Homeಮುಖಪುಟಚಂಡೀಗಢ: ಭ್ರಷ್ಟಾಚಾರ ವಿರೋಧಿ ರೈಡ್‌ ವೇಳೆ ಗುಂಡೇಟು; ಬಂಧಿತ ಐಎಎಸ್ ಅಧಿಕಾರಿ ಪುತ್ರ ನಿಧನ

ಚಂಡೀಗಢ: ಭ್ರಷ್ಟಾಚಾರ ವಿರೋಧಿ ರೈಡ್‌ ವೇಳೆ ಗುಂಡೇಟು; ಬಂಧಿತ ಐಎಎಸ್ ಅಧಿಕಾರಿ ಪುತ್ರ ನಿಧನ

- Advertisement -
- Advertisement -

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಎಎಸ್‌‌ ಅಧಿಕಾರಿಯ ಪುತ್ರ ಶನಿವಾರ ಚಂಡೀಗಢದಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ.

ಭಾರತೀಯ ಆಡಳಿತ ಸೇವೆಗಳ ಅಧಿಕಾರಿ ಸಂಜಯ್ ಪೊಪ್ಲಿ ಅವರ ಪುತ್ರ ಕಾರ್ತಿಕ್ ಪೊಪ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದು, ಅವರ ಕುಟುಂಬ ಇದನ್ನು ಅಲ್ಲಗಳೆದಿದೆ. ಕಾರ್ತಿಕ್‌ ಪೊಪ್ಲಿಯವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿಜಿಲೆನ್ಸ್ ತಂಡವು ಸಂಜಯ್ ಪೊಪ್ಲಿ ಅವರ ನಿವಾಸದಲ್ಲಿದ್ದು, ಅವರ ಮಗ ಕಾರ್ತಿಕ್ ಪೊಪ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಚಂಡೀಗಢದ ಎಸ್‌ಎಸ್‌ಪಿ ಕುಲದೀಪ್ ಚಾಹಲ್ ಮಾಹಿತಿ ನೀಡಿದ್ದಾರೆ. ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ 27 ವರ್ಷದ ಯುವಕ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಚಹಾಲ್ ತಿಳಿಸಿದ್ದಾರೆ.

“ವಿಜಿಲೆನ್ಸ್ ತಂಡವು ವಿಚಾರಣೆಗಾಗಿ ಇಲ್ಲಿಗೆ (ಐಎಎಸ್ ಸಂಜಯ್ ಪೊಪ್ಲಿ ಅವರ ಮನೆ) ಭೇಟಿ ನೀಡಿತು. ಈ ವೇಳೆ ಗುಂಡೇಟಿನ ಶಬ್ದ ಕೇಳಿಸಿತು. ಸಂಜಯ್‌ ಮಗ ತನ್ನ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಪರಿಶೀಲನೆಯ ನಂತರ ತಿಳಿಯಿತು” ಎಂದಿದ್ದಾರೆ.

ನಮಗಿದ್ದ ಒಬ್ಬ ಮಗನನ್ನು ವಿಜಿಲೆನ್ಸ್ ತಂಡ ಕೊಲೆ ಮಾಡಿದೆ ಎಂದು ಪೊಪ್ಲಿ ಅವರ ಪತ್ನಿ ದೂರಿದ್ದಾರೆ.

“ಪಂಜಾಬ್‌ ಸಿಎಂ ಭಗವಂತ್ ಮಾನ್ ನಮ್ಮ ಮಗನನ್ನು ಕೊಂದಿದ್ದಾರೆ. ವಿಜಿಲೆನ್ಸ್ ತಂಡವು ನಮ್ಮ ನಿವಾಸದಲ್ಲಿತ್ತು. ಅವರು ನನ್ನ ಮಗನನ್ನು ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ.

ವಿಜಿಲೆನ್ಸ್ ತಂಡವು ಬಂಧಿತ ಅಧಿಕಾರಿಯ ಮನೆಗೆ ದಾಳಿ ನಡೆಸಿ ಹಲವಾರು ಚಿನ್ನ, ಬೆಳ್ಳಿ ನಾಣ್ಯಗಳು, ನಗದು, ಮೊಬೈಲ್ ಫೋನ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆದಿದೆ ಎನ್ನಲಾಗಿದೆ.

