Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ಮತಪತ್ರ ತಿರುಚಿದ್ದನ್ನು ಒಪ್ಪಿಕೊಂಡ ಚುನಾವಣಾಧಿಕಾರಿ

ಚಂಡೀಗಢ ಮೇಯರ್ ಚುನಾವಣೆ: ಮತಪತ್ರ ತಿರುಚಿದ್ದನ್ನು ಒಪ್ಪಿಕೊಂಡ ಚುನಾವಣಾಧಿಕಾರಿ

- Advertisement -
- Advertisement -

ವಿವಾದಾತ್ಮಕ ಚಂಡೀಗಢ ಮೇಯರ್ ಚುನಾವಣೆ ಕುರಿತಂತೆ ಇಂದು ಸುಪ್ರೀಂ ಕೋರ್ಟ್‌ಗೆ ಹಾಜರಾದ ಚುನಾವಣಾಧಿಕಾರಿ ಅನಿಲ್ ಮಾಸಿಹ್, ತಾನು ಮತಪತ್ರಗಳನ್ನು ತಿರುಚಿರುವುದನ್ನು ಒಪ್ಪಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಸೂಚಿಸಿದೆ.

ಮರು ಚುನಾವಣೆ ನಡೆಸುವ ಬದಲು ರಿಟರ್ನಿಂಗ್ ಅಧಿಕಾರಿ ಮಾಡಿದ ಗುರುತುಗಳನ್ನು ಗಣನೆಗೆ ತೆಗದುಕೊಳ್ಳದೆ ಮತಪತ್ರಗಳನ್ನು ಮರು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕುದುರೆ ವ್ಯಾಪಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನ್ಯಾಯಾಲಯ, ನಾಳೆ ಎಲ್ಲಾ ಮತಪತ್ರಗಳನ್ನು ಹಾಜರುಪಡಿಸುವಂತೆ ಆದೇಶಿಸಿದೆ. ಲಭ್ಯ ಮತಪತ್ರಗಳನ್ನು ಕೂಲಂಕುಷ ಪರಿಶೀಲನೆ ನಡೆಸಬೇಕೆಂದು ಸೂಚಿಸಿದೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಚುನಾವಣಾ ಅಧಿಕಾರಿಯೊಬ್ಬರನ್ನು ದೇಶದ ಮುಖ್ಯ ನ್ಯಾಯಾಧೀಶರು ಅಡ್ಡ ಪ್ರಶ್ನೆಗೆ ಒಳಪಡಿಸಿರುವುದು ಎಂದು ಮಾಸಿಹ್ ಅವರಿಂದ ಉತ್ತರವನ್ನು ಕೇಳಿದ ನಂತರ ನ್ಯಾಯಾಲಯವು ವಿಷಾದ ವ್ಯಕ್ತಪಡಿಸಿದೆ.

ಜನವರಿ 30ರಂದು ನಡೆದ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್‌ನ ಮೇಯರ್ ಚುನಾವಣೆಯ ಮತ ಎಣಿಕೆಯಲ್ಲಿ ಎಂಟು ಮತಗಳು ಅಸಿಂಧು ಎಂದು ಚುನಾವಣಾಧಿಕಾರಿ ಅನಿಲ್ ಮಾಸಿಹ್ ಘೋಷಿಸಿದ್ದರು. ಈ ಮೂಲಕ ಎಎಪಿಯ ಮೇಯರ್ ಅಭ್ಯರ್ಥಿಯನ್ನು ಬಿಜೆಪಿಯ ಮನೋಜ್ ಸೋಂಕರ್ ನಾಲ್ಕು ಮತಗಳ ಅಂತರದಿಂದ ಸೋಲಿಸಿದ್ದರು. ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಸದಸ್ಯರಾದ ಮಾಸಿಹ್ ಅವರು ಉದ್ದೇಶಪೂರ್ವಕವಾಗಿ ಮತಗಳನ್ನು ಅಮಾನ್ಯಗೊಳಿಸಿದ್ದಾರೆ ಎಂದು ಎಎಪಿ ಆರೋಪಿಸಿತ್ತು.

