Homeಮುಖಪುಟಚಂಡೀಗಢ: ಮೇಯರ್ ಚುನಾವಣೆಗೂ ಮುನ್ನವೇ ಕಾರ್ಯಕರ್ತರ ನಡುವೆ ಮಾರಾಮಾರಿ

ಚಂಡೀಗಢ: ಮೇಯರ್ ಚುನಾವಣೆಗೂ ಮುನ್ನವೇ ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಚಂಡೀಗಢ ಕಾಂಗ್ರೆಸ್ ಅಧ್ಯಕ್ಷ ಹರ್ಮೊಹಿಂದರ್ ಸಿಂಗ್ ಲಕ್ಕಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮೇಯರ್ ಅಭ್ಯರ್ಥಿಯನ್ನು ಅಪಹರಿಸಿದ್ದಾರೆ ಎಂಬ ಬಿಜೆಪಿ ಆರೋಪವನ್ನು ಇಂಡಿಯಾ ಮೈತ್ರಿಕೂಟ ತಳ್ಳಿಹಾಕಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೋಲು ಖಚಿತವಾಗಿರುವ ಕಾರಣಕ್ಕೆ ಬಿಜೆಪಿ ಇಂತಹ ಹೇಳಿಕೆಗಳನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

ಚಂಡೀಗಢದ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯಲ್ಲಿ ಮಂಗಳವಾರ ಬಿಜೆಪಿ ಮತ್ತು ಕಾಂಗ್ರೆಸ್-ಎಎಪಿ ಮೈತ್ರಿಕೂಟದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮೇಯರ್ ಸ್ಥಾನದಿಂದ ಕಾಂಗ್ರೆಸ್ ನ ಮುನ್ಸಿಪಲ್ ಕೌನ್ಸಿಲರ್ ಜಸ್ಬೀರ್ ಸಿಂಗ್ ಬಂಟಿ ನಾಮಪತ್ರ ಹಿಂಪಡೆಯಲು ಬಂದಾಗ ಈ ಘಟನೆ ನಡೆದಿದೆ. ಎಂಸಿ ಕಚೇರಿಗೆ ಆಗಮಿಸಿದ ಬಂಟಿ ಅವರ ತಂದೆ, ತನ್ನ ಮಗನನ್ನು ತನ್ನೊಂದಿಗೆ ಕಳುಹಿಸುವಂತೆ ಕಾಂಗ್ರೆಸ್ ಮುಖಂಡರನ್ನು ಕೇಳಿದರು, ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ಕಾಂಗ್ರೆಸ್-ಎಎಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಜಗಳ ನಡೆದಿದೆ.

ಬಂಟಿ ಅವರ ತಂದೆ ಬಿಜೆಪಿಯ ಪ್ರಭಾವದಿಂದ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪರಿಸ್ಥಿತಿ ಕೈ ಮೀರಿದ್ದರಿಂದ ಚಂಡೀಗಢ ಪೊಲೀಸರು ಬಂಟಿಯನ್ನು ಅವರ ನಿವಾಸಕ್ಕೆ ಕರೆದೊಯ್ದರು.

ಆರಂಭದಲ್ಲಿ ಮೇಯರ್ ಹುದ್ದೆಗೆ ಜಸ್ಬೀರ್ ಸಿಂಗ್ ಬಂಟಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಎಎಪಿ ಮೈತ್ರಿ ಮಾಡಿಕೊಂಡ ನಂತರ, ಮೇಯರ್ ಹುದ್ದೆಗೆ ಎಎಪಿ, ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಕಾಂಗ್ರೆಸ್ ನಾಮನಿರ್ದೇಶಿತರು ಸ್ಪರ್ಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನಂತರ, ವೀಡಿಯೊ ಸಂದೇಶ ಬಿಡುಗಡೆ ಮಾಡಿರುವ ಬಂಟಿ, ನಾನು ಕಾಂಗ್ರೆಸ್‌ನೊಂದಿಗೆ ಇದ್ದೇನೆ, ಮುಂದೆಯೂ ಪಕ್ಷದೊಂದಿಗೆ ಇರುತ್ತೇನೆ ಎಂದು ಹೇಳಿದ್ದಾರೆ. ‘ವಿರೋಧ ಪಕ್ಷಗಳ ನಾಯಕರನ್ನು ಬೇಟೆಯಾಡಲು ಬಿಜೆಪಿ ಸ್ಥಳೀಯ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪವನ್ ಕುಮಾರ್ ಬನ್ಸಾಲ್ ಆರೋಪಿಸಿದ್ದಾರೆ.

ಮುಂಬರುವ ಚಂಡೀಗಢ ಮೇಯರ್ ಚುನಾವಣೆಗೆ ಆಪ್ ಮತ್ತು ಕಾಂಗ್ರೆಸ್ ಸೋಮವಾರ ಮೈತ್ರಿ ಮಾಡಿಕೊಂಡಿವೆ.

ಈ ಒಪ್ಪಂದದ ಪ್ರಕಾರ, ಆಮ್ ಆದ್ಮಿ ಪಕ್ಷ (ಎಎಪಿ) ಮೇಯರ್ ಸ್ಥಾನಕ್ಕಾಗಿ ಹೋರಾಡಲಿದೆ ಮತ್ತು ಕಾಂಗ್ರೆಸ್ ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಸ್ಪರ್ಧಿಸಲಿದೆ. 35 ಸದಸ್ಯ ಬಲದ ಚಂಡೀಗಢ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 14 ಕೌನ್ಸಿಲರ್‌ಗಳನ್ನು ಹೊಂದಿದೆ. ಇದು ಮತದಾನದ ಹಕ್ಕು ಹೊಂದಿರುವ ಪದನಿಮಿತ್ತ ಸದಸ್ಯ ಎಂಪಿಯನ್ನು ಸಹ ಹೊಂದಿದೆ.

ಎಎಪಿ 13 ಮತ್ತು ಕಾಂಗ್ರೆಸ್ ಏಳು ಕೌನ್ಸಿಲರ್‌ಗಳನ್ನು ಹೊಂದಿದೆ. ಶಿರೋಮಣಿ ಅಕಾಲಿ ದಳವು ತನ್ನ ಏಕೈಕ ಕೌನ್ಸಿಲರ್ ಅನ್ನು ಹೊಂದಿದೆ. ಮೇಯರ್, ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ನಾಳೆ ಗುರುವಾರ ಚುನಾವಣೆ ನಡೆಯಲಿದೆ.

ಇದನ್ನೂ ಓದಿ; ಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...