Homeಮುಖಪುಟಚಂಡೀಗಢ: ಭ್ರಷ್ಟಾಚಾರ ವಿರೋಧಿ ರೈಡ್‌ ವೇಳೆ ಗುಂಡೇಟು; ಬಂಧಿತ ಐಎಎಸ್ ಅಧಿಕಾರಿ ಪುತ್ರ ನಿಧನ

ಚಂಡೀಗಢ: ಭ್ರಷ್ಟಾಚಾರ ವಿರೋಧಿ ರೈಡ್‌ ವೇಳೆ ಗುಂಡೇಟು; ಬಂಧಿತ ಐಎಎಸ್ ಅಧಿಕಾರಿ ಪುತ್ರ ನಿಧನ

- Advertisement -
- Advertisement -

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಎಎಸ್‌‌ ಅಧಿಕಾರಿಯ ಪುತ್ರ ಶನಿವಾರ ಚಂಡೀಗಢದಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ.

ಭಾರತೀಯ ಆಡಳಿತ ಸೇವೆಗಳ ಅಧಿಕಾರಿ ಸಂಜಯ್ ಪೊಪ್ಲಿ ಅವರ ಪುತ್ರ ಕಾರ್ತಿಕ್ ಪೊಪ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದು, ಅವರ ಕುಟುಂಬ ಇದನ್ನು ಅಲ್ಲಗಳೆದಿದೆ. ಕಾರ್ತಿಕ್‌ ಪೊಪ್ಲಿಯವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿಜಿಲೆನ್ಸ್ ತಂಡವು ಸಂಜಯ್ ಪೊಪ್ಲಿ ಅವರ ನಿವಾಸದಲ್ಲಿದ್ದು, ಅವರ ಮಗ ಕಾರ್ತಿಕ್ ಪೊಪ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಚಂಡೀಗಢದ ಎಸ್‌ಎಸ್‌ಪಿ ಕುಲದೀಪ್ ಚಾಹಲ್ ಮಾಹಿತಿ ನೀಡಿದ್ದಾರೆ. ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ 27 ವರ್ಷದ ಯುವಕ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಚಹಾಲ್ ತಿಳಿಸಿದ್ದಾರೆ.

“ವಿಜಿಲೆನ್ಸ್ ತಂಡವು ವಿಚಾರಣೆಗಾಗಿ ಇಲ್ಲಿಗೆ (ಐಎಎಸ್ ಸಂಜಯ್ ಪೊಪ್ಲಿ ಅವರ ಮನೆ) ಭೇಟಿ ನೀಡಿತು. ಈ ವೇಳೆ ಗುಂಡೇಟಿನ ಶಬ್ದ ಕೇಳಿಸಿತು. ಸಂಜಯ್‌ ಮಗ ತನ್ನ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಪರಿಶೀಲನೆಯ ನಂತರ ತಿಳಿಯಿತು” ಎಂದಿದ್ದಾರೆ.

ನಮಗಿದ್ದ ಒಬ್ಬ ಮಗನನ್ನು ವಿಜಿಲೆನ್ಸ್ ತಂಡ ಕೊಲೆ ಮಾಡಿದೆ ಎಂದು ಪೊಪ್ಲಿ ಅವರ ಪತ್ನಿ ದೂರಿದ್ದಾರೆ.

“ಪಂಜಾಬ್‌ ಸಿಎಂ ಭಗವಂತ್ ಮಾನ್ ನಮ್ಮ ಮಗನನ್ನು ಕೊಂದಿದ್ದಾರೆ. ವಿಜಿಲೆನ್ಸ್ ತಂಡವು ನಮ್ಮ ನಿವಾಸದಲ್ಲಿತ್ತು. ಅವರು ನನ್ನ ಮಗನನ್ನು ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ.

ವಿಜಿಲೆನ್ಸ್ ತಂಡವು ಬಂಧಿತ ಅಧಿಕಾರಿಯ ಮನೆಗೆ ದಾಳಿ ನಡೆಸಿ ಹಲವಾರು ಚಿನ್ನ, ಬೆಳ್ಳಿ ನಾಣ್ಯಗಳು, ನಗದು, ಮೊಬೈಲ್ ಫೋನ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆದಿದೆ ಎನ್ನಲಾಗಿದೆ.

