Homeಮುಖಪುಟ'ವಿಶ್ವಾಸ' ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ 'ರಾಷ್ಟ್ರಪತಿ ಆಳ್ವಿಕೆ' ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

‘ವಿಶ್ವಾಸ’ ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ ‘ರಾಷ್ಟ್ರಪತಿ ಆಳ್ವಿಕೆ’ ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

- Advertisement -
- Advertisement -

ಜಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸ ಮತದ ಮೊದಲು ಹೇಳಿಕೆ ನೀಡಿದ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು, ಹಿಂದಿನ ಮುಖ್ಯಮಂತ್ರಿಯನ್ನು “ಹೇಮಂತ್ ಬಾಬು” ಎಂದು ಉಲ್ಲೇಖಿಸಿದ್ದಾರೆ. ‘ಹೇಮಂತ್ ಸೊರೇನ್ ಭಾಗ 2″ ಎಂದು ಸರ್ಕಾರವನ್ನು ನಡೆಸುವುದಾಗಿ ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆಯ ಆರೋಪದ ನಡುವೆ ರಾಜೀನಾಮೆ ನೀಡುವಂತೆ ಒತ್ತಾಯಿಸಲ್ಪಟ್ಟ ನಂತರ, ಜೈಲು ಪಾಲಾದ ಮಾಜಿ ಮುಖ್ಯಮಂತ್ರಿ ಹೇಮಂತ್, ಹಾಲಿ ಮುಖ್ಯಮಂತ್ರಿಗಿಂತ ಹೆಚ್ಚು ಕಾಲ ಸದನವನ್ನು ಉದ್ದೇಶಿಸಿ ಮಾತನಾಡಿದರು. ಚಂಪೈ ಸೊರೇನ್ ಅವರು ವಿಶ್ವಾಸ ಮತವನ್ನು ಎದುರಿಸುತ್ತಿದ್ದರೆ; ಹೇಮಂತ್ ಸೊರೇನ್ ಅವರು ಅದರ ಉಸ್ತುವಾರಿ ವಹಿಸಿದ್ದ ಚಿತ್ರಣ ಇಂದು ಜಾರ್ಖಂಡ್ ವಿಧಾನಸಭೆಯಲ್ಲಿ ಕಂಡುಬಂತು.

ಜಾರ್ಖಂಡ್ ಮುಕ್ತಿ ಮೋರ್ಚಾದ 48 ವರ್ಷದ ಕಾರ್ಯಾಧ್ಯಕ್ಷ ಹೇಮಂತ್, ತಮ್ಮ ತಂದೆ ಮತ್ತು ಪಕ್ಷದ ಸಂಸ್ಥಾಪಕ ಶಿಬು ಸೊರೇನ್ ಅವರ ನೆರಳಿನಲ್ಲಿ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು. ಕಳೆದ ವಾರ ಜಾರ್ಖಂಡ್‌ನಲ್ಲಿ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದ ಚತುರ ರಾಜಕೀಯ ನಡೆಗಳಿಂದ ಅನೇಕರನ್ನು ಆಶ್ಚರ್ಯಗೊಳಿಸಿದ್ದಾರೆ. ಹೇಮಂತ್ ಸೊರೇನ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಡೆಯಲು ಮತ್ತು ತಮ್ಮ ಆಪ್ತರಿಗೆ ಅಧಿಕಾರವನ್ನು ಸುಗಮವಾಗಿ ಹಸ್ತಾಂತರಿಸುವಲ್ಲಿ ಹೇಗೆ ಯಶಸ್ವಿಯಾದರು ಎಂಬುದರ ಬಗ್ಗೆ ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕಳೆದ ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಆಗಮಿಸಿ ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿತ್ತು. ದಾಳಿ ಸಂದರ್ಭದಲ್ಲಿ, ಸೊರೇನ್ ಪತ್ತೆಯಾಗಿರಲಿಲ್ಲ; ಅವರ ಸಿಬ್ಬಂದಿಗಳಿಗೂ ಅವರ ಇರುವಿಕೆಯ ಬಗ್ಗೆ ಸುಳಿವು ಇರಲಿಲ್ಲ. ಈ ಅವಕಾಶವನ್ನು ತ್ವರಿತವಾಗಿ ಬಳಸಿಕೊಂಡ ಬಿಜೆಪಿಯು, ಮುಖ್ಯಮಂತ್ರಿಯನ್ನು “ಕಾಣೆಯಾಗಿದೆ” ಎಂದು ಘೋಷಿಸಿತು. ಜಾರ್ಖಂಡ್ ರಾಜ್ಯವು ಸಾಂವಿಧಾನಿಕ ಬಿಕ್ಕಟ್ಟಿನ ಮಧ್ಯದಲ್ಲಿದೆ ಎಂದು ಹೇಳಿತು. ಆದರೆ ಪಕ್ಷ ಮಾತ್ರ, ‘ಹೇಮಂತ್ ಸೊರೇನ್ ನಮ್ಮ ಸಂಪರ್ಕದಲ್ಲಿದ್ದಾರೆ, ಅವರು ಜನವರಿ 31 ರಂದು ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುತ್ತಾರೆ’ ಎಂದು ಭರವಸೆ ನೀಡಿದರು. ‘ಹೇಮಂತ್ ಸೊರೇನ್ ದೆಹಲಿ ತಲುಪಿದ ವಿಶೇಷ ವಿಮಾನವು ವಿಮಾನ ಏರ್‌ಪೋರ್ಟಿನಲ್ಲೆ ನಿಂತಿದೆ, ಹೇಮಂತ್ ಸೊರೇನ್ ಎಲ್ಲಿದ್ದಾರೆ ಎಂಬ ಬಗ್ಗೆ ತಿಳಿದಿಲ್ಲ’ ಎಂದು ಇಡಿ ಅಧಿಕಾರಿಗಳು ಹೇಳಿದರು.