‘‘ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರ ಮನೆಯಲ್ಲಿ 12 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದ್ದು, ಚಿನ್ನದ ಇಟ್ಟಿಗೆಗಳು, ಬಿಸ್ಕತ್ತುಗಳು, 12 ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಅವರ ಮನೆಯಲ್ಲಿ ತಲಾ ಒಂದು ಕೆಜಿಯ ಮೂರು ಇಟ್ಟಿಗೆಗಳು ಪತ್ತೆಯಾಗಿವೆ. ತಲಾ 10 ಗ್ರಾಂ ತೂಕದ ಬೆಳ್ಳಿ ನಾಣ್ಯಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ” ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಸ್ಟೋರ್ ರೂಮ್‌ನೊಳಗೆ ಬಚ್ಚಿಟ್ಟಿದ್ದ ಬ್ಯಾಗ್‌ನಲ್ಲಿ ಹಲವಾರು ಫೋನ್‌ಗಳು ಪತ್ತೆಯಾಗಿವೆ. ಬ್ಯಾಗ್ ವಶಪಡಿಸಿಕೊಳ್ಳುವಾಗ ಕಾರ್ತಿಕ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಮನೆಯ ಸ್ಟೋರ್ ರೂಮ್‌ನಲ್ಲಿ ಬಚ್ಚಿಟ್ಟಿದ್ದ ಕಪ್ಪು ಲೆದರ್ ಬ್ಯಾಗ್‌ನಿಂದ ₹ 3.50 ಲಕ್ಷ ಮೌಲ್ಯದ 4 ಐಫೋನ್‌ಗಳು, ಸ್ಯಾಮ್‌ಸಂಗ್ ಫೋಲ್ಡರ್ ಫೋನ್, ಎರಡು ಸ್ಮಾರ್ಟ್ ವಾಚ್‌ಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.

“ಕಾರ್ತೀಕ್ ಅವರ ಸಾವಿಗೂ ತಮ್ಮ ತಂಡಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ವಿಜಿಲೆನ್ಸ್‌ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹತ್ಯೆಯಲ್ಲಿ ನಮ್ಮ ಕೈವಾಡವಿಲ್ಲ. ದೊಡ್ಡ ಪ್ರಮಾಣದಲ್ಲಿ ರೈಡ್‌ ನಡೆದಿದ್ದರಿಂದ ಅವರು ಒತ್ತಡದಲ್ಲಿದ್ದರು. ನಾವು ನಮ್ಮ ಕಚೇರಿಗೆ ಮರಳಿದ ನಂತರವೇ ಸಾವಿನ ಬಗ್ಗೆ ನಮಗೆ ತಿಳಿಯಿತು” ಎಂದು ವಿಜಿಲೆನ್ಸ್‌ನ ಡಿಎಸ್ಪಿ ಅಜಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿರಿ: ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಕಾರ್ತಿಕ್ ಸಾವಿನ ಬಗ್ಗೆ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿನ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಆಘಾತಕಾರಿ! ತಮ್ಮ ಮಗನನ್ನು ದುರಂತದ ಸಂದರ್ಭದಲ್ಲಿ ಸಂಜಯ್ ಪೊಪ್ಲಿ ಕಳೆದುಕೊಂಡಿದ್ದಾರೆ. ಸಂತಾಪಗಳು. ಘಟನೆಯನ್ನು ಕ್ಷಮಿಸಲಾಗದು” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಪಂಜಾಬ್‌ನ ನವನ್‌ಶಹರ್‌ನಲ್ಲಿ ಒಳಚರಂಡಿ ಪೈಪ್‌ಲೈನ್ ಹಾಕುವ ಟೆಂಡರ್‌ಗಳನ್ನು ತೆರವುಗೊಳಿಸಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಂಜಯ್ ಪೊಪ್ಲಿ ಅವರನ್ನು ಬಂಧಿಸಲಾಯಿತು. ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...