಮಿಕಲ್ ಕಂಪನಿ ಜೊತೆಗೆ ಒಪ್ಪಂದ ಮಾಡಿಕೊಂಡರು. ಆ ಕಂಪನಿಗಳು ರೈತರ ಜೊತೆ ಒಪ್ಪಂದ ಮಾಡಿಕೊಂಡರು. ಅದಕ್ಕ ಅನುಕೂಲ ಆಗಲಿ ಅಂತ ಬಿಹಾರ, ಒರಿಸ್ಸಾ ಹಾಗೂ ಬಂಗಾಳ ರಾಜ್ಯಗಳ ಸರಕಾರಗಳು ತೀನ್ ಕಥಿಯ ನಿಯಮಗಳಿಗೆ ಒಪ್ಪಿಗೆ ನೀಡಿದವು. ತೀನ್ ಕಥಿಯ ಅಂದ್ರ ಪ್ರತಿ 10 ಎಕರೆ ಜಮೀನಿನ ಒಳಗ ಮೂರು ಎಕರೆ ಇಂಡಿಗೋ ನೀಲಿ ಬೆಳಿ ಬೆಳಿಯಬೇಕು. ಇದು ಕಡ್ಡಾಯ. ಇದಕ್ಕೆ ತಪ್ಪಿದರೆ ಜಮೀನುದಾರ, ಗುಮಾಸ್ತ ಹಾಗೂ ಕಂಪನೀ ಸರಕಾರ ಅವರಿಗೆ ಶಿಕ್ಷೆ ಕೊಡಬಹುದಾಗಿತ್ತು. ನೀಲಿ ಗಿಡದಿಂದ ನೀಲಿ ಬಣ್ಣ ತಯಾರು ಆಗುತ್ತಿತ್ತು.

ಅಷ್ಟರಾಗ ಜರ್ಮನಿ ವಿಜ್ಞಾನಿಗಳು 1901ಕ್ಕ ಒಂದು ಕೃತಕ ನೀಲಿ ಬಣ್ಣ ಕಂಡುಹಿಡಿದರು. ಆಗ ಇಂಡಿಗೋದ ಬೇಡಿಕೆ ಕಮ್ಮಿ ಆತು. ಬ್ರಿಟಿಷರ ಬೆಂಬಲಿತ ಕೆಮಿಕಲ್ ಕಂಪನಿಗಳು ರೈತರಿಗೆ ಕೊಡೋ ಹಣ ಕಮ್ಮಿ ಮಾಡಿದರು. 1910-1915ರ ನಡುವಿನ ಮೊದಲನೇ ಮಹಾಯುದ್ಧದ ಕಾಲಕ್ಕ ಮತ್ತೊಮ್ಮೆ ಇಂಡಿಗೋಗೆ ಬೆಲೆ ಬಂತು. ಅದರ ದುರಾಸೆಗೆ ಕಂಪನಿಗಳು ರೈತರಿಗೆ ಹೆಚ್ಚು ನೀಲಿ ಬೆಳಿಯಲಿಕ್ಕೆ ಒತ್ತಾಯ ಮಾಡಿದವು. ಒಲ್ಲೆ ಅಂದವರಿಗೆ ಹಿಂಸೆ ಕೊಟ್ಟರು. ಅವರ ಜಮೀನು ಕಸಗೊಂಡರು, ಜೈಲಿಗೆ ಹಾಕಿದರು.

