Homeಮುಖಪುಟಚಂಡೀಗಢ ಮೇಯರ್ ಚುನಾವಣೆ ವಿವಾದ: ಸುಪ್ರೀಂ ಕೋರ್ಟಿನಿಂದ ಇಂದು ಮತಪತ್ರ ಪರಿಶೀಲನೆ

ಚಂಡೀಗಢ ಮೇಯರ್ ಚುನಾವಣೆ ವಿವಾದ: ಸುಪ್ರೀಂ ಕೋರ್ಟಿನಿಂದ ಇಂದು ಮತಪತ್ರ ಪರಿಶೀಲನೆ

- Advertisement -
- Advertisement -

ಎಎಪಿ ಪಾಲಿಕೆ ಸದಸ್ಯರ ‘ಕುದುರೆ ವ್ಯಾಪಾರ’ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿವಾದಾತ್ಮಕ ವಿಜಯದ ಕಳವಳದ ನಡುವೆ ಇಂದು ಚಂಡೀಗಢ ಮೇಯರ್ ಚುನಾವಣೆಯ ಮತಪತ್ರಗಳನ್ನು ಮತ್ತು ಎಣಿಕೆ ಪ್ರಕ್ರಿಯೆಯ ವೀಡಿಯೊ ರೆಕಾರ್ಡಿಂಗ್ ಅನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಲಿದೆ.

ಬಿಜೆಪಿಯ ಮನೋಜ್ ಸೋಂಕರ್ ಅವರು 16 ಮತಗಳನ್ನು ಪಡೆದು ಆಮ್ ಆದ್ಮಿ ಪಕ್ಷ-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ಸೋಲಿಸಿದ್ದರು. ಮತದಾನ ಸಂದರ್ಭದಲ್ಲಿ, ಚುನಾವಣಾಧಿಕಾರಿ ಅನಿಲ್ ಮಸಿಹ್ ಅವರು ಸಮ್ಮಿಶ್ರ ಪಾಲುದಾರರ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಿದಾಗ ವಿವಾದ ಭುಗಿಲೆದ್ದಿತು, ಮತಪತ್ರಗಳನ್ನು ತಿದ್ದಿದ ಆರೋಪಕ್ಕೆ ಕಿಡಿ ಹೊತ್ತಿಸಿತು. ಬಿಜೆಪಿಯ ಅಲ್ಪಸಂಖ್ಯಾತರ ಸೆಲ್‌ನ ಸದಸ್ಯರಾದ ಮಸಿಹ್ – ಎಎಪಿ ಕೌನ್ಸಿಲರ್‌ಗಳಿಗೆ ಮತಪತ್ರಗಳ ಮೇಲೆ ಗುರುತು ಹಾಕುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ. ಫೆಬ್ರವರಿ 5 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಅವರ ಕ್ರಮಗಳನ್ನು ‘ಪ್ರಜಾಪ್ರಭುತ್ವದ ಅಪಹಾಸ್ಯ’ ಎಂದು ಖಂಡಿಸಿತು.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರು, ಸದಸ್ಯರ ಕುದುರೆ ವ್ಯಾಪಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ; ಮತಪತ್ರಗಳು ಮತ್ತು ಎಣಿಕೆ ಪ್ರಕ್ರಿಯೆಯ ವೀಡಿಯೊ ರೆಕಾರ್ಡಿಂಗ್ ಅನ್ನು ಪರಿಶೀಲಿಸಲು ನಿರ್ಧರಿಸಿದರು. ಹೊಸ ಚುನಾವಣೆಗೆ ತಕ್ಷಣ ಆದೇಶ ನೀಡುವ ಬದಲು, ಈಗಾಗಲೇ ಚಲಾವಣೆಯಾದ ಮತಗಳ ಆಧಾರದ ಮೇಲೆ ಫಲಿತಾಂಶಗಳ ಘೋಷಣೆಯನ್ನು ಪರಿಗಣಿಸುವಂತೆ ನ್ಯಾಯಾಲಯ ಸೂಚಿಸಿದೆ.

ಇಂದು ಸುಪ್ರೀಂ ಕೋರ್ಟಿಗೆ ದಾಖಲೆಗಳನ್ನು ಹಾಜರುಪಡಿಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ.

