Homeಅಂಕಣಗಳುಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

ಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

- Advertisement -
- Advertisement -

ಮಿಲೇನಿಯಲ್ಸ್ ಎಂದು ಕರೆಸಿಕೊಳ್ಳುತ್ತಿರುವ ಇಂದಿನ ಯುವಜನಾಂಗ ಪ್ರೀತಿಯ ಅರ್ಥವನ್ನೇ ಮರೆತು ಬಿಟ್ಟಂತಿದೆ. ಪ್ರೀತಿಯೆಂಬ ಸುಮಧುರ ಬಾಂಧವ್ಯವನ್ನು ಕಾಮೋಪ್ರೇಕ್ಷೆಯಿಂದ ಅಳೆಯಲು ಶುರುವಿಟ್ಟಿರುವಂತೆ ಕಾಣಲಾರಂಭಿಸಿದೆ. ಪ್ರೀತಿಯ ಮೊಗ್ಗು ಅರಳಲಾಂಭಿಸುತ್ತಿದ್ದಂತೆ ಅದು ಕಾಮದೊಂದಿಗೆ ಅಂತ್ಯವಾಗಿಬಿಡುವ ಸನ್ನಿವೇಶಗಳು ಎಂದು ಹೆಚ್ಚಾಗಿ ಸಂಭವಿಸುತ್ತಿವೆ. ಅದರಲ್ಲೂ ಟೈಮ್ ಪಾಲ್ ಲವ್ ಎಂಬ ಹೊಸ ಟ್ರೆಂಡ್ ಬೇರೆ ಶುರುವಾಗಿದೆ. ಇಂತಹ ಟೈಮ್ ಪಾಸ್ ಲವ್‍ಗೆ ಬಲಿಯಾಗುವುದು ಯುವತಿಯರೇ ವಿನಃ ಯುವಕರಲ್ಲ. ಆದರೂ, ಸಿನಿಮಾ-ಸೀರಿಯಲ್‍ಗಳು ಹುಡುಗಿಯರೇ ಮೋಸಗಾತಿಯರು ಎಂಬಂತೆ ಬಿಂಬಿಸುತ್ತಿರುವುದು ಹೊಸತೇನಲ್ಲ.

ಮೊನ್ನೆಯಷ್ಟೇ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ ಸೆಲ್ಫಿ ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ದಿನೇಶನನ್ನು ಪ್ರೀತಿಸಿ ಮೋಸ ಹೋದದ್ದು. ಅದು ಕೇವಲ ಪ್ರೀತಿಯಲ್ಲಾದ ಮೋಸವಷ್ಟೇ ಆಗಿರಲಿಲ್ಲ ಎಂಬುದು ವಾಸ್ತವ. ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಅವರಿಬ್ಬರೂ ಮಾನಸಿಕವಾಗಿಯಷ್ಟೇ ಅಲ್ಲದೆ, ದೈಹಿಕವಾಗಿಯೂ ಒಂದಾಗಿದ್ದರು. ಅವರಿಬ್ಬರ ದೈಹಿಕ ಬೆಸುಗೆಗೂ ಮುನ್ನ ಸುಮಾರು ಬಾರಿ ಆತನೇ ಮದುವೆಯ ವಿಚಾರ ಪ್ರಸ್ತಾಪಿಸಿದ್ದರೂ, ಕಾಲಕ್ರಮೇಣ ಮದುವೆಗೆ ಹಿಂದೇಟು ಹಾಕಲು ಆರಂಭಿಸಿದ್ದ. ಅಲ್ಲದೆ, ಆಕೆಯ ನಡತೆಯೇ ಸರಿಯಿಲ್ಲವೆಂದು ದೂಷಿಸಿದ್ದ. ಇಷ್ಟೆಲ್ಲವೂ ಆದ ನಂತರ ಈ ಆತ್ಮಹತ್ಯೆಯನ್ನು, ಪ್ರೀತಿಯ ನಂಬಿಕೆ, ಮದುವೆ ಭರವಸೆಯೊಂದಿಗೆ ದಿನೇಶ ಆಕೆಯ ಮೇಲೆ ನಡೆಸಿದ ಅತ್ಯಾಚಾರ ಮತ್ತು ಕೊಲೆ ಎಂದರೂ ತಪ್ಪಾಗಲಾದರು.

ಐದು ವರ್ಷಗಳಿಂದ ಆತನನ್ನು ಪ್ರೀತಿಸುತ್ತಿದ್ದ ಚಂದನ, ಆತನಿಗೆ 5 ಲಕ್ಷ ಹಣವನ್ನೂ ಕೊಟ್ಟಿದ್ದಳು. ಆಕೆಯ ಎಲ್ಲಾ ನಂಬಿಕೆಗೂ ದ್ರೋಹ ಬಗೆದ ದಿನೇಶ, ಆಕೆಯನ್ನು ಸಾವಿನ ಮನೆಗೆ ದೂಡಿ ಪರಾರಿಯಾಗಿದ್ದಾನೆ. ಭವಿಷ್ಯದ ಕನಸುಗಳನ್ನು ಒಡೆದ ಮನಸು ಸಾವಿಗೆ ಶರಣಾಗಿದೆ.

ಆತ ಮಾಡಿದ ಮೋಸಕ್ಕೆ ಈಕೆಗೆ ಆತ್ಮಹತ್ಯೆ ಒಂದೇ ಪರಿಹಾರವಾಗಿರಲಿಲ್ಲ. ಇದ್ದು ಜಯಿಸಲು ಸಾಕಷ್ಟು ದಾರಿಗಳಿದ್ದವು. ಎಲ್ಲ ದಾರಿಯನ್ನು ಮರೆತ ಆ ನಟಿ ಹಿಡಿದ ದಾರಿ ಆತ್ಮಹತ್ಯೆ. ಶೀಲ, ಮಾನ ಎಂಬುದು ಹೆಣ್ಣಿಗಷ್ಟೇ ಸೀಮಿತವಲ್ಲ. ಯಾವುದಕ್ಕೂ ಹೆದರುವ-ಅಂಜಿಕೊಳ್ಳುವ ಅಗತ್ಯವಿಲ್ಲ, ಮೋಸದ ಪ್ರೀತಿಗೆ ನಿರಾಶೆಯಾಗುವುದೂ ಬೇಕಿಲ್ಲ ಎಂದು ಆಕೆಯ ಅರಿವಾಗಿದ್ದ ಆಕೆ ಇಂದು ಭವಿಷ್ಯದ ಹೊಸ ಕನಸುಗಳನ್ನು ಕಾಣಬಹುದಿತ್ತು.


ಇದನ್ನು ಓದಿ: ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...