Homeಮುಖಪುಟ'ವಿಶ್ವಾಸ' ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ 'ರಾಷ್ಟ್ರಪತಿ ಆಳ್ವಿಕೆ' ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

‘ವಿಶ್ವಾಸ’ ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ ‘ರಾಷ್ಟ್ರಪತಿ ಆಳ್ವಿಕೆ’ ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

- Advertisement -
- Advertisement -

ಜಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸ ಮತದ ಮೊದಲು ಹೇಳಿಕೆ ನೀಡಿದ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು, ಹಿಂದಿನ ಮುಖ್ಯಮಂತ್ರಿಯನ್ನು “ಹೇಮಂತ್ ಬಾಬು” ಎಂದು ಉಲ್ಲೇಖಿಸಿದ್ದಾರೆ. ‘ಹೇಮಂತ್ ಸೊರೇನ್ ಭಾಗ 2″ ಎಂದು ಸರ್ಕಾರವನ್ನು ನಡೆಸುವುದಾಗಿ ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆಯ ಆರೋಪದ ನಡುವೆ ರಾಜೀನಾಮೆ ನೀಡುವಂತೆ ಒತ್ತಾಯಿಸಲ್ಪಟ್ಟ ನಂತರ, ಜೈಲು ಪಾಲಾದ ಮಾಜಿ ಮುಖ್ಯಮಂತ್ರಿ ಹೇಮಂತ್, ಹಾಲಿ ಮುಖ್ಯಮಂತ್ರಿಗಿಂತ ಹೆಚ್ಚು ಕಾಲ ಸದನವನ್ನು ಉದ್ದೇಶಿಸಿ ಮಾತನಾಡಿದರು. ಚಂಪೈ ಸೊರೇನ್ ಅವರು ವಿಶ್ವಾಸ ಮತವನ್ನು ಎದುರಿಸುತ್ತಿದ್ದರೆ; ಹೇಮಂತ್ ಸೊರೇನ್ ಅವರು ಅದರ ಉಸ್ತುವಾರಿ ವಹಿಸಿದ್ದ ಚಿತ್ರಣ ಇಂದು ಜಾರ್ಖಂಡ್ ವಿಧಾನಸಭೆಯಲ್ಲಿ ಕಂಡುಬಂತು.

ಜಾರ್ಖಂಡ್ ಮುಕ್ತಿ ಮೋರ್ಚಾದ 48 ವರ್ಷದ ಕಾರ್ಯಾಧ್ಯಕ್ಷ ಹೇಮಂತ್, ತಮ್ಮ ತಂದೆ ಮತ್ತು ಪಕ್ಷದ ಸಂಸ್ಥಾಪಕ ಶಿಬು ಸೊರೇನ್ ಅವರ ನೆರಳಿನಲ್ಲಿ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು. ಕಳೆದ ವಾರ ಜಾರ್ಖಂಡ್‌ನಲ್ಲಿ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದ ಚತುರ ರಾಜಕೀಯ ನಡೆಗಳಿಂದ ಅನೇಕರನ್ನು ಆಶ್ಚರ್ಯಗೊಳಿಸಿದ್ದಾರೆ. ಹೇಮಂತ್ ಸೊರೇನ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಡೆಯಲು ಮತ್ತು ತಮ್ಮ ಆಪ್ತರಿಗೆ ಅಧಿಕಾರವನ್ನು ಸುಗಮವಾಗಿ ಹಸ್ತಾಂತರಿಸುವಲ್ಲಿ ಹೇಗೆ ಯಶಸ್ವಿಯಾದರು ಎಂಬುದರ ಬಗ್ಗೆ ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕಳೆದ ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಆಗಮಿಸಿ ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿತ್ತು. ದಾಳಿ ಸಂದರ್ಭದಲ್ಲಿ, ಸೊರೇನ್ ಪತ್ತೆಯಾಗಿರಲಿಲ್ಲ; ಅವರ ಸಿಬ್ಬಂದಿಗಳಿಗೂ ಅವರ ಇರುವಿಕೆಯ ಬಗ್ಗೆ ಸುಳಿವು ಇರಲಿಲ್ಲ. ಈ ಅವಕಾಶವನ್ನು ತ್ವರಿತವಾಗಿ ಬಳಸಿಕೊಂಡ ಬಿಜೆಪಿಯು, ಮುಖ್ಯಮಂತ್ರಿಯನ್ನು “ಕಾಣೆಯಾಗಿದೆ” ಎಂದು ಘೋಷಿಸಿತು. ಜಾರ್ಖಂಡ್ ರಾಜ್ಯವು ಸಾಂವಿಧಾನಿಕ ಬಿಕ್ಕಟ್ಟಿನ ಮಧ್ಯದಲ್ಲಿದೆ ಎಂದು ಹೇಳಿತು. ಆದರೆ ಪಕ್ಷ ಮಾತ್ರ, ‘ಹೇಮಂತ್ ಸೊರೇನ್ ನಮ್ಮ ಸಂಪರ್ಕದಲ್ಲಿದ್ದಾರೆ, ಅವರು ಜನವರಿ 31 ರಂದು ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುತ್ತಾರೆ’ ಎಂದು ಭರವಸೆ ನೀಡಿದರು. ‘ಹೇಮಂತ್ ಸೊರೇನ್ ದೆಹಲಿ ತಲುಪಿದ ವಿಶೇಷ ವಿಮಾನವು ವಿಮಾನ ಏರ್‌ಪೋರ್ಟಿನಲ್ಲೆ ನಿಂತಿದೆ, ಹೇಮಂತ್ ಸೊರೇನ್ ಎಲ್ಲಿದ್ದಾರೆ ಎಂಬ ಬಗ್ಗೆ ತಿಳಿದಿಲ್ಲ’ ಎಂದು ಇಡಿ ಅಧಿಕಾರಿಗಳು ಹೇಳಿದರು.