‘‘ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರ ಮನೆಯಲ್ಲಿ 12 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದ್ದು, ಚಿನ್ನದ ಇಟ್ಟಿಗೆಗಳು, ಬಿಸ್ಕತ್ತುಗಳು, 12 ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಅವರ ಮನೆಯಲ್ಲಿ ತಲಾ ಒಂದು ಕೆಜಿಯ ಮೂರು ಇಟ್ಟಿಗೆಗಳು ಪತ್ತೆಯಾಗಿವೆ. ತಲಾ 10 ಗ್ರಾಂ ತೂಕದ ಬೆಳ್ಳಿ ನಾಣ್ಯಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ” ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಸ್ಟೋರ್ ರೂಮ್‌ನೊಳಗೆ ಬಚ್ಚಿಟ್ಟಿದ್ದ ಬ್ಯಾಗ್‌ನಲ್ಲಿ ಹಲವಾರು ಫೋನ್‌ಗಳು ಪತ್ತೆಯಾಗಿವೆ. ಬ್ಯಾಗ್ ವಶಪಡಿಸಿಕೊಳ್ಳುವಾಗ ಕಾರ್ತಿಕ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಮನೆಯ ಸ್ಟೋರ್ ರೂಮ್‌ನಲ್ಲಿ ಬಚ್ಚಿಟ್ಟಿದ್ದ ಕಪ್ಪು ಲೆದರ್ ಬ್ಯಾಗ್‌ನಿಂದ ₹ 3.50 ಲಕ್ಷ ಮೌಲ್ಯದ 4 ಐಫೋನ್‌ಗಳು, ಸ್ಯಾಮ್‌ಸಂಗ್ ಫೋಲ್ಡರ್ ಫೋನ್, ಎರಡು ಸ್ಮಾರ್ಟ್ ವಾಚ್‌ಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.

“ಕಾರ್ತೀಕ್ ಅವರ ಸಾವಿಗೂ ತಮ್ಮ ತಂಡಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ವಿಜಿಲೆನ್ಸ್‌ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹತ್ಯೆಯಲ್ಲಿ ನಮ್ಮ ಕೈವಾಡವಿಲ್ಲ. ದೊಡ್ಡ ಪ್ರಮಾಣದಲ್ಲಿ ರೈಡ್‌ ನಡೆದಿದ್ದರಿಂದ ಅವರು ಒತ್ತಡದಲ್ಲಿದ್ದರು. ನಾವು ನಮ್ಮ ಕಚೇರಿಗೆ ಮರಳಿದ ನಂತರವೇ ಸಾವಿನ ಬಗ್ಗೆ ನಮಗೆ ತಿಳಿಯಿತು” ಎಂದು ವಿಜಿಲೆನ್ಸ್‌ನ ಡಿಎಸ್ಪಿ ಅಜಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿರಿ: ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಕಾರ್ತಿಕ್ ಸಾವಿನ ಬಗ್ಗೆ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿನ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಆಘಾತಕಾರಿ! ತಮ್ಮ ಮಗನನ್ನು ದುರಂತದ ಸಂದರ್ಭದಲ್ಲಿ ಸಂಜಯ್ ಪೊಪ್ಲಿ ಕಳೆದುಕೊಂಡಿದ್ದಾರೆ. ಸಂತಾಪಗಳು. ಘಟನೆಯನ್ನು ಕ್ಷಮಿಸಲಾಗದು” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಪಂಜಾಬ್‌ನ ನವನ್‌ಶಹರ್‌ನಲ್ಲಿ ಒಳಚರಂಡಿ ಪೈಪ್‌ಲೈನ್ ಹಾಕುವ ಟೆಂಡರ್‌ಗಳನ್ನು ತೆರವುಗೊಳಿಸಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಂಜಯ್ ಪೊಪ್ಲಿ ಅವರನ್ನು ಬಂಧಿಸಲಾಯಿತು. ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...