Homeಮುಖಪುಟ'ವಿಶ್ವಾಸ' ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ 'ರಾಷ್ಟ್ರಪತಿ ಆಳ್ವಿಕೆ' ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

‘ವಿಶ್ವಾಸ’ ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ ‘ರಾಷ್ಟ್ರಪತಿ ಆಳ್ವಿಕೆ’ ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

- Advertisement -
- Advertisement -

ಜಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸ ಮತದ ಮೊದಲು ಹೇಳಿಕೆ ನೀಡಿದ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು, ಹಿಂದಿನ ಮುಖ್ಯಮಂತ್ರಿಯನ್ನು “ಹೇಮಂತ್ ಬಾಬು” ಎಂದು ಉಲ್ಲೇಖಿಸಿದ್ದಾರೆ. ‘ಹೇಮಂತ್ ಸೊರೇನ್ ಭಾಗ 2″ ಎಂದು ಸರ್ಕಾರವನ್ನು ನಡೆಸುವುದಾಗಿ ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆಯ ಆರೋಪದ ನಡುವೆ ರಾಜೀನಾಮೆ ನೀಡುವಂತೆ ಒತ್ತಾಯಿಸಲ್ಪಟ್ಟ ನಂತರ, ಜೈಲು ಪಾಲಾದ ಮಾಜಿ ಮುಖ್ಯಮಂತ್ರಿ ಹೇಮಂತ್, ಹಾಲಿ ಮುಖ್ಯಮಂತ್ರಿಗಿಂತ ಹೆಚ್ಚು ಕಾಲ ಸದನವನ್ನು ಉದ್ದೇಶಿಸಿ ಮಾತನಾಡಿದರು. ಚಂಪೈ ಸೊರೇನ್ ಅವರು ವಿಶ್ವಾಸ ಮತವನ್ನು ಎದುರಿಸುತ್ತಿದ್ದರೆ; ಹೇಮಂತ್ ಸೊರೇನ್ ಅವರು ಅದರ ಉಸ್ತುವಾರಿ ವಹಿಸಿದ್ದ ಚಿತ್ರಣ ಇಂದು ಜಾರ್ಖಂಡ್ ವಿಧಾನಸಭೆಯಲ್ಲಿ ಕಂಡುಬಂತು.

ಜಾರ್ಖಂಡ್ ಮುಕ್ತಿ ಮೋರ್ಚಾದ 48 ವರ್ಷದ ಕಾರ್ಯಾಧ್ಯಕ್ಷ ಹೇಮಂತ್, ತಮ್ಮ ತಂದೆ ಮತ್ತು ಪಕ್ಷದ ಸಂಸ್ಥಾಪಕ ಶಿಬು ಸೊರೇನ್ ಅವರ ನೆರಳಿನಲ್ಲಿ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು. ಕಳೆದ ವಾರ ಜಾರ್ಖಂಡ್‌ನಲ್ಲಿ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದ ಚತುರ ರಾಜಕೀಯ ನಡೆಗಳಿಂದ ಅನೇಕರನ್ನು ಆಶ್ಚರ್ಯಗೊಳಿಸಿದ್ದಾರೆ. ಹೇಮಂತ್ ಸೊರೇನ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಡೆಯಲು ಮತ್ತು ತಮ್ಮ ಆಪ್ತರಿಗೆ ಅಧಿಕಾರವನ್ನು ಸುಗಮವಾಗಿ ಹಸ್ತಾಂತರಿಸುವಲ್ಲಿ ಹೇಗೆ ಯಶಸ್ವಿಯಾದರು ಎಂಬುದರ ಬಗ್ಗೆ ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕಳೆದ ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಆಗಮಿಸಿ ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿತ್ತು. ದಾಳಿ ಸಂದರ್ಭದಲ್ಲಿ, ಸೊರೇನ್ ಪತ್ತೆಯಾಗಿರಲಿಲ್ಲ; ಅವರ ಸಿಬ್ಬಂದಿಗಳಿಗೂ ಅವರ ಇರುವಿಕೆಯ ಬಗ್ಗೆ ಸುಳಿವು ಇರಲಿಲ್ಲ. ಈ ಅವಕಾಶವನ್ನು ತ್ವರಿತವಾಗಿ ಬಳಸಿಕೊಂಡ ಬಿಜೆಪಿಯು, ಮುಖ್ಯಮಂತ್ರಿಯನ್ನು “ಕಾಣೆಯಾಗಿದೆ” ಎಂದು ಘೋಷಿಸಿತು. ಜಾರ್ಖಂಡ್ ರಾಜ್ಯವು ಸಾಂವಿಧಾನಿಕ ಬಿಕ್ಕಟ್ಟಿನ ಮಧ್ಯದಲ್ಲಿದೆ ಎಂದು ಹೇಳಿತು. ಆದರೆ ಪಕ್ಷ ಮಾತ್ರ, ‘ಹೇಮಂತ್ ಸೊರೇನ್ ನಮ್ಮ ಸಂಪರ್ಕದಲ್ಲಿದ್ದಾರೆ, ಅವರು ಜನವರಿ 31 ರಂದು ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುತ್ತಾರೆ’ ಎಂದು ಭರವಸೆ ನೀಡಿದರು. ‘ಹೇಮಂತ್ ಸೊರೇನ್ ದೆಹಲಿ ತಲುಪಿದ ವಿಶೇಷ ವಿಮಾನವು ವಿಮಾನ ಏರ್‌ಪೋರ್ಟಿನಲ್ಲೆ ನಿಂತಿದೆ, ಹೇಮಂತ್ ಸೊರೇನ್ ಎಲ್ಲಿದ್ದಾರೆ ಎಂಬ ಬಗ್ಗೆ ತಿಳಿದಿಲ್ಲ’ ಎಂದು ಇಡಿ ಅಧಿಕಾರಿಗಳು ಹೇಳಿದರು.

