Homeಕರೋನಾ ತಲ್ಲಣಕೃಷಿಕರ ಮೂಲೋತ್ಪಾಟನೆಗೆ ಸರ್ಕಾರ ಸಂಚು ಹೂಡಿದೆ: ಚಂಸು ಪಾಟೀಲ

ಕೃಷಿಕರ ಮೂಲೋತ್ಪಾಟನೆಗೆ ಸರ್ಕಾರ ಸಂಚು ಹೂಡಿದೆ: ಚಂಸು ಪಾಟೀಲ

ಡಿಸೇಲ್, ಪೆಟ್ರೋಲ್ ದರಗಳ ನಿರಂತರ ಏರಿಕೆ ಕೃಷಿ ಮೇಲೂ ಪರಿಣಾಮ ಬೀರುತ್ತಿದ್ದು, ಕೃಷಿ ವೆಚ್ಚವನ್ನು ಮತ್ತಷ್ಟು ಹೆಚ್ಚಿಸುತ್ತಿವೆ. ಆದರೆ ಆದಾಯವೆಂಬುದು ಮರೀಚಿಕೆಯಾಗಿದೆ.

- Advertisement -
- Advertisement -

ಹಳ್ಳಕ್ಕೆ ಬಿದ್ದ ಗೂಳಿಗೆ ಆಳಿಗೊಂದು ಕಲ್ಲು ಎಂಬ ಗಾದೆ ಇದೆ‌. ಕೊರೊನಾ ಸಾಂಕ್ರಾಮಿಕ ರೋಗದ ಈ ಕಾಲಘಟ್ಟದಲ್ಲಿ ಇದು ರೈತರ ಪರಿಸ್ಥಿತಿ‌ಗೆ ಸರಿಯಾಗಿ ಅನ್ವಯಿಸುತ್ತದೆ. ಲಾಕ್‌ಡೌನ್ ಸಂದರ್ಭದಲ್ಲಿ ಬಹುತೇಕ ಉತ್ಪಾದನಾ ಚಟುವಟಿಕೆಗಳು ಸ್ತಬ್ಧ‌ಗೊಂಡಿದ್ದರೂ ಕೃಷಿ ಕ್ಷೇತ್ರ ಇದಕ್ಕೆ ಹೊರತಾಗಿದೆ. ಕೃಷಿಕರು ಎಂದಿನಂತೆ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಲಾಕ್‌ಡೌನ್ ಅವರ ಪಾಲಿಗೆ ಹೆಚ್ಚು ಅನಾನುಕೂಲತೆಗಳನ್ನು ತಂದೊಡ್ಡಿದೆ. ಈ ಸಂಕಷ್ಟದ ಸಮಯದಲ್ಲೂ ದೃತಿಗೆಡದೆ ತಮ್ಮ ಕಾಯಕದಲ್ಲಿ ತೊಡಗಿಕೊಂಡಿದ್ದರೂ ಕೃಷಿಕರು ಮತ್ತು ಕೃಷಿ ಕಾರ್ಮಿಕರು ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗುತ್ತಿರುವುದು ವಿಪರ್ಯಾಸ‌ವೇ ಸರಿ.

