Homeಮುಖಪುಟ'ವಿಶ್ವಾಸ' ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ 'ರಾಷ್ಟ್ರಪತಿ ಆಳ್ವಿಕೆ' ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

‘ವಿಶ್ವಾಸ’ ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ ‘ರಾಷ್ಟ್ರಪತಿ ಆಳ್ವಿಕೆ’ ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

- Advertisement -
- Advertisement -

ಜಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸ ಮತದ ಮೊದಲು ಹೇಳಿಕೆ ನೀಡಿದ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು, ಹಿಂದಿನ ಮುಖ್ಯಮಂತ್ರಿಯನ್ನು “ಹೇಮಂತ್ ಬಾಬು” ಎಂದು ಉಲ್ಲೇಖಿಸಿದ್ದಾರೆ. ‘ಹೇಮಂತ್ ಸೊರೇನ್ ಭಾಗ 2″ ಎಂದು ಸರ್ಕಾರವನ್ನು ನಡೆಸುವುದಾಗಿ ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆಯ ಆರೋಪದ ನಡುವೆ ರಾಜೀನಾಮೆ ನೀಡುವಂತೆ ಒತ್ತಾಯಿಸಲ್ಪಟ್ಟ ನಂತರ, ಜೈಲು ಪಾಲಾದ ಮಾಜಿ ಮುಖ್ಯಮಂತ್ರಿ ಹೇಮಂತ್, ಹಾಲಿ ಮುಖ್ಯಮಂತ್ರಿಗಿಂತ ಹೆಚ್ಚು ಕಾಲ ಸದನವನ್ನು ಉದ್ದೇಶಿಸಿ ಮಾತನಾಡಿದರು. ಚಂಪೈ ಸೊರೇನ್ ಅವರು ವಿಶ್ವಾಸ ಮತವನ್ನು ಎದುರಿಸುತ್ತಿದ್ದರೆ; ಹೇಮಂತ್ ಸೊರೇನ್ ಅವರು ಅದರ ಉಸ್ತುವಾರಿ ವಹಿಸಿದ್ದ ಚಿತ್ರಣ ಇಂದು ಜಾರ್ಖಂಡ್ ವಿಧಾನಸಭೆಯಲ್ಲಿ ಕಂಡುಬಂತು.

ಜಾರ್ಖಂಡ್ ಮುಕ್ತಿ ಮೋರ್ಚಾದ 48 ವರ್ಷದ ಕಾರ್ಯಾಧ್ಯಕ್ಷ ಹೇಮಂತ್, ತಮ್ಮ ತಂದೆ ಮತ್ತು ಪಕ್ಷದ ಸಂಸ್ಥಾಪಕ ಶಿಬು ಸೊರೇನ್ ಅವರ ನೆರಳಿನಲ್ಲಿ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು. ಕಳೆದ ವಾರ ಜಾರ್ಖಂಡ್‌ನಲ್ಲಿ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದ ಚತುರ ರಾಜಕೀಯ ನಡೆಗಳಿಂದ ಅನೇಕರನ್ನು ಆಶ್ಚರ್ಯಗೊಳಿಸಿದ್ದಾರೆ. ಹೇಮಂತ್ ಸೊರೇನ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಡೆಯಲು ಮತ್ತು ತಮ್ಮ ಆಪ್ತರಿಗೆ ಅಧಿಕಾರವನ್ನು ಸುಗಮವಾಗಿ ಹಸ್ತಾಂತರಿಸುವಲ್ಲಿ ಹೇಗೆ ಯಶಸ್ವಿಯಾದರು ಎಂಬುದರ ಬಗ್ಗೆ ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕಳೆದ ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಆಗಮಿಸಿ ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿತ್ತು. ದಾಳಿ ಸಂದರ್ಭದಲ್ಲಿ, ಸೊರೇನ್ ಪತ್ತೆಯಾಗಿರಲಿಲ್ಲ; ಅವರ ಸಿಬ್ಬಂದಿಗಳಿಗೂ ಅವರ ಇರುವಿಕೆಯ ಬಗ್ಗೆ ಸುಳಿವು ಇರಲಿಲ್ಲ. ಈ ಅವಕಾಶವನ್ನು ತ್ವರಿತವಾಗಿ ಬಳಸಿಕೊಂಡ ಬಿಜೆಪಿಯು, ಮುಖ್ಯಮಂತ್ರಿಯನ್ನು “ಕಾಣೆಯಾಗಿದೆ” ಎಂದು ಘೋಷಿಸಿತು. ಜಾರ್ಖಂಡ್ ರಾಜ್ಯವು ಸಾಂವಿಧಾನಿಕ ಬಿಕ್ಕಟ್ಟಿನ ಮಧ್ಯದಲ್ಲಿದೆ ಎಂದು ಹೇಳಿತು. ಆದರೆ ಪಕ್ಷ ಮಾತ್ರ, ‘ಹೇಮಂತ್ ಸೊರೇನ್ ನಮ್ಮ ಸಂಪರ್ಕದಲ್ಲಿದ್ದಾರೆ, ಅವರು ಜನವರಿ 31 ರಂದು ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುತ್ತಾರೆ’ ಎಂದು ಭರವಸೆ ನೀಡಿದರು. ‘ಹೇಮಂತ್ ಸೊರೇನ್ ದೆಹಲಿ ತಲುಪಿದ ವಿಶೇಷ ವಿಮಾನವು ವಿಮಾನ ಏರ್‌ಪೋರ್ಟಿನಲ್ಲೆ ನಿಂತಿದೆ, ಹೇಮಂತ್ ಸೊರೇನ್ ಎಲ್ಲಿದ್ದಾರೆ ಎಂಬ ಬಗ್ಗೆ ತಿಳಿದಿಲ್ಲ’ ಎಂದು ಇಡಿ ಅಧಿಕಾರಿಗಳು ಹೇಳಿದರು.