ಮೋಹನ್ ದಾಸ್ ಗಾಂಧಿ ಅವರು ದಕ್ಷಿಣ ಆಫ್ರಿಕಾ ಬಿಟ್ಟು ಭಾರತಕ್ಕ 1915ಕ್ಕ ಬಂದಿದ್ದರು. ಅವರನ್ನ ಕಾಂಗ್ರೆಸ್ ಸಮಾವೇಶದೊಳಗ ಭೇಟಿ ಮಾಡಿದ ಚಂಪಾರಣದ ರಾಜ್‌ಕುಮಾರ್ ಶುಕ್ಲ ಹಾಗೂ ಸಂತ ರಾವುತ ಅನ್ನುವ ಇಬ್ಬರು ಕಾರ್ಯಕರ್ತರು ನಮ್ಮೂರಿಗೆ ಬನ್ನಿ, ಅಲ್ಲಿ ರೈತರು ಸಂಕಷ್ಟದೊಳಗ ಅದಾರು, ಅವರಿಗೆ ಒಂದು ಹೋರಾಟ ರೂಪಿಸಿಕೊಡರಿ ಅಂತ ಕೇಳಿದರು. ಒಂದು ವರ್ಷದ ನಂತರ ಗಾಂಧೀಜಿ ಅಲ್ಲಿಗೆ ಹೋದರು. ಅಲ್ಲಿ ಅಸಹಕಾರ ಚಳವಳಿ ನಡೆಸಿ, ಜೈಲಿಗೆ ಹೋದರು. ಸುಮಾರು ಎಂಟು ತಿಂಗಳ ಕಾಲ ಅಲ್ಲಿ ಕೆಲಸ ಮಾಡಿದ್ದಕ್ಕ ಬ್ರಿಟಿಷರ ಮನಸ್ಸು ಕರಗಿತು. ಅವರು ಚಂಪಾರಣ ಕೃಷಿ ಕಾಯಿದೆ ರೂಪಿಸಿದರು. ತೀನ್ ಕಥಿಯಾ ನಿಯಮ ರದ್ದಾಗಿ ರೈತರು ತಮಗೆ ತಿಳಿದ ಬೆಲೆ ಬೆಳಿಯಲಿಕ್ಕೆ ಅವಕಾಶ ಮಾಡಿಕೊಟ್ಟರು.

ಈ ಹೋರಾಟದ ನಂತರ ಶುಕ್ಲ ಹಾಗೂ ರಾವುತ ಅವರು ಗಾಂಧಿಗೆ ಬಾಪು ಹಾಗೂ ಮಹಾತ್ಮ ಅಂತ ಕರೆದರು. ‘ಗಾಂಧಿ ಚಂಪಾರಣ—ತಿವನ್ನು ಬದಲು ಮಾಡಲಿಲ್ಲ. ಚಂಪಾರಣ ಗಾಂಧಿಯನ್ನು ಬದಲು ಮಾಡಿತು. ಸತ್ಯ ಹಾಗೂ ಅಹಿಂಸೆಯ ದಾರಿ ಅವರಿಗೆ ಕಾಯಂ ಆಗುವಂತೆ ಮಾಡಿತು’ ಅಂತ ಇತಿಹಾಸಕಾರ ಡೇವಿಡ್ ಅರ್ನಾಲ್ಡ್ ಹೇಳಿದರು.

ಇಷ್ಟು ಹೊತ್ತು ಕೇಳಿದ ಕತಿ ಒಂಥರಾ ಒಪ್ಪಂದ ಕೃಷಿಯ ಕತಿ ಕೇಳಿದ ಹಂಗ ಆತಲ್ಲಾ. ಈಗ ನೋಡ್ರಿ, ಕೇಂದ್ರ ಸರಕಾರದವರು ಮೂರು ಕೃಷಿ ಕಾನೂನು ಪಾಸು ಮಾಡಿದಾರು. ರಾಜ್ಯದವರು ಅವರಿಗೆ ಮುಂದ ಹೋಗಿ ಐದು ಕಾಯಿದೆ ಪಾಸು ಮಾಡಿದಾರು. ಇವು ರೈತರಿಗೆ ಅನುಕೂಲ. ಅವರ ಸ್ವಾತಂತ್ರ್ಯ ಹೆಚ್ಚಿಸಿ ಅವರ ಆದಾಯ ದುಪ್ಪಟ್ಟು ಮಾಡುವ ಕಾಯಿದೆ ಅಂತ ಹೇಳಿದಾರು. ಆದರ ಅವು ಆಳುವ ಪಕ್ಷದ ಗೆಳೆಯರ ಆದಾಯ ದುಪ್ಪಟ್ಟುಗಿಂತಲೂ ಹೆಚ್ಚು ಮಾಡಿದಾವು. ಅವರ ಸ್ವಾತಂತ್ರ್ಯವನ್ನು ಅತಿಯಾಗಿ ಜಾಸ್ತಿ ಮಾಡಿ ಅವರ ಮ್ಯಾಲೆ ಯಾವ ನಿಯಂತ್ರಣ ಇರಲಾರದ ಹಂಗ ಮಾಡಿಬಿಟ್ಟಾವು.

