Homeಅಂಕಣಗಳುಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

ಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

- Advertisement -
- Advertisement -

ಮಿಲೇನಿಯಲ್ಸ್ ಎಂದು ಕರೆಸಿಕೊಳ್ಳುತ್ತಿರುವ ಇಂದಿನ ಯುವಜನಾಂಗ ಪ್ರೀತಿಯ ಅರ್ಥವನ್ನೇ ಮರೆತು ಬಿಟ್ಟಂತಿದೆ. ಪ್ರೀತಿಯೆಂಬ ಸುಮಧುರ ಬಾಂಧವ್ಯವನ್ನು ಕಾಮೋಪ್ರೇಕ್ಷೆಯಿಂದ ಅಳೆಯಲು ಶುರುವಿಟ್ಟಿರುವಂತೆ ಕಾಣಲಾರಂಭಿಸಿದೆ. ಪ್ರೀತಿಯ ಮೊಗ್ಗು ಅರಳಲಾಂಭಿಸುತ್ತಿದ್ದಂತೆ ಅದು ಕಾಮದೊಂದಿಗೆ ಅಂತ್ಯವಾಗಿಬಿಡುವ ಸನ್ನಿವೇಶಗಳು ಎಂದು ಹೆಚ್ಚಾಗಿ ಸಂಭವಿಸುತ್ತಿವೆ. ಅದರಲ್ಲೂ ಟೈಮ್ ಪಾಲ್ ಲವ್ ಎಂಬ ಹೊಸ ಟ್ರೆಂಡ್ ಬೇರೆ ಶುರುವಾಗಿದೆ. ಇಂತಹ ಟೈಮ್ ಪಾಸ್ ಲವ್‍ಗೆ ಬಲಿಯಾಗುವುದು ಯುವತಿಯರೇ ವಿನಃ ಯುವಕರಲ್ಲ. ಆದರೂ, ಸಿನಿಮಾ-ಸೀರಿಯಲ್‍ಗಳು ಹುಡುಗಿಯರೇ ಮೋಸಗಾತಿಯರು ಎಂಬಂತೆ ಬಿಂಬಿಸುತ್ತಿರುವುದು ಹೊಸತೇನಲ್ಲ.

ಮೊನ್ನೆಯಷ್ಟೇ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ ಸೆಲ್ಫಿ ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ದಿನೇಶನನ್ನು ಪ್ರೀತಿಸಿ ಮೋಸ ಹೋದದ್ದು. ಅದು ಕೇವಲ ಪ್ರೀತಿಯಲ್ಲಾದ ಮೋಸವಷ್ಟೇ ಆಗಿರಲಿಲ್ಲ ಎಂಬುದು ವಾಸ್ತವ. ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಅವರಿಬ್ಬರೂ ಮಾನಸಿಕವಾಗಿಯಷ್ಟೇ ಅಲ್ಲದೆ, ದೈಹಿಕವಾಗಿಯೂ ಒಂದಾಗಿದ್ದರು. ಅವರಿಬ್ಬರ ದೈಹಿಕ ಬೆಸುಗೆಗೂ ಮುನ್ನ ಸುಮಾರು ಬಾರಿ ಆತನೇ ಮದುವೆಯ ವಿಚಾರ ಪ್ರಸ್ತಾಪಿಸಿದ್ದರೂ, ಕಾಲಕ್ರಮೇಣ ಮದುವೆಗೆ ಹಿಂದೇಟು ಹಾಕಲು ಆರಂಭಿಸಿದ್ದ. ಅಲ್ಲದೆ, ಆಕೆಯ ನಡತೆಯೇ ಸರಿಯಿಲ್ಲವೆಂದು ದೂಷಿಸಿದ್ದ. ಇಷ್ಟೆಲ್ಲವೂ ಆದ ನಂತರ ಈ ಆತ್ಮಹತ್ಯೆಯನ್ನು, ಪ್ರೀತಿಯ ನಂಬಿಕೆ, ಮದುವೆ ಭರವಸೆಯೊಂದಿಗೆ ದಿನೇಶ ಆಕೆಯ ಮೇಲೆ ನಡೆಸಿದ ಅತ್ಯಾಚಾರ ಮತ್ತು ಕೊಲೆ ಎಂದರೂ ತಪ್ಪಾಗಲಾದರು.

ಐದು ವರ್ಷಗಳಿಂದ ಆತನನ್ನು ಪ್ರೀತಿಸುತ್ತಿದ್ದ ಚಂದನ, ಆತನಿಗೆ 5 ಲಕ್ಷ ಹಣವನ್ನೂ ಕೊಟ್ಟಿದ್ದಳು. ಆಕೆಯ ಎಲ್ಲಾ ನಂಬಿಕೆಗೂ ದ್ರೋಹ ಬಗೆದ ದಿನೇಶ, ಆಕೆಯನ್ನು ಸಾವಿನ ಮನೆಗೆ ದೂಡಿ ಪರಾರಿಯಾಗಿದ್ದಾನೆ. ಭವಿಷ್ಯದ ಕನಸುಗಳನ್ನು ಒಡೆದ ಮನಸು ಸಾವಿಗೆ ಶರಣಾಗಿದೆ.

ಆತ ಮಾಡಿದ ಮೋಸಕ್ಕೆ ಈಕೆಗೆ ಆತ್ಮಹತ್ಯೆ ಒಂದೇ ಪರಿಹಾರವಾಗಿರಲಿಲ್ಲ. ಇದ್ದು ಜಯಿಸಲು ಸಾಕಷ್ಟು ದಾರಿಗಳಿದ್ದವು. ಎಲ್ಲ ದಾರಿಯನ್ನು ಮರೆತ ಆ ನಟಿ ಹಿಡಿದ ದಾರಿ ಆತ್ಮಹತ್ಯೆ. ಶೀಲ, ಮಾನ ಎಂಬುದು ಹೆಣ್ಣಿಗಷ್ಟೇ ಸೀಮಿತವಲ್ಲ. ಯಾವುದಕ್ಕೂ ಹೆದರುವ-ಅಂಜಿಕೊಳ್ಳುವ ಅಗತ್ಯವಿಲ್ಲ, ಮೋಸದ ಪ್ರೀತಿಗೆ ನಿರಾಶೆಯಾಗುವುದೂ ಬೇಕಿಲ್ಲ ಎಂದು ಆಕೆಯ ಅರಿವಾಗಿದ್ದ ಆಕೆ ಇಂದು ಭವಿಷ್ಯದ ಹೊಸ ಕನಸುಗಳನ್ನು ಕಾಣಬಹುದಿತ್ತು.


ಇದನ್ನು ಓದಿ: ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...