‘ಗಂಭೀರ ವಿಷಯ’

ಚಂಡೀಗಢ ಆಡಳಿತವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೈಕೋರ್ಟ್ ನೇಮಿಸಿದ ನ್ಯಾಯಾಂಗ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ಹೊಸದಾಗಿ ಚುನಾವಣೆ ನಡೆಸುವ ಆಲೋಚನೆಯನ್ನು ಪ್ರಸ್ತಾಪಿಸಿದರು. ಆದರೆ, ವಾದ ಆಲಿಸಿದ ನಂತರ ಪೀಠವು, ಫಲಿತಾಂಶ ಘೋಷಣೆಗೂ ಮುನ್ನವೇ ಸುಪ್ರೀಂ ಪೀಠದಿಂದಲೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವತ್ತ ವಾಲಿತು. ಮತಯಂತ್ರಗಳ ಎಣಿಕೆಯನ್ನು ಮೇಲ್ವಿಚಾರಣೆ ಮಾಡಲು ನ್ಯಾಯಾಂಗ ಅಧಿಕಾರಿಯನ್ನು ನಾಮನಿರ್ದೇಶನಕ್ಕೆ ಸೂಚಿಸಿದೆ.

ಮತಯಂತ್ರಗಳನ್ನು ವಿರೂಪಗೊಳಿಸಿದ ಆರೋಪ ಹೊತ್ತಿದ್ದ ಅನಿಲ್ ಮಸಿಹ್ ಅವರತ್ತ ಗಮನ ಹರಿಸಲಾಯಿತು. ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಮುಖ್ಯ ನ್ಯಾಯಮೂರ್ತಿಗಳು ಚುನಾವಣಾ ಅಧಿಕಾರಿಯನ್ನು ಪಾಟಿ ಸವಾಲಿಗೆ ಒಳಪಡಿಸಿದರು, ಚುನಾವಣೆ ನಡೆಸಿದ ರೀತಿಗೆ ಅಸಮಾಧಾನ ವ್ಯಕ್ತಪಡಿಸಿದರು. ನ್ಯಾಯಾಲಯವು ಮಸಿಹ್ ಅವರ ಕ್ರಮಗಳಿಗೆ ಸಂಭಾವ್ಯ ಕಾನೂನು ಕ್ರಮದ ಬಗ್ಗೆ ಕಟ್ಟುನಿಟ್ಟಾಗಿ ಎಚ್ಚರಿಸಿದೆ, ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯ ಗಂಭೀರ ಉಲ್ಲಂಘನೆ ಎಂದು ಕರೆದಿದೆ.

‘ಮಿಸ್ಟರ್ ಮಸಿಹ್, ನಾನು ನಿಮಗೆ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ, ನೀವು ಸತ್ಯವಾದ ಉತ್ತರಗಳನ್ನು ನೀಡದಿದ್ದರೆ, ನಿಮ್ಮ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು; ಇದು ಗಂಭೀರ ವಿಷಯವಾಗಿದೆ. ನಾವು ವೀಡಿಯೊವನ್ನು ನೋಡಿದ್ದೇವೆ. ನೀವು ಕ್ಯಾಮೆರಾವನ್ನು ನೋಡುತ್ತಾ ಏನು ಮಾಡುತ್ತಿದ್ದೀರಿ ಮತ್ತು ಅಡ್ಡ ಮತಗಳನ್ನು ಹಾಕುತ್ತಿದ್ದಿರಿ, ಯಾಕೆ ಮತಗಳನ್ನು ಹಾಕುತ್ತಿದ್ದಿರಿ?’ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಪ್ರಶ್ನಿಸಿದ್ದಾರೆ.

ಎಎಪಿಯ ಪರಾಜಿತ ಮೇಯರ್ ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಹೊಸ ಚುನಾವಣೆಗೆ ಮಧ್ಯಂತರ ಪರಿಹಾರ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ನಂತರ ಸುಪ್ರೀಂ ಕೋರ್ಟ್ ಯಾವುದೇ ಮಧ್ಯಂತರ ಆದೇಶವನ್ನು ನೀಡದಿದ್ದಕ್ಕಾಗಿ ಹೈಕೋರ್ಟ್ ಅನ್ನು ಟೀಕಿಸಿತು.