ಕೇಂದ್ರದವರು ಮಾಡಿದ ಕಾನೂನುಗಳು ಇಡೀ ದೇಶಕ್ಕೆ ದುಷ್ಪರಿಣಾಮ ಬೀರಿದರೂ ಸಹಿತ ಅವು ಕೇವಲ ಪಂಜಾಬಿನ ಸಮಸ್ಯೆ ಅಂತ ಕೆಲವರು ಅದನ್ನ ದುರ್ಲಕ್ಷ್ಯ ಮಾಡಿದಾರ. ಕರ್ನಾಟಕದ ಘನ ಸರಕಾರ ‘ಒಂದು ಜಿಲ್ಲೆಗೆ ಒಂದು ಪ್ರಮುಖ ಬೆಳೆ’ ಅಂತ ಹೇಳಿ ಒಂದು ಪಟ್ಟಿ ಹೊರಡಿಸಿಬಿಟ್ಟೆತಿ. ಕೇಂದ್ರದ ಒಪ್ಪಂದ ಕೃಷಿ ಕಾನೂನಿನಾಗ ಕಂಪನಿಗಳು ರೈತರಿಗೆ ಮೂಲ ಒಪ್ಪಂದದ ಪ್ರಕಾರ ಹಣ ಕೊಡದೆ ಹೋದರೆ ರೈತರು ಕೋರ್ಟಿಗೆ ಹೋಗಲಿಕ್ಕೆ ಬರೋದಿಲ್ಲ ಅಂತ ಒಂದು ಮಾತು ಐತಿ. ಅವರು ಉಪವಿಭಾಗ ಅಧಿಕಾರಿಯ ಮಂಡಳಿಗೆ ಆರ್ಜಿ ಸಲ್ಲಿಸಬೇಕು. ಅವರು ಆದೇಶ ನೀಡಬಹುದು, ಅಥವಾ ಪರ್ಯಾಯ ನ್ಯಾಯ ನಿರ್ಣಯದ ಮೂಲಕ ಅವರಿಗೆ ನಷ್ಟ ತುಂಬಿ ಕೊಡಬೇಕು ಅಂತ ಅದರಾಗ ಶಿಫಾರಸು ಐತಿ. ಭಾರತದ ಯಾವ ಉಪವಿಭಾಗ ಅಧಿಕಾರಿ, ಬಹು ರಾಷ್ಟ್ರೀಯ ಕಂಪನಿ ಅಥವಾ ಮದ್ದಾನಿ ಕಂಪನಿಗಳ ವಿರುದ್ಧ ಆದೇಶ ಪಾಸು ಮಾಡುವ ಧೈರ್ಯ ತೋರಸ್ತಾನ ಅನ್ನುವ ಪ್ರಶ್ನೆಗೆ ಅಲ್ಲಿ ಉತ್ತರ ಇಲ್ಲ.

ಇನ್ನೂ ರಾಜ್ಯ ಕೃಷಿ ಸಚಿವ ಬಸನಗೌಡ ಚನ್ನಬಸನಗೌಡ ಪಾಟೀಲ್ ಅವರು ಒನ್ ಜಿಲ್ಲಾ ಒನ್ ಕ್ರಾಪ್ ಅನ್ನೋದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ, ಅದರಿಂದ ರೈತರಿಗೆ ಒಳ್ಳೆ ಮಾರುಕಟ್ಟೆ ಸಿಗತದ ಅಂತ ಘೋಷಣೆ ಮಾಡಿದಾರು. ಅವರ ಪ್ರಕಾರ ಖರೀದಿ ಮಾಡುವನಿಗೆ ಅನುಕೂಲ ಮಾಡಿಕೊಟ್ಟರ ರೈತರಿಗೆ ಒಳ್ಳೆ ಬೆಲೆ ಕೊಟ್ಟ ಹಂಗ.

ಇದು ಲೆಕ್ಕಾಚಾರ ಏನಾದರೂ ತಪ್ಪಿದರ ಅನ್ನುವ ಪ್ರಶ್ನೆಗಳಿಗೆ ಅವರಲ್ಲಿ ಉತ್ತರ ಇಲ್ಲ. ಇದರಿಂದ ರೈತರಿಗೆ ತಮ್ಮ ಮನಸ್ಸಿನ ಬೆಳೆ ಬೆಳೆಯುವ ಸ್ವಾತಂತ್ರ್ಯ ತಪ್ಪಿ ಹೋಗತದ ಅನ್ನುವ ಸಂದೇಹಕ್ಕ ಅವರು ಪರಿಹಾರ ಸೂಚಿಸಿಲ್ಲ.

