Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

ಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

- Advertisement -
- Advertisement -

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್ ಆಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯನ್ನು ಘೋಷಿಸಿರುವ ಚುನಾವಣಾ ಫಲಿತಾಂಶಕ್ಕೆ ತಡೆ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿದೆ. ತೀರ್ಪು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಕುಲದೀಪ್ ಧಲೋರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್-ಎಎಪಿ ಅಭ್ಯರ್ಥಿ ಕುಮಾರ್ ಪಡೆದ 12 ಮತಗಳ ವಿರುದ್ಧ ಬಿಜೆಪಿಯ ಮನೋಜ್ ಸೋಂಕರ್ ಅವರು 16 ಮತಗಳನ್ನು ಗಳಿಸಿ ಮಂಗಳವಾರ ಮೇಯರ್ ಆಗಿ ಆಯ್ಕೆಯಾದರು. ಈ ಪ್ರಕ್ರಿಯೆಯಲ್ಲಿ ಮೈತ್ರಿ ಪಕ್ಷದ ಸದಸ್ಯರ ಎಂಟು ಮತಗಳು ಅಸಿಂಧು ಎಂದು ತಿರಸ್ಕೃತಗೊಂಡಿವೆ.

ಬಿಜೆಪಿಯ ಗೆಲುವಿನಲ್ಲಿ ವಂಚನೆ ಮತ್ತು ಎಂಟು ಮತಗಳನ್ನು ತಿರಸ್ಕರಿಸುವಲ್ಲಿ ಫೋರ್ಜರಿ ಆರೋಪದ ಮೇಲೆ ಕುಲ್ದೀಪ್ ಸಲ್ಲಿಸಿದ ಅರ್ಜಿಯ ಮೇಲೆ, ಹೈಕೋರ್ಟ್ ಬುಧವಾರ ಕೇವಲ ನೋಟಿಸ್ ಜಾರಿಗೊಳಿಸಿ ಮೂರು ವಾರಗಳ ನಂತರ ವಿಚಾರಣೆಗೆ ದಿನ ನಿಗದಿಗೊಳಿಸಿದೆ.

ಫಲಿತಾಂಶಗಳ ಮೇಲಿನ ತಡೆಗಾಗಿ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ, ಹೈಕೋರ್ಟ್‌ನ ನ್ಯಾಯಮೂರ್ತಿ ಹರ್ಷ್ ಬಂಗರ್, ನ್ಯಾಯಮೂರ್ತಿ ಸುಧೀರ್ ಸಿಂಗ್ ಅವರ ವಿಭಾಗೀಯ ಪೀಠವು ಅರ್ಜಿದಾರರು ಮತ್ತು ಪ್ರತಿವಾದಿಗಳನ್ನು ಪ್ರತಿನಿಧಿಸುವ ವಕೀಲರ ಸಲ್ಲಿಕೆಗಳನ್ನು ಮಾತ್ರ ದಾಖಲಿಸಿಕೊಂಡರು.

‘ಅರ್ಜಿಯನ್ನು ಪರಿಗಣಿಸಲಾಗಿದೆ’ ಎಂದು ಫೆಬ್ರವರಿ 26ಕ್ಕೆ ಪ್ರಕರಣವನ್ನು ಮುಂದೂಡುವ ಆದೇಶದ ಸಂದರ್ಭದಲ್ಲಿ ನ್ಯಾಯಾಲಯವು ಹೇಳಿದೆ.

ವಿಚಾರಣೆಯ ನಂತರ, ಹಿರಿಯ ಎಎಪಿ ನಾಯಕ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ‘ಈ ಪ್ರಕರಣದ ಆರಂಭಿಕ ವಿಚಾರಣೆಗಾಗಿ ಪಕ್ಷವು ಉನ್ನತ ನ್ಯಾಯಾಲಯಕ್ಕೆ ಹೋಗಲಿದೆ’ ಎಂದು ಹೇಳಿದರು.