ಎಎಪಿಯ ಆರೋಪಕ್ಕೆ ಪುಷ್ಠಿ ನೀಡುವಂತೆ ಮಾಸಿಹ್ ಅವರು ಎಎಪಿಯ ಕೆಲ ಕೌನ್ಸಿಲರ್‌ಗಳ ಮತ ಪತ್ರಗಳಿಗೆ ಮಾರ್ಕ್‌ ಮಾಡಿರುವುದು ಕ್ಯಾಮಾರದಲ್ಲಿ ರೆಕಾರ್ಡ್‌ ಆಗಿತ್ತು. ಈ ಸಂಬಂಧ ಎಎಪಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಫೆಬ್ರವರಿ 5 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮಾಸಿಹ್ ಅವರ ಕೃತ್ಯ “ಪ್ರಜಾಪ್ರಭುತ್ವದ ಅಪಹಾಸ್ಯ” ಎಂದಿತ್ತು.

ಇಂದು (ಫೆ.19) ವಿಚಾರಣೆ ಮುಂದುವರೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠ, ನಿನ್ನೆ(ಫೆ.18) ಸಂಜೆ ಬಿಜೆಪಿಯ ಮನೋಜ್ ಸೋಂಕರ್ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಗಮನಿಸಿತು ಮತ್ತು ಮಾಸಿಹ್ ಅವರು ಮುಂದೆ ಬಂದು ಕೆಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಿತು.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು “ಮಿಸ್ಟರ್ ಮಾಸಿಹ್, ನಾನು ನಿಮಗೆ ಕೆಲವು ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ನೀವು ಸತ್ಯವಾದ ಉತ್ತರಗಳನ್ನು ನೀಡದಿದ್ದರೆ ನಿಮ್ಮ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಇದು ಗಂಭೀರ ವಿಚಾರ. ನೀವು ಕ್ಯಾಮರಾ ನೋಡುತ್ತಾ ಬ್ಯಾಲೆಟ್‌ ಪೇಪರ್‌ಗಳ ಮೇಲೆ ಮಾರ್ಕ್‌ ಮಾಡಿರುವ ವಿಡಿಯೋವನ್ನು ನಾವು ನೋಡಿದ್ದೇವೆ. ನೀವು ಮಾರ್ಕ್‌ ಯಾಕೆ ಮಾಡಿದ್ದು? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಮಾಸಿಹ್, ಎಂಟು ಬ್ಯಾಲೆಟ್ ಪೇಪರ್‌ಗಳಲ್ಲಿ ಕ್ರಾಸ್ (X)ಮಾಡಿರುವುದು ನಿಜ. ಅವುಗಳನ್ನು ವಿರೂಪಗೊಂಡಿದ್ದರಿಂದ ಪ್ರತ್ಯೇಕಿಸಲು ಹಾಗೆ ಮಾಡಿದೆ ಎಂದಿದ್ದಾರೆ.

ಮರು ಪ್ರಶ್ನೆ ಹಾಕಿದ ನ್ಯಾಯಮೂರ್ತಿಗಳು, “ನೀವು ಬ್ಯಾಲೆಟ್ ಪೇಪರ್‌ಗಳನ್ನು ವಿರೂಪಗೊಳಿಸಿದ್ದು ಯಾಕೆ? ನೀವು ಬ್ಯಾಲೆಟ್ ಪೇಪರ್‌ಗಳ ಮೇಲೆ ಸಹಿ ಮಾತ್ರ ಮಾಡಬಹುದು. ಅವುಗಳ ಮೇಲೆ ಮಾರ್ಕ್‌ ಮಾಡಬಹುದು ಎಂದು ನಿಯಮಗಳಲ್ಲಿ ಎಲ್ಲಿದೆ? ಎಂದು ಕೇಳಿದ್ದಾರೆ.

ಬಳಿಕ, ಚಂಡೀಗಢ ಆಡಳಿತವನ್ನು ಪ್ರತಿನಿಧಿಸುತ್ತಿದ್ದ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಕಡೆಗೆ ತಿರುಗಿದ ನ್ಯಾಯಮೂರ್ತಿಗಳು “ಮಿಸ್ಟರ್ ಸಾಲಿಸಿಟರ್, ಮಾಸಿಹ್ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಹಾಗಾಗಿ, ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿ :  ‘RAW’ ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...