Homeಮುಖಪುಟಆರ್ಟಿಕಲ್ 240 ನೇ ವಿಧಿಗೆ ಚಂಡೀಗಢ ಆಡಳಿತ; ಕೇಂದ್ರದ ನಿರ್ಧಾರಕ್ಕೆ ಪಂಜಾಬ್‌ನಲ್ಲಿ ವಿರೋಧ

ಆರ್ಟಿಕಲ್ 240 ನೇ ವಿಧಿಗೆ ಚಂಡೀಗಢ ಆಡಳಿತ; ಕೇಂದ್ರದ ನಿರ್ಧಾರಕ್ಕೆ ಪಂಜಾಬ್‌ನಲ್ಲಿ ವಿರೋಧ

- Advertisement -
- Advertisement -

ಕೇಂದ್ರ ಸರ್ಕಾರವು ಸಂವಿಧಾನದ 240 ನೇ ವಿಧಿಯ ವ್ಯಾಪ್ತಿಗೆ ಚಂಡೀಗಢವನ್ನು ತರುವ ಉದ್ದೇಶವನ್ನು ಸೂಚಿಸಿದ ನಂತರ ಪಂಜಾಬ್‌ನಲ್ಲಿ ದೊಡ್ಡ ರಾಜಕೀಯ ಬಿರುಗಾಳಿ ಎದ್ದಿದೆ, ಇದು ಕೇಂದ್ರಾಡಳಿತ ಪ್ರದೇಶಕ್ಕೆ ರಾಷ್ಟ್ರಪತಿಗಳು ನೇರವಾಗಿ ನಿಯಮಗಳನ್ನು ರೂಪಿಸಲು ಅಧಿಕಾರ ನೀಡುವ ಕ್ರಮವಾಗಿದೆ.

ಪ್ರಸ್ತುತ, ಚಂಡೀಗಢ ಪಂಜಾಬ್ ರಾಜ್ಯಪಾಲರ ಆಡಳಿತದಲ್ಲಿದ್ದು, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ಜಂಟಿ ರಾಜಧಾನಿಯಾಗಿ ಕಾರ್ಯನಿರ್ವಹಿಸುತ್ತದೆ.

ಸಂವಿಧಾನ (131 ನೇ ತಿದ್ದುಪಡಿ) ಮಸೂದೆ, 2025 ಅನ್ನು ಡಿಸೆಂಬರ್ 1 ರಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಪರಿಚಯಿಸುವ ಸಾಧ್ಯತೆಯಿದೆ ಎಂದು ಸಂಸತ್ತಿನ ಬುಲೆಟಿನ್ ಸೂಚಿಸಿದೆ. ಇದು ಪಂಜಾಬ್‌ನಲ್ಲಿ ರಾಜಕೀಯ ವಲಯದಲ್ಲಿ ಪ್ರತಿಭಟನೆ ಹುಟ್ಟುಹಾಕಿದೆ.

ಎಎಪಿ, ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ ಸೇರಿದಂತೆ ಇತರೆ ಪಕ್ಷಗಳು ಈ ಪ್ರಸ್ತಾಪವನ್ನು ತೀವ್ರವಾಗಿ ಟೀಕಿಸಿವೆ. ಕೇಂದ್ರದ ನಿರ್ಧಾರವನ್ನು “ಪಂಜಾಬ್ ವಿರೋಧಿ” ಎಂದು ಕರೆದಿವೆ.

ಚಂಡೀಗಢವನ್ನು ಪ್ರಸ್ತುತ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ಮತ್ತು ಪುದುಚೇರಿಗಳನ್ನು ಒಳಗೊಂಡಿರುವ 240 ನೇ ವಿಧಿಯ ಅಡಿಯಲ್ಲಿ ಚಂಡೀಗಢವನ್ನು ಸೇರಿಸುವುದರಿಂದ ನಗರದ ಮೇಲಿನ ಪಂಜಾಬ್‌ನ ದೀರ್ಘಕಾಲದ ಹಕ್ಕನ್ನು ದುರ್ಬಲಗೊಳಿಸುತ್ತದೆ ಎಂದು ಅವರು ವಾದಿಸುತ್ತಾರೆ.

1966 ರಲ್ಲಿ ಹರಿಯಾಣವನ್ನು ಪಂಜಾಬ್‌ನಿಂದ ಬೇರ್ಪಡಿಸಿದಾಗ ಚಂಡೀಗಢವನ್ನು ಕೇಂದ್ರಾಡಳಿತ ಪ್ರದೇಶವಾಗಿ ರಚಿಸಲಾಯಿತು. ಅಂದಿನಿಂದ ಉಭಯ ರಾಜ್ಯಗಳ ಹಂಚಿಕೆಯ ರಾಜಧಾನಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಪಂಜಾಬ್ ರಾಜ್ಯಪಾಲರು ಚಂಡೀಗಢದ ಆಡಳಿತಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರೂ, ರಾಜ್ಯದ ರಾಜಕೀಯ ನಾಯಕರು ಚಂಡೀಗಢ ಪಂಜಾಬ್‌ಗೆ ಸೇರಿದ್ದು ಮತ್ತು ಹರಿಯಾಣಕ್ಕೆ ಪ್ರತ್ಯೇಕ ರಾಜಧಾನಿ ಇರಬೇಕು ಎಂದು ನಿರಂತರವಾಗಿ ವಾದಿಸುತ್ತಿದ್ದಾರೆ.