ಡಿಸೇಲ್, ಪೆಟ್ರೋಲ್ ದರಗಳ ನಿರಂತರ ಏರಿಕೆ ಕೃಷಿಯ ಮೇಲೂ ಪರಿಣಾಮ ಬೀರುತ್ತಿದೆ. ಕೃಷಿ ಕ್ಷೇತ್ರ ಯಾಂತ್ರೀಕರಣಗೊಳ್ಳುತ್ತಲೇ ಇದೆ. ಟ್ರ್ಯಾಕ್ಟರ್‌ಗಳ ಬಳಕೆ, ಒಕ್ಕಣೆ ಯಂತ್ರಗಳ ಬಳಕೆ ಅನಿವಾರ್ಯ‌ವಾಗಿವೆ. ಇಂಧನ ಬೆಲೆಗಳ ಏರಿಕೆ ಸಹಜವಾಗಿ ಕೃಷಿಯ ಖರ್ಚನ್ನೂ ಹೆಚ್ಚಿಸುತ್ತಿವೆ. ಬಹುಪಾಲು ಮಧ್ಯಮವರ್ಗದ ರೈತರು, ಸಣ್ಣ ಮತ್ತು ಅತಿ ಸಣ್ಣ ರೈತರು ಉಳುಮೆಗೆ ಬಾಡಿಗೆ ಟ್ರ್ಯಾಕ್ಟರ್‌ಗಳನ್ನು ಅವಲಂಬಿಸಿದ್ದರೆ, ದೊಡ್ಡ ಹಿಡುವಳಿ ಹೊಂದಿರುವ ರೈತರು ಸ್ವಂತ ಟ್ರ್ಯಾಕ್ಟರ್ ಹೊಂದಿರುತ್ತಾರೆ. ಶೇಂಗಾ, ಭತ್ತ, ಜೋಳ, ಗೋವಿನ ಜೋಳ, ಸೂರ್ಯಪಾನ ಮೊದಲಾದ ಪ್ರಮುಖ ಬೆಳೆಗಳ ಕೊಯ್ಲು ಮತ್ತು ಒಕ್ಕಣೆ ಈಗ ಯಂತ್ರಗಳಿಂದಲೇ ನಡೆಯುತ್ತಿದೆ. ಇಲ್ಲೂ ಸಣ್ಣ ಹಿಡುವಳಿಯ ರೈತರು ಬಾಡಿಗೆ ಯಂತ್ರಗಳನ್ನೇ ಅವಲಂಬಿಸಿರುತ್ತಾರೆ. ಹೀಗೆ ಕೃಷಿ ಚಟುವಟಿಕೆಗಾಗಿನ ಖರ್ಚಿನ ಪ್ರಮಾಣ ಒಂದು ಕಡೆ ಹೆಚ್ಚಾಗುತ್ತಲೇ ಸಾಗಿದೆ. ಆದರೆ, ಅದಕ್ಕೆ ಪೂರಕವಾಗಿ ಆದಾಯ ಹೆಚ್ಚದಿರುವುದು ಅವರನ್ನು ಸಾಲಗಾರರನ್ನಾಗಿ ಮಾಡುತ್ತಿದೆ. ಲಾಕ್‌ಡೌನ್ ಸಂದರ್ಭದಲ್ಲಂತೂ ರೈತರು ತಾವು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಸಿಗದೇ, ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದಾರೆ.

ಎರಡು ವರ್ಷಗಳ ಹಿಂದೆ ಒಮ್ಮೆ ಗೋವಿನಜೋಳದ ಬೆಲೆ ಕ್ವಿಂಟಾಲ್‌ಗೆ  2400 ರವರೆಗೆ ಏರಿತ್ತು ಮಾರನೇ ವರ್ಷವೇ ಅದು 1200 ಕ್ಕೆ ಬಂದಿತ್ತು. ಲಾಕ್‌ಡೌನ್‌ನಲ್ಲಿ ರೈಲುಸಂಚಾರ ಸ್ಥಗಿತಗೊಂಡು, ವ್ಯಾಗನ್‌ಗಳಲ್ಲಿ  ಸಾಗಾಣಿಕೆಯಾಗುತ್ತಿದ್ಧ ಗೋವಿನಜೋಳ ಸ್ಥಳೀಯ ಮಾರುಕಟ್ಟೆಗಳನ್ನು ತುಂಬಿ ಅಲ್ಲಿ ಮಾರಾಟವಾಗದೇ ಒಮ್ಮೆಲೆ ಬೆಲೆಕುಸಿತ ಉಂಟಾಗಿತ್ತು. ಇದ್ಯಾವುದನ್ನೂ ಊಹಿಸಿರದ ರೈತ ತಾನು ಬೆಳೆದ ಬೆಳೆಗೆ ನಿರೀಕ್ಷಿತ ಬೆಲೆ ಸಿಗದೇ ಹೋದಾಗ ಹತಾಶನಾಗುವುದೂ ಸಹಜ. ಯಾವ ಬೆಳೆ ಬೆಳೆದರೆ ಒಳ್ಳೆಯ ಬೆಲೆ ಸಿಕ್ಕೀತು ಎಂಬ ಗೊಂದಲದಲ್ಲಿ ಎಲ್ಲ ಬೆಳೆಗಳದೂ ಇದೇ ಸ್ಥಿತಿಯಾದಾಗ ಯಾವ ಬೆಳೆ ಬೆಳೆಯಬೇಕೆಂಬುದೇ ಅವನಿಗೆ ತೋಚದಂತಾಗುತ್ತದೆ. ಬೆಲೆಗಳ ಅಸ್ಥಿರತೆ ರೈತರ ಬದುಕನ್ನು ನರಕಸದೃಶವಾಗಿಸುತ್ತಿದೆ.  ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ಏಳು ತಿಂಗಳಿನಿಂದ ಸತ್ಯಾಗ್ರಹ ನಿರತರಾಗಿರುವ ರೈತರು ಬೆಂಬಲಬೆಲೆಯನ್ನು ಕಾನೂನುಬದ್ದಗೊಳಿಸಬೇಕೆಂದು ಆಗ್ರಹಿಸುತ್ತಿರುವುದೂ ಇದೇ ಕಾರಣಕ್ಕಾಗಿ ಎಂಬುದು ಸ್ವಯಂವೇದ್ಯ.