ಜನವರಿ 30ರಂದು ಹೇಮಂತ್ ಸೊರೇನ್ ರಾಂಚಿಯಲ್ಲಿ ಕಾಣಿಸಿಕೊಂಡರು. ಜೆಎಂಎಂ ಮತ್ತು ಕಾಂಗ್ರೆಸ್, ಆರ್‌ಜೆಡಿಯ ಆಡಳಿತ ಒಕ್ಕೂಟದ ಶಾಸಕರನ್ನು ಭೇಟಿಯಾದರು. 1,300 ಕಿಮೀ ದೂರದ ರಸ್ತೆ ಪ್ರಯಾಣದ ಮೂಲಕ ಅವರು ಮಾಧ್ಯಮಗಳು, ಇಡಿ ಮತ್ತು ಟೋಲ್ ಬೂತ್ ಕ್ಯಾಮೆರಾಗಳ ಕಣ್ತಪ್ಪಿಸಿ, ಅವರು ರಾಂಚಿ ತಲುಪುವಲ್ಲಿ ಯಶಸ್ವಿಯಾಗಿದ್ದರು.

ವಾಸ್ತವವಾಗಿ, ಜಾರ್ಖಂಡ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರು ಭಾನುವಾರ ರಾತ್ರಿ ಸೊರೇನ್ ತಮ್ಮ ದೆಹಲಿ ನಿವಾಸದಿಂದ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ್ದರು. ಆದರೆ, ಇಡಿ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ಮಾಡುತ್ತಾರೆ ಮತ್ತು ಸಮಯಕ್ಕೆ ಸರಿಯಾಗಿ ತಲುಪುತ್ತಾರೆ ಎಂದು ಮುಖ್ಯಮಂತ್ರಿಗೆ ಹೇಗೆ ತಿಳಿದಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಹೇಮಂತ್ ಸೊರೇನ್ ಅವರನ್ನು ಬುಧವಾರದವರೆಗೆ ಇಡಿ ಅಧಿಕಾರಿಗಳು ಪ್ರಶ್ನಿಸಿದರು. ಅವರನ್ನು ಬಂಧಿಸಲಾಗುವುದು ಎಂದು ಸ್ಪಷ್ಟವಾದಾಗ, ಅವರು ತಮ್ಮ ಸರ್ಕಾರವನ್ನು ಉಳಿಸುವ ದಿಟ್ಟ ನಡೆಗೆ ಮುಮದಾದರು. ಇಡಿ ಮೂಲಗಳ ಪ್ರಕಾರ, ಹೇಮಂತ್ ಸೊರೇನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಬಂಧನ ಮೆಮೊಗೆ ಸಹಿ ಹಾಕಲು ನಿರಾಕರಿಸಿದ್ದರು ಎನ್ನಲಾಗಿದೆ. ಹಾಲಿ ಮುಖ್ಯಮಂತ್ರಿಯನ್ನು ಬಂಧಿಸಿದರೆ ಸಾಂವಿಧಾನಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ರಾಜೀನಾಮೆ ಸಲ್ಲಿಸಿ, ಶಾಸಕಾಂಗ ಪಕ್ಷದ ಸಭೆ ನಡೆಸಿದ ನಂತರ ಇಡಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು.