‘ವೀಡಿಯೊ ಸ್ಪಷ್ಟವಾಗಿದೆ; ಚಂಡೀಗಢ ಆಡಳಿತವು ಮೂರು ವಾರಗಳಲ್ಲಿ ಮತ್ತಿನ್ಯಾವ ವರದಿಯನ್ನು ನೀಡಬೇಕಾಗಿದೆ’ ಎಂದು ಮಾನ್ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದರು. ಹೈಕೋರ್ಟ್ ಆದೇಶದ ವಿರುದ್ಧ ವಿಶೇಷ ರಜೆ ಅರ್ಜಿಯನ್ನು (ಎಸ್‌ಎಲ್‌ಪಿ) ಗುರುವಾರ ಬೆಳಿಗ್ಗೆ ಸಲ್ಲಿಸಲಾಯಿತು.

ಮೇಯರ್ ಹುದ್ದೆಯ ಚುನಾವಣೆಯ ಫಲಿತಾಂಶಕ್ಕೆ ತಡೆಯಾಜ್ಞೆ ಅಥವಾ ಚುನಾವಣಾ ದಾಖಲೆಗಳನ್ನು ಸಂರಕ್ಷಿಸಲು ನಿರ್ದೇಶಿಸುವ ರೂಪದಲ್ಲಿ ಅರ್ಜಿದಾರರಿಗೆ ಯಾವುದೇ ಮಧ್ಯಂತರ ಪರಿಹಾರವನ್ನು ನೀಡದೆ ಹೈಕೋರ್ಟ್ ಆದೇಶ ತಪ್ಪಾಗಿದೆ ಎಂದು ಎಸ್‌ಎಲ್‌ಪಿಯಲ್ಲಿ ವಾದಿಸಲಾಗಿದೆ.

‘ಇದು ಚುನಾವಣಾ ವಿವಾದದ ಪ್ರಕರಣವಲ್ಲ. ಆದರೆ, ಸಾರ್ವಜನಿಕ ಕಚೇರಿಯ ದುರುಪಯೋಗದ ಪ್ರಕರಣವಾಗಿದೆ. ಇದು ಅಧಿಕಾರಿಯಲ್ಲಿ ನೆಲೆಗೊಂಡಿರುವ ನಂಬಿಕೆಯ ಸಾರವನ್ನು ನಾಶಪಡಿಸುತ್ತದೆ ಮತ್ತು ಸಾಂವಿಧಾನಿಕ ತಪ್ಪು. ಸಾರ್ವಜನಿಕ ನಂಬಿಕೆಯ ಸಿದ್ಧಾಂತದ ಉಲ್ಲಂಘನೆಯಾಗಿದ್ದು, ಪ್ರಕರಣವು ತುಂಬಾ ಘೋರವಾಗಿತ್ತು. ಹೈಕೋರ್ಟ್ ಮಧ್ಯಂತರ ಆದೇಶಗಳನ್ನು ನೀಡಬೇಕಿತ್ತು’ ಎಂದು ಮನವಿಯಲ್ಲಿ ಹೇಳಲಾಗಿದೆ.

‘ಆದ್ದರಿಂದ, ಚಂಡೀಗಢದ ಮುನ್ಸಿಪಲ್ ಕಾರ್ಪೊರೇಶನ್‌ನ ಮೇಯರ್ ಆಗಿ ಸೋಂಕರ್ ಅವರನ್ನು ನೇಮಿಸಲು ಹೊರಡಿಸಲಾದ ಅಥವಾ ಹೊರಡಿಸಬಹುದಾದ ಅಧಿಸೂಚನೆಯ ಕಾರ್ಯಾಚರಣೆಗೆ ತಡೆಯಾಜ್ಞೆ ನೀಡಬೇಕು’ ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

‘ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ಹೊಸ ಚುನಾವಣೆ ನಡೆಸಬೇಕು’ ಎಂದು ಹೈಕೋರ್ಟ್‌ನ ಮುಂದೆ ಕುಲ್ದೀಪ್ ಕುಮಾರ್ ಮನವಿ ಮಾಡಿಕೊಂಡಿದ್ದರು.

