Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ಹೊಸದಾಗಿ ಮತದಾನ ನಡೆಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಎಎಪಿ

ಚಂಡೀಗಢ ಮೇಯರ್ ಚುನಾವಣೆ: ಹೊಸದಾಗಿ ಮತದಾನ ನಡೆಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಎಎಪಿ

- Advertisement -
- Advertisement -

ಕಾಂಗ್ರೆಸ್-ಎಎಪಿ ಮೈತ್ರಿಕೂಟಕ್ಕೆ ಬಹುಮತವಿದ್ದರೂ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದ್ದು, ಮಂಗಳವಾರ ಮಧ್ಯಾಹ್ನದ ವೇಳೆಗೆ, ಹಿರಿಯ ವಕೀಲ ಮತ್ತು ಪಂಜಾಬ್‌ನ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಅವರು ನ್ಯಾಯಮೂರ್ತಿ ಜಿಎಸ್ ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಲಪಿತಾ ಬ್ಯಾನರ್ಜಿ ಅವರ ಪೀಠದ ಮುಂದೆ ತುರ್ತು ವಿಚಾರಣೆಗೆ ವಿನಂತಿ ಸಲ್ಲಿಸಿದರು. ಮಂಗಳವಾರವೇ ವಿಚಾರಣೆಗೆ ಒಪ್ಪದ ನ್ಯಾಯಾಲಯವು, ಬುಧವಾರ ಬೆಳಗ್ಗೆ ಅರ್ಜಿ ಪರಿಶೀಲನೆಗೆ ಅನುಮತಿಸಿದೆ.

ಮಂಗಳವಾರ ನಡೆದ ಚಂಡೀಗಢದ ಮೇಯರ್ ಚುನಾವಣೆಯ ಸಂದರ್ಭದಲ್ಲಿ ತೀವ್ರ ಗದ್ದಲದ ನಂತರ, ಇಂಡಿಯಾ ಬ್ಲಾಕ್ ಅಭ್ಯರ್ಥಿ ಕುಲದೀಪ್ ಧಲೋರ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಚುನಾವಣಾ ಫಲಿತಾಂಶಗಳನ್ನು ಪ್ರಶ್ನಿಸಿದರು.

‘ಮಂಗಳವಾರ ನಡೆದ ಚುನಾವಣೆಯು ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ “ಸಂಪೂರ್ಣ ವಂಚನೆ ಮತ್ತು ನಕಲಿ ಫಲಿತಾಂಶವಾಗಿದೆ” ಎಂದು ಎಎಪಿ ಕೌನ್ಸಿಲರ್ ಧಲೋರ್ ಅವರು ಮನವಿಯ ಮೂಲಕ, ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಚುನಾವಣೆಗಳನ್ನು ಹೊಸದಾಗಿ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಮಂಗಳವಾರದ ಚುನಾವಣಾ ಪ್ರಕ್ರಿಯೆಯ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು. ಮಧ್ಯಂತರ ಕ್ರಮವಾಗಿ, ಮತಪತ್ರಗಳ ದಾಖಲೆ ಮತ್ತು ಚುನಾವಣಾ ಪ್ರಕ್ರಿಯೆಯ ವೀಡಿಯೋಗ್ರಫಿಯನ್ನು ಸೀಲ್ ಮಾಡಲು ಮತ್ತು ಸಂರಕ್ಷಿಸಲು ಅಧಿಕಾರಿಗಳಿಗೆ ತಿಳಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮೇಯರ್ ಚುನಾವಣೆ ಫಲಿತಾಂಶದ ವಿರುದ್ಧ ಎಎಪಿ ಮತ್ತು ಕಾಂಗ್ರೆಸ್ ಧ್ವನಿ ಎತ್ತಿದವು. ಆದರೆ, ಅವರ ಮನವಿಗೆ ಚುನಾವಣಾ ಅಧ್ಯಕ್ಷರು ಕಿವಿಗೊಡಲಿಲ್ಲ. ಅಚ್ಚರಿಯೆಂದರೆ, ಕಳೆದ ವರ್ಷದ ಚುನಾವಣೆಯಲ್ಲಿ ಅದೇ ಸ್ಥಾನದಲ್ಲಿದ್ದ ಜಿಲ್ಲಾಧಿಕಾರಿ, ಪ್ರತಿವಾದಿ ಸಂಖ್ಯೆ 2 ಮತ್ತು ನಿಗದಿತ ಪ್ರಾಧಿಕಾರವು ಮೌನವಾಗಿಯೇ ಉಳಿದಿದೆ. ಚುನಾವಣೆ ನಡೆಸುವ ಉದ್ದೇಶದಿಂದ ಮುನಿಸಿಪಲ್ ಕಾರ್ಪೊರೇಷನ್ ಕಾರ್ಯದರ್ಶಿ ಎಂದು ಕರೆಸಿಕೊಳ್ಳುವ ಜಂಟಿ ಆಯುಕ್ತರೂ ಆಕ್ಷೇಪ ವ್ಯಕ್ತಪಡಿಸದೆ ಮೌನವಾಗಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಮತದಾನದ ಸ್ವಲ್ಪ ಸಮಯದ ನಂತರ ಅಧ್ಯಕ್ಷರು, ಎಲ್ಲ ನಿಯಮಗಳು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿ, ಎಂಟು ಮತಗಳನ್ನು ಅಮಾನ್ಯವೆಂದು ಘೋಷಿಸಲಾಗಿದೆ ಎಂದು ಅದು ಹೇಳುತ್ತದೆ. ಮತಗಳ ಅಮಾನ್ಯತೆಯ ಬಗ್ಗೆ ಮತ್ತು ಈ ಅಮಾನ್ಯ ಮತಗಳು ಯಾರಿಗೆ ಚಲಾವಣೆಯಾದವು ಎಂಬುದರ ಬಗ್ಗೆ ಅವರು ಒಂದೇ ಒಂದು ಮಾತನ್ನೂ ಹೇಳಲಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ; ಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...