ಜನವರಿ 30ರಂದು ಹೇಮಂತ್ ಸೊರೇನ್ ರಾಂಚಿಯಲ್ಲಿ ಕಾಣಿಸಿಕೊಂಡರು. ಜೆಎಂಎಂ ಮತ್ತು ಕಾಂಗ್ರೆಸ್, ಆರ್‌ಜೆಡಿಯ ಆಡಳಿತ ಒಕ್ಕೂಟದ ಶಾಸಕರನ್ನು ಭೇಟಿಯಾದರು. 1,300 ಕಿಮೀ ದೂರದ ರಸ್ತೆ ಪ್ರಯಾಣದ ಮೂಲಕ ಅವರು ಮಾಧ್ಯಮಗಳು, ಇಡಿ ಮತ್ತು ಟೋಲ್ ಬೂತ್ ಕ್ಯಾಮೆರಾಗಳ ಕಣ್ತಪ್ಪಿಸಿ, ಅವರು ರಾಂಚಿ ತಲುಪುವಲ್ಲಿ ಯಶಸ್ವಿಯಾಗಿದ್ದರು.

ವಾಸ್ತವವಾಗಿ, ಜಾರ್ಖಂಡ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರು ಭಾನುವಾರ ರಾತ್ರಿ ಸೊರೇನ್ ತಮ್ಮ ದೆಹಲಿ ನಿವಾಸದಿಂದ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ್ದರು. ಆದರೆ, ಇಡಿ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ಮಾಡುತ್ತಾರೆ ಮತ್ತು ಸಮಯಕ್ಕೆ ಸರಿಯಾಗಿ ತಲುಪುತ್ತಾರೆ ಎಂದು ಮುಖ್ಯಮಂತ್ರಿಗೆ ಹೇಗೆ ತಿಳಿದಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಹೇಮಂತ್ ಸೊರೇನ್ ಅವರನ್ನು ಬುಧವಾರದವರೆಗೆ ಇಡಿ ಅಧಿಕಾರಿಗಳು ಪ್ರಶ್ನಿಸಿದರು. ಅವರನ್ನು ಬಂಧಿಸಲಾಗುವುದು ಎಂದು ಸ್ಪಷ್ಟವಾದಾಗ, ಅವರು ತಮ್ಮ ಸರ್ಕಾರವನ್ನು ಉಳಿಸುವ ದಿಟ್ಟ ನಡೆಗೆ ಮುಮದಾದರು. ಇಡಿ ಮೂಲಗಳ ಪ್ರಕಾರ, ಹೇಮಂತ್ ಸೊರೇನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಬಂಧನ ಮೆಮೊಗೆ ಸಹಿ ಹಾಕಲು ನಿರಾಕರಿಸಿದ್ದರು ಎನ್ನಲಾಗಿದೆ. ಹಾಲಿ ಮುಖ್ಯಮಂತ್ರಿಯನ್ನು ಬಂಧಿಸಿದರೆ ಸಾಂವಿಧಾನಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ರಾಜೀನಾಮೆ ಸಲ್ಲಿಸಿ, ಶಾಸಕಾಂಗ ಪಕ್ಷದ ಸಭೆ ನಡೆಸಿದ ನಂತರ ಇಡಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು.