ಲಾಕ್‌ಡೌನ್ ಮಧ್ಯೆಯೂ ಕೃಷಿ ಕ್ಷೇತ್ರ ಕ್ರಿಯಾಶೀಲವಾಗಿದೆ‌. ರೈತರು ವಿವಿಧ ಬೆಳೆಗಳನ್ನು ಬೆಳೆಯುತ್ತಲೇ ಇದ್ದಾರೆ. ಹೀಗೆ ಬೆಳೆದ ಬೆಳೆಗೆ ಅಗತ್ಯ ಮಾರುಕಟ್ಟೆ, ಸೂಕ್ತ ಬೆಲೆ ಸಿಗದೇ ರೈತರು
ಬೆಳೆ ಬೆಳೆಯದೇ ಇರಲಿಕ್ಕೂ ಆಗದೇ, ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ, ಇತ್ತ ದರಿ ಅತ್ತ ಪುಲಿ ಎಂಬಂತೆ ಏನು ಮಾಡಬೇಕೆಂಬುದು ತಿಳಿಯದೇ ನಿಟ್ಟುಸಿರು ಬಿಡುವಂತಾಗಿದೆ.

ಕಿಲೋಗೆ 25/30 ರೂ. ಮಾರುತಿದ್ದ ಕ್ಯಾಬೀಜ ಈ ಸಂದರ್ಭದಲ್ಲಿ ಹತ್ತರೊಳಗೇ ಮಾರಾಟವಾಗುತ್ತದೆ. ಎಲ್ಲ ತರಕಾರಿ ಬೆಳೆಗಳ ಸ್ಥಿತಿಯೂ ಹೀಗೆ ಇದೆ. ರೈತರಿಂದ ಅಗ್ಗದ ಬೆಲೆಗೆ ಕೊಳ್ಳುವ ವ್ಯಾಪಾರಸ್ಥರು ಅತ್ತ ಗ್ರಾಹಕರನ್ನೂ ಸುಲಿಗೆ ಮಾಡುತ್ತಿರುತ್ತಾರೆ. ಆದರೆ, ಅದನ್ನು ಕಷ್ಟಪಟ್ಟು ಬೆಳೆದ ರೈತ ಮಾತ್ರ ಅದಕ್ಕೆ ಹಾಕಿದ ಶ್ರಮ, ಸಮಯ, ಬಂಡವಾಳ ಎಲ್ಲವನ್ನೂ ಕಳೆದುಕೊಂಡು ಸಾಲಗಾರನಾಗುವ ಸ್ಥಿತಿ ನಿರ್ಮಾಣವಾಗಿದೆ. ಇದು ಇನ್ನೂ ಎಷ್ಟು ದಿನ? ರೈತ ಬೆಳೆದ ಬೆಳೆಗೆ ಖಚಿತ ಬೆಲೆ, ಖಚಿತ ಆದಾಯ ಸಿಗುವುದೇ? ಎಂಬುದು ಸಧ್ಯಕ್ಕೆ ಯಕ್ಷಪ್ರಶ್ನೆಯಾಗಿದೆ.

ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕೆಂಬ ಆಗ್ರಹ ಬಹುದಿನಗಳಿಂದಲೂ ಇದ್ದೇ ಇದೆ‌. ಆದರೆ, ಸರ್ಕಾರವೇ ಇತ್ತೀಚಿನ ವರ್ಷಗಳಲ್ಲಿ ಪ್ರತಿವರ್ಷ ಬೆಳೆಗಳಿಗೆ ಬೆಂಬಲಬೆಲೆ ಘೋಷಿಸುತಿತ್ತು. ವಾಸ್ತವದಲ್ಲಿ ಆ ಬೆಲೆ ರೈತರಿಗೆ ಸಿಕ್ಕಿದ್ದೇ ಇಲ್ಲ. ಶೇಂಗಾದ ಬೆಂಬಲ ಬೆಲೆ 5200 ಇದ್ದರೆ, ಎಪಿಎಂಸಿಗಳಲ್ಲಿ ಅದು ಮಾರೋದು 3000/ 5000 ರೂ. ಒಳಗೇ. ಗೋವಿನ ಜೋಳಕ್ಕೆ ಬೆಂಬಲಬೆಲೆ 1700 ಇದ್ದರೂ ಅದು ಮಾರುತ್ತಿರುವುದು 1000/1500ರೊಳಗೇ. ಹತ್ತಿಯ ಬೆಂಬಲ ಬೆಲೆ 6000 ಇದ್ದರೂ ಅದು ಮಾರುವುದು 3000/5500ರ ಒಳಗೇ. ಹೀಗೆ ಬೆಂಬಲ ಬೆಲೆಗೂ ವಾಸ್ತವ ಬೆಲೆಗೂ ಇಷ್ಟೊಂದು ವ್ಯತ್ಯಾಸ ಇರುವಾಗ ಈ ಬೆಂಬಲ ಬೆಲೆ ಘೋಷಿಸುವುದಾದರೂ ಯಾವ ಪುರುಷಾರ್ಥಕ್ಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ.  ಇದೇ ಕಾರಣಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ದೆಹಲಿಯ ಹೊರ ವಲಯದಲ್ಲಿ ರೈತರು ಐತಿಹಾಸಿಕ ದೀರ್ಘಕಾಲಿಕ ಹೋರಾಟ ಕೈಗೊಂಡಿದ್ದಾರೆ‌. ಸರ್ಕಾರ ಘೋಷಿಸುವ ಬೆಂಬಲಬೆಲೆಗಳನ್ನೇ ಕಾನೂನುಬದ್ದಗೊಳಿಸಿ ಎಂಬುದು ಅವರ ಹಕ್ಕೊತ್ತಾಯವಾಗಿದೆ. ವೈಜ್ಞಾನಿಕ ಬೆಲೆ ಅಲ್ಲದಿದ್ದರೂ ಬೆಂಬಲಬೆಲೆಗಳೆ ವಾಸ್ತವದಲ್ಲಿ ರೈತರ ಬೆಳೆಗಳಿಗೆ ಸಿಕ್ಕರೆ ಅದರಿಂದ ಅವರಿಗೆ ಎಷ್ಟೋ ಆಸರೆ ದೊರೆತಂತಾಗುತ್ತದೆ. ಆದರೆ, ಒಕ್ಕೂಟ ಸರ್ಕಾರ ಈ ಕುರಿತು ಸರಿಯಾಗಿ ಸ್ಪಂದಿಸದೇ ಇರುವುದು ಕೃಷಿಪ್ರಧಾನ ದೇಶವೊಂದರ ದೊಡ್ಡ ದುರಂತವೇ ಸರಿ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ಈ ಮಧ್ಯೆ ರಾಸಾಯನಿಕ ಗೊಬ್ಬರಗಳ ಬೆಲೆಗಳನ್ನೂ ಏರಿಸಿ ಮತ್ತೆ ಇಳಿಸಲಾಗಿದೆ. ಈ ತರದ ರೈತರ ಸಹನೆಯ ಪರೀಕ್ಷೆಗಳು ನಡದೇ ಇರುತ್ತವೆ. ಮೊದಲು ಸಹಾಯಧನದ ರೂಪದಲ್ಲಿ ವಿನಾಯ್ತಿಯಲ್ಲಿ ಸಿಗುತಿದ್ದ ಗೊಬ್ಬರಗಳನ್ನು ರೈತರು ಇಂದು ಪೂರ್ಣಬೆಲೆ ತೆತ್ತು ಕೊಳ್ಳುವ ಸ್ಥಿತಿ ಎದುರಾಗಿದೆ. ಒಂದು ವೇಳೆ ನಿರೀಕ್ಷಿತ ಮಳೆ ಬಾರದೆಯೋ, ಹವಾಮಾನ ವೈಪರೀತ್ಯದಿಂದಲೋ ಆ ಬೆಳೆ ಕೈಗೆ ಸಿಗದಿದ್ದರೆ ರೈತನ ಪರಿಸ್ಥಿತಿ ಏನಾದೀತು ಎಂಬ ಬಗ್ಗೆ ಚಿಂತಿಸಬೇಕಾಗಿದೆ.