ನೂತನ ಚುನಾವಣಾಧಿಕಾರಿ

ಅಡ್ಡ ಮತದಾನ ನಡೆದಿರುವ ಮತಪತ್ರಗಳನ್ನು ಪ್ರತ್ಯೇಕಿಸಲು ಉದ್ದೇಶಿಸಲಾಗಿತ್ತು ಎಂದು ಮಸಿಹ್ ವಿವರಿಸಿದರು. ‘ನೀವು ಮತಯಂತ್ರಗಳನ್ನು ಏಕೆ ವಿರೂಪಗೊಳಿಸಿದ್ದೀರಿ? ನೀವು ಪೇಪರ್‌ಗಳಿಗೆ ಮಾತ್ರ ಸಹಿ ಮಾಡಬೇಕಾಗಿತ್ತು. ನೀವು ಮತಪತ್ರಗಳ ಮೇಲೆ ಮೇಲೆ ಇತರ ಗುರುತುಗಳನ್ನು ಹಾಕಬಹುದು ಎಂದು ನಿಯಮಗಳಲ್ಲಿ ಎಲ್ಲಿ ಒದಗಿಸಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಪ್ರಶ್ನಿಸಿದರು.

ಸಾಲಿಸಿಟರ್ ಜನರಲ್ ಮೆಹ್ತಾ ಅವರು ಕ್ರಾಸ್‌ಫೈರ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರತಿಪಾದಿಸಿದರು, ‘ಮಿಸ್ಟರ್ ಸಾಲಿಸಿಟರ್, ಅವರನ್ನು (ಮಸಿಹ್) ವಿಚಾರಣೆಗೆ ಒಳಪಡಿಸಬೇಕು. ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ’ ಎಂದರು.

‘ಯಾವುದೇ ರಾಜಕೀಯ ಪಕ್ಷಕ್ಕೆ ಹೊಂದಿಕೆಯಾಗದ ಹೊಸ ಚುನಾವಣಾಧಿಕಾರಿಯನ್ನು ನೇಮಿಸಲು ನಾವು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡುತ್ತೇವೆ’ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಘೋಷಿಸಿದರು.

ಸಾಲಿಸಿಟರ್ ಜನರಲ್ ಮೆಹ್ತಾ ಅವರು ಹರಿದ ಅಥವಾ ವಿರೂಪಗೊಳಿಸಿದ ಮತಪತ್ರಗಳ ಬಗ್ಗೆ ಗಮನ ಸೆಳೆದರು, ನ್ಯಾಯಾಲಯದ ಮಧ್ಯಪ್ರವೇಶವನ್ನು ಕೋರಿದರು. ಆದರೆ, ಕುಲದೀಪ್ ಕುಮಾರ್ ಪರ ವಕೀಲರು ಇದಕ್ಕೆ ವಾದ ಮಂಡಿಸಿ, ಕೇವಲ ಎಂಟು ಬ್ಯಾಲೆಟ್ ಪೇಪರ್‌ಗಳಿಗೆ ಪರೀಕ್ಷೆಯ ಅಗತ್ಯವಿದೆ ಮತ್ತು ಹರಿದಿಲ್ಲ ಎಂದು ಪ್ರತಿಪಾದಿಸಿದರು. ನಂತರ ಸುಪ್ರೀಂ ಕೋರ್ಟ್ ಇಂದು ಮತಪತ್ರಗಳನ್ನು ಪರೀಕ್ಷಿಸಲು ನಿರ್ಧರಿಸಿತು, ಸಾಕಷ್ಟು ಭದ್ರತೆಯೊಂದಿಗೆ ಅವುಗಳನ್ನು ಪ್ರಸ್ತುತಪಡಿಸುವಂತೆ ನಿರ್ದೇಶನ ನೀಡಿತು.

ಈಗ ನಡೆಯುತ್ತಿರುವ ಕುದುರೆ ವ್ಯಾಪಾರದ ಪ್ರಕ್ರಿಯೆಯು ಗಂಭೀರ ವಿಷಯವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಹೊಸ ಚುನಾವಣೆಗಳನ್ನು ನಡೆಸಬೇಕೆ ಅಥವಾ ಹಿಂದಿನ ಮತಗಳನ್ನು ಮಾನ್ಯ ಮಾಡಬೇಕೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ಮತಪತ್ರ ತಿರುಚಿದ್ದನ್ನು ಒಪ್ಪಿಕೊಂಡ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...