ಮೆಮೊಗೆ ಸಹಿ ಹಾಕಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಹೇಮಂತ್ ಸೊರೇನ್ ಅವರನ್ನು ರಾಜ್ಯಪಾಲರ ನಿವಾಸಕ್ಕೆ ಕರೆದೊಯ್ದರು. ಆದರೆ, ಅಲ್ಲಿಗೆ ಹೋದಾಗ ಆಡಳಿತಾರೂಢ ಸಮ್ಮಿಶ್ರ ಪಕ್ಷದ ಉನ್ನತ ಶಾಸಕರು ಅವರ ಜೊತೆಗಿದ್ದರು. ಹೇಮಂತ್ ಸೊರೇನ್ ಕೆಳಗಿಳಿದ ತಕ್ಷಣ, ಚಂಪೈ ಸೊರೇನ್ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಇದಕ್ಕೂ ಮೊದಲು, ಚಂಪೈ ಸೊರೇನ್ ಅವರು ಜೆಎಂಎಂನ ಶಾಸಕಾಂಗ ಪಕ್ಷದ ನಾಯಕರಾಗಿ ಚುನಾಯಿತರಾಗಿದ್ದರು. ಹೇಮಂತ್ ಸೊರೇನ್ ಅವರು ತಮ್ಮ ಪತ್ನಿ ಕಲ್ಪನಾ ಅವರಿಗೆ ಅಧಿಕಾರ ನೀಡಬಹುದು ಎಂಬ ಊಹಾಪೋಹಗಳಿಗೆ ಅಂತ್ಯ ಹಾಡಿದರು. ವಾಸ್ತವವಾಗಿ ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ಸೊರೇನ್ ಕುಟುಂಬದಿಂದಲೇ ವಿರೋಧ ವ್ಯಕ್ತವಾಗಿತ್ತು ಎಂದು ಹೇಮಂತ್ ಸೊರೇನ್ ಅವರ ಸೊಸೆ, ಜಾಮಾದ ಜೆಎಂಎಂ ಶಾಸಕಿ ಸೀತಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಯಾವುದೇ ಕ್ರಮವನ್ನು ನಾನು ವಿರೋಧಿಸುತ್ತೇನೆ. ಏಕೆಂದರೆ, ಅವರಿಗೆ ರಾಜಕೀಯದ ಅನುಭವವಿಲ್ಲ ಎಂದಿದ್ದರು. ಪಕ್ಷದ ನಾಯಕತ್ವವು ಈ ನಿರ್ಣಾಯಕ ಹಂತದಲ್ಲಿ ಬಿರುಕು ಉಂಟುಮಾಡುವ ಯಾವುದೇ ಮನಸ್ಥಿತಿಯಿಲ್ಲದೆ, ಸುರಕ್ಷಿತ ಆಯ್ಕೆಯತ್ತ ಹೋಯಿತು. ಅಂತಿಮವಾಗಿ ಶಿಬು ಸೊರೇನ್ ಅವರ ದೀರ್ಘಾವಧಿಯ ಸಹಾಯಕ, 67 ವರ್ಷದ ಚಂಪೈ ಸೊರೇನ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಹೇಮಂತ್ ಸೊರೇನ್ ಅವರು ಜನವರಿ 31 ರಂದು ಅಧಿಕಾರದಿಂದ ಕೆಳಗಿಳಿದ ಕೂಡಲೇ ಚಂಪೈ ಸೊರೇನ್ ಅವರು ಹಕ್ಕು ಚಲಾಯಿಸಿದ್ದರೂ ಸಹ, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಜಾರ್ಖಂಡ್‌ನಲ್ಲಿ ಸರ್ಕಾರ ರಚನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಜೆಎಂಎಂ ಮತ್ತು ಕಾಂಗ್ರೆಸ್ ಆರೋಪಿಸಿದೆ. ಫೆಬ್ರವರಿ 1 ರಂದು ಚಂಪೈ ಸೊರೇನ್ ಅವರು ರಾಜ್ಯಪಾಲರಿಗೆ ಪತ್ರ ಬರೆದು, ಕಳೆದ 18 ಗಂಟೆಗಳ ಕಾಲದಿಂದ  ಜಾರ್ಖಂಡ್ ರಾಜ್ಯದಲ್ಲಿ ಸರ್ಕಾರವಿಲ್ಲ; ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಅದೇ ದಿನ, ಅವರು ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ಇತರ ನಾಯಕರು ರಾಜ್ಯಪಾಲರನ್ನು ಭೇಟಿಯಾದರು. ವಾಸ್ತವವಾಗಿ, ಚಂಪೈ ಸೊರೇನ್ ಅವರನ್ನು ಬೆಂಬಲಿಸುವ ಶಾಸಕರು ಸಹಿ ಸಂಗ್ರಹಿಸಿ, ತಮ್ಮ ಬೆಂಬ ರೆಕಾರ್ಡ್ ಮಾಡಿ ಬಹುಮತದ ಪುರಾವೆಯಾಗಿ ರಾಜ್ಯಪಾಲರಿಗೆ ತೋರಿಸಿದರು.