ಮೆಮೊಗೆ ಸಹಿ ಹಾಕಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಹೇಮಂತ್ ಸೊರೇನ್ ಅವರನ್ನು ರಾಜ್ಯಪಾಲರ ನಿವಾಸಕ್ಕೆ ಕರೆದೊಯ್ದರು. ಆದರೆ, ಅಲ್ಲಿಗೆ ಹೋದಾಗ ಆಡಳಿತಾರೂಢ ಸಮ್ಮಿಶ್ರ ಪಕ್ಷದ ಉನ್ನತ ಶಾಸಕರು ಅವರ ಜೊತೆಗಿದ್ದರು. ಹೇಮಂತ್ ಸೊರೇನ್ ಕೆಳಗಿಳಿದ ತಕ್ಷಣ, ಚಂಪೈ ಸೊರೇನ್ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಇದಕ್ಕೂ ಮೊದಲು, ಚಂಪೈ ಸೊರೇನ್ ಅವರು ಜೆಎಂಎಂನ ಶಾಸಕಾಂಗ ಪಕ್ಷದ ನಾಯಕರಾಗಿ ಚುನಾಯಿತರಾಗಿದ್ದರು. ಹೇಮಂತ್ ಸೊರೇನ್ ಅವರು ತಮ್ಮ ಪತ್ನಿ ಕಲ್ಪನಾ ಅವರಿಗೆ ಅಧಿಕಾರ ನೀಡಬಹುದು ಎಂಬ ಊಹಾಪೋಹಗಳಿಗೆ ಅಂತ್ಯ ಹಾಡಿದರು. ವಾಸ್ತವವಾಗಿ ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ಸೊರೇನ್ ಕುಟುಂಬದಿಂದಲೇ ವಿರೋಧ ವ್ಯಕ್ತವಾಗಿತ್ತು ಎಂದು ಹೇಮಂತ್ ಸೊರೇನ್ ಅವರ ಸೊಸೆ, ಜಾಮಾದ ಜೆಎಂಎಂ ಶಾಸಕಿ ಸೀತಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಯಾವುದೇ ಕ್ರಮವನ್ನು ನಾನು ವಿರೋಧಿಸುತ್ತೇನೆ. ಏಕೆಂದರೆ, ಅವರಿಗೆ ರಾಜಕೀಯದ ಅನುಭವವಿಲ್ಲ ಎಂದಿದ್ದರು. ಪಕ್ಷದ ನಾಯಕತ್ವವು ಈ ನಿರ್ಣಾಯಕ ಹಂತದಲ್ಲಿ ಬಿರುಕು ಉಂಟುಮಾಡುವ ಯಾವುದೇ ಮನಸ್ಥಿತಿಯಿಲ್ಲದೆ, ಸುರಕ್ಷಿತ ಆಯ್ಕೆಯತ್ತ ಹೋಯಿತು. ಅಂತಿಮವಾಗಿ ಶಿಬು ಸೊರೇನ್ ಅವರ ದೀರ್ಘಾವಧಿಯ ಸಹಾಯಕ, 67 ವರ್ಷದ ಚಂಪೈ ಸೊರೇನ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಹೇಮಂತ್ ಸೊರೇನ್ ಅವರು ಜನವರಿ 31 ರಂದು ಅಧಿಕಾರದಿಂದ ಕೆಳಗಿಳಿದ ಕೂಡಲೇ ಚಂಪೈ ಸೊರೇನ್ ಅವರು ಹಕ್ಕು ಚಲಾಯಿಸಿದ್ದರೂ ಸಹ, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಜಾರ್ಖಂಡ್‌ನಲ್ಲಿ ಸರ್ಕಾರ ರಚನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಜೆಎಂಎಂ ಮತ್ತು ಕಾಂಗ್ರೆಸ್ ಆರೋಪಿಸಿದೆ. ಫೆಬ್ರವರಿ 1 ರಂದು ಚಂಪೈ ಸೊರೇನ್ ಅವರು ರಾಜ್ಯಪಾಲರಿಗೆ ಪತ್ರ ಬರೆದು, ಕಳೆದ 18 ಗಂಟೆಗಳ ಕಾಲದಿಂದ  ಜಾರ್ಖಂಡ್ ರಾಜ್ಯದಲ್ಲಿ ಸರ್ಕಾರವಿಲ್ಲ; ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಅದೇ ದಿನ, ಅವರು ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ಇತರ ನಾಯಕರು ರಾಜ್ಯಪಾಲರನ್ನು ಭೇಟಿಯಾದರು. ವಾಸ್ತವವಾಗಿ, ಚಂಪೈ ಸೊರೇನ್ ಅವರನ್ನು ಬೆಂಬಲಿಸುವ ಶಾಸಕರು ಸಹಿ ಸಂಗ್ರಹಿಸಿ, ತಮ್ಮ ಬೆಂಬ ರೆಕಾರ್ಡ್ ಮಾಡಿ ಬಹುಮತದ ಪುರಾವೆಯಾಗಿ ರಾಜ್ಯಪಾಲರಿಗೆ ತೋರಿಸಿದರು.

