Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

ಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

- Advertisement -
- Advertisement -

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್ ಆಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯನ್ನು ಘೋಷಿಸಿರುವ ಚುನಾವಣಾ ಫಲಿತಾಂಶಕ್ಕೆ ತಡೆ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿದೆ. ತೀರ್ಪು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಕುಲದೀಪ್ ಧಲೋರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್-ಎಎಪಿ ಅಭ್ಯರ್ಥಿ ಕುಮಾರ್ ಪಡೆದ 12 ಮತಗಳ ವಿರುದ್ಧ ಬಿಜೆಪಿಯ ಮನೋಜ್ ಸೋಂಕರ್ ಅವರು 16 ಮತಗಳನ್ನು ಗಳಿಸಿ ಮಂಗಳವಾರ ಮೇಯರ್ ಆಗಿ ಆಯ್ಕೆಯಾದರು. ಈ ಪ್ರಕ್ರಿಯೆಯಲ್ಲಿ ಮೈತ್ರಿ ಪಕ್ಷದ ಸದಸ್ಯರ ಎಂಟು ಮತಗಳು ಅಸಿಂಧು ಎಂದು ತಿರಸ್ಕೃತಗೊಂಡಿವೆ.

ಬಿಜೆಪಿಯ ಗೆಲುವಿನಲ್ಲಿ ವಂಚನೆ ಮತ್ತು ಎಂಟು ಮತಗಳನ್ನು ತಿರಸ್ಕರಿಸುವಲ್ಲಿ ಫೋರ್ಜರಿ ಆರೋಪದ ಮೇಲೆ ಕುಲ್ದೀಪ್ ಸಲ್ಲಿಸಿದ ಅರ್ಜಿಯ ಮೇಲೆ, ಹೈಕೋರ್ಟ್ ಬುಧವಾರ ಕೇವಲ ನೋಟಿಸ್ ಜಾರಿಗೊಳಿಸಿ ಮೂರು ವಾರಗಳ ನಂತರ ವಿಚಾರಣೆಗೆ ದಿನ ನಿಗದಿಗೊಳಿಸಿದೆ.

ಫಲಿತಾಂಶಗಳ ಮೇಲಿನ ತಡೆಗಾಗಿ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ, ಹೈಕೋರ್ಟ್‌ನ ನ್ಯಾಯಮೂರ್ತಿ ಹರ್ಷ್ ಬಂಗರ್, ನ್ಯಾಯಮೂರ್ತಿ ಸುಧೀರ್ ಸಿಂಗ್ ಅವರ ವಿಭಾಗೀಯ ಪೀಠವು ಅರ್ಜಿದಾರರು ಮತ್ತು ಪ್ರತಿವಾದಿಗಳನ್ನು ಪ್ರತಿನಿಧಿಸುವ ವಕೀಲರ ಸಲ್ಲಿಕೆಗಳನ್ನು ಮಾತ್ರ ದಾಖಲಿಸಿಕೊಂಡರು.

‘ಅರ್ಜಿಯನ್ನು ಪರಿಗಣಿಸಲಾಗಿದೆ’ ಎಂದು ಫೆಬ್ರವರಿ 26ಕ್ಕೆ ಪ್ರಕರಣವನ್ನು ಮುಂದೂಡುವ ಆದೇಶದ ಸಂದರ್ಭದಲ್ಲಿ ನ್ಯಾಯಾಲಯವು ಹೇಳಿದೆ.

ವಿಚಾರಣೆಯ ನಂತರ, ಹಿರಿಯ ಎಎಪಿ ನಾಯಕ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ‘ಈ ಪ್ರಕರಣದ ಆರಂಭಿಕ ವಿಚಾರಣೆಗಾಗಿ ಪಕ್ಷವು ಉನ್ನತ ನ್ಯಾಯಾಲಯಕ್ಕೆ ಹೋಗಲಿದೆ’ ಎಂದು ಹೇಳಿದರು.