ಜನವರಿ 30ರಂದು ಹೇಮಂತ್ ಸೊರೇನ್ ರಾಂಚಿಯಲ್ಲಿ ಕಾಣಿಸಿಕೊಂಡರು. ಜೆಎಂಎಂ ಮತ್ತು ಕಾಂಗ್ರೆಸ್, ಆರ್‌ಜೆಡಿಯ ಆಡಳಿತ ಒಕ್ಕೂಟದ ಶಾಸಕರನ್ನು ಭೇಟಿಯಾದರು. 1,300 ಕಿಮೀ ದೂರದ ರಸ್ತೆ ಪ್ರಯಾಣದ ಮೂಲಕ ಅವರು ಮಾಧ್ಯಮಗಳು, ಇಡಿ ಮತ್ತು ಟೋಲ್ ಬೂತ್ ಕ್ಯಾಮೆರಾಗಳ ಕಣ್ತಪ್ಪಿಸಿ, ಅವರು ರಾಂಚಿ ತಲುಪುವಲ್ಲಿ ಯಶಸ್ವಿಯಾಗಿದ್ದರು.

ವಾಸ್ತವವಾಗಿ, ಜಾರ್ಖಂಡ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರು ಭಾನುವಾರ ರಾತ್ರಿ ಸೊರೇನ್ ತಮ್ಮ ದೆಹಲಿ ನಿವಾಸದಿಂದ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ್ದರು. ಆದರೆ, ಇಡಿ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ಮಾಡುತ್ತಾರೆ ಮತ್ತು ಸಮಯಕ್ಕೆ ಸರಿಯಾಗಿ ತಲುಪುತ್ತಾರೆ ಎಂದು ಮುಖ್ಯಮಂತ್ರಿಗೆ ಹೇಗೆ ತಿಳಿದಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಹೇಮಂತ್ ಸೊರೇನ್ ಅವರನ್ನು ಬುಧವಾರದವರೆಗೆ ಇಡಿ ಅಧಿಕಾರಿಗಳು ಪ್ರಶ್ನಿಸಿದರು. ಅವರನ್ನು ಬಂಧಿಸಲಾಗುವುದು ಎಂದು ಸ್ಪಷ್ಟವಾದಾಗ, ಅವರು ತಮ್ಮ ಸರ್ಕಾರವನ್ನು ಉಳಿಸುವ ದಿಟ್ಟ ನಡೆಗೆ ಮುಮದಾದರು. ಇಡಿ ಮೂಲಗಳ ಪ್ರಕಾರ, ಹೇಮಂತ್ ಸೊರೇನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಬಂಧನ ಮೆಮೊಗೆ ಸಹಿ ಹಾಕಲು ನಿರಾಕರಿಸಿದ್ದರು ಎನ್ನಲಾಗಿದೆ. ಹಾಲಿ ಮುಖ್ಯಮಂತ್ರಿಯನ್ನು ಬಂಧಿಸಿದರೆ ಸಾಂವಿಧಾನಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ರಾಜೀನಾಮೆ ಸಲ್ಲಿಸಿ, ಶಾಸಕಾಂಗ ಪಕ್ಷದ ಸಭೆ ನಡೆಸಿದ ನಂತರ ಇಡಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು.