‘ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳಿಂದ ನಾಮನಿರ್ದೇಶನಗೊಂಡ ಸದಸ್ಯರಿಂದ ಯಾವುದೇ ಸಹಾಯವನ್ನು ಬಯಸುವುದಿಲ್ಲ ಮತ್ತು ಅವರೇ ಮತವನ್ನು ಎಣಿಕೆ ಮಾಡುತ್ತಾರೆ ಎಂದು ಅಧ್ಯಕ್ಷರು ಅತ್ಯಂತ ದುರ್ಬಲ ರೀತಿಯಲ್ಲಿ ಸದನವನ್ನು ಉದ್ದೇಶಿಸಿ ಹೇಳಿದರು. ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಧ್ವನಿ ಎತ್ತಿದವು. ಆದರೆ, ಅವರ ಮನವಿಗೆ ಕಿವಿಗೊಡಲಿಲ್ಲ. ಆಶ್ಚರ್ಯವೆಂದರೆ, ಡೆಪ್ಯುಟಿ ಕಮಿಷನರ್, ಪ್ರತಿವಾದಿ ನಂ.2 ಮತ್ತು ಕಳೆದ ವರ್ಷದ ಚುನಾವಣೆಯಲ್ಲಿ ಅದೇ ಸ್ಥಾನದಲ್ಲಿದ್ದ ಪ್ರಾಧಿಕಾರ ಕೂಡ ಮೌನವಾಗಿಯೇ ಉಳಿದಿದೆ’ ಎಂದು ತಮ್ಮ ಮನವಿಯಲ್ಲಿ ಹೇಳಿದ್ದರು.

‘ಅಧ್ಯಕ್ಷರು ಗೊಂದಲ ಸೃಷ್ಟಿಸುವ ಉದ್ದೇಶದಿಂದ ಮಾತ್ರ, ನಕಲಿ ಮತ್ತು ತಿರುಚುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಸಂಪೂರ್ಣವಾಗಿ ರಾಜಿ ಮಾಡಿಕೊಂಡ ಅಧ್ಯಕ್ಷರು, ಮತಗಳನ್ನು ಒಂದು ಬುಟ್ಟಿಯಿಂದ ಇನ್ನೊಂದಕ್ಕೆ ಬದಲಾಯಿಸಿದ್ದಾರೆ ಎಂಬುದು ಚುನಾವಣೆಯ ವೀಡಿಯೊಗಳು ಸ್ಪಷ್ಟವಾಗಿ ಬಹಿರಂಗಪಡಿಸುತ್ತವೆ’ ಎಂದು ಉಲ್ಲೇಖಿಸಿದ್ದಾರೆ.

‘ಎಲ್ಲ ನಿಯಮಗಳು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿ ಅಧ್ಯಕ್ಷರು ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಿದರು. ಆದರೆ, ಮತಗಳ ಅಸಿಂಧುತೆ ಮತ್ತು ಈ ಅಸಿಂಧು ಮತಗಳು ಯಾವ ಪಕ್ಷಕ್ಕೆ ಚಲಾವಣೆಯಾದವು ಎಂಬುದರ ಬಗ್ಗೆ ಒಂದೇ ಒಂದು ಪದವನ್ನು ಹೇಳಲಿಲ್ಲ’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ; ‘ಅಪ್ರಾಮಾಣಿಕತೆ, ಅರಾಜಕತೆಯ ಗೆಲುವು…’; ಚಂಡೀಗಢ ಮೇಯರ್ ಚುನಾವಣೆ ಕುರಿತು ಶಿವಸೇನೆ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...