ಜನವರಿ 30ರಂದು ಹೇಮಂತ್ ಸೊರೇನ್ ರಾಂಚಿಯಲ್ಲಿ ಕಾಣಿಸಿಕೊಂಡರು. ಜೆಎಂಎಂ ಮತ್ತು ಕಾಂಗ್ರೆಸ್, ಆರ್‌ಜೆಡಿಯ ಆಡಳಿತ ಒಕ್ಕೂಟದ ಶಾಸಕರನ್ನು ಭೇಟಿಯಾದರು. 1,300 ಕಿಮೀ ದೂರದ ರಸ್ತೆ ಪ್ರಯಾಣದ ಮೂಲಕ ಅವರು ಮಾಧ್ಯಮಗಳು, ಇಡಿ ಮತ್ತು ಟೋಲ್ ಬೂತ್ ಕ್ಯಾಮೆರಾಗಳ ಕಣ್ತಪ್ಪಿಸಿ, ಅವರು ರಾಂಚಿ ತಲುಪುವಲ್ಲಿ ಯಶಸ್ವಿಯಾಗಿದ್ದರು.

ವಾಸ್ತವವಾಗಿ, ಜಾರ್ಖಂಡ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರು ಭಾನುವಾರ ರಾತ್ರಿ ಸೊರೇನ್ ತಮ್ಮ ದೆಹಲಿ ನಿವಾಸದಿಂದ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ್ದರು. ಆದರೆ, ಇಡಿ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ಮಾಡುತ್ತಾರೆ ಮತ್ತು ಸಮಯಕ್ಕೆ ಸರಿಯಾಗಿ ತಲುಪುತ್ತಾರೆ ಎಂದು ಮುಖ್ಯಮಂತ್ರಿಗೆ ಹೇಗೆ ತಿಳಿದಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಹೇಮಂತ್ ಸೊರೇನ್ ಅವರನ್ನು ಬುಧವಾರದವರೆಗೆ ಇಡಿ ಅಧಿಕಾರಿಗಳು ಪ್ರಶ್ನಿಸಿದರು. ಅವರನ್ನು ಬಂಧಿಸಲಾಗುವುದು ಎಂದು ಸ್ಪಷ್ಟವಾದಾಗ, ಅವರು ತಮ್ಮ ಸರ್ಕಾರವನ್ನು ಉಳಿಸುವ ದಿಟ್ಟ ನಡೆಗೆ ಮುಮದಾದರು. ಇಡಿ ಮೂಲಗಳ ಪ್ರಕಾರ, ಹೇಮಂತ್ ಸೊರೇನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಬಂಧನ ಮೆಮೊಗೆ ಸಹಿ ಹಾಕಲು ನಿರಾಕರಿಸಿದ್ದರು ಎನ್ನಲಾಗಿದೆ. ಹಾಲಿ ಮುಖ್ಯಮಂತ್ರಿಯನ್ನು ಬಂಧಿಸಿದರೆ ಸಾಂವಿಧಾನಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ರಾಜೀನಾಮೆ ಸಲ್ಲಿಸಿ, ಶಾಸಕಾಂಗ ಪಕ್ಷದ ಸಭೆ ನಡೆಸಿದ ನಂತರ ಇಡಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು.