ಒಂದು ಜಿಲ್ಲೆಯ ಎಲ್ಲಾ ರೈತರು ಒಂದೇ ಬೆಳೆ ಬೆಳೆದರ ಕೀಟ ಬಾಧೆ ಕಾಡಬಹುದು ಅಂತ ಕೆಲವರು ತಜ್ಞರು ಹೇಳತಾರ. ಆದರ ಸರಕಾರ ಅದಕ್ಕ ಇನ್ನೂ ಉತ್ತರ ಕೊಡಲಿಕ್ಕೆ ಹತ್ತಿಲ್ಲ. ಮುಂದೆ ಒಂದು ದಿವಸ ಮದ್ದಾನೀ ಕಂಪನಿಗಳ ಕೀಟ ನಾಶಕ ಉಪಯೋಗಿಸಿರಿ ಅಂತ ಹೇಳಬಹುದು.

ಎಲ್ಲರೂ ಒಂದೇ ಬೆಳೆ ಬೆಳೆದರೆ ಪೂರೈಕೆ ಹಾಗೂ ಬೇಡಿಕೆಯ ತಕ್ಕಡಿ ಉಲ್ಟಾ ಆಗಿ ರೈತರಿಗೆ ಅನ್ಯಾಯ ಆಗಬಹುದು ಅನ್ನುವುದಕ್ಕೆ ಅವರಲ್ಲಿ ಉತ್ತರ ಇಲ್ಲ. ಸರ್ಕಾರದ ನಿಯಮದ ಪ್ರಕಾರ ಬೆಳೆ ಆಯ್ಕೆ ಮಾಡದೆ ಇತರ ಬೆಳೆ ಬೆಳೆದರೆ ಅವರಿಗೆ ಸರಕಾರದಿಂದ ಸಿಗೋ ಅನುಕೂಲಗಳು ಸಿಗೋದಿಲ್ಲ, ಸಾಲ ಸಿಗದೇ ಇರಬಹುದು, ಬೆಳೆ ವಿಮೆ ಸಿಗದೇ ಇರಬಹುದು ಅಂತ ಕೆಲವು ಏಜೆಂಟರು ಪಿಸುಗುಟ್ಟಲಿಕ್ಕೆ ಹತ್ತಿಬಿಟ್ಟಾರು.

ಚಂಪಾರಣ ಅಂದ್ರ ಸಂಪಿಗೆ ಬನ ಅಂತ. ಆ ಬನಕ್ಕೆ ಬೆಂಕಿ ಬಿದ್ದಾಗ ಅದನ್ನು ಆರಿಸಲು ಗಾಂಧಿ ಬಂದರು. ರೈತರು ಒಗ್ಗಟ್ಟು ತೋರಿಸಿ ಹೋರಾಟ ಮಾಡಿದರು. ಸೂರ್ಯ ಮುಳುಗದ ಸಾಮ್ರಾಜ್ಯದ ಈಸ್ಟ್ ಇಂಡಿಯಾ ಕಂಪನಿ ಮಂದಿಯ ಕಲ್ಲಿನ ಹೃದಯ ಕರಗಿಹೋತು. ರೈತರ ಬವಣೆ ತಪ್ಪಿಸಲು ಅವರು ಕಾನೂನು ಮಾಡಿದರು. ಈಗ ಗಾಂಧಿ ಇಲ್ಲ. ಸಂಪಿಗೆ ಬನದ ನೊಂದವರ ಹಾಡು ಕೇಳಿ ಕರಗುವ ಹೃದಯ ಇಂದಿನ ಆಳುವವರಿಗೆ ಇಲ್ಲ. ತಮ್ಮ ಗೆಳೆಯರಾಗಿರುವ ವೆಸ್ಟ್ ಇಂಡಿಯಾ ಕಂಪನಿಗಳಿಗೆ ಲುಕ್ಸಾನ ಆಗತದ ಅಂತ ಗೊತ್ತಾದರ ಸರಕಾರಗಳು ಯಾವ ಕಾನೂನನ್ನು ಕೂಡ ಬದಲು ಮಾಡೋ ಹಂಗ ಕಾಣೋದಿಲ್ಲಾ. ಈಗ ಸಂಪಿಗೆ ಬನದ ಹಾಡು ಹೇಳೋರು ಯಾರು? ಹೇಳಿದರೂ ಕೇಳೋರು ಯಾರು?


ಇದನ್ನೂ ಓದಿ: ರೈತ ವಿರೋಧಿ ಕಾಯಿದೆಗಳು: ಪ್ರಧಾನಿ ಮೋದಿ v/s ಮುಖ್ಯಮಂತ್ರಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...