ಮರುದಿನ, ಚಂಪೈ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ, ಮೈತ್ರಿ ಪಕ್ಷಗಳ ಇಬ್ಬರು ಶಾಸಕರಾದ ಕಾಂಗ್ರೆಸ್‌ನ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು.

ಚಂಪೈ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ನಿಜವಾದ ಯುದ್ಧ ಇಂದು ವಿಶ್ವಾಸಮತ ಗಳಿಸುವ ಪರೀಕ್ಷೆಯಾಗಿತ್ತು. ಚಂಪೈ ಸೊರೇನ್ ಮತ್ತು ಅವರ ಇಬ್ಬರು ಪ್ರತಿನಿಧಿಗಳು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಆಡಳಿತಾರೂಢ ಸಮ್ಮಿಶ್ರ ಶಾಸಕರನ್ನು ಹೈದರಾಬಾದ್‌ಗೆ ವಿಮಾನದಲ್ಲಿ ಕಳುಹಿಸಲಾಗಿತ್ತು. ನಿರ್ಣಾಯಕ ಬಹುಮತ ಯಾಚನೆಗೆ ಮುನ್ನ ಬಿಜೆಪಿಯಿಂದ ಯಾವುದೇ ಕಳ್ಳಬೇಟೆಯ ಪ್ರಯತ್ನವನ್ನು ತಡೆಯಲು ಅವರನ್ನು ಹೈದರಾಬಾದ್‌ನ ಖಾಸಗಿ ರೆಸಾರ್ಟ್‌ನಲ್ಲಿ ಇರಿಸಲಾಗಿತ್ತು. ಈ ಮಧ್ಯೆ, ಹೇಮಂತ್ ಸೊರೇನ್ ಅವರು ಬಹುಮತಕ್ಕೆ ಹಾಜರಾಗಲು ಅನುಮತಿಗಾಗಿ ನ್ಯಾಯಾಲಯದಲ್ಲಿ ವಿನಂತಿಯನ್ನು ಸಲ್ಲಿಸಿದರು. ಜೆಎಂಎಂ ನಾಯಕತ್ವವು ಲೋಬಿನ್ ಹೆಂಬ್ರೋಮ್‌ನಂತಹ ಅಸಮಾಧಾನಗೊಂಡ ಶಾಸಕರನ್ನು ಸಮಾಧಾನಪಡಿಸಲು ಪ್ರಾರಂಭಿಸಿತು.

ಬಲ ಪರೀಕ್ಷೆಗೆ ಮುಂಚಿತವಾಗಿಯೆ, ಹೈದರಾಬಾದ್‌ನಲ್ಲಿ ಬೀಡುಬಿಟ್ಟಿದ್ದ ಶಾಸಕರನ್ನು ರಾಂಚಿಗೆ ಹಿಂತಿರುಗಿಸಲಾಯಿತು. ಹೇಮಂತ್ ಸೊರೇನ್ ಕೂಡ ಸಮಯಕ್ಕೆ ಸರಿಯಾಗಿ ವಿಧಾನಸಭೆ ತಲುಪಿದರು. ಇದರ ಪರಿಣಾಮವಾಗಿ ಚಂಪೈ ಸೊರೇನ್ ಅವರ ಪರವಾಗಿ 47 ಮತಗಳೊಂದಿಗೆ ವಿಶ್ವಾಸ ಮತವನ್ನು ತೆರವುಗೊಳಿಸಿದರು. ಅವರ ವಿರುದ್ಧ ಇಪ್ಪತ್ತೊಂಬತ್ತು ಮತಗಳು ಚಲಾವಣೆಯಾದವು.

ಇದನ್ನೂ ಓದಿ; ‘ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ’: ಹೇಮಂತ್‌ ಸೊರೆನ್‌ ಭಾವುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...