‘ವೀಡಿಯೊ ಸ್ಪಷ್ಟವಾಗಿದೆ; ಚಂಡೀಗಢ ಆಡಳಿತವು ಮೂರು ವಾರಗಳಲ್ಲಿ ಮತ್ತಿನ್ಯಾವ ವರದಿಯನ್ನು ನೀಡಬೇಕಾಗಿದೆ’ ಎಂದು ಮಾನ್ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದರು. ಹೈಕೋರ್ಟ್ ಆದೇಶದ ವಿರುದ್ಧ ವಿಶೇಷ ರಜೆ ಅರ್ಜಿಯನ್ನು (ಎಸ್‌ಎಲ್‌ಪಿ) ಗುರುವಾರ ಬೆಳಿಗ್ಗೆ ಸಲ್ಲಿಸಲಾಯಿತು.

ಮೇಯರ್ ಹುದ್ದೆಯ ಚುನಾವಣೆಯ ಫಲಿತಾಂಶಕ್ಕೆ ತಡೆಯಾಜ್ಞೆ ಅಥವಾ ಚುನಾವಣಾ ದಾಖಲೆಗಳನ್ನು ಸಂರಕ್ಷಿಸಲು ನಿರ್ದೇಶಿಸುವ ರೂಪದಲ್ಲಿ ಅರ್ಜಿದಾರರಿಗೆ ಯಾವುದೇ ಮಧ್ಯಂತರ ಪರಿಹಾರವನ್ನು ನೀಡದೆ ಹೈಕೋರ್ಟ್ ಆದೇಶ ತಪ್ಪಾಗಿದೆ ಎಂದು ಎಸ್‌ಎಲ್‌ಪಿಯಲ್ಲಿ ವಾದಿಸಲಾಗಿದೆ.

‘ಇದು ಚುನಾವಣಾ ವಿವಾದದ ಪ್ರಕರಣವಲ್ಲ. ಆದರೆ, ಸಾರ್ವಜನಿಕ ಕಚೇರಿಯ ದುರುಪಯೋಗದ ಪ್ರಕರಣವಾಗಿದೆ. ಇದು ಅಧಿಕಾರಿಯಲ್ಲಿ ನೆಲೆಗೊಂಡಿರುವ ನಂಬಿಕೆಯ ಸಾರವನ್ನು ನಾಶಪಡಿಸುತ್ತದೆ ಮತ್ತು ಸಾಂವಿಧಾನಿಕ ತಪ್ಪು. ಸಾರ್ವಜನಿಕ ನಂಬಿಕೆಯ ಸಿದ್ಧಾಂತದ ಉಲ್ಲಂಘನೆಯಾಗಿದ್ದು, ಪ್ರಕರಣವು ತುಂಬಾ ಘೋರವಾಗಿತ್ತು. ಹೈಕೋರ್ಟ್ ಮಧ್ಯಂತರ ಆದೇಶಗಳನ್ನು ನೀಡಬೇಕಿತ್ತು’ ಎಂದು ಮನವಿಯಲ್ಲಿ ಹೇಳಲಾಗಿದೆ.

‘ಆದ್ದರಿಂದ, ಚಂಡೀಗಢದ ಮುನ್ಸಿಪಲ್ ಕಾರ್ಪೊರೇಶನ್‌ನ ಮೇಯರ್ ಆಗಿ ಸೋಂಕರ್ ಅವರನ್ನು ನೇಮಿಸಲು ಹೊರಡಿಸಲಾದ ಅಥವಾ ಹೊರಡಿಸಬಹುದಾದ ಅಧಿಸೂಚನೆಯ ಕಾರ್ಯಾಚರಣೆಗೆ ತಡೆಯಾಜ್ಞೆ ನೀಡಬೇಕು’ ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

‘ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ಹೊಸ ಚುನಾವಣೆ ನಡೆಸಬೇಕು’ ಎಂದು ಹೈಕೋರ್ಟ್‌ನ ಮುಂದೆ ಕುಲ್ದೀಪ್ ಕುಮಾರ್ ಮನವಿ ಮಾಡಿಕೊಂಡಿದ್ದರು.

