Homeಮುಖಪುಟಚಂಡೀಗಢ: ಭ್ರಷ್ಟಾಚಾರ ವಿರೋಧಿ ರೈಡ್‌ ವೇಳೆ ಗುಂಡೇಟು; ಬಂಧಿತ ಐಎಎಸ್ ಅಧಿಕಾರಿ ಪುತ್ರ ನಿಧನ

ಚಂಡೀಗಢ: ಭ್ರಷ್ಟಾಚಾರ ವಿರೋಧಿ ರೈಡ್‌ ವೇಳೆ ಗುಂಡೇಟು; ಬಂಧಿತ ಐಎಎಸ್ ಅಧಿಕಾರಿ ಪುತ್ರ ನಿಧನ

- Advertisement -
- Advertisement -

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಎಎಸ್‌‌ ಅಧಿಕಾರಿಯ ಪುತ್ರ ಶನಿವಾರ ಚಂಡೀಗಢದಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ.

ಭಾರತೀಯ ಆಡಳಿತ ಸೇವೆಗಳ ಅಧಿಕಾರಿ ಸಂಜಯ್ ಪೊಪ್ಲಿ ಅವರ ಪುತ್ರ ಕಾರ್ತಿಕ್ ಪೊಪ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದು, ಅವರ ಕುಟುಂಬ ಇದನ್ನು ಅಲ್ಲಗಳೆದಿದೆ. ಕಾರ್ತಿಕ್‌ ಪೊಪ್ಲಿಯವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿಜಿಲೆನ್ಸ್ ತಂಡವು ಸಂಜಯ್ ಪೊಪ್ಲಿ ಅವರ ನಿವಾಸದಲ್ಲಿದ್ದು, ಅವರ ಮಗ ಕಾರ್ತಿಕ್ ಪೊಪ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಚಂಡೀಗಢದ ಎಸ್‌ಎಸ್‌ಪಿ ಕುಲದೀಪ್ ಚಾಹಲ್ ಮಾಹಿತಿ ನೀಡಿದ್ದಾರೆ. ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ 27 ವರ್ಷದ ಯುವಕ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಚಹಾಲ್ ತಿಳಿಸಿದ್ದಾರೆ.

“ವಿಜಿಲೆನ್ಸ್ ತಂಡವು ವಿಚಾರಣೆಗಾಗಿ ಇಲ್ಲಿಗೆ (ಐಎಎಸ್ ಸಂಜಯ್ ಪೊಪ್ಲಿ ಅವರ ಮನೆ) ಭೇಟಿ ನೀಡಿತು. ಈ ವೇಳೆ ಗುಂಡೇಟಿನ ಶಬ್ದ ಕೇಳಿಸಿತು. ಸಂಜಯ್‌ ಮಗ ತನ್ನ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಪರಿಶೀಲನೆಯ ನಂತರ ತಿಳಿಯಿತು” ಎಂದಿದ್ದಾರೆ.

ನಮಗಿದ್ದ ಒಬ್ಬ ಮಗನನ್ನು ವಿಜಿಲೆನ್ಸ್ ತಂಡ ಕೊಲೆ ಮಾಡಿದೆ ಎಂದು ಪೊಪ್ಲಿ ಅವರ ಪತ್ನಿ ದೂರಿದ್ದಾರೆ.

“ಪಂಜಾಬ್‌ ಸಿಎಂ ಭಗವಂತ್ ಮಾನ್ ನಮ್ಮ ಮಗನನ್ನು ಕೊಂದಿದ್ದಾರೆ. ವಿಜಿಲೆನ್ಸ್ ತಂಡವು ನಮ್ಮ ನಿವಾಸದಲ್ಲಿತ್ತು. ಅವರು ನನ್ನ ಮಗನನ್ನು ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ.

ವಿಜಿಲೆನ್ಸ್ ತಂಡವು ಬಂಧಿತ ಅಧಿಕಾರಿಯ ಮನೆಗೆ ದಾಳಿ ನಡೆಸಿ ಹಲವಾರು ಚಿನ್ನ, ಬೆಳ್ಳಿ ನಾಣ್ಯಗಳು, ನಗದು, ಮೊಬೈಲ್ ಫೋನ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆದಿದೆ ಎನ್ನಲಾಗಿದೆ.

