Homeಮುಖಪುಟಚಂಡೀಗಢ ಮೇಯರ್ ಚುನಾವಣೆ ವಿವಾದ: ಸುಪ್ರೀಂ ಕೋರ್ಟಿನಿಂದ ಇಂದು ಮತಪತ್ರ ಪರಿಶೀಲನೆ

ಚಂಡೀಗಢ ಮೇಯರ್ ಚುನಾವಣೆ ವಿವಾದ: ಸುಪ್ರೀಂ ಕೋರ್ಟಿನಿಂದ ಇಂದು ಮತಪತ್ರ ಪರಿಶೀಲನೆ

- Advertisement -
- Advertisement -

ಎಎಪಿ ಪಾಲಿಕೆ ಸದಸ್ಯರ ‘ಕುದುರೆ ವ್ಯಾಪಾರ’ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿವಾದಾತ್ಮಕ ವಿಜಯದ ಕಳವಳದ ನಡುವೆ ಇಂದು ಚಂಡೀಗಢ ಮೇಯರ್ ಚುನಾವಣೆಯ ಮತಪತ್ರಗಳನ್ನು ಮತ್ತು ಎಣಿಕೆ ಪ್ರಕ್ರಿಯೆಯ ವೀಡಿಯೊ ರೆಕಾರ್ಡಿಂಗ್ ಅನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಲಿದೆ.

ಬಿಜೆಪಿಯ ಮನೋಜ್ ಸೋಂಕರ್ ಅವರು 16 ಮತಗಳನ್ನು ಪಡೆದು ಆಮ್ ಆದ್ಮಿ ಪಕ್ಷ-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ಸೋಲಿಸಿದ್ದರು. ಮತದಾನ ಸಂದರ್ಭದಲ್ಲಿ, ಚುನಾವಣಾಧಿಕಾರಿ ಅನಿಲ್ ಮಸಿಹ್ ಅವರು ಸಮ್ಮಿಶ್ರ ಪಾಲುದಾರರ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಿದಾಗ ವಿವಾದ ಭುಗಿಲೆದ್ದಿತು, ಮತಪತ್ರಗಳನ್ನು ತಿದ್ದಿದ ಆರೋಪಕ್ಕೆ ಕಿಡಿ ಹೊತ್ತಿಸಿತು. ಬಿಜೆಪಿಯ ಅಲ್ಪಸಂಖ್ಯಾತರ ಸೆಲ್‌ನ ಸದಸ್ಯರಾದ ಮಸಿಹ್ – ಎಎಪಿ ಕೌನ್ಸಿಲರ್‌ಗಳಿಗೆ ಮತಪತ್ರಗಳ ಮೇಲೆ ಗುರುತು ಹಾಕುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ. ಫೆಬ್ರವರಿ 5 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಅವರ ಕ್ರಮಗಳನ್ನು ‘ಪ್ರಜಾಪ್ರಭುತ್ವದ ಅಪಹಾಸ್ಯ’ ಎಂದು ಖಂಡಿಸಿತು.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರು, ಸದಸ್ಯರ ಕುದುರೆ ವ್ಯಾಪಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ; ಮತಪತ್ರಗಳು ಮತ್ತು ಎಣಿಕೆ ಪ್ರಕ್ರಿಯೆಯ ವೀಡಿಯೊ ರೆಕಾರ್ಡಿಂಗ್ ಅನ್ನು ಪರಿಶೀಲಿಸಲು ನಿರ್ಧರಿಸಿದರು. ಹೊಸ ಚುನಾವಣೆಗೆ ತಕ್ಷಣ ಆದೇಶ ನೀಡುವ ಬದಲು, ಈಗಾಗಲೇ ಚಲಾವಣೆಯಾದ ಮತಗಳ ಆಧಾರದ ಮೇಲೆ ಫಲಿತಾಂಶಗಳ ಘೋಷಣೆಯನ್ನು ಪರಿಗಣಿಸುವಂತೆ ನ್ಯಾಯಾಲಯ ಸೂಚಿಸಿದೆ.

ಇಂದು ಸುಪ್ರೀಂ ಕೋರ್ಟಿಗೆ ದಾಖಲೆಗಳನ್ನು ಹಾಜರುಪಡಿಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ.

