Homeಮುಖಪುಟಚಂಡೀಗಢ: ಬಿಜೆಪಿ ಸಂಸದೆ ಜೊತೆ ವಾಗ್ವಾದ; ಸದನದಿಂದ ಎಎಪಿ ಕೌನ್ಸಿಲರ್‌ಗಳ ಅಮಾನತು

ಚಂಡೀಗಢ: ಬಿಜೆಪಿ ಸಂಸದೆ ಜೊತೆ ವಾಗ್ವಾದ; ಸದನದಿಂದ ಎಎಪಿ ಕೌನ್ಸಿಲರ್‌ಗಳ ಅಮಾನತು

- Advertisement -
- Advertisement -

ಬಿಜೆಪಿ ಸಂಸದೆ ಕಿರಣ್ ಖೇರ್ ಅವರೊಂದಿಗೆ ವಾಗ್ವಾದ ನಡೆಸಿದ ನಂತರ ಚಂಡೀಗಢದ ಎಲ್ಲಾ 13 ಆಮ್ ಆದ್ಮಿ ಪಕ್ಷದ ಕೌನ್ಸಿಲರ್‌ಗಳನ್ನು ಮಂಗಳವಾರ ಸಾಮಾನ್ಯ ಸದನ ಸಭೆಯಿಂದ ಅಮಾನತುಗೊಳಿಸಿರುವ ಘಟನೆ ನಡೆದಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ನಂತರ ಕೌನ್ಸಿಲರ್‌ಗಳನ್ನು ಬಲವಂತವಾಗಿ ಸದನದಿಂದ ಹೊರ ಹಾಕಲಾಯಿತು.

ಘನತ್ಯಾಜ್ಯ ನಿರ್ವಹಣೆಗೆ ಹಣ ಖರ್ಚು ಮಾಡುವ ಸಂಬಂಧ ಎಎಪಿ ಸದಸ್ಯರು ಪ್ರಸ್ತಾಪಿಸಿದ ನಂತರ ಸಂಸದೆ ಕಿರಣ್‌ ಅಸಾಂವಿಧಾನಿಕ ಪದಗಳನ್ನು ಬಳಸಿದ್ದಾರೆಂಬ ಆರೋಪ ಬಂದಿದೆ.

“ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಅಸಂಸದೀಯ, ನಿಂದನೀಯ ಭಾಷೆಯನ್ನು ಖೇರ್‌‌ ಬಳಸಿದ್ದಾರೆ” ಎಂದು ಎಎಪಿ ಕೌನ್ಸಿಲರ್ ಜಸ್ಬೀರ್ ಸಿಂಗ್ ಆರೋಪಿಸಿದ್ದಾರೆ.

ಆದರೆ ಚಂಡೀಗಢ ಸಂಸದೆ ಖೇರ್‌ ಈ ಆರೋಪವನ್ನು ನಿರಾಕರಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಜಸ್ಬೀರ್‌ ಸಿಂಗ್ ಪ್ರತಿಕ್ರಿಯಿಸಿ, “ಸಂಸದರು ನಾನು ಕುಳಿತಿರುವಲ್ಲಿಗೆ ಬಂದು ‘ಕೇಜ್ರಿವಾಲ್ ಅವರ ಮನೆಗೆ ಖರ್ಚು ಮಾಡಿದ ಹಣದ ವಿವರಗಳನ್ನು ನೀಡಬೇಕು’ ಎಂದು ಹೇಳಿದರು. ನಂತರ ಅವರು ಕೇಜ್ರಿವಾಲ್ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಮತ್ತೆ ತನ್ನ ಸೀಟಿಗೆ ಹಿಂತಿರುಗಿದರು” ಎಂದು ವಿವರಿಸಿದ್ದಾರೆ.

“ನಾನು ಸದನದಲ್ಲಿ ಅದರ ಬಗ್ಗೆ ಆಕ್ಷೇಪಿಸಿದಾಗ, ನಾನು ಅವರು ಹೇಳಿದ ಪದಗಳನ್ನು ತಿಳಿಸಿದ್ದೇನೆ. ಆದರೆ ಸಂಸದರ ವಿರುದ್ಧ ಮೇಯರ್ ಕ್ರಮವನ್ನು ತೆಗೆದುಕೊಳ್ಳುವ ಬದಲು ನನ್ನನ್ನು ಅಮಾನತುಗೊಳಿಸಿದರು” ಎಂದಿದ್ದಾರೆ.

ಇದನ್ನೂ ಓದಿರಿ: ಅಮಿತ್ ಶಾರೊಂದಿಗೆ ನಾವು ಡೀಲ್ ಮಾಡಿಕೊಂಡಿಲ್ಲ, ಪ್ರತಿಭಟನೆ ಮುಂದುವರೆಸುತ್ತೇವೆ: ಕುಸ್ತಿಪಟು ಬಜರಂಗ್ ಪುನಿಯಾ

“ಕಿರಣ್ ಖೇರ್‌ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಜಸ್ಬೀರ್ ಸಿಂಗ್ ನೀಡಿದ ನಂತರ ಎಎಪಿ ಕೌನ್ಸಿಲರ್‌ಗಳನ್ನು ಅಮಾನತುಗೊಳಿಸಲಾಗಿದೆ” ಎಂದು ಮೇಯರ್ ಅನುಪ್ ಗುಪ್ತಾ ಹೇಳಿದ್ದಾರೆ.

“ಇತರ ಎಎಪಿ ಕೌನ್ಸಿಲರ್‌ಗಳು ಜಸ್ಬೀರ್ ಸಿಂಗ್ ಅವರ ಟೀಕೆಗಳಿಗೆ ವಿಷಾದ ವ್ಯಕ್ತಪಡಿಸುವ ಬದಲು ಬೆಂಬಲವನ್ನು ನೀಡಿದರು. ಇದರಿಂದಾಗಿ ಅವರನ್ನೂ ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಆದರೆ ಯಾವುದೇ ಅಸಂಸದೀಯ ಭಾಷೆ ಬಳಸಿಲ್ಲ ಎಂದು ಖೇರ್ ಪ್ರತಿಕ್ರಿಯಿಸಿದ್ದಾರೆ.

ಎಎಪಿ ಕೌನ್ಸಿಲರ್‌ಗಳನ್ನು ಹೊರಹಾಕಿದ ನಂತರ, ಅವರು ಸದನದ ಕೊಠಡಿಯ ಹೊರಗೆ ಪ್ರತಿಭಟನೆ ನಡೆಸಿದರು. ಭಾರತೀಯ ಜನತಾ ಪಕ್ಷದ ಸಂಸದೆ ಖೇರ್‌ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...