‘‘ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರ ಮನೆಯಲ್ಲಿ 12 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದ್ದು, ಚಿನ್ನದ ಇಟ್ಟಿಗೆಗಳು, ಬಿಸ್ಕತ್ತುಗಳು, 12 ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಅವರ ಮನೆಯಲ್ಲಿ ತಲಾ ಒಂದು ಕೆಜಿಯ ಮೂರು ಇಟ್ಟಿಗೆಗಳು ಪತ್ತೆಯಾಗಿವೆ. ತಲಾ 10 ಗ್ರಾಂ ತೂಕದ ಬೆಳ್ಳಿ ನಾಣ್ಯಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ” ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಸ್ಟೋರ್ ರೂಮ್‌ನೊಳಗೆ ಬಚ್ಚಿಟ್ಟಿದ್ದ ಬ್ಯಾಗ್‌ನಲ್ಲಿ ಹಲವಾರು ಫೋನ್‌ಗಳು ಪತ್ತೆಯಾಗಿವೆ. ಬ್ಯಾಗ್ ವಶಪಡಿಸಿಕೊಳ್ಳುವಾಗ ಕಾರ್ತಿಕ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಮನೆಯ ಸ್ಟೋರ್ ರೂಮ್‌ನಲ್ಲಿ ಬಚ್ಚಿಟ್ಟಿದ್ದ ಕಪ್ಪು ಲೆದರ್ ಬ್ಯಾಗ್‌ನಿಂದ ₹ 3.50 ಲಕ್ಷ ಮೌಲ್ಯದ 4 ಐಫೋನ್‌ಗಳು, ಸ್ಯಾಮ್‌ಸಂಗ್ ಫೋಲ್ಡರ್ ಫೋನ್, ಎರಡು ಸ್ಮಾರ್ಟ್ ವಾಚ್‌ಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.

“ಕಾರ್ತೀಕ್ ಅವರ ಸಾವಿಗೂ ತಮ್ಮ ತಂಡಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ವಿಜಿಲೆನ್ಸ್‌ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹತ್ಯೆಯಲ್ಲಿ ನಮ್ಮ ಕೈವಾಡವಿಲ್ಲ. ದೊಡ್ಡ ಪ್ರಮಾಣದಲ್ಲಿ ರೈಡ್‌ ನಡೆದಿದ್ದರಿಂದ ಅವರು ಒತ್ತಡದಲ್ಲಿದ್ದರು. ನಾವು ನಮ್ಮ ಕಚೇರಿಗೆ ಮರಳಿದ ನಂತರವೇ ಸಾವಿನ ಬಗ್ಗೆ ನಮಗೆ ತಿಳಿಯಿತು” ಎಂದು ವಿಜಿಲೆನ್ಸ್‌ನ ಡಿಎಸ್ಪಿ ಅಜಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿರಿ: ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಕಾರ್ತಿಕ್ ಸಾವಿನ ಬಗ್ಗೆ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿನ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಆಘಾತಕಾರಿ! ತಮ್ಮ ಮಗನನ್ನು ದುರಂತದ ಸಂದರ್ಭದಲ್ಲಿ ಸಂಜಯ್ ಪೊಪ್ಲಿ ಕಳೆದುಕೊಂಡಿದ್ದಾರೆ. ಸಂತಾಪಗಳು. ಘಟನೆಯನ್ನು ಕ್ಷಮಿಸಲಾಗದು” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಪಂಜಾಬ್‌ನ ನವನ್‌ಶಹರ್‌ನಲ್ಲಿ ಒಳಚರಂಡಿ ಪೈಪ್‌ಲೈನ್ ಹಾಕುವ ಟೆಂಡರ್‌ಗಳನ್ನು ತೆರವುಗೊಳಿಸಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಂಜಯ್ ಪೊಪ್ಲಿ ಅವರನ್ನು ಬಂಧಿಸಲಾಯಿತು. ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...