ಮೆಮೊಗೆ ಸಹಿ ಹಾಕಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಹೇಮಂತ್ ಸೊರೇನ್ ಅವರನ್ನು ರಾಜ್ಯಪಾಲರ ನಿವಾಸಕ್ಕೆ ಕರೆದೊಯ್ದರು. ಆದರೆ, ಅಲ್ಲಿಗೆ ಹೋದಾಗ ಆಡಳಿತಾರೂಢ ಸಮ್ಮಿಶ್ರ ಪಕ್ಷದ ಉನ್ನತ ಶಾಸಕರು ಅವರ ಜೊತೆಗಿದ್ದರು. ಹೇಮಂತ್ ಸೊರೇನ್ ಕೆಳಗಿಳಿದ ತಕ್ಷಣ, ಚಂಪೈ ಸೊರೇನ್ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಇದಕ್ಕೂ ಮೊದಲು, ಚಂಪೈ ಸೊರೇನ್ ಅವರು ಜೆಎಂಎಂನ ಶಾಸಕಾಂಗ ಪಕ್ಷದ ನಾಯಕರಾಗಿ ಚುನಾಯಿತರಾಗಿದ್ದರು. ಹೇಮಂತ್ ಸೊರೇನ್ ಅವರು ತಮ್ಮ ಪತ್ನಿ ಕಲ್ಪನಾ ಅವರಿಗೆ ಅಧಿಕಾರ ನೀಡಬಹುದು ಎಂಬ ಊಹಾಪೋಹಗಳಿಗೆ ಅಂತ್ಯ ಹಾಡಿದರು. ವಾಸ್ತವವಾಗಿ ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ಸೊರೇನ್ ಕುಟುಂಬದಿಂದಲೇ ವಿರೋಧ ವ್ಯಕ್ತವಾಗಿತ್ತು ಎಂದು ಹೇಮಂತ್ ಸೊರೇನ್ ಅವರ ಸೊಸೆ, ಜಾಮಾದ ಜೆಎಂಎಂ ಶಾಸಕಿ ಸೀತಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಯಾವುದೇ ಕ್ರಮವನ್ನು ನಾನು ವಿರೋಧಿಸುತ್ತೇನೆ. ಏಕೆಂದರೆ, ಅವರಿಗೆ ರಾಜಕೀಯದ ಅನುಭವವಿಲ್ಲ ಎಂದಿದ್ದರು. ಪಕ್ಷದ ನಾಯಕತ್ವವು ಈ ನಿರ್ಣಾಯಕ ಹಂತದಲ್ಲಿ ಬಿರುಕು ಉಂಟುಮಾಡುವ ಯಾವುದೇ ಮನಸ್ಥಿತಿಯಿಲ್ಲದೆ, ಸುರಕ್ಷಿತ ಆಯ್ಕೆಯತ್ತ ಹೋಯಿತು. ಅಂತಿಮವಾಗಿ ಶಿಬು ಸೊರೇನ್ ಅವರ ದೀರ್ಘಾವಧಿಯ ಸಹಾಯಕ, 67 ವರ್ಷದ ಚಂಪೈ ಸೊರೇನ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಹೇಮಂತ್ ಸೊರೇನ್ ಅವರು ಜನವರಿ 31 ರಂದು ಅಧಿಕಾರದಿಂದ ಕೆಳಗಿಳಿದ ಕೂಡಲೇ ಚಂಪೈ ಸೊರೇನ್ ಅವರು ಹಕ್ಕು ಚಲಾಯಿಸಿದ್ದರೂ ಸಹ, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಜಾರ್ಖಂಡ್‌ನಲ್ಲಿ ಸರ್ಕಾರ ರಚನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಜೆಎಂಎಂ ಮತ್ತು ಕಾಂಗ್ರೆಸ್ ಆರೋಪಿಸಿದೆ. ಫೆಬ್ರವರಿ 1 ರಂದು ಚಂಪೈ ಸೊರೇನ್ ಅವರು ರಾಜ್ಯಪಾಲರಿಗೆ ಪತ್ರ ಬರೆದು, ಕಳೆದ 18 ಗಂಟೆಗಳ ಕಾಲದಿಂದ  ಜಾರ್ಖಂಡ್ ರಾಜ್ಯದಲ್ಲಿ ಸರ್ಕಾರವಿಲ್ಲ; ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಅದೇ ದಿನ, ಅವರು ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ಇತರ ನಾಯಕರು ರಾಜ್ಯಪಾಲರನ್ನು ಭೇಟಿಯಾದರು. ವಾಸ್ತವವಾಗಿ, ಚಂಪೈ ಸೊರೇನ್ ಅವರನ್ನು ಬೆಂಬಲಿಸುವ ಶಾಸಕರು ಸಹಿ ಸಂಗ್ರಹಿಸಿ, ತಮ್ಮ ಬೆಂಬ ರೆಕಾರ್ಡ್ ಮಾಡಿ ಬಹುಮತದ ಪುರಾವೆಯಾಗಿ ರಾಜ್ಯಪಾಲರಿಗೆ ತೋರಿಸಿದರು.