‘ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳಿಂದ ನಾಮನಿರ್ದೇಶನಗೊಂಡ ಸದಸ್ಯರಿಂದ ಯಾವುದೇ ಸಹಾಯವನ್ನು ಬಯಸುವುದಿಲ್ಲ ಮತ್ತು ಅವರೇ ಮತವನ್ನು ಎಣಿಕೆ ಮಾಡುತ್ತಾರೆ ಎಂದು ಅಧ್ಯಕ್ಷರು ಅತ್ಯಂತ ದುರ್ಬಲ ರೀತಿಯಲ್ಲಿ ಸದನವನ್ನು ಉದ್ದೇಶಿಸಿ ಹೇಳಿದರು. ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಧ್ವನಿ ಎತ್ತಿದವು. ಆದರೆ, ಅವರ ಮನವಿಗೆ ಕಿವಿಗೊಡಲಿಲ್ಲ. ಆಶ್ಚರ್ಯವೆಂದರೆ, ಡೆಪ್ಯುಟಿ ಕಮಿಷನರ್, ಪ್ರತಿವಾದಿ ನಂ.2 ಮತ್ತು ಕಳೆದ ವರ್ಷದ ಚುನಾವಣೆಯಲ್ಲಿ ಅದೇ ಸ್ಥಾನದಲ್ಲಿದ್ದ ಪ್ರಾಧಿಕಾರ ಕೂಡ ಮೌನವಾಗಿಯೇ ಉಳಿದಿದೆ’ ಎಂದು ತಮ್ಮ ಮನವಿಯಲ್ಲಿ ಹೇಳಿದ್ದರು.

‘ಅಧ್ಯಕ್ಷರು ಗೊಂದಲ ಸೃಷ್ಟಿಸುವ ಉದ್ದೇಶದಿಂದ ಮಾತ್ರ, ನಕಲಿ ಮತ್ತು ತಿರುಚುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಸಂಪೂರ್ಣವಾಗಿ ರಾಜಿ ಮಾಡಿಕೊಂಡ ಅಧ್ಯಕ್ಷರು, ಮತಗಳನ್ನು ಒಂದು ಬುಟ್ಟಿಯಿಂದ ಇನ್ನೊಂದಕ್ಕೆ ಬದಲಾಯಿಸಿದ್ದಾರೆ ಎಂಬುದು ಚುನಾವಣೆಯ ವೀಡಿಯೊಗಳು ಸ್ಪಷ್ಟವಾಗಿ ಬಹಿರಂಗಪಡಿಸುತ್ತವೆ’ ಎಂದು ಉಲ್ಲೇಖಿಸಿದ್ದಾರೆ.

‘ಎಲ್ಲ ನಿಯಮಗಳು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿ ಅಧ್ಯಕ್ಷರು ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಿದರು. ಆದರೆ, ಮತಗಳ ಅಸಿಂಧುತೆ ಮತ್ತು ಈ ಅಸಿಂಧು ಮತಗಳು ಯಾವ ಪಕ್ಷಕ್ಕೆ ಚಲಾವಣೆಯಾದವು ಎಂಬುದರ ಬಗ್ಗೆ ಒಂದೇ ಒಂದು ಪದವನ್ನು ಹೇಳಲಿಲ್ಲ’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ; ‘ಅಪ್ರಾಮಾಣಿಕತೆ, ಅರಾಜಕತೆಯ ಗೆಲುವು…’; ಚಂಡೀಗಢ ಮೇಯರ್ ಚುನಾವಣೆ ಕುರಿತು ಶಿವಸೇನೆ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...