‘ಗಂಭೀರ ವಿಷಯ’

ಚಂಡೀಗಢ ಆಡಳಿತವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೈಕೋರ್ಟ್ ನೇಮಿಸಿದ ನ್ಯಾಯಾಂಗ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ಹೊಸದಾಗಿ ಚುನಾವಣೆ ನಡೆಸುವ ಆಲೋಚನೆಯನ್ನು ಪ್ರಸ್ತಾಪಿಸಿದರು. ಆದರೆ, ವಾದ ಆಲಿಸಿದ ನಂತರ ಪೀಠವು, ಫಲಿತಾಂಶ ಘೋಷಣೆಗೂ ಮುನ್ನವೇ ಸುಪ್ರೀಂ ಪೀಠದಿಂದಲೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವತ್ತ ವಾಲಿತು. ಮತಯಂತ್ರಗಳ ಎಣಿಕೆಯನ್ನು ಮೇಲ್ವಿಚಾರಣೆ ಮಾಡಲು ನ್ಯಾಯಾಂಗ ಅಧಿಕಾರಿಯನ್ನು ನಾಮನಿರ್ದೇಶನಕ್ಕೆ ಸೂಚಿಸಿದೆ.

ಮತಯಂತ್ರಗಳನ್ನು ವಿರೂಪಗೊಳಿಸಿದ ಆರೋಪ ಹೊತ್ತಿದ್ದ ಅನಿಲ್ ಮಸಿಹ್ ಅವರತ್ತ ಗಮನ ಹರಿಸಲಾಯಿತು. ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಮುಖ್ಯ ನ್ಯಾಯಮೂರ್ತಿಗಳು ಚುನಾವಣಾ ಅಧಿಕಾರಿಯನ್ನು ಪಾಟಿ ಸವಾಲಿಗೆ ಒಳಪಡಿಸಿದರು, ಚುನಾವಣೆ ನಡೆಸಿದ ರೀತಿಗೆ ಅಸಮಾಧಾನ ವ್ಯಕ್ತಪಡಿಸಿದರು. ನ್ಯಾಯಾಲಯವು ಮಸಿಹ್ ಅವರ ಕ್ರಮಗಳಿಗೆ ಸಂಭಾವ್ಯ ಕಾನೂನು ಕ್ರಮದ ಬಗ್ಗೆ ಕಟ್ಟುನಿಟ್ಟಾಗಿ ಎಚ್ಚರಿಸಿದೆ, ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯ ಗಂಭೀರ ಉಲ್ಲಂಘನೆ ಎಂದು ಕರೆದಿದೆ.

‘ಮಿಸ್ಟರ್ ಮಸಿಹ್, ನಾನು ನಿಮಗೆ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ, ನೀವು ಸತ್ಯವಾದ ಉತ್ತರಗಳನ್ನು ನೀಡದಿದ್ದರೆ, ನಿಮ್ಮ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು; ಇದು ಗಂಭೀರ ವಿಷಯವಾಗಿದೆ. ನಾವು ವೀಡಿಯೊವನ್ನು ನೋಡಿದ್ದೇವೆ. ನೀವು ಕ್ಯಾಮೆರಾವನ್ನು ನೋಡುತ್ತಾ ಏನು ಮಾಡುತ್ತಿದ್ದೀರಿ ಮತ್ತು ಅಡ್ಡ ಮತಗಳನ್ನು ಹಾಕುತ್ತಿದ್ದಿರಿ, ಯಾಕೆ ಮತಗಳನ್ನು ಹಾಕುತ್ತಿದ್ದಿರಿ?’ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಪ್ರಶ್ನಿಸಿದ್ದಾರೆ.

ಎಎಪಿಯ ಪರಾಜಿತ ಮೇಯರ್ ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಹೊಸ ಚುನಾವಣೆಗೆ ಮಧ್ಯಂತರ ಪರಿಹಾರ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ನಂತರ ಸುಪ್ರೀಂ ಕೋರ್ಟ್ ಯಾವುದೇ ಮಧ್ಯಂತರ ಆದೇಶವನ್ನು ನೀಡದಿದ್ದಕ್ಕಾಗಿ ಹೈಕೋರ್ಟ್ ಅನ್ನು ಟೀಕಿಸಿತು.