ಮರುದಿನ, ಚಂಪೈ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ, ಮೈತ್ರಿ ಪಕ್ಷಗಳ ಇಬ್ಬರು ಶಾಸಕರಾದ ಕಾಂಗ್ರೆಸ್‌ನ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು.

ಚಂಪೈ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ನಿಜವಾದ ಯುದ್ಧ ಇಂದು ವಿಶ್ವಾಸಮತ ಗಳಿಸುವ ಪರೀಕ್ಷೆಯಾಗಿತ್ತು. ಚಂಪೈ ಸೊರೇನ್ ಮತ್ತು ಅವರ ಇಬ್ಬರು ಪ್ರತಿನಿಧಿಗಳು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಆಡಳಿತಾರೂಢ ಸಮ್ಮಿಶ್ರ ಶಾಸಕರನ್ನು ಹೈದರಾಬಾದ್‌ಗೆ ವಿಮಾನದಲ್ಲಿ ಕಳುಹಿಸಲಾಗಿತ್ತು. ನಿರ್ಣಾಯಕ ಬಹುಮತ ಯಾಚನೆಗೆ ಮುನ್ನ ಬಿಜೆಪಿಯಿಂದ ಯಾವುದೇ ಕಳ್ಳಬೇಟೆಯ ಪ್ರಯತ್ನವನ್ನು ತಡೆಯಲು ಅವರನ್ನು ಹೈದರಾಬಾದ್‌ನ ಖಾಸಗಿ ರೆಸಾರ್ಟ್‌ನಲ್ಲಿ ಇರಿಸಲಾಗಿತ್ತು. ಈ ಮಧ್ಯೆ, ಹೇಮಂತ್ ಸೊರೇನ್ ಅವರು ಬಹುಮತಕ್ಕೆ ಹಾಜರಾಗಲು ಅನುಮತಿಗಾಗಿ ನ್ಯಾಯಾಲಯದಲ್ಲಿ ವಿನಂತಿಯನ್ನು ಸಲ್ಲಿಸಿದರು. ಜೆಎಂಎಂ ನಾಯಕತ್ವವು ಲೋಬಿನ್ ಹೆಂಬ್ರೋಮ್‌ನಂತಹ ಅಸಮಾಧಾನಗೊಂಡ ಶಾಸಕರನ್ನು ಸಮಾಧಾನಪಡಿಸಲು ಪ್ರಾರಂಭಿಸಿತು.

ಬಲ ಪರೀಕ್ಷೆಗೆ ಮುಂಚಿತವಾಗಿಯೆ, ಹೈದರಾಬಾದ್‌ನಲ್ಲಿ ಬೀಡುಬಿಟ್ಟಿದ್ದ ಶಾಸಕರನ್ನು ರಾಂಚಿಗೆ ಹಿಂತಿರುಗಿಸಲಾಯಿತು. ಹೇಮಂತ್ ಸೊರೇನ್ ಕೂಡ ಸಮಯಕ್ಕೆ ಸರಿಯಾಗಿ ವಿಧಾನಸಭೆ ತಲುಪಿದರು. ಇದರ ಪರಿಣಾಮವಾಗಿ ಚಂಪೈ ಸೊರೇನ್ ಅವರ ಪರವಾಗಿ 47 ಮತಗಳೊಂದಿಗೆ ವಿಶ್ವಾಸ ಮತವನ್ನು ತೆರವುಗೊಳಿಸಿದರು. ಅವರ ವಿರುದ್ಧ ಇಪ್ಪತ್ತೊಂಬತ್ತು ಮತಗಳು ಚಲಾವಣೆಯಾದವು.

ಇದನ್ನೂ ಓದಿ; ‘ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ’: ಹೇಮಂತ್‌ ಸೊರೆನ್‌ ಭಾವುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...