ಮೆಮೊಗೆ ಸಹಿ ಹಾಕಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಹೇಮಂತ್ ಸೊರೇನ್ ಅವರನ್ನು ರಾಜ್ಯಪಾಲರ ನಿವಾಸಕ್ಕೆ ಕರೆದೊಯ್ದರು. ಆದರೆ, ಅಲ್ಲಿಗೆ ಹೋದಾಗ ಆಡಳಿತಾರೂಢ ಸಮ್ಮಿಶ್ರ ಪಕ್ಷದ ಉನ್ನತ ಶಾಸಕರು ಅವರ ಜೊತೆಗಿದ್ದರು. ಹೇಮಂತ್ ಸೊರೇನ್ ಕೆಳಗಿಳಿದ ತಕ್ಷಣ, ಚಂಪೈ ಸೊರೇನ್ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಇದಕ್ಕೂ ಮೊದಲು, ಚಂಪೈ ಸೊರೇನ್ ಅವರು ಜೆಎಂಎಂನ ಶಾಸಕಾಂಗ ಪಕ್ಷದ ನಾಯಕರಾಗಿ ಚುನಾಯಿತರಾಗಿದ್ದರು. ಹೇಮಂತ್ ಸೊರೇನ್ ಅವರು ತಮ್ಮ ಪತ್ನಿ ಕಲ್ಪನಾ ಅವರಿಗೆ ಅಧಿಕಾರ ನೀಡಬಹುದು ಎಂಬ ಊಹಾಪೋಹಗಳಿಗೆ ಅಂತ್ಯ ಹಾಡಿದರು. ವಾಸ್ತವವಾಗಿ ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ಸೊರೇನ್ ಕುಟುಂಬದಿಂದಲೇ ವಿರೋಧ ವ್ಯಕ್ತವಾಗಿತ್ತು ಎಂದು ಹೇಮಂತ್ ಸೊರೇನ್ ಅವರ ಸೊಸೆ, ಜಾಮಾದ ಜೆಎಂಎಂ ಶಾಸಕಿ ಸೀತಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಯಾವುದೇ ಕ್ರಮವನ್ನು ನಾನು ವಿರೋಧಿಸುತ್ತೇನೆ. ಏಕೆಂದರೆ, ಅವರಿಗೆ ರಾಜಕೀಯದ ಅನುಭವವಿಲ್ಲ ಎಂದಿದ್ದರು. ಪಕ್ಷದ ನಾಯಕತ್ವವು ಈ ನಿರ್ಣಾಯಕ ಹಂತದಲ್ಲಿ ಬಿರುಕು ಉಂಟುಮಾಡುವ ಯಾವುದೇ ಮನಸ್ಥಿತಿಯಿಲ್ಲದೆ, ಸುರಕ್ಷಿತ ಆಯ್ಕೆಯತ್ತ ಹೋಯಿತು. ಅಂತಿಮವಾಗಿ ಶಿಬು ಸೊರೇನ್ ಅವರ ದೀರ್ಘಾವಧಿಯ ಸಹಾಯಕ, 67 ವರ್ಷದ ಚಂಪೈ ಸೊರೇನ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಹೇಮಂತ್ ಸೊರೇನ್ ಅವರು ಜನವರಿ 31 ರಂದು ಅಧಿಕಾರದಿಂದ ಕೆಳಗಿಳಿದ ಕೂಡಲೇ ಚಂಪೈ ಸೊರೇನ್ ಅವರು ಹಕ್ಕು ಚಲಾಯಿಸಿದ್ದರೂ ಸಹ, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಜಾರ್ಖಂಡ್‌ನಲ್ಲಿ ಸರ್ಕಾರ ರಚನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಜೆಎಂಎಂ ಮತ್ತು ಕಾಂಗ್ರೆಸ್ ಆರೋಪಿಸಿದೆ. ಫೆಬ್ರವರಿ 1 ರಂದು ಚಂಪೈ ಸೊರೇನ್ ಅವರು ರಾಜ್ಯಪಾಲರಿಗೆ ಪತ್ರ ಬರೆದು, ಕಳೆದ 18 ಗಂಟೆಗಳ ಕಾಲದಿಂದ  ಜಾರ್ಖಂಡ್ ರಾಜ್ಯದಲ್ಲಿ ಸರ್ಕಾರವಿಲ್ಲ; ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಅದೇ ದಿನ, ಅವರು ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ಇತರ ನಾಯಕರು ರಾಜ್ಯಪಾಲರನ್ನು ಭೇಟಿಯಾದರು. ವಾಸ್ತವವಾಗಿ, ಚಂಪೈ ಸೊರೇನ್ ಅವರನ್ನು ಬೆಂಬಲಿಸುವ ಶಾಸಕರು ಸಹಿ ಸಂಗ್ರಹಿಸಿ, ತಮ್ಮ ಬೆಂಬ ರೆಕಾರ್ಡ್ ಮಾಡಿ ಬಹುಮತದ ಪುರಾವೆಯಾಗಿ ರಾಜ್ಯಪಾಲರಿಗೆ ತೋರಿಸಿದರು.

