Homeಮುಖಪುಟಚಂಡೀಗಢ: ಮೇಯರ್ ಚುನಾವಣೆಗೂ ಮುನ್ನವೇ ಕಾರ್ಯಕರ್ತರ ನಡುವೆ ಮಾರಾಮಾರಿ

ಚಂಡೀಗಢ: ಮೇಯರ್ ಚುನಾವಣೆಗೂ ಮುನ್ನವೇ ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಚಂಡೀಗಢ ಕಾಂಗ್ರೆಸ್ ಅಧ್ಯಕ್ಷ ಹರ್ಮೊಹಿಂದರ್ ಸಿಂಗ್ ಲಕ್ಕಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮೇಯರ್ ಅಭ್ಯರ್ಥಿಯನ್ನು ಅಪಹರಿಸಿದ್ದಾರೆ ಎಂಬ ಬಿಜೆಪಿ ಆರೋಪವನ್ನು ಇಂಡಿಯಾ ಮೈತ್ರಿಕೂಟ ತಳ್ಳಿಹಾಕಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೋಲು ಖಚಿತವಾಗಿರುವ ಕಾರಣಕ್ಕೆ ಬಿಜೆಪಿ ಇಂತಹ ಹೇಳಿಕೆಗಳನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

ಚಂಡೀಗಢದ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯಲ್ಲಿ ಮಂಗಳವಾರ ಬಿಜೆಪಿ ಮತ್ತು ಕಾಂಗ್ರೆಸ್-ಎಎಪಿ ಮೈತ್ರಿಕೂಟದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮೇಯರ್ ಸ್ಥಾನದಿಂದ ಕಾಂಗ್ರೆಸ್ ನ ಮುನ್ಸಿಪಲ್ ಕೌನ್ಸಿಲರ್ ಜಸ್ಬೀರ್ ಸಿಂಗ್ ಬಂಟಿ ನಾಮಪತ್ರ ಹಿಂಪಡೆಯಲು ಬಂದಾಗ ಈ ಘಟನೆ ನಡೆದಿದೆ. ಎಂಸಿ ಕಚೇರಿಗೆ ಆಗಮಿಸಿದ ಬಂಟಿ ಅವರ ತಂದೆ, ತನ್ನ ಮಗನನ್ನು ತನ್ನೊಂದಿಗೆ ಕಳುಹಿಸುವಂತೆ ಕಾಂಗ್ರೆಸ್ ಮುಖಂಡರನ್ನು ಕೇಳಿದರು, ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ಕಾಂಗ್ರೆಸ್-ಎಎಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಜಗಳ ನಡೆದಿದೆ.

ಬಂಟಿ ಅವರ ತಂದೆ ಬಿಜೆಪಿಯ ಪ್ರಭಾವದಿಂದ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪರಿಸ್ಥಿತಿ ಕೈ ಮೀರಿದ್ದರಿಂದ ಚಂಡೀಗಢ ಪೊಲೀಸರು ಬಂಟಿಯನ್ನು ಅವರ ನಿವಾಸಕ್ಕೆ ಕರೆದೊಯ್ದರು.

ಆರಂಭದಲ್ಲಿ ಮೇಯರ್ ಹುದ್ದೆಗೆ ಜಸ್ಬೀರ್ ಸಿಂಗ್ ಬಂಟಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಎಎಪಿ ಮೈತ್ರಿ ಮಾಡಿಕೊಂಡ ನಂತರ, ಮೇಯರ್ ಹುದ್ದೆಗೆ ಎಎಪಿ, ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಕಾಂಗ್ರೆಸ್ ನಾಮನಿರ್ದೇಶಿತರು ಸ್ಪರ್ಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನಂತರ, ವೀಡಿಯೊ ಸಂದೇಶ ಬಿಡುಗಡೆ ಮಾಡಿರುವ ಬಂಟಿ, ನಾನು ಕಾಂಗ್ರೆಸ್‌ನೊಂದಿಗೆ ಇದ್ದೇನೆ, ಮುಂದೆಯೂ ಪಕ್ಷದೊಂದಿಗೆ ಇರುತ್ತೇನೆ ಎಂದು ಹೇಳಿದ್ದಾರೆ. ‘ವಿರೋಧ ಪಕ್ಷಗಳ ನಾಯಕರನ್ನು ಬೇಟೆಯಾಡಲು ಬಿಜೆಪಿ ಸ್ಥಳೀಯ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪವನ್ ಕುಮಾರ್ ಬನ್ಸಾಲ್ ಆರೋಪಿಸಿದ್ದಾರೆ.

ಮುಂಬರುವ ಚಂಡೀಗಢ ಮೇಯರ್ ಚುನಾವಣೆಗೆ ಆಪ್ ಮತ್ತು ಕಾಂಗ್ರೆಸ್ ಸೋಮವಾರ ಮೈತ್ರಿ ಮಾಡಿಕೊಂಡಿವೆ.

ಈ ಒಪ್ಪಂದದ ಪ್ರಕಾರ, ಆಮ್ ಆದ್ಮಿ ಪಕ್ಷ (ಎಎಪಿ) ಮೇಯರ್ ಸ್ಥಾನಕ್ಕಾಗಿ ಹೋರಾಡಲಿದೆ ಮತ್ತು ಕಾಂಗ್ರೆಸ್ ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಸ್ಪರ್ಧಿಸಲಿದೆ. 35 ಸದಸ್ಯ ಬಲದ ಚಂಡೀಗಢ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 14 ಕೌನ್ಸಿಲರ್‌ಗಳನ್ನು ಹೊಂದಿದೆ. ಇದು ಮತದಾನದ ಹಕ್ಕು ಹೊಂದಿರುವ ಪದನಿಮಿತ್ತ ಸದಸ್ಯ ಎಂಪಿಯನ್ನು ಸಹ ಹೊಂದಿದೆ.

ಎಎಪಿ 13 ಮತ್ತು ಕಾಂಗ್ರೆಸ್ ಏಳು ಕೌನ್ಸಿಲರ್‌ಗಳನ್ನು ಹೊಂದಿದೆ. ಶಿರೋಮಣಿ ಅಕಾಲಿ ದಳವು ತನ್ನ ಏಕೈಕ ಕೌನ್ಸಿಲರ್ ಅನ್ನು ಹೊಂದಿದೆ. ಮೇಯರ್, ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ನಾಳೆ ಗುರುವಾರ ಚುನಾವಣೆ ನಡೆಯಲಿದೆ.

ಇದನ್ನೂ ಓದಿ; ಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...