Homeಅಂಕಣಗಳುಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

ಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

- Advertisement -
- Advertisement -

ಮಿಲೇನಿಯಲ್ಸ್ ಎಂದು ಕರೆಸಿಕೊಳ್ಳುತ್ತಿರುವ ಇಂದಿನ ಯುವಜನಾಂಗ ಪ್ರೀತಿಯ ಅರ್ಥವನ್ನೇ ಮರೆತು ಬಿಟ್ಟಂತಿದೆ. ಪ್ರೀತಿಯೆಂಬ ಸುಮಧುರ ಬಾಂಧವ್ಯವನ್ನು ಕಾಮೋಪ್ರೇಕ್ಷೆಯಿಂದ ಅಳೆಯಲು ಶುರುವಿಟ್ಟಿರುವಂತೆ ಕಾಣಲಾರಂಭಿಸಿದೆ. ಪ್ರೀತಿಯ ಮೊಗ್ಗು ಅರಳಲಾಂಭಿಸುತ್ತಿದ್ದಂತೆ ಅದು ಕಾಮದೊಂದಿಗೆ ಅಂತ್ಯವಾಗಿಬಿಡುವ ಸನ್ನಿವೇಶಗಳು ಎಂದು ಹೆಚ್ಚಾಗಿ ಸಂಭವಿಸುತ್ತಿವೆ. ಅದರಲ್ಲೂ ಟೈಮ್ ಪಾಲ್ ಲವ್ ಎಂಬ ಹೊಸ ಟ್ರೆಂಡ್ ಬೇರೆ ಶುರುವಾಗಿದೆ. ಇಂತಹ ಟೈಮ್ ಪಾಸ್ ಲವ್‍ಗೆ ಬಲಿಯಾಗುವುದು ಯುವತಿಯರೇ ವಿನಃ ಯುವಕರಲ್ಲ. ಆದರೂ, ಸಿನಿಮಾ-ಸೀರಿಯಲ್‍ಗಳು ಹುಡುಗಿಯರೇ ಮೋಸಗಾತಿಯರು ಎಂಬಂತೆ ಬಿಂಬಿಸುತ್ತಿರುವುದು ಹೊಸತೇನಲ್ಲ.

ಮೊನ್ನೆಯಷ್ಟೇ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ ಸೆಲ್ಫಿ ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ದಿನೇಶನನ್ನು ಪ್ರೀತಿಸಿ ಮೋಸ ಹೋದದ್ದು. ಅದು ಕೇವಲ ಪ್ರೀತಿಯಲ್ಲಾದ ಮೋಸವಷ್ಟೇ ಆಗಿರಲಿಲ್ಲ ಎಂಬುದು ವಾಸ್ತವ. ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಅವರಿಬ್ಬರೂ ಮಾನಸಿಕವಾಗಿಯಷ್ಟೇ ಅಲ್ಲದೆ, ದೈಹಿಕವಾಗಿಯೂ ಒಂದಾಗಿದ್ದರು. ಅವರಿಬ್ಬರ ದೈಹಿಕ ಬೆಸುಗೆಗೂ ಮುನ್ನ ಸುಮಾರು ಬಾರಿ ಆತನೇ ಮದುವೆಯ ವಿಚಾರ ಪ್ರಸ್ತಾಪಿಸಿದ್ದರೂ, ಕಾಲಕ್ರಮೇಣ ಮದುವೆಗೆ ಹಿಂದೇಟು ಹಾಕಲು ಆರಂಭಿಸಿದ್ದ. ಅಲ್ಲದೆ, ಆಕೆಯ ನಡತೆಯೇ ಸರಿಯಿಲ್ಲವೆಂದು ದೂಷಿಸಿದ್ದ. ಇಷ್ಟೆಲ್ಲವೂ ಆದ ನಂತರ ಈ ಆತ್ಮಹತ್ಯೆಯನ್ನು, ಪ್ರೀತಿಯ ನಂಬಿಕೆ, ಮದುವೆ ಭರವಸೆಯೊಂದಿಗೆ ದಿನೇಶ ಆಕೆಯ ಮೇಲೆ ನಡೆಸಿದ ಅತ್ಯಾಚಾರ ಮತ್ತು ಕೊಲೆ ಎಂದರೂ ತಪ್ಪಾಗಲಾದರು.

ಐದು ವರ್ಷಗಳಿಂದ ಆತನನ್ನು ಪ್ರೀತಿಸುತ್ತಿದ್ದ ಚಂದನ, ಆತನಿಗೆ 5 ಲಕ್ಷ ಹಣವನ್ನೂ ಕೊಟ್ಟಿದ್ದಳು. ಆಕೆಯ ಎಲ್ಲಾ ನಂಬಿಕೆಗೂ ದ್ರೋಹ ಬಗೆದ ದಿನೇಶ, ಆಕೆಯನ್ನು ಸಾವಿನ ಮನೆಗೆ ದೂಡಿ ಪರಾರಿಯಾಗಿದ್ದಾನೆ. ಭವಿಷ್ಯದ ಕನಸುಗಳನ್ನು ಒಡೆದ ಮನಸು ಸಾವಿಗೆ ಶರಣಾಗಿದೆ.

ಆತ ಮಾಡಿದ ಮೋಸಕ್ಕೆ ಈಕೆಗೆ ಆತ್ಮಹತ್ಯೆ ಒಂದೇ ಪರಿಹಾರವಾಗಿರಲಿಲ್ಲ. ಇದ್ದು ಜಯಿಸಲು ಸಾಕಷ್ಟು ದಾರಿಗಳಿದ್ದವು. ಎಲ್ಲ ದಾರಿಯನ್ನು ಮರೆತ ಆ ನಟಿ ಹಿಡಿದ ದಾರಿ ಆತ್ಮಹತ್ಯೆ. ಶೀಲ, ಮಾನ ಎಂಬುದು ಹೆಣ್ಣಿಗಷ್ಟೇ ಸೀಮಿತವಲ್ಲ. ಯಾವುದಕ್ಕೂ ಹೆದರುವ-ಅಂಜಿಕೊಳ್ಳುವ ಅಗತ್ಯವಿಲ್ಲ, ಮೋಸದ ಪ್ರೀತಿಗೆ ನಿರಾಶೆಯಾಗುವುದೂ ಬೇಕಿಲ್ಲ ಎಂದು ಆಕೆಯ ಅರಿವಾಗಿದ್ದ ಆಕೆ ಇಂದು ಭವಿಷ್ಯದ ಹೊಸ ಕನಸುಗಳನ್ನು ಕಾಣಬಹುದಿತ್ತು.


ಇದನ್ನು ಓದಿ: ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...