ಮರುದಿನ, ಚಂಪೈ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ, ಮೈತ್ರಿ ಪಕ್ಷಗಳ ಇಬ್ಬರು ಶಾಸಕರಾದ ಕಾಂಗ್ರೆಸ್‌ನ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು.

ಚಂಪೈ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ನಿಜವಾದ ಯುದ್ಧ ಇಂದು ವಿಶ್ವಾಸಮತ ಗಳಿಸುವ ಪರೀಕ್ಷೆಯಾಗಿತ್ತು. ಚಂಪೈ ಸೊರೇನ್ ಮತ್ತು ಅವರ ಇಬ್ಬರು ಪ್ರತಿನಿಧಿಗಳು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಆಡಳಿತಾರೂಢ ಸಮ್ಮಿಶ್ರ ಶಾಸಕರನ್ನು ಹೈದರಾಬಾದ್‌ಗೆ ವಿಮಾನದಲ್ಲಿ ಕಳುಹಿಸಲಾಗಿತ್ತು. ನಿರ್ಣಾಯಕ ಬಹುಮತ ಯಾಚನೆಗೆ ಮುನ್ನ ಬಿಜೆಪಿಯಿಂದ ಯಾವುದೇ ಕಳ್ಳಬೇಟೆಯ ಪ್ರಯತ್ನವನ್ನು ತಡೆಯಲು ಅವರನ್ನು ಹೈದರಾಬಾದ್‌ನ ಖಾಸಗಿ ರೆಸಾರ್ಟ್‌ನಲ್ಲಿ ಇರಿಸಲಾಗಿತ್ತು. ಈ ಮಧ್ಯೆ, ಹೇಮಂತ್ ಸೊರೇನ್ ಅವರು ಬಹುಮತಕ್ಕೆ ಹಾಜರಾಗಲು ಅನುಮತಿಗಾಗಿ ನ್ಯಾಯಾಲಯದಲ್ಲಿ ವಿನಂತಿಯನ್ನು ಸಲ್ಲಿಸಿದರು. ಜೆಎಂಎಂ ನಾಯಕತ್ವವು ಲೋಬಿನ್ ಹೆಂಬ್ರೋಮ್‌ನಂತಹ ಅಸಮಾಧಾನಗೊಂಡ ಶಾಸಕರನ್ನು ಸಮಾಧಾನಪಡಿಸಲು ಪ್ರಾರಂಭಿಸಿತು.

ಬಲ ಪರೀಕ್ಷೆಗೆ ಮುಂಚಿತವಾಗಿಯೆ, ಹೈದರಾಬಾದ್‌ನಲ್ಲಿ ಬೀಡುಬಿಟ್ಟಿದ್ದ ಶಾಸಕರನ್ನು ರಾಂಚಿಗೆ ಹಿಂತಿರುಗಿಸಲಾಯಿತು. ಹೇಮಂತ್ ಸೊರೇನ್ ಕೂಡ ಸಮಯಕ್ಕೆ ಸರಿಯಾಗಿ ವಿಧಾನಸಭೆ ತಲುಪಿದರು. ಇದರ ಪರಿಣಾಮವಾಗಿ ಚಂಪೈ ಸೊರೇನ್ ಅವರ ಪರವಾಗಿ 47 ಮತಗಳೊಂದಿಗೆ ವಿಶ್ವಾಸ ಮತವನ್ನು ತೆರವುಗೊಳಿಸಿದರು. ಅವರ ವಿರುದ್ಧ ಇಪ್ಪತ್ತೊಂಬತ್ತು ಮತಗಳು ಚಲಾವಣೆಯಾದವು.

ಇದನ್ನೂ ಓದಿ; ‘ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ’: ಹೇಮಂತ್‌ ಸೊರೆನ್‌ ಭಾವುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...