ಬೆಂಬಲಬೆಲೆಯ ಹಾಗೆಯೇ ಬೆಳೆವಿಮೆ ಯೋಜನೆ ಇದೆ ಆದರೂ ಪ್ರತಿವರ್ಷ ಪ್ರಿಮಿಯಂ ಕಟ್ಟುತಿದ್ದರೂ.. ಯಾವುದೋ ವರ್ಷದ ವಿಮೆ ಬರುತ್ತದೆ. ಅದು ಬಂದಾಗ ಇದು ಯಾವ ವರ್ಷದ್ದು, ಯಾವ ಬೆಳೆಗೆ ಬಂದದ್ದು ಎಂಬುದು ರೈತನಿಗೆ ತಿಳಿಯದಷ್ಟು ಸಂಕೀರ್ಣ ಯೋಜನೆ ಇದಾಗಿದೆ. ಆದಕಾರಣ ಬೆಳೆವಿಮೆ ಯೋಜನೆ ಒಳ್ಳೆಯ ಯೋಜನೆ ಆದರೂ ಅದರ ಪ್ರಯೋಜನ ಪ್ರತಿವರ್ಷವೂ, ಪ್ರತಿಬೆಳೆಗೂ ರೈತನಿಗೆ ದೊರೆಯಬೇಕಾದರೆ ಅದಿನ್ನೂ ಹೆಚ್ಚು ಕ್ರಮಬದ್ದವೂ ಪಾರದರ್ಶಕವೂ ಆಗಬೇಕಿದೆ.

ಗೋಹತ್ಯೆ ನಿಷೇಧದಂತಹ ಕಾನೂನುಗಳ ಜಾರಿ ನಂತರ ರೈತರು ಪಶುಸಂಗೋಪಣೆಯಿಂದಲೇ ವಿಮುಖರಾಗುವಂಥ ಸ್ಥಿತಿ ನಿರ್ಮಾಣವಾಗಿದೆ. ಹೇಗೆಂದರೆ, ಈ ಮೊದಲು ರೈತರು ವಯಸಾದ ದನಕರುಗಳನ್ನು ಅವು ಇನ್ನೂ ಆರೋಗ್ಯಪೂರ್ಣವಾಗಿರುವಾಗಲೇ ಮಾರಾಟ ಮಾಡಿ ಅದೇ ಹಣಕ್ಕೆ ಮತ್ತೆ ಒಂದಿಷ್ಟು ಹಣ ಸೇರಿಸಿ ಹೊಸ ಎತ್ತು, ದನಕರು ಕೊಳ್ಳುತಿದ್ದರು. ಎತ್ತುಗಳನ್ನು ಉಳುಮೆಗೆ, ದನಕರುಗಳನ್ನು ಹೈನುಗಾರಿಕೆಗೆ ಸಾಕುತ್ತಿದ್ದರು. ಗೋಹತ್ಯೆ ನಿಷೇಧದ ನಂತರ ಅವರು ಬಂಜೆದನಗಳನ್ನೂ ಸಾಕಲೇಬೇಕಾದಂತಹ ಅನಿವಾರ್ಯ‌ತೆ ಸೃಷ್ಠಿಯಾಗಿದೆ. ವಯಸ್ಸಾದ ದನಗಳ ಮಾರಾಟ ಕ್ಲಿಷ್ಟದಾಯಕವಾಗಿ ಅವುಗಳ ಚಿಕಿತ್ಸೆ‌ಗೆ ತಗಲುವ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾಗಿದೆ. ಒಂದು ವೇಳೆ ಅವು ಮನೆಯಲ್ಲೆ ಅಸುನೀಗಿದರೆ ಅವುಗಳ ವಿಲೇವಾರಿ ಮಾಡುವುದೆ ಕಷ್ಟಕರವಾಗಿ ತಲೆಮೇಲೆ ಕೈಹೊತ್ತು ಕೂಡುವಂತಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಂತೂ ದನದ ಮಾರುಕಟ್ಟೆಗಳು ಬಂದ್ ಆಗಿ ತಮಗೆ ಬೇಕಾದ ಎತ್ತುಗಳನ್ನು ಸಮಯಕ್ಕೆ ಸರಿಯಾಗಿ ಕೊಳ್ಳುವುದೇ ದುಸ್ತರವಾಗಿದೆ. ಈ ಕಾರಣಕ್ಕೆ ಎತ್ತುಗಳ ಬೆಲೆಗಳೂ ಈಗ ಸಿಕ್ಕಾಪಟ್ಟೆ ದುಬಾರಿಯಾಗಿವೆ. ಮೊದಲೆಲ್ಲ ಮೂವತ್ತು ನಲವತ್ತು ಸಾವಿರ ರೂ.ಗಳಿಗೆ ಸಿಗುತ್ತಿದ್ದ ಜೋಡಿ ಎತ್ತುಗಳಿಗೆ ಈಗ ಎಪ್ಪತ್ತು ಎಂಭತ್ತು ಸಾವಿರ ರೂ. ತೆರುವ ಪರಿಸ್ಥಿತಿ ಎದುರಾಗಿದೆ. ಕೃಷಿಗೆ ಎತ್ತುಗಳು ಅನಿವಾರ್ಯ‌ವಾದ ಕಾರಣ ಸಾಲಸೋಲ ಮಾಡಿ ಎತ್ತು ಕೊಳ್ಳುವ ರೈತರು, ಬೀಜ, ಗೊಬ್ಬರ, ಔಷಧಿ ಎಂದು ಸಾಲ ಮಾಡಲೇಬೇಕಾಗುತ್ತದೆ. ಉತ್ತಮ ಬೆಳೆ ಬಂದರೆ ಉತ್ತಮ ಬೆಲೆ ಇಲ್ಲ, ಉತ್ತಮ ಬೆಲೆ ಇರುವ ಬೆಳೆ ಉತ್ತಮ ಇಳುವರಿ ಬರಲಿಲ್ಲ ಎಂದರೆ ರೈತನಿಗೆ ನಷ್ಟ ಕಟ್ಟಿಟ್ಟ ಬುತ್ತಿ.

