Homeಅಂಕಣಗಳುಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

ಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

- Advertisement -
- Advertisement -

ಮಿಲೇನಿಯಲ್ಸ್ ಎಂದು ಕರೆಸಿಕೊಳ್ಳುತ್ತಿರುವ ಇಂದಿನ ಯುವಜನಾಂಗ ಪ್ರೀತಿಯ ಅರ್ಥವನ್ನೇ ಮರೆತು ಬಿಟ್ಟಂತಿದೆ. ಪ್ರೀತಿಯೆಂಬ ಸುಮಧುರ ಬಾಂಧವ್ಯವನ್ನು ಕಾಮೋಪ್ರೇಕ್ಷೆಯಿಂದ ಅಳೆಯಲು ಶುರುವಿಟ್ಟಿರುವಂತೆ ಕಾಣಲಾರಂಭಿಸಿದೆ. ಪ್ರೀತಿಯ ಮೊಗ್ಗು ಅರಳಲಾಂಭಿಸುತ್ತಿದ್ದಂತೆ ಅದು ಕಾಮದೊಂದಿಗೆ ಅಂತ್ಯವಾಗಿಬಿಡುವ ಸನ್ನಿವೇಶಗಳು ಎಂದು ಹೆಚ್ಚಾಗಿ ಸಂಭವಿಸುತ್ತಿವೆ. ಅದರಲ್ಲೂ ಟೈಮ್ ಪಾಲ್ ಲವ್ ಎಂಬ ಹೊಸ ಟ್ರೆಂಡ್ ಬೇರೆ ಶುರುವಾಗಿದೆ. ಇಂತಹ ಟೈಮ್ ಪಾಸ್ ಲವ್‍ಗೆ ಬಲಿಯಾಗುವುದು ಯುವತಿಯರೇ ವಿನಃ ಯುವಕರಲ್ಲ. ಆದರೂ, ಸಿನಿಮಾ-ಸೀರಿಯಲ್‍ಗಳು ಹುಡುಗಿಯರೇ ಮೋಸಗಾತಿಯರು ಎಂಬಂತೆ ಬಿಂಬಿಸುತ್ತಿರುವುದು ಹೊಸತೇನಲ್ಲ.

ಮೊನ್ನೆಯಷ್ಟೇ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ ಸೆಲ್ಫಿ ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ದಿನೇಶನನ್ನು ಪ್ರೀತಿಸಿ ಮೋಸ ಹೋದದ್ದು. ಅದು ಕೇವಲ ಪ್ರೀತಿಯಲ್ಲಾದ ಮೋಸವಷ್ಟೇ ಆಗಿರಲಿಲ್ಲ ಎಂಬುದು ವಾಸ್ತವ. ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಅವರಿಬ್ಬರೂ ಮಾನಸಿಕವಾಗಿಯಷ್ಟೇ ಅಲ್ಲದೆ, ದೈಹಿಕವಾಗಿಯೂ ಒಂದಾಗಿದ್ದರು. ಅವರಿಬ್ಬರ ದೈಹಿಕ ಬೆಸುಗೆಗೂ ಮುನ್ನ ಸುಮಾರು ಬಾರಿ ಆತನೇ ಮದುವೆಯ ವಿಚಾರ ಪ್ರಸ್ತಾಪಿಸಿದ್ದರೂ, ಕಾಲಕ್ರಮೇಣ ಮದುವೆಗೆ ಹಿಂದೇಟು ಹಾಕಲು ಆರಂಭಿಸಿದ್ದ. ಅಲ್ಲದೆ, ಆಕೆಯ ನಡತೆಯೇ ಸರಿಯಿಲ್ಲವೆಂದು ದೂಷಿಸಿದ್ದ. ಇಷ್ಟೆಲ್ಲವೂ ಆದ ನಂತರ ಈ ಆತ್ಮಹತ್ಯೆಯನ್ನು, ಪ್ರೀತಿಯ ನಂಬಿಕೆ, ಮದುವೆ ಭರವಸೆಯೊಂದಿಗೆ ದಿನೇಶ ಆಕೆಯ ಮೇಲೆ ನಡೆಸಿದ ಅತ್ಯಾಚಾರ ಮತ್ತು ಕೊಲೆ ಎಂದರೂ ತಪ್ಪಾಗಲಾದರು.

ಐದು ವರ್ಷಗಳಿಂದ ಆತನನ್ನು ಪ್ರೀತಿಸುತ್ತಿದ್ದ ಚಂದನ, ಆತನಿಗೆ 5 ಲಕ್ಷ ಹಣವನ್ನೂ ಕೊಟ್ಟಿದ್ದಳು. ಆಕೆಯ ಎಲ್ಲಾ ನಂಬಿಕೆಗೂ ದ್ರೋಹ ಬಗೆದ ದಿನೇಶ, ಆಕೆಯನ್ನು ಸಾವಿನ ಮನೆಗೆ ದೂಡಿ ಪರಾರಿಯಾಗಿದ್ದಾನೆ. ಭವಿಷ್ಯದ ಕನಸುಗಳನ್ನು ಒಡೆದ ಮನಸು ಸಾವಿಗೆ ಶರಣಾಗಿದೆ.

ಆತ ಮಾಡಿದ ಮೋಸಕ್ಕೆ ಈಕೆಗೆ ಆತ್ಮಹತ್ಯೆ ಒಂದೇ ಪರಿಹಾರವಾಗಿರಲಿಲ್ಲ. ಇದ್ದು ಜಯಿಸಲು ಸಾಕಷ್ಟು ದಾರಿಗಳಿದ್ದವು. ಎಲ್ಲ ದಾರಿಯನ್ನು ಮರೆತ ಆ ನಟಿ ಹಿಡಿದ ದಾರಿ ಆತ್ಮಹತ್ಯೆ. ಶೀಲ, ಮಾನ ಎಂಬುದು ಹೆಣ್ಣಿಗಷ್ಟೇ ಸೀಮಿತವಲ್ಲ. ಯಾವುದಕ್ಕೂ ಹೆದರುವ-ಅಂಜಿಕೊಳ್ಳುವ ಅಗತ್ಯವಿಲ್ಲ, ಮೋಸದ ಪ್ರೀತಿಗೆ ನಿರಾಶೆಯಾಗುವುದೂ ಬೇಕಿಲ್ಲ ಎಂದು ಆಕೆಯ ಅರಿವಾಗಿದ್ದ ಆಕೆ ಇಂದು ಭವಿಷ್ಯದ ಹೊಸ ಕನಸುಗಳನ್ನು ಕಾಣಬಹುದಿತ್ತು.


ಇದನ್ನು ಓದಿ: ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...