ಮುಖ್ಯಮಂತ್ರಿ ಭಗವಂತ್ ಮಾನ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ಬಿಜೆಪಿ ನೇತೃತ್ವದ ಕೇಂದ್ರವು ಪಂಜಾಬ್‌ನ ರಾಜಧಾನಿಯನ್ನು ‘ಕಿತ್ತುಕೊಳ್ಳಲು ಪಿತೂರಿ ನಡೆಸುತ್ತಿದೆ’ ಎಂದು ಹೇಳಿಕೊಂಡರು.

“ಚಂಡೀಗಢವು ರಾಜ್ಯದ ಅವಿಭಾಜ್ಯ ಅಂಗವಾಗಿತ್ತು, ಈಗಲೂ ಇದೆ ಮತ್ತು ಯಾವಾಗಲೂ ಉಳಿಯುತ್ತದೆ. ನಗರವನ್ನು ನಿರ್ಮಿಸಲು ಹಳ್ಳಿಗಳನ್ನು ತ್ಯಾಗ ಮಾಡಲಾಗಿದೆ ಮತ್ತು ಪಂಜಾಬ್ ಮಾತ್ರ ಸರಿಯಾದ ಹಕ್ಕನ್ನು ಹೊಂದಿದೆ” ಎಂದು ಹೇಳಿದರು.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಈ ಕ್ರಮದ ಮೇಲೆ ದಾಳಿ ನಡೆಸಿ, ಇದನ್ನು ಪಂಜಾಬ್‌ನ ಗುರುತಿನ ಮೇಲಿನ ದಾಳಿ ಎಂದು ಕರೆದರು.

“ಇತಿಹಾಸವೇ ಸಾಕ್ಷಿ: ಪಂಜಾಬಿಗಳು ಎಂದಿಗೂ ಸರ್ವಾಧಿಕಾರಕ್ಕೆ ತಲೆಬಾಗಿಲ್ಲ” ಎಂದು ಅವರು ಬರೆದಿದ್ದಾರೆ. “ಭದ್ರತೆ, ಧಾನ್ಯಗಳು ಮತ್ತು ನೀರಿನ” ಮೂಲಕ ರಾಷ್ಟ್ರಕ್ಕೆ ಅಪಾರ ಕೊಡುಗೆ ನೀಡಿದ ಪಂಜಾಬ್‌ಗೆ ಈಗ ಅದರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಈ ಬೆಳವಣಿಗೆಯನ್ನು ಅನಗತ್ಯ ಎಂದು ಟೀಕಿಸಿದ್ದಾರೆ. ಪಂಜಾಬ್‌ನ ಹಕ್ಕು ಕಸಿದುಕೊಳ್ಳುವ ಯಾವುದೇ ಪ್ರಯತ್ನವು ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ಎಚ್ಚರಿಸಿದರು.

“ನೀವು ಪಂಜಾಬ್‌ನೊಂದಿಗೆ ಇದ್ದೀರೋ ಅಥವಾ ಪಂಜಾಬ್ ವಿರುದ್ಧ ಇದ್ದೀರೋ ಎಂಬುದು ಇಂದು ನೀವು ತೆಗೆದುಕೊಳ್ಳುವ ನಿಲುವಿನಿಂದ ನಿರ್ಧರಿಸಲ್ಪಡುತ್ತದೆ” ಎಂದು ಹೇಳುವ ಮೂಲಕ ಅವರು ರಾಜ್ಯದ ಬಿಜೆಪಿ ನಾಯಕರನ್ನು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಕರೆ ನೀಡಿದರು.

“ಪಂಜಾಬ್ ವಿರೋಧಿ ಮಸೂದೆ ಒಕ್ಕೂಟ ರಚನೆಯ ಮೇಲಿನ ಸ್ಪಷ್ಟ ದಾಳಿ” ಎಂದು ಅಕಾಲಿ ದಳದ ಮುಖ್ಯಸ್ಥ ಮತ್ತು ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ ಹೇಳಿದರು. “ಪ್ರತಿಯೊಂದು ರಂಗದಲ್ಲೂ ಕೇಂದ್ರದ ನಿರ್ಧಾರದ ವಿರುದ್ಧ ಹೋರಾಡುವುದಾಗಿ” ಪ್ರತಿಜ್ಞೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...