ಹೀಗೆ ಹತ್ತು ಹಲವು ಸಮಸ್ಯೆ‌ಗಳ ಸುಳಿಯಲ್ಲಿ ಸಿಲುಕಿರುವ ರೈತ ಒಂದೆಡೆ ತನ್ನ ಬದುಕಿಗೆ ಭದ್ರತೆಯೆ ಇಲ್ಲದ ಕಾರಣಕ್ಕೆ ಹತಾಶನಾಗಿ ಆತ್ಮಹತ್ಯೆಗೆ ಶರಣಾಗುವ ಘಟನೆಗಳು ನಿತ್ಯ ನಿರಂತರ ಘಟಿಸುತ್ತಲೇ ಇವೆ. ಇನ್ನೊಂದೆಡೆ ದಿನದಿನಕ್ಕೂ ಕಗ್ಗಂಟಾಗುತ್ತಿರುವ ಕೃಷಿ ಬಿಕ್ಕಟ್ಟುಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರಗಳು ತೋರುತ್ತಿರುವ ನಿರಾಸಕ್ತಿ ಕೃಷಿ ಹಾಗೂ ಕೃಷಿಕರ ಮೂಲೋತ್ಪಾಟನೆಗೆ ಹೂಡಿರುವ ಸಂಚಿನಂತೆ ಭಾಸವಾಗುತ್ತಿದೆ.

  • ಚಂಸು ಪಾಟೀಲ
    ಕೂನಬೇವು
    ತಾ. ರಾಣೇಬೆನ್ನೂರು
    ಜಿ. ಹಾವೇರಿ

(ಕೃಷಿಕರಾದ ಚಂಸು ಪಾಟೀಲರವರು ಲೇಖಕರೂ ಹೌದು. ಬೇಸಾಯದ ಕತಿ ಎಂಬ ಪುಸ್ತಕ ಬರೆದಿರುವ ಇವರು ಸಮಾಜದ ಆಗುಹೋಗುಗಳಿಗೆ ಸದಾ ಪ್ರತಿಕ್ರಿಯಿಸುತ್ತಿರುತ್ತಾರೆ)


ಇದನ್ನೂ ಓದಿ; ಕೊರೊನಾ ತಂದೆಳೆದ ಕೃಷಿ ಸಂಕಷ್ಟಗಳು ಮತ್ತು ಪ್ರಭುತ್ವದ ಹೊಣೆಗಾರಿಕೆ: ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...