Homeಮುಖಪುಟಚಂಡೀಗಢ ಮೇಯರ್ ಚುನಾವಣೆ ವಿವಾದ: 'ಪ್ರಜಾಪ್ರಭುತ್ವದ ಕೊಲೆಗೆ ಅವಕಾಶ ನೀಡುವುದಿಲ್ಲ..' ಎಂದು ಕಿಡಿಕಾರಿದ ಸುಪ್ರೀಂ

ಚಂಡೀಗಢ ಮೇಯರ್ ಚುನಾವಣೆ ವಿವಾದ: ‘ಪ್ರಜಾಪ್ರಭುತ್ವದ ಕೊಲೆಗೆ ಅವಕಾಶ ನೀಡುವುದಿಲ್ಲ..’ ಎಂದು ಕಿಡಿಕಾರಿದ ಸುಪ್ರೀಂ

- Advertisement -
- Advertisement -

‘ಚಂಡೀಗಢ ಮೇಯರ್ ಚುನಾವಣೆಗೆ ವಿವಾದಕ್ಕೆ ಸಂಬಂಧಿಸಿದ ವೀಡಿಯೋಗ್ರಫಿ ಸೇರಿದಂತೆ ಎಲ್ಲ ಮತಪತ್ರಗಳು ಮತ್ತು ಇತರ ಮೂಲ ದಾಖಲೆಗಳನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಹಸ್ತಾಂತರಿಸುವಂತೆ’ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಚುನಾವಣಾ ಅಧಿಕಾರಿ ವಿರುದ್ಧ ಕಿಡಿಕಾರಿರುವ ಸುಪ್ರೀಂಕೋರ್ಟ್, ‘ಅವರು (ರಿಟರ್ನಿಂಗ್ ಆಫೀಸರ್) ಮತಪತ್ರಗಳನ್ನು ವಿರೂಪಗೊಳಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆಯೇ? ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾನಾ? ಪ್ರಜಾಪ್ರಭುತ್ವವನ್ನು ಈ ರೀತಿ ಕೊಲೆ ಮಾಡಲು ಅನುಮತಿಸುವುದಿಲ್ಲ’ ಎಂದು ಹೇಳಿ, ಮೇಯರ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಮನೋಜ್ ಸೋಂಕರ್ ವಿರುದ್ಧ ಸೋತಿದ್ದ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಕುಲದೀಪ್ ಧಲೋರ್ ಅವರು ಸಲ್ಲಿಸಿದ ಅರ್ಜಿಯ ಮೇಲೆ ನೋಟಿಸ್ ಜಾರಿ ಮಾಡಿದೆ.

‘ಇದು ಪ್ರಜಾಪ್ರಭುತ್ವದ ಅಪಹಾಸ್ಯ’ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಫೆಬ್ರವರಿ 7 ರಂದು ನಿಗದಿಯಾಗಿದ್ದ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಸಭೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಪ್ರತಿಪಕ್ಷಗಳ ಎಂಟು ಮತಗಳನ್ನು ರದ್ದುಪಡಿಸಿದ ಅಧ್ಯಕ್ಷರ ಕ್ರಮದ ನಂತರ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಕೆಲವು ದಿನಗಳ ನಂತರ ಸುಪ್ರೀಂ ಕೋರ್ಟ್‌ನ ಕಟುವಾದ ಹೇಳಿಕೆ ಬಂದಿದೆ. ಈ ಕ್ರಮವು ವೋಟ್ ಟ್ಯಾಂಪರಿಂಗ್ ಆರೋಪಕ್ಕೆ ಕಾರಣವಾಗಿತ್ತು.

16 ಮತಗಳನ್ನು ಪಡೆದ ಬಿಜೆಪಿಯ ಸೋಂಕರ್ ಅವರು ಮೇಯರ್ ಚುನಾವಣೆಯಲ್ಲಿ ಎಎಪಿಯ ಕುಲದೀಪ್ ಕುಮಾರ್ ಅವರನ್ನು ಸೋಲಿಸಿದರು, ಅವರು 12 ಮತಗಳನ್ನು ಪಡೆದರು. ಧಲೋರ್ ಪರವಾಗಿ ಚಲಾವಣೆಯಾಗಿದ್ದ ಎಂಟು ಮತಗಳನ್ನು ಚುನಾವಣಾಧಿಕಾರಿ ಯಾವುದೆ ಕಾರಣ ನೀಡದೆ ತಿರಸ್ಕರಿಸಿ, ಅಸಿಂಧು ಎಂದು ಘೋಷಿಸಿದ್ದರು.

ಭಾನುವಾರ, ಎಎಪಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿತು, ಮತ ಪತ್ರಗಳನ್ನು ‘ತಿರುಚಿದ’ ಆರೋಪದ ಮೇಲೆ ಅಧ್ಯಕ್ಷರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಪಕ್ಷದ ಚಂಡೀಗಢ ಸಹ-ಪ್ರಭಾರಿ ಸನ್ನಿ ಅಹ್ಲುವಾಲಿಯಾ ನೇತೃತ್ವದಲ್ಲಿ ಎಎಪಿ ಕೌನ್ಸಿಲರ್‌ಗಳು ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯ ಹೊರಗೆ ಧರಣಿ ಕುಳಿತರು.

‘ಈ ರಿಲೇ ಉಪವಾಸ ಸತ್ಯಾಗ್ರಹವು ‘ವೋಟ್ ಚೋರ್’ (ಮತ ಕಳ್ಳ) ಬಿಜೆಪಿ ವಿರುದ್ಧ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಲು ನಡೆಸುತ್ತಿದೆ. ಅಧ್ಯಕ್ಷ ಅನಿಲ್ ಮಸಿಹ್ ಅವರನ್ನು ಬಂಧಿಸುವವರೆಗೆ ಮತ್ತು “ನಕಲಿ” ಮೇಯರ್ ಅನ್ನು ತೆಗೆದುಹಾಕುವವರೆಗೆ ಈ ಪ್ರತಿಭಟನೆಯು ಮುಂದುವರಿಯುತ್ತದೆ’ ಎಂದು ಅವರು ಹೇಳಿದರು.

35 ಸದಸ್ಯ ಬಲದ ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ತಮ್ಮ ಮೈತ್ರಿಗೆ ಸುಲಭ ಜಯವನ್ನು ಭವಿಷ್ಯ ನುಡಿದಿದ್ದವು. ಇದು ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಬಣದ ವಿರೋಧ ಪಕ್ಷಕ್ಕೆ ಆರಂಭಿಕ ಪರೀಕ್ಷೆ ಎಂದು ಬಿಂಬಿಸಲಾಗುತಿತ್ತು.

ಇದನ್ನೂ ಓದಿ; ‘ವಿಶ್ವಾಸ’ ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ ‘ರಾಷ್ಟ್ರಪತಿ ಆಳ್ವಿಕೆ’ ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...