ಮರುದಿನ, ಚಂಪೈ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ, ಮೈತ್ರಿ ಪಕ್ಷಗಳ ಇಬ್ಬರು ಶಾಸಕರಾದ ಕಾಂಗ್ರೆಸ್‌ನ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು.

ಚಂಪೈ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ನಿಜವಾದ ಯುದ್ಧ ಇಂದು ವಿಶ್ವಾಸಮತ ಗಳಿಸುವ ಪರೀಕ್ಷೆಯಾಗಿತ್ತು. ಚಂಪೈ ಸೊರೇನ್ ಮತ್ತು ಅವರ ಇಬ್ಬರು ಪ್ರತಿನಿಧಿಗಳು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಆಡಳಿತಾರೂಢ ಸಮ್ಮಿಶ್ರ ಶಾಸಕರನ್ನು ಹೈದರಾಬಾದ್‌ಗೆ ವಿಮಾನದಲ್ಲಿ ಕಳುಹಿಸಲಾಗಿತ್ತು. ನಿರ್ಣಾಯಕ ಬಹುಮತ ಯಾಚನೆಗೆ ಮುನ್ನ ಬಿಜೆಪಿಯಿಂದ ಯಾವುದೇ ಕಳ್ಳಬೇಟೆಯ ಪ್ರಯತ್ನವನ್ನು ತಡೆಯಲು ಅವರನ್ನು ಹೈದರಾಬಾದ್‌ನ ಖಾಸಗಿ ರೆಸಾರ್ಟ್‌ನಲ್ಲಿ ಇರಿಸಲಾಗಿತ್ತು. ಈ ಮಧ್ಯೆ, ಹೇಮಂತ್ ಸೊರೇನ್ ಅವರು ಬಹುಮತಕ್ಕೆ ಹಾಜರಾಗಲು ಅನುಮತಿಗಾಗಿ ನ್ಯಾಯಾಲಯದಲ್ಲಿ ವಿನಂತಿಯನ್ನು ಸಲ್ಲಿಸಿದರು. ಜೆಎಂಎಂ ನಾಯಕತ್ವವು ಲೋಬಿನ್ ಹೆಂಬ್ರೋಮ್‌ನಂತಹ ಅಸಮಾಧಾನಗೊಂಡ ಶಾಸಕರನ್ನು ಸಮಾಧಾನಪಡಿಸಲು ಪ್ರಾರಂಭಿಸಿತು.

ಬಲ ಪರೀಕ್ಷೆಗೆ ಮುಂಚಿತವಾಗಿಯೆ, ಹೈದರಾಬಾದ್‌ನಲ್ಲಿ ಬೀಡುಬಿಟ್ಟಿದ್ದ ಶಾಸಕರನ್ನು ರಾಂಚಿಗೆ ಹಿಂತಿರುಗಿಸಲಾಯಿತು. ಹೇಮಂತ್ ಸೊರೇನ್ ಕೂಡ ಸಮಯಕ್ಕೆ ಸರಿಯಾಗಿ ವಿಧಾನಸಭೆ ತಲುಪಿದರು. ಇದರ ಪರಿಣಾಮವಾಗಿ ಚಂಪೈ ಸೊರೇನ್ ಅವರ ಪರವಾಗಿ 47 ಮತಗಳೊಂದಿಗೆ ವಿಶ್ವಾಸ ಮತವನ್ನು ತೆರವುಗೊಳಿಸಿದರು. ಅವರ ವಿರುದ್ಧ ಇಪ್ಪತ್ತೊಂಬತ್ತು ಮತಗಳು ಚಲಾವಣೆಯಾದವು.

ಇದನ್ನೂ ಓದಿ; ‘ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ’: ಹೇಮಂತ್‌ ಸೊರೆನ್‌ ಭಾವುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...