ನೂತನ ಚುನಾವಣಾಧಿಕಾರಿ

ಅಡ್ಡ ಮತದಾನ ನಡೆದಿರುವ ಮತಪತ್ರಗಳನ್ನು ಪ್ರತ್ಯೇಕಿಸಲು ಉದ್ದೇಶಿಸಲಾಗಿತ್ತು ಎಂದು ಮಸಿಹ್ ವಿವರಿಸಿದರು. ‘ನೀವು ಮತಯಂತ್ರಗಳನ್ನು ಏಕೆ ವಿರೂಪಗೊಳಿಸಿದ್ದೀರಿ? ನೀವು ಪೇಪರ್‌ಗಳಿಗೆ ಮಾತ್ರ ಸಹಿ ಮಾಡಬೇಕಾಗಿತ್ತು. ನೀವು ಮತಪತ್ರಗಳ ಮೇಲೆ ಮೇಲೆ ಇತರ ಗುರುತುಗಳನ್ನು ಹಾಕಬಹುದು ಎಂದು ನಿಯಮಗಳಲ್ಲಿ ಎಲ್ಲಿ ಒದಗಿಸಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಪ್ರಶ್ನಿಸಿದರು.

ಸಾಲಿಸಿಟರ್ ಜನರಲ್ ಮೆಹ್ತಾ ಅವರು ಕ್ರಾಸ್‌ಫೈರ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರತಿಪಾದಿಸಿದರು, ‘ಮಿಸ್ಟರ್ ಸಾಲಿಸಿಟರ್, ಅವರನ್ನು (ಮಸಿಹ್) ವಿಚಾರಣೆಗೆ ಒಳಪಡಿಸಬೇಕು. ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ’ ಎಂದರು.

‘ಯಾವುದೇ ರಾಜಕೀಯ ಪಕ್ಷಕ್ಕೆ ಹೊಂದಿಕೆಯಾಗದ ಹೊಸ ಚುನಾವಣಾಧಿಕಾರಿಯನ್ನು ನೇಮಿಸಲು ನಾವು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡುತ್ತೇವೆ’ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಘೋಷಿಸಿದರು.

ಸಾಲಿಸಿಟರ್ ಜನರಲ್ ಮೆಹ್ತಾ ಅವರು ಹರಿದ ಅಥವಾ ವಿರೂಪಗೊಳಿಸಿದ ಮತಪತ್ರಗಳ ಬಗ್ಗೆ ಗಮನ ಸೆಳೆದರು, ನ್ಯಾಯಾಲಯದ ಮಧ್ಯಪ್ರವೇಶವನ್ನು ಕೋರಿದರು. ಆದರೆ, ಕುಲದೀಪ್ ಕುಮಾರ್ ಪರ ವಕೀಲರು ಇದಕ್ಕೆ ವಾದ ಮಂಡಿಸಿ, ಕೇವಲ ಎಂಟು ಬ್ಯಾಲೆಟ್ ಪೇಪರ್‌ಗಳಿಗೆ ಪರೀಕ್ಷೆಯ ಅಗತ್ಯವಿದೆ ಮತ್ತು ಹರಿದಿಲ್ಲ ಎಂದು ಪ್ರತಿಪಾದಿಸಿದರು. ನಂತರ ಸುಪ್ರೀಂ ಕೋರ್ಟ್ ಇಂದು ಮತಪತ್ರಗಳನ್ನು ಪರೀಕ್ಷಿಸಲು ನಿರ್ಧರಿಸಿತು, ಸಾಕಷ್ಟು ಭದ್ರತೆಯೊಂದಿಗೆ ಅವುಗಳನ್ನು ಪ್ರಸ್ತುತಪಡಿಸುವಂತೆ ನಿರ್ದೇಶನ ನೀಡಿತು.

ಈಗ ನಡೆಯುತ್ತಿರುವ ಕುದುರೆ ವ್ಯಾಪಾರದ ಪ್ರಕ್ರಿಯೆಯು ಗಂಭೀರ ವಿಷಯವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಹೊಸ ಚುನಾವಣೆಗಳನ್ನು ನಡೆಸಬೇಕೆ ಅಥವಾ ಹಿಂದಿನ ಮತಗಳನ್ನು ಮಾನ್ಯ ಮಾಡಬೇಕೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ಮತಪತ್ರ ತಿರುಚಿದ್ದನ್ನು ಒಪ್